ವಂಡ್ಸೆ -ಅಡಿಕೆಕೊಡ್ಲು ಸಂಪರ್ಕ ಕಿರುಸೇತುವೆ ನಿರ್ಮಾಣ


Team Udayavani, Jul 23, 2017, 8:05 AM IST

2207kde12.gif

ಕುಂದಾಪುರ:  ವಂಡ್ಸೆ ಗ್ರಾ.ಪಂ. ವ್ಯಾಪ್ತಿಯ  ವಂಡ್ಸೆಯಿಂದ ಅಡಿಕೆಕೊಡ್ಲು, ಸಂಭಾರ್ತಿ, ನೂಜಾಡಿಗೆ ಸಂಪರ್ಕ ಕಲ್ಪಿಸುವ ಕಿರು ಸೇತುವೆಯು ನಿರ್ಮಾಣವಾಗಿದ್ದು, ಇದರಿಮದ ಈ ಭಾಗದ  ಜನರ ಬಹುದಿನದ ಕನಸು ನನಸಾಗಿದೆ.

ಈ ಭಾಗದಲ್ಲಿ  ಸುಮಾರು ನೂರ ಐವತ್ತಕ್ಕೂ ಅಧಿಕ ಕುಟುಂಬಗಳು ವಾಸಿಸುತ್ತಿದ್ದು ದಿನ ನಿತ್ಯದ ಸಂಚಾರಕ್ಕೆ ಈ ಮಾರ್ಗವನ್ನೇ ಅವಲಂಬಿಸಿದ್ದರು. ಆದರೆ ಅತಿ ಹತ್ತಿರದಲ್ಲೇ ಇರುವ ವಂಡ್ಸೆ ಪೇಟೆಯನ್ನು ಸಂಪರ್ಕಿಸಲು ಈ ತೊರೆಯನ್ನು ದಾಟಿ ಹೋಗಬೇಕಾಗಿರುವುದರಿಂದ  ಮಳೆಗಾಲದಲ್ಲಿ  ಈ ನಾರ್ಗದಲ್ಲಿ ಸಂಚರಿಸುವುದು ಬಹಳಷ್ಟು ಕಷ್ಟಕರವಾಗಿತ್ತು. ಈ ಸೇತುವೆಗೆ ಪೂರಕವಾಗಿ ಸಂಪರ್ಕ ರಸ್ತೆ ನಿರ್ಮಾಣವಾಗಿ 4-5 ವರ್ಷ ಕಳೆದರೂ ಸೇತುವೆ ಮಾತ್ರ ನಿರ್ಮಾಣ ಆಗಿರಲಿಲ್ಲ. ಇದರಿಂದಾಗಿ ಈ ಭಾಗದ ಜನರು  ಅಡಿಕೆಕೊಡ್ಲುವಿಗೆ ನೂಜಾಡಿ ಮೂಲಕ  ಸುಮಾರು ಐದು ಕಿ.ಮೀ ಸುತ್ತು ಬಳಿಸಿ ಸಾಗಬೇಕಾಗಿದ್ದರಿಂದ ಇಲ್ಲಿನ ಜನರಿಗೆ  ಸೇತುವೆ ನಿರ್ಮಾಣ ತುರ್ತು ಆವಶ್ಯಕತೆಯಾಗಿತ್ತು.

ಕರಾವಳಿ ಪ್ರಾಧಿಕಾರ, ಗ್ರಾ.ಪಂ. ನಿಧಿ ಬಳಕೆ
ಬೈಂದೂರು ಶಾಸಕ ಕೆ.ಗೋಪಾಲ ಪೂಜಾರಿ ಅವರ ಶಿಫಾರಸಿನಂತೆ ಕರಾವಳಿ ಪ್ರಾಧಿಕಾರದಿಂದ ರೂ.5 ಲಕ್ಷ ರೂ.ಹಾಗೂ  ಬಾಕಿ ಉಳಿದ ರಸ್ತೆ  ಕಾಮಗಾರಿಗೆ ವಂಡ್ಸೆ ಗ್ರಾ.ಪಂ ಅನುದಾನವನ್ನು   ಬಳಸಿಕೊಂಡು ಈ ಕಿರು ಸೇತುವೆ ಹಾಗೂ ಸಂಪರ್ಕ ರಸ್ತೆ ನಿರ್ಮಾಣವಾಗಲಿದೆ. ಕೂಡು ರಸ್ತೆ ಹಾಗೂ ಬದಿಕಟ್ಟುವ ಕೆಲಸ ಬಾಕಿಇದ್ದು  ಶೀಘ್ರದಲ್ಲಿ ಈ ಕಾಮಗಾರಿ ಪೂರ್ಣಗೊಳ್ಳಲಿದೆ.

ಸೇತುವೆ ನಿರ್ಮಾಣದಿಂದ  ಈ ಭಾಗ‌ದ ಜನರಿಗೆ ಮುಖ್ಯವಾಗಿ ಶಾಲಾ ಕಾಲೇಜುಗಳಿಗೆ ತೆರಳುವ ವಿದ್ಯಾರ್ಥಿಗಳಿಗೆ ಬಹಳಷ್ಟು ಅನುಕೂಲವಾಗಿದೆ.

ಅಪಾಯಕಾರಿ ತೊರೆಯಿಂದ ಮುಕ್ತಿ 
ತೊರೆಯು ಮಳೆಗಾಲದಲ್ಲಿ ತುಂಬಿ ಹರಿಯುವುದರಿಂದ  ಶಾಲಾ ಮಕ್ಕಳಿಗೆ  ಹಾಗೂ ಸ್ಥಳಿಯ ಜನರಿಗೆ ತೊರೆ ದಾಟುವುದು ಕಷ್ಟಕರವಾಗಿತ್ತು. ಪರಿಸರದ   ಗ್ರಾಮಸ್ಥರು  ಕಿರು ಸೇತುವೆ ಕಲ್ಪಿಸಿಕೊಡುವಂತೆ ಬೇಡಿಕೆ ಇಡುತ್ತಲೇ ಬಂದಿದ್ದರು ಹಾಗೂ ಗ್ರಾಮಸಭೆಯಲ್ಲಿ  ಮನವಿ ಮಾಡಿದ್ದರೂ  ಕೆಲವೊಂದು ತಾಂತ್ರಿಕ ಕಾರಣಗಳಿಂದ  ಸೇತುವೆ ರಚನೆಗೆ ಸಮಯ ಕೂಡಿ ಬಂದಿರಲಿಲ್ಲ. ನಂತರ  ವಂಡ್ಸೆ  ಗ್ರಾ.ಪಂ. ಅಧ್ಯಕ್ಷರು ಸ್ವತಃ ಮುತುವರ್ಜಿವಹಿಸಿಕೊಂಡು  ಸೇತುವೆ ನಿರ್ಮಾಣ ಮಾಡುವಲ್ಲಿ  ಹೆಚ್ಚಿನ ಕಾಳಜಿಯನ್ನು ವಹಿಸಿದ್ದರು.  ಇದರಿಂದಾಗಿ  ವಂಡ್ಸೆ ಭಾಗದ ಅಡಿಕೆಕೊಡ್ಲು  ನೂಜಾಡಿಯಿಂದ  ಹೋಗುವವರು  ಈ  ಮಾರ್ಗವಾಗಿ  ಹೋಗಲು ಅನಕೂಲಕರವಾಗಿದೆ. ಸುಮಾರು ನಾಲ್ಕೈದು ಕಿ.ಮೀ. ಸುತ್ತಿ ಬಳಸುವುದು ತಪ್ಪಿದಂತಾಗಿದೆ.

ಸಣ್ಣ ತೊರೆಗೆ ಕಿರು ಸೇತುವೆಯನ್ನು ನಿರ್ಮಿಸುವಂತೆ ಗ್ರಾಮಸ್ಥರ ಬೇಡಿಕೆಯಂತೆ ಗ್ರಾ.ಪಂ. ನಿರ್ಣಯವನ್ನು ಕೈಗೊಂಡು ಶಾಸಕರ ಶಿಫಾರಸಿನೊಂದಿಗೆ ಕರಾವಳಿ ಪ್ರಾಧಿಕಾರದ ಅನುದಾನವನ್ನು ಬಳಸಿಕೊಂಡು  ಕಿರು ಸೇತುವೆಯನ್ನು ನಿರ್ಮಿಸಲಾಗಿದೆ.  ಗ್ರಾ.ಪಂ. ಹಾಗೂ ಕರಾವಳಿ ಪ್ರಾಧಿಕಾರದ ಅನುದಾನವನ್ನು   ಬಳಿಸಿಕೊಂಡು  ಸೇತುವೆ ಹಾಗೂ ಕೂಡು ರಸ್ತೆ ನಿರ್ಮಾಣವಾಗಲಿದೆ.ಇನ್ನು  ಕೂಡು ರಸ್ತೆ ಹಾಗೂ ಸೈಡ್‌ ವಾಲ್‌ಗ‌ಳ ನಿರ್ಮಾಣದ ಕಾಮಗಾರಿ ನಡೆಯಲಿದೆ. ಅತಿ ಶೀಘ್ರದಲ್ಲಿ ಜನಸಂಚಾರಕ್ಕೆ  ಈ ಮಾರ್ಗ ಮುಕ್ತವಾಗಲಿದೆ.
-ಉದಯಕುಮಾರ್‌ ಶೆಟ್ಟಿ, 
ಅಧ್ಯಕ್ಷರು, ವಂಡ್ಸೆ ಗ್ರಾ.ಪಂ.

– ಉದಯ ಆಚಾರ್‌ ಸಾಸ್ತಾನ

ಟಾಪ್ ನ್ಯೂಸ್

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.