ಕಾಪು ಕ್ಷೇತ್ರಕ್ಕೆ ಇನ್ನೂ ಸಿಗದ ವಾರಾಹಿ ಅನುದಾನ ​​​​​​​


Team Udayavani, Feb 15, 2019, 12:30 AM IST

kapu-s.jpg

ಮಣಿಪಾಲ: ಕಾಪು ಕ್ಷೇತ್ರಕ್ಕೆ ಹಿಂದಿನಿಂದಲೂ ವರ್ಷಂಪ್ರತಿ ದೊರೆಯುತ್ತಿದ್ದ ಪ್ರಮುಖ ಅನುದಾನಗಳಲ್ಲಿ ಒಂದಾದ ವಾರಾಹಿ ಅಚ್ಚುಕಟ್ಟು ಪ್ರದೇಶ ಅನುದಾನ 2018-19ನೇ ಸಾಲಿಗೆ ಕೊಡಲು ನೀರಾವರಿ ಸಚಿವರು ಸಮ್ಮತಿಸಿದರೂ ಅಧಿಕಾರಿಗಳ ವಿಳಂಬ ನೀತಿಯಿಂದ ಈವರೆಗೆ ಮಂಜೂರಾಗಿಲ್ಲ. ಜಿಲ್ಲೆಯ ಕಾಪು ಹೊರತುಪಡಿಸಿ ಉಳಿದ ಎಲ್ಲ ವಿಧಾನ ಸಭಾ ಕ್ಷೇತ್ರಗಳಿಗೆ ವಾರಾಹಿ ಅಚ್ಚುಕಟ್ಟು ಪ್ರದೇಶದ ರೂ. 2 ಕೋಟಿ ಅನುದಾನ ಲಭ್ಯವಾಗಿದ್ದು ಕೆಆರ್‌ಐಡಿಎಲ್‌ನಲ್ಲಿ ಕಾಮಗಾರಿ ಸಂಬಂಧ ಪ್ರಕ್ರಿಯೆಗಳು ನಡೆಯುತ್ತಿವೆ. 

ಏನಿದು ವಾರಾಹಿ ಅನುದಾನ?
ವಾರಾಹಿ ಅಚ್ಚುಕಟ್ಟು ಪ್ರದೇಶದಲ್ಲಿ ಮೂಲ ಸೌಕರ್ಯಗಳನ್ನು ಅಭಿವೃದ್ಧಿಪಡಿಸಲು ಕರ್ನಾಟಕ ನೀರಾವರಿ ನಿಗಮದ ಮುಲಕ ಮಂಜೂರಾಗುವ ಅನುದಾನ. ಇದರಲ್ಲಿ ಎಸ್‌ಸಿಪಿ/ಟಿಎಸ್‌ಪಿ ಯೋಜನೆಯ ಕಾಮಗಾರಿಗಳು ಜಾರಿಯಾಗುತ್ತವೆ. ಶಾಸಕರಿಂದ ಶಿಫಾರಸುಗೊಂಡ ಕಾಮಗಾರಿಗಳನ್ನು ಅನುಷ್ಠಾನಿಸಲಾಗುತ್ತದೆ. 

ಯಾರಿಗೆಲ್ಲ ಅನುದಾನ?
2018-19ನೇ ಸಾಲಿನಲ್ಲಿ ಉಡುಪಿ ಜಿಲ್ಲೆಯ ಕಾರ್ಕಳ, ಕುಂದಾಪುರ, ಬೈಂದೂರು, ಉಡುಪಿ ಕ್ಷೇತ್ರಗಳಿಗೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಿಗೆ ತಲಾ 2 ಕೋಟಿ ರೂ. (1.25/.75 ಕೋಟಿ, ಎಸ್‌ಸಿಪಿ/ಟಿಎಸ್‌ಪಿ), ವಿಧಾನ ಪರಿಷತ್‌ ಸದಸ್ಯ ಐವನ್‌ ಡಿ’ಸೋಜಾ ಅವರಿಗೆ 1.5 ಕೋಟಿ ರೂ. ವಾರಾಹಿ ಅನುದಾನ  ಬಂದ ಬಗ್ಗೆ ಮಾಹಿತಿ ಇದ್ದು ಈ ಬಗ್ಗೆ ಈಗಾಗಲೇ ಅನುಷ್ಠಾನ ಕ್ರಮದ ಪ್ರಕ್ರಿಯೆಗಳು ನಡೆಯುತ್ತಿವೆ. 

ಹಿಂದೆ ಎಷ್ಟು ಅನುದಾನ ಬಂದಿತ್ತು?
2017-18ನೇ ಸಾಲಿನಲ್ಲಿ ವಿನಯ ಕುಮಾರ್‌ ಸೊರಕೆ ಅವರು ಕಾಪು ಶಾಸಕರಾಗಿದ್ದ ಅವಧಿಯಲ್ಲಿ  ಎಸ್‌ಸಿಪಿ ಯೋಜನೆಯಡಿಯಲ್ಲಿ 3 ಕೋಟಿ ಹಾಗೂ ಟಿಎಸ್‌ಪಿ ಯೋಜನೆಯಡಿ 1 ಕೋಟಿ, ಒಟ್ಟು 4 ಕೋಟಿ ರೂ. ಅನುದಾನ ಹಂಚಿಕೆಯಾಗಿತ್ತು. ಉಸ್ತುವಾರಿ ಸಚಿವರಾಗಿದ್ದಾಗಲೂ ಅನುದಾನ ಹಂಚಿಕೆಯಾಗಿತ್ತು.  

ಏನು ಕಾಮಗಾರಿ ಮಾಡಬಹುದು?
ಈ ಅನುದಾನದಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡದ ಜನವಸತಿ ಪ್ರದೇಶದ ಮೂಲ ಸೌಕರ್ಯವನ್ನು ಅಭಿವೃದ್ಧಿಪಡಿಸುವ ಕಾಮಗಾರಿಗಳನ್ನು ಮಾಡಬಹುದಾಗಿದೆ. ಲಾಲಾಜಿ ಮೆಂಡನ್‌ ಅವರು ಸಚಿವರಿಗೆ ಕ್ಷೇತ್ರದ ವಿವಿಧ ಪ್ರದೇಶಗಳಲ್ಲಿ ರಸ್ತೆ ಅಭಿವೃದ್ಧಿಗೆ 25 ಹಾಗೂ 50 ಲಕ್ಷ ರೂ.ನಂತೆ ಒಟ್ಟು 2 ಕೋಟಿ ರೂ.ನ ಎರಡು ಪ್ರಸ್ತಾವನೆ (4 ಕೋಟಿ ರೂ.) ಸಲ್ಲಿಸಿದ್ದರು.  

ತಾಂತ್ರಿಕ ಸಮಸ್ಯೆ?
ವಾರಾಹಿ ಅಚ್ಚುಕಟ್ಟು ಪ್ರದೇಶದ ವ್ಯಾಪ್ತಿಗೆ ಕಾಪು ಬರದೇ ಇರುವುದು ತಾಂತ್ರಿಕ ಸಮಸ್ಯೆಯಾಗಿದೆ. ಆದರೆ ಕಾಪು ಕ್ಷೇತ್ರ ಜಿಲ್ಲೆಯ ಅವಿಭಾಜ್ಯ ಹಾಗೂ ಪ.ಜಾ./ಪ.ಪಂ.ನ ಅರ್ಹ ಫ‌ಲಾನುಭವಿಗಳಿರುವ ಪ್ರದೇಶ ಹೀಗಾಗಿ ತಾಂತ್ರಿಕವಾಗಿ ಒಳಪಡದಿದ್ದರೂ ಸಮಾನ ನ್ಯಾಯದ ದೃಷ್ಟಿಯಿಂದ ಅನುದಾನವನ್ನು ನೀಡಲಾಗುತ್ತಿತ್ತು. ಇನ್ನೊಂದೆಡೆ ಜಿಲ್ಲಾ ಉಸ್ತುವಾರಿ ಸಚಿವರಾಗಿರುವವರು ಈ ಕ್ಷೇತ್ರದಲ್ಲಿ ತಮ್ಮ ಅನುದಾನವನ್ನು ಬಳಸಬಹುದಾಗಿದ್ದರೆ, ಕಾಪು ಕ್ಷೇತ್ರವನ್ನು ತಾಂತ್ರಿಕ ಕಾರಣವೊಡ್ಡಿ ಪ್ರತ್ಯೇಕ ಮಾಡುವುದು ಸರಿಯಲ್ಲ ಎಂಬುದು ಸಾರ್ವಜನಿಕರ ಅಭಿಪ್ರಾಯವಾಗಿದೆ. ಈ ನಿಟ್ಟಿನಲ್ಲಿ ಸರಕಾರದ ನಿರ್ಣಯ ಅಗತ್ಯವಿದೆ.   

ಅಡಚಣೆ ಉಂಟು ಮಾಡುತ್ತಿದ್ದಾರೆ
ಖುದ್ದಾಗಿ ಸಚಿವ ಡಿ.ಕೆ. ಶಿವಕುಮಾರ್‌ಗೆ ಪ್ರಸ್ತಾವನೆ ಸಲ್ಲಿಸಿದ್ದು ಅವರು ಸಮ್ಮತಿಸಿದ್ದಾರೆ. ಆದರೆ ಅಧಿಕಾರಿಗಳು ಮಾತ್ರ ಈ ಬಾರಿ ಹೊಸ ಅಡಚಣೆ ಉಂಟು ಮಾಡುತ್ತಿದ್ದು, ಕ್ಷೇತ್ರ ವಾರಾಹಿ ಅಚ್ಚುಕಟ್ಟು ಪ್ರದೇಶದಲ್ಲಿ ಬರುವುದಿಲ್ಲ ಎನ್ನುತ್ತಾರೆ. ಕಳೆದ ವರ್ಷಗಳಲ್ಲಿ ಇಲ್ಲದ ನಿಯಮ ಈಗ ಯಾಕೆ ? ಸಚಿವರ ಮೂಲಕ ಸಮಸ್ಯೆ ಶೀಘ್ರ ಬಗೆಹರಿಯುವ ನಿರೀಕ್ಷೆ ಇದೆ 
 – ಲಾಲಾಜಿ ಆರ್‌. ಮೆಂಡನ್‌,  
ಕಾಪು ಶಾಸಕ 

ಡಿಕೆಶಿ ಸಮ್ಮತಿ
ನಿಗದಿತವಾಗಿ ಬರುತ್ತಿದ್ದ ಅನುದಾನ 2018-19ನೇ ಸಾಲಿಗೆ ಬಾರದೇ ಇದ್ದ ಹಿನ್ನೆಲೆಯಲ್ಲಿ ಶಾಸಕ ಲಾಲಾಜಿ ಆರ್‌. ಮೆಂಡನ್‌ ಅವರು ನೀರಾವರಿ ಸಚಿವ ಡಿ.ಕೆ. ಶಿವಕುಮಾರ್‌ ಅವರನ್ನು 2018 ನವೆಂಬರ್‌ನಲ್ಲಿ ಭೇಟಿಯಾಗಿ ಮನವಿ ಸಲ್ಲಿಸಿದ್ದಾರೆ. ಅವರು 2 ಕೋಟಿ ಮಂಜೂರಿಗೆ ಸೂಚಿಸಿದ್ದಾರೆ. ಆದರೆ ಅಧಿಕಾರಿಗಳು ಅನುದಾನ ಬಿಡುಗಡೆಗೆ ಮೀನಮೇಷ ಎಣಿಸುತ್ತಿದ್ದಾರೆ.

– ಅಶ್ವಿ‌ನ್‌ ಲಾರೆನ್ಸ್‌ ಮೂಡುಬೆಳ್ಳೆ

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.