ಉಡುಪಿ ಸಂತೆಕಟ್ಟೆ: ಹುಲಿವೇಷಧಾರಿಗಳ ವಾಹನ ಪಲ್ಟಿ; ಓರ್ವ ಸಾವು
Team Udayavani, Sep 4, 2019, 1:47 PM IST
ಉಡುಪಿ: ಹುಲಿವೇಷಧಾರಿಗಳಿದ್ದ ವಾಹನ ಪಲ್ಟಿಯಾಗಿ ಓರ್ವ ಸಾವನ್ನಪ್ಪಿ, ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಬುಧವಾರ ನೇಜಾರಿನಲ್ಲಿ ನಡೆದಿದೆ.
ಪಡುಬಿದ್ರಿಯ ಸುಮಂತ್ (22) ಮೃತ ವೇಷಧಾರಿ.
ಗಣೇಶ ವಿಸರ್ಜನೆಯ ಮೆರವಣಿಗೆಯ ಪ್ರಯುಕ್ತ ಇವರು ಸಂತೆಕಟ್ಟೆಗೆ ಟೆಂಪೋದಲ್ಲಿ ತೆರಳುತ್ತಿದ್ದರು. ವಾಹನದಲ್ಲಿ 12ಕ್ಕೂ ಹೆಚ್ಚು ಮಂದಿ ವೇಷಧಾರಿಗಳಿದ್ದರು. ನೇಜಾರು ಆಟದ ಮೈದಾನದ ಬಳಿ ಘಟನೆ ಸಂಭವಿಸಿದೆ.
ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಐವರು ವೇಷಧಾರಿಗಳಿಗೆ ಸಣ್ಣಪುಟ್ಟ ಗಾಯಗಳಾಗಿದೆ. ಗಾಯಾಳುಗಳನ್ನು ಮಣಿಪಾಲದ ಆಸ್ಪತ್ರೆಗೆ ದಾಖಲಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ