ಸಾಂಪ್ರದಾಯಿಕ ಕೃಷಿ ಪದ್ಧತಿಯ ಸಾಧಕ ವಾಸುದೇವ್‌ ಭಟ್‌

ಸಮಗ್ರ ಕೃಷಿಯತ್ತ ಅವರ ಚಿತ್ತ

Team Udayavani, Jan 3, 2020, 5:55 AM IST

3112UDKC2C

ನಾವು ಅದೆಷ್ಟು ಆಧುನಿಕಗೊಂಡರೂ ಉಣ್ಣುವ ಅನ್ನವನ್ನು ಸೃಷ್ಟಿಸಲಾರೆವು; ಅದನ್ನು ಬಿತ್ತಿ ಬೆಳೆದೇ ಆಗಬೇಕು. ಇದೇ ಹಿನ್ನೆಲೆಯಲ್ಲಿ ಉದಯವಾಣಿಯು ಕಿಸಾನ್‌ ದಿನಾಚರಣೆಯ ಸಂದರ್ಭ ರೈತರ ಸಾಧನೆಯ ಚಿತ್ರಣ ನೀಡುವ “ಕೃಷಿ ಕಥನ’ವನ್ನು ಆರಂಭಿಸಿದೆ. ಸರಕಾರದಿಂದ ಪ್ರಶಸ್ತಿ ಪುರಸ್ಕಾರಗಳಿಂದ ಗುರುತಿಸಲ್ಪಟ್ಟ ರೈತರನ್ನು ಪರಿಚಯಿಸುವ ಪ್ರಯತ್ನ.

ಉಡುಪಿ: ಇಂದಿನ ಆಧುನಿಕತೆಯ ಯುಗದಲ್ಲಿ ತಂದೆಯಿಂದ ಬಂದ ಕೃಷಿ ಕಾಯಕಯವನ್ನು ಮುಂದುವರೆಸಿಕೊಂಡು, ತಮ್ಮ ಮಕ್ಕಳಿಗೂ ಕೃಷಿಯಲ್ಲಿ ಆಸಕ್ತಿ ಮೂಡಿಸಿರುವ ಹಿರೇಬೆಟ್ಟು ನಿವಾಸಿ ವಾಸುದೇವ್‌ ಭಟ್‌ ಅವರು ಪ್ರಸ್ತುತ ಕಾಲಘಟ್ಟದಲ್ಲಿ ಮಾದರಿ ಕೃಷಿಕ ಎನಿಸಿಕೊಂಡಿದ್ದಾರೆ.

ಹಿಂದೆ ಪೂರ್ವಿಕರಿಂದ ಬಂದ ಸಾವಯವ ಕೃಷಿ ಪರಂಪರೆಯನ್ನು ಇಂದಿಗೂ ಅವರು ಉಳಿಸಿಕೊಂಡು ಬಂದಿದ್ದಾರೆ. ತೋಟ, ಗದ್ದೆಗಳಿಗೆ ಹಟ್ಟಿಗೊಬ್ಬರ ಬಳಸುವ ಮೂಲಕ ರಸಾಯನಿಕ ಮುಕ್ತ ಕೃಷಿ ಪದ್ಧತಿ ಮುಖೇನ ಮಣ್ಣಿನ ಫ‌ಲವತ್ತತೆಯನ್ನು ಹೆಚ್ಚಿಸಿಕೊಂಡಿದ್ದಾರೆ. ಸುಮಾರು ಎರಡೂವರೆ ಎಕ್ರೆ ಕೃಷಿ ಭೂಮಿಯಲ್ಲಿ ಭತ್ತ, ಅಡಿಕೆ,ತೆಂಗು,ಕಾಳುಮೆಣಸು ಬೆಳೆಸುತ್ತಿದ್ದಾರೆ.

ಸಾಂಪ್ರದಾಯಿಕ ಕೃಷಿ
ಕೂಲಿ ಕಾರ್ಮಿಕರ ಸಮಸ್ಯೆಯಿಂದ ಎಲ್ಲರೂ ಯಾಂತ್ರಿಕ ಕೃಷಿಗೆ ಮುಖ ಮಾಡುತ್ತಿದ್ದರೆ, ವಾಸುದೇವ್‌ ಭಟ್‌ ಅವರು ಕೃಷಿಯ ಸಂಪೂರ್ಣ ಚಟುವಟಿಕೆಯನ್ನು ಮಾನವ ಶ್ರಮ ಬಳಸಿಕೊಂಡು ಮಾಡುತ್ತಿದ್ದಾರೆ. ಗೆದ್ದೆ ಹದ ಮಾಡಲು ಟ್ರ್ಯಾಕ್ಟರ್‌ ಬದಲಾಗಿ ಮನೆಯಲ್ಲಿ ಸಾಕಿದ ಕೋಣಗಳನ್ನು ಬಳಸುತ್ತಾರೆ. ತೋಟಗಾರಿಕೆ ಬೆಳೆಯನ್ನು ವೈಜ್ಞಾನಿಕ ವಿಧಾನ ಬಳಸಿಕೊಂಡಿದ್ದಾರೆ.

ಮನೆ ಮಂದಿಯ ಸಹಕಾರ
ಕೃಷಿ ಕೆಲಸಗಳಿಗೆ ಕೂಲಿ ಕಾರ್ಮಿಕರ ಕೊರತೆಯಿಂದಾಗಿ ವಾಸುದೇವ್‌, ಅವರ ಪತ್ನಿ, ಮಕ್ಕಳು ಕೃಷಿ ಚಟುವಟಿಕೆಯಲ್ಲಿ ಸಂಪೂರ್ಣವಾಗಿ ತೊಡಗಿಸಿಕೊಂಡಿದ್ದಾರೆ. ಹಲವಾರು ಕಾರಣಗಳಿಂದ ಕೃಷಿ ಕ್ಷೇತ್ರದಿಂದ ಹಿಂದೆ ಸರಿಯುತ್ತಿರುವ ಅದೆಷ್ಟೋ ಕೃಷಿಕರ ಮಧ್ಯೆ ಗ್ರಾಮೀಣ ಭಾಗದಲ್ಲಿದ್ದೂ ಕೃಷಿಯ ಜತೆ ಬದುಕು ಕಟ್ಟುತ್ತಿದೆ ಈ ಕುಟುಂಬ.

ಸಮಗ್ರ ಕೃಷಿ
ಕೃಷಿ ಜತೆಗೆ ಹೈನುಗಾರಿಕೆಯಲ್ಲಿ ಸಹ ನಿರತರಾಗಿದ್ದಾರೆ. ವರ್ಷಕ್ಕೆ ಒಂದು ಮುಂಗಾರು ಭತ್ತ ಕೃಷಿ ಬೇಸಾಯದಲ್ಲಿ ತೊಡಗಿಸಿಕೊಳ್ಳುತ್ತಾರೆ. ಎಚ್‌ಎಂ4 ತಳಿಯ ಭತ್ತವನ್ನು ಬಳಸುತ್ತಿದ್ದಾರೆ. ತೋಟದಲ್ಲಿ 350 ಅಡಿಕೆ, 35 ತೆಂಗು, ಕಾಳು ಮೆಣಸು ಬೆಳೆಸಿದ್ದಾರೆ. ಜತೆ ಹೈನುಗಾರಿಕೆಯಲ್ಲಿ ತೊಡಗಿಸಿಕೊಂಡಿರುವ ಇವರು 2 ಕೋಣ ಸೇರಿದಂತೆ ಒಟ್ಟು 8 ದನಗಳನ್ನು ಸಾಕಿದ್ದಾರೆ. ಹಟ್ಟಿಗೊಬ್ಬರವನ್ನು ಭತ್ತ ಕೃಷಿ ಹಾಗೂ ತೋಟಕ್ಕೆ ಬಳಕೆ ಮಾಡುತ್ತಿದ್ದಾರೆ. ಇÊರ‌ ಕೃಷಿ ಮೇಲಿನ ಪ್ರೇಮ ಹಾಗೂ ಸಾಧನೆಯನ್ನು ಕೃಷಿ ಇಲಾಖೆ ಪ್ರಶಸ್ತಿಯನ್ನು ನೀಡಿದೆ.

ಶ್ರೇಷ್ಠ ಕೃಷಿಕ ಪ್ರಶಸ್ತಿಗಳು
ವಾರ್ಷಿಕ ಸುಮಾರು 20 ಕ್ವಿಂಟಾಲ್‌ ಭತ್ತದ ಬೆಳೆ ತೆಗೆಯುತ್ತಾರೆ. ನಿತ್ಯ 50 ಲೀಟರ್‌ ಹಾಲು, 35 ತೆಂಗಿನ ಮರದಿಂದ ತಲಾ 80 ಕಾಯಿಗಳು, ಅಡಿಕೆ ಸೇರಿದಂತೆ ಸಮಗ್ರ ಕೃಷಿ ಮೂಲಕ ತಿಂಗಳಿಗೆ 40,000 ರೂ. ಆದಾಯ ಗಳಿಸುತ್ತಿದ್ದಾರೆ. ಇವರ ತೋಟಕ್ಕೆ ತೋಟಗಾರಿಕೆ ಇಲಾಖೆ ಅಧಿಕಾರಿಗಳು ಭೇಟಿ ನೀಡಿದ್ದು, ತೋಟದಲ್ಲಿ ಬೆಳೆದ ಕಾಳುಮೆಣಸಿನ ಸಸಿಗಳನ್ನು ಕೂಡ ಮಾರಾಟ ಮಾಡುತ್ತಿದ್ದಾರೆ. ಸಮಗ್ರ ಕೃಷಿ ಪದ್ಧತಿಯಲ್ಲಿ 2017-18 ಸಾಲಿನ ಜಿಲ್ಲಾ ಶ್ರೇಷ್ಠ ಕೃಷಿಕ, ಹೆರ್ಗ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ನಡೆದ ಜಾನುವಾರು ಮೇಳದಲ್ಲಿ ಶೇಷ್ಠ ಹೈನುಗಾರಿಕೆ ಪ್ರಶಸ್ತಿ, ಗ್ರಾಮೀಣ ಕ್ರೀಡೆಯಲ್ಲಿ ಆಸಕ್ತಿ ಹೊಂದಿರುವ ಇವರು ಅಡ್ವೆ ,ಪುತ್ತೂರು, ಕಟಪಾಡಿ ಸೇರಿದಂತೆ ವಿವಿಧ ಕಂಬಳಗಳಲ್ಲಿ ಭಾಗವಹಿಸಿ ಹಲವು ಪ್ರಶಸ್ತಿ ಪಡೆದುಕೊಂಡಿದ್ದಾರೆ.

ಕೋಟಿ ವಿದ್ಯೆಗಿಂತ ಮೇಲು
ಎಲ್ಲ ಉದ್ಯೋಗಕ್ಕಿಂತ ಕೃಷಿ ಉತ್ತಮ. ಶಾರೀರಕ ವ್ಯಾಯಮದ ಜತೆ ಸ್ವಾವಲಂಬಿ ಉದ್ದಿಮೆ ಆಗಿದೆ. ಕಡಿಮೆ ಸಮಯದಲ್ಲಿ ಉತ್ತಮ ಇಳುವರಿಯ ಮೂಲಕ ಹೆಚ್ಚಿನ ಆದಾಯ ಗಳಿಸಬಹುದಾಗಿದೆ. ಪ್ರಸ್ತುತ ಎಂಜಿನಿಯರಿಂಗ್‌ ಕಲಿಯತ್ತಿರುವ ಮಗ ಹೈನುಗಾರಿಕೆಯಲ್ಲಿ ಆಸಕ್ತಿಯಿದ್ದು, ಜತೆಗೆ ಕುಟುಂಬದ ಎಲ್ಲ ಸದಸ್ಯರು ಕೃಷಿಗೆ ಸಂಪೂರ್ಣ ಸಹಕಾರ ನೀಡುತ್ತಿದ್ದಾರೆ. ಯುವಕರ ಸ್ವಾವಲಂಬಿ ಬದುಕಿಗೆ ಈ ಕೃಷಿ ಚಟುವಟಿಕೆ ಹೆಚ್ಚು ಉಪಯುಕ್ತವಾಗಿದೆ. “ಕೋಟಿ ವಿದ್ಯೆಗಿಂತ ಮೇಟಿ ವಿದ್ಯೆ ಮೇಲು’ ಎಂದು ಕವಿ ಸರ್ವಜ್ಞ ಹೇಳಿದ್ದಾನಲ್ಲವೇ?
-ವಾಸುದೇವ್‌ ಭಟ್‌, ಕೃಷಿ ಸಾಧಕ.

-ಕಾರ್ತಿಕ್‌ ಚಿತ್ರಾಪುರ

ಟಾಪ್ ನ್ಯೂಸ್

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

20-shirva-1

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.