ವೆಂಟೆಡ್ ಡ್ಯಾಮ್ ಕಾಮಗಾರಿ ಪೂರ್ಣ: ಸಂಚಾರಕ್ಕೆ ಮುಕ್ತ
Team Udayavani, Jul 13, 2019, 5:49 AM IST
ಬೈಂದೂರು: ಸುಮನಾವತಿ ನದಿಗೆ ಅಡ್ಡಲಾಗಿ ಬಿಜೂರು ಹಾಗೂ ತಗ್ಗರ್ಸೆ ಗ್ರಾಮದ ಕೃಷಿಕರಿಗೆ ಅನುಕೂಲವಾಗುವಂತೆ ಬಿಜೂರು ಅರೆಕಲ್ಲು ಬಳಿ ನಿರ್ಮಿಸಿದ ಕಿಂಡಿ ಅಣೆಕಟ್ಟು ಕಾಮಗಾರಿ ಪೂರ್ಣಗೊಂಡಿದೆ. ಸಾರ್ವಜನಿಕರ ಸಂಚಾರಕ್ಕೆ ಮುಕ್ತವಾಗಿದೆ.
ಈ ಭಾಗದಲ್ಲಿ ಕಳೆದ 30-35 ವರ್ಷದ ಹಿಂದೆ ನಿರ್ಮಿಸಿದ ಕಿಂಡಿ ಅಣೆಕಟ್ಟು (ಕಾಲು ಸಂಕ) ಇತ್ತೀಚಿನ ವರ್ಷಗಳಲ್ಲಿ ತೀರಾ ದುಃಸ್ಥಿತಿಗೆ ತಲುಪಿದ ಹಿನ್ನೆಲೆಯಲ್ಲಿ ನದಿಯಲ್ಲಿ ಹಿನ್ನೀರ ಸಂಗ್ರಹ ಕಡಿಮೆಯಾಗಿ, ಇದನ್ನು ಅವಲಂಬಿಸಿರುವ ಬಿಜೂರು ಹಾಗೂ ತಗ್ಗರ್ಸೆ ಗ್ರಾಮದ ಕೃಷಿಕರು ಸಂಕಷ್ಟಕ್ಕೀಡಾಗಿದ್ದರು. ಹೀಗಾಗಿ ಈ ಭಾಗದಲ್ಲಿ ಸುಸಜ್ಜಿತ ಕಿಂಡಿ ಅಣೆಕಟ್ಟನ್ನು ನಿರ್ಮಿಸಿಕೊಡುವಂತೆ ಎರಡು ಗ್ರಾಮದ ಗ್ರಾಮಸ್ಥರು ಹಿಂದಿನ ಶಾಸಕರಿಗೆ ಮನವಿ ನೀಡಿದ್ದರು. ಬೇಡಿಕೆಗೆ ಸ್ಪಂದಿಸಿದ ಅಂದಿನ ಶಾಸಕ ಕೆ. ಗೋಪಾಲ ಪೂಜಾರಿಯವರು ಸಣ್ಣ ನೀರಾವರಿ ಇಲಾಖೆಯಿಂದ ನೂತನ ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ ಅನುದಾನ ಮಂಜೂರು ಮಾಡಿಸಿದ್ದರು. 6.60 ಕೋಟಿ ರೂ.ವೆಚ್ಚದಲ್ಲಿ ಸುಸಜ್ಜಿತ ವೆಂಟೆಡ್ ಡ್ಯಾಮ್, ನಿರ್ಮಾಣ ಕಾಮಗಾರಿ ಪೂರ್ಣಗೊಂಡಿದೆ.
ಕಿಂಡಿ ಅಣೆಕಟ್ಟು
94 ಮೀ. ಉದ್ದ ಹಾಗೂ 5.5 ಮೀ ಅಗಲವಿದೆ. ಕಿಂಡಿ ಅಣೆಕಟ್ಟು, ಕಾಲು ಸಂಕದ ಮಾದರಿಯಲ್ಲಿರುವ ಕಾರಣ ವಾಹನಗಳು ಸಂಚರಿಸುತ್ತಿರಲಿಲ್ಲ, ಇದ ರಿಂದಾಗಿ ತಗ್ಗರ್ಸೆ ಉದ್ದಾಬೆಟ್ಟು ಭಾಗದ ನಿವಾಸಿಗಳು ತಮ್ಮ ವಾಹನಗಳನ್ನು ಬಿಜೂರಿನ ಅರೆಕಲ್ಲು ಬಳಿ ನಿಲ್ಲಿಸಿ ಅಲ್ಲಿಂದ ನಡೆದುಕೊಂಡು ತೆರಳುತ್ತಿದ್ದರು. ಅಲ್ಲದೇ ಮಳೆಗಾಲದಲ್ಲಿ ಈ ಕಿಂಡಿ ಅಣೆಕಟ್ಟಿನ ಸಂಚರಿಸುವಾಗ ಆಕಸ್ಮಿಕವಾಗಿ ಕಾಲು ಜಾರಿ ನದಿಗೆ ಬಿದ್ದು ಪ್ರಾಣ ಕಳೆದುಕೊಂಡಿದ್ದರು. ಈ ಕುರಿತು ಸೇತುವೆ ಅಪಾಯದ ಬಗ್ಗೆ ಉದಯವಾಣಿ ವರದಿ ಪ್ರಕಟಿಸಿತ್ತು.
ಹೊಸ ಕಿಂಡಿ ಅಣೆಕಟ್ಟು ಸುಸಜ್ಜಿತವಾಗಿರುವು ದಲ್ಲದೇ, 5.5 ಮೀ. ಅಗಲವಿರುವುದರಿಂದ ವಾಹನ ಸಂಚಾರಕ್ಕೂ ಅನುಕೂಲವಾಗಿದೆ. ಇದಕ್ಕೆ ಮೆಕ್ಯಾನಿಕಲ್ ಕ್ರೆಸ್ಟ್ಗೇಟ್ ಅಳವಡಿಸಲಾಗುತ್ತಿದೆ. ಕಿಂಡಿ ಅಣೆಕಟ್ಟಿನ ಬಳಿ ನದಿದಂಡೆ ಕುಸಿಯದಂತೆ ನದಿಯ ಎರಡು ಮಗ್ಗುಲ್ಲಲ್ಲಿ ಸುಮಾರು 100 ಮೀ. ಉದ್ದದವರೆಗೆ ಶಾಶ್ವತ ತಡೆಗೋಡೆ ನಿರ್ಮಾಣ ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ
Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ