ಸಿಲಿಂಡರ್ ಬೆಲೆ ಏರಿಕೆ: ಸರಕಾರ ಜನರ ಗಾಯದ ಮೇಲೆ ಬರೆ ಎಳೆದಿದೆ; ವೆರೋನಿಕಾ ಕರ್ನೆಲಿಯೋ
Team Udayavani, Jul 6, 2022, 3:52 PM IST
ಉಡುಪಿ: ಅಡುಗೆ ಅನಿಲದ ಮೇಲೆ ಇಂದಿನಿಂದ ರೂ. 50/- ಬೆಲೆ ಏರಿಕೆ ಮಾಡಿ ಬಿಜೆಪಿ ಸರಕಾರ ಜನರ ಗಾಯದ ಮೇಲೆ ಬರೆ ಎಳೆದಿದೆ ಎಂದು ಕೆಪಿಸಿಸಿ ಪ್ಯಾನಲಿಸ್ಟ್ ವೆರೋನಿಕಾ ಕರ್ನೆಲಿಯೋ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಜನ ಆರ್ಥಿಕ ಸಂಕಷ್ಟದಲ್ಲಿ ಇರುವಾಗ ದಿನನಿತ್ಯ ಬಳಕೆಯ ಅಡುಗೆ ಅನಿಲದ ಬೆಲೆಯನ್ನು ಏಕಾಏಕಿ 50 ರೂ ಏರಿಸಿರುವುದು ಖಂಡನೀಯ. ಈಗಾಗಲೇ ಒಂದು ಸಿಲಿಂಡರ್ ಗೆ 1020 ರು ತೆರುತ್ತಿದ್ದು ಇನ್ನು ಮುಂದೆ 1070 ತೆರಬೇಕಾಗುತ್ತೆ. ಜನ ಕೆಲಸಗಳಿಲ್ಲದೆ ಪರದಾಡುತ್ತಿದ್ದಾರೆ. ಇಂತಹ ಸಮಯದಲ್ಲಿ ಬೆಲೆ ಏರಿಸುವ ಸರಕಾರಕ್ಕೆ ಕಣ್ಣು ಕಿವಿ ಯಾವುದೂ ಇಲ್ಲವೇ? ಜನರಿಂದ ಆಯ್ಕೆಯಾದ ಸರಕಾರ ಯಾಕೆ ಜನರನ್ನು ಈ ರೀತಿ ಲೂಟಿ ಮಾಡುತ್ತಿದೆ ಎಂದು ಪ್ರಶ್ನಿಸಿದ್ದಾರೆ.
ಮಾದ್ಯಮ ವರದಿಗಳ ಪ್ರಕಾರ ನಿರುದ್ಯೋಗ ಸಮಸ್ಯೆ 7.8% ಗೆ ತಲುಪಿದ್ದು ಗರಿಷ್ಠ ಏರಿಕೆ ಕಂಡಿದೆ. ಮಳೆಗಾಲ ಆರಂಭವಾಗಿದ್ದು ಜನ ಒಪ್ಪುತ್ತಿನ ಊಟ ಕ್ಕೇ ಕಷ್ಟಪಡುತ್ತಿರುವಾಗ ಈ ರೀತಿಯ ಬೆಲೆ ಏರಿಕೆ ಜನರ ತಾಳ್ಮೆಯನ್ನು ಪರೀಕ್ಷಿಸುತ್ತಿದೆ. ಸರಕಾರ ತಕ್ಷಣ ಈ ಬೆಲೆಯನ್ನು ಇಳಿಕೆ ಮಾಡಿ ಜನರನ್ನು ನೆಮ್ಮದಿಯಿಂದ ಬದುಕಲು ಬಿಡಬೇಕಾಗಿ ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ನದಿಗೆ ಉರುಳಿ ಬಿದ್ದ ಐಟಿಬಿಪಿ ಸಿಬ್ಬಂದಿಗಳನ್ನು ಹೊತ್ತೊಯ್ದ ಬಸ್ : 6 ಮಂದಿ ಸಾವು
ಹುಬ್ಬಳ್ಳಿ: ಐದು ವರ್ಷದ ಬಾಲಕಿಯ ಮೇಲೆ ಅಪ್ರಾಪ್ತ ವಯಸ್ಕ ಸಂಬಂಧಿಯಿಂದಲೇ ಅತ್ಯಾಚಾರ!
ಶೋಪಿಯಾನ್: ಉಗ್ರರ ಗುಂಡಿನ ದಾಳಿಗೆ ಕಾಶ್ಮೀರಿ ಪಂಡಿತ ಸಾವು, ಸಹೋದರನಿಗೆ ಗಾಯ
ಅಮೃತ ಮಹೋತ್ಸವ; 75 ಸಾಮಾಜಿಕ ಕಾರ್ಯ
ಹೆಚ್ಚಿದ ಭದ್ರತೆ: ಶಿವಮೊಗ್ಗ- ಭದ್ರಾವತಿ ನಗರ ವ್ಯಾಪ್ತಿಯಲ್ಲಿ ಮದ್ಯಮಾರಾಟ ನಿಷೇಧ