ಮಹಿಳೆಯ ಬದುಕಿನ ದನಿಯೇ ವೈದೇಹಿ ಸಾಹಿತ್ಯ; ಪ್ರೊ| ಕೆ.ಪಿ. ರಾವ್‌

"ವೈದೇಹಿ ಜಗತ್ತು' ವಿಚಾರ ಸಂಕಿರಣ ಉದ್ಘಾಟನೆ

Team Udayavani, Nov 12, 2022, 6:15 AM IST

ಮಹಿಳೆಯ ಬದುಕಿನ ದನಿಯೇ ವೈದೇಹಿ ಸಾಹಿತ್ಯ; ಪ್ರೊ| ಕೆ.ಪಿ. ರಾವ್‌

ಮಣಿಪಾಲ: ಮಹಿಳೆಯ ಅಂತರಾಳವನ್ನು ಸಾಹಿತಿ ವೈದೇಹಿ ಗ್ರಾಮ್ಯ ಭಾಷೆಯಲ್ಲಿ ಅರ್ಥ ಪೂರ್ಣವಾಗಿ ಅರ್ಥೈಸುವ ಕಾರ್ಯವನ್ನು ತಮ್ಮ ಸಾಹಿತ್ಯದ ಮೂಲಕ ಮಾಡಿದ್ದಾರೆ ಎಂದು ಗಣಕ ಲಿಪಿತಜ್ಞ ಪ್ರೊ| ಕೆ.ಪಿ. ರಾವ್‌ ಹೇಳಿದರು.

ಮಾಹೆ ವಿ.ವಿ.ಯ ಗಾಂಧಿಯನ್‌ ಸೆಂಟರ್‌ ಫಾರ್‌ ಫಿಲಾಸಪಿಕಲ್‌ ಆರ್ಟ್ಸ್ಆ್ಯಂಡ್‌ ಸೈನ್ಸಸ್‌ (ಜಿಸಿಪಿಎಎಸ್‌) ಆಶ್ರಯದಲ್ಲಿ ಮಣಿಪಾಲದ ಪ್ಲಾನಿ ಟೇರಿಯಂ ಸಭಾಂಗಣದಲ್ಲಿ ಹಮ್ಮಿಕೊಂಡಿರುವ “ವೈದೇಹಿ ಜಗತ್ತು’- ಕನ್ನಡದ ಖ್ಯಾತ ಲೇಖಕಿ ವೈದೇಹಿಯವರ ಸಾಹಿತ್ಯದ ಕುರಿತ ವಿಚಾರ ಸಂಕಿರಣವನ್ನು ಶುಕ್ರವಾರ ಉದ್ಘಾಟಿಸಿ ಅವರು ಮಾತನಾಡಿದರು.

ಅಡುಗೆ ಮನೆಯಲ್ಲಿ ಮಹಿಳಾ ಲೋಕ, ಹಿತ್ತಲಿನಲ್ಲಿ ಹರಟೆ ಮತ್ತು ಅಂಗಳದಲ್ಲಿ ಜೀವನ ಎಂಬ ಮೂರು ಸ್ತರಗಳ ಬದುಕಿನ “ಧ್ವನಿ ರೂಪ’ವನ್ನು ವೈದೇಹಿ ನಮ್ಮ ಕೃತಿಗಳಲ್ಲಿ ಹಿಡಿದಿಟ್ಟಿದ್ದಾರೆ. ಓದಲು ಮತ್ತು ಬರೆಯಲು ಬಾರದವರ ಜಗತ್ತನ್ನು ವೈದೇಹಿ ಸೆರೆಹಿಡಿದಿರುವುದೇ ಅವರ ವಿಶೇಷತೆ ಎಂದರು.

ವೈದೇಹಿ ಕನ್ನಡದಲ್ಲಿ ಸಾಮಾಜಿಕ ಕಾದಂಬರಿಗಳ ಸಂಪ್ರದಾಯವನ್ನು ಮುಂದುವರಿಸಿದ್ದಾರೆ. ಕಥೆಗಳನ್ನು ತಮ್ಮದೇ ಆದ ಭಾಷೆಯಲ್ಲಿ ಬರೆಯುವ ಅವರದು ಹೃದಯದ ಧ್ವನಿಯೇ ವಿನಾ ನಾಲಿಗೆಯದಲ್ಲ ಎಂದು ವಿಶ್ಲೇಷಿಸಿದರು.

ಬದುಕಿನ ರೂಪಕ
ಉದ್ಘಾಟನೆಯ ಅನಂತರ ವಿಮ ರ್ಶಕ ಪ್ರೊ| ರಾಜೇಂದ್ರ ಚೆನ್ನಿಯವರು ವೈದೇಹಿ ಅವರ ಸಣ್ಣ ಕಥೆಗಳ ಕುರಿತು ಮಾತನಾಡಿ, ಅವರ ಸಾಹಿತ್ಯವು ಸಾಮಾನ್ಯ ಬದುಕಿನ ಶ್ರೇಷ್ಠ ರೂಪಕಗಳಾಗಿವೆ ಎಂದರು.

ಕವಿತೆ ಮಹಿಳೆಯರ ಭಾಷೆ
ವೈದೇಹಿ ಅವರ ಕವನಗಳ ಕುರಿತು ಆಶಾದೇವಿ ಮಾತನಾಡಿ, ಪುರುಷ ಪ್ರಧಾನ ಜಗತ್ತಿನಲ್ಲಿ ಯಾವುದೇ ಆಕ್ಷೇಪಣೆ ಪ್ರಮಾಣಪತ್ರವನ್ನು ಸ್ವೀಕರಿ ಸಲು ವೈದೇಹಿ ನಿರಾಕರಿಸುತ್ತಾರೆ. “ಕವಿತೆ ನಿರ್ದಿಷ್ಟವಾಗಿ ಮಹಿಳೆಯರ ಭಾಷೆ’ ಎಂದು ಅವರು ಭಾವಿಸಿ, ಬರೆದಿದ್ದಾರೆ ಎಂದರು.

ಜಿಸಿಪಿಎಎಸ್‌ ಮುಖ್ಯಸ್ಥ ಪ್ರೊ| ವರದೇಶ್‌ ಹಿರೇಗಂಗೆ, ಪ್ರೊ| ಮನು ಚಕ್ರವರ್ತಿ, ಪ್ರೊ| ಫಣಿರಾಜ್‌, ಪ್ರೊ| ತುಂಗೇಶ್‌ ಚರ್ಚೆಯಲ್ಲಿ ಪಾಲ್ಗೊಂಡಿದ್ದರು. ವೈದೇಹಿ ಅವರ ಸಣ್ಣ ಕಥೆಗಳು ಮತ್ತು ಕವನಗಳ ಕುರಿತು ವಿದ್ಯಾರ್ಥಿಗಳು ಪ್ರಬಂಧ ಮಂಡಿಸಿದರು.

ಶ್ರಾವ್ಯಾ ಬಾಸ್ರಿ ವೈದೇಹಿ ಕವನ ವಾಚಿಸಿದರು. ಅಭಿನಯಾ, ಗೌತಮಿ, ಅಪೂರ್ವಾ, ಆಲಿಸ್‌ ಚೌವ್ಹಾಣ್‌, ಸುಹಾನಿ ರಜಪೂತ್‌ ಮತ್ತು ಆಕರ್ಷಿಕಾ ಸಿಂಗ್‌ ಕಾರ್ಯಕ್ರಮ ನಿರ್ವಹಿಸಿದರು.

ಇಂದಿನ ಕಾರ್ಯಕ್ರಮ
ಪ್ರೊ| ಎನ್‌. ಮನು ಚಕ್ರವರ್ತಿ ಅವರು ವೈದೇಹಿ ಅವರ ಕಾದಂಬರಿ – “ಅಸ್ಪೃಶ್ಯರು’ (ಇಂಗ್ಲಿಷ್‌ನಲ್ಲಿ “ವಾಸುದೇವಾಸ್‌ ಫ್ಯಾಮಿಲಿ’) ಕುರಿತು ನ. 12ರ ಬೆಳಗ್ಗೆ 10.15ಕ್ಕೆ ಭಾಷಣ ಮಾಡಲಿದ್ದಾರೆ. ಮಧ್ಯಾಹ್ನ “ಅಮ್ಮಚ್ಚಿ ಎಂಬ ನೆನಪು’ ಚಲನಚಿತ್ರ ಪ್ರದರ್ಶನ ಮತ್ತು ಸಂವಾದ, ಅನಂತರ ವೈದೇಹಿಯವರು ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಲಿದ್ದಾರೆ. ಸಮಾರೋಪದಲ್ಲಿ ಮಾಹೆಯ ಸಹ ಕುಲಾಧಿಪತಿ ಡಾ| ಎಚ್‌.ಎಸ್‌. ಬಲ್ಲಾಳ್‌, ಕೆಎಸ್‌ಡಿಎಸ್‌ಯುನ ವಿಶ್ರಾಂತ ಕುಲಪತಿ ಪ್ರೊ| ನೀಲಿಮಾ ಸಿನ್ಹಾ ಪಾಲ್ಗೊಳ್ಳಲಿದ್ದಾರೆ.

ಟಾಪ್ ನ್ಯೂಸ್

1-asasa

Vote; ಬೇರೆಲ್ಲ ಬದಿಗಿಡಿ ಇಂದು ತಪ್ಪದೆ ಮತ ಚಲಾಯಿಸಿ! :ನೀವು ಗಮನಿಸಬೇಕಾದದ್ದು..

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

1-waadassda

OBC-Muslim ಮೀಸಲು ವಿವಾದ ತಾರಕಕ್ಕೆ: ಪ್ರಧಾನಿ ಹೇಳಿಕೆ ಅಲ್ಲಗಳೆದ ಸಿದ್ದರಾಮಯ್ಯ

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Paper leak case: ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ: 15 ಮಂದಿ ಆರೋಪಿಗಳು ಖುಲಾಸೆ

Paper leak case: ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ; 15 ಮಂದಿ ಆರೋಪಿಗಳು ಖುಲಾಸೆ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್‌ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ

ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್‌ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ

1-asasa

Vote; ಬೇರೆಲ್ಲ ಬದಿಗಿಡಿ ಇಂದು ತಪ್ಪದೆ ಮತ ಚಲಾಯಿಸಿ! :ನೀವು ಗಮನಿಸಬೇಕಾದದ್ದು..

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.