ಸಿಲಿಂಡರ್ ಬೆಲೆ ಏರಿಕೆ: ಸರಕಾರ ಜನರ ಗಾಯದ ಮೇಲೆ ಬರೆ ಎಳೆದಿದೆ; ವೆರೋನಿಕಾ ಕರ್ನೆಲಿಯೋ
Team Udayavani, Jul 6, 2022, 3:52 PM IST
ಉಡುಪಿ: ಅಡುಗೆ ಅನಿಲದ ಮೇಲೆ ಇಂದಿನಿಂದ ರೂ. 50/- ಬೆಲೆ ಏರಿಕೆ ಮಾಡಿ ಬಿಜೆಪಿ ಸರಕಾರ ಜನರ ಗಾಯದ ಮೇಲೆ ಬರೆ ಎಳೆದಿದೆ ಎಂದು ಕೆಪಿಸಿಸಿ ಪ್ಯಾನಲಿಸ್ಟ್ ವೆರೋನಿಕಾ ಕರ್ನೆಲಿಯೋ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಜನ ಆರ್ಥಿಕ ಸಂಕಷ್ಟದಲ್ಲಿ ಇರುವಾಗ ದಿನನಿತ್ಯ ಬಳಕೆಯ ಅಡುಗೆ ಅನಿಲದ ಬೆಲೆಯನ್ನು ಏಕಾಏಕಿ 50 ರೂ ಏರಿಸಿರುವುದು ಖಂಡನೀಯ. ಈಗಾಗಲೇ ಒಂದು ಸಿಲಿಂಡರ್ ಗೆ 1020 ರು ತೆರುತ್ತಿದ್ದು ಇನ್ನು ಮುಂದೆ 1070 ತೆರಬೇಕಾಗುತ್ತೆ. ಜನ ಕೆಲಸಗಳಿಲ್ಲದೆ ಪರದಾಡುತ್ತಿದ್ದಾರೆ. ಇಂತಹ ಸಮಯದಲ್ಲಿ ಬೆಲೆ ಏರಿಸುವ ಸರಕಾರಕ್ಕೆ ಕಣ್ಣು ಕಿವಿ ಯಾವುದೂ ಇಲ್ಲವೇ? ಜನರಿಂದ ಆಯ್ಕೆಯಾದ ಸರಕಾರ ಯಾಕೆ ಜನರನ್ನು ಈ ರೀತಿ ಲೂಟಿ ಮಾಡುತ್ತಿದೆ ಎಂದು ಪ್ರಶ್ನಿಸಿದ್ದಾರೆ.
ಮಾದ್ಯಮ ವರದಿಗಳ ಪ್ರಕಾರ ನಿರುದ್ಯೋಗ ಸಮಸ್ಯೆ 7.8% ಗೆ ತಲುಪಿದ್ದು ಗರಿಷ್ಠ ಏರಿಕೆ ಕಂಡಿದೆ. ಮಳೆಗಾಲ ಆರಂಭವಾಗಿದ್ದು ಜನ ಒಪ್ಪುತ್ತಿನ ಊಟ ಕ್ಕೇ ಕಷ್ಟಪಡುತ್ತಿರುವಾಗ ಈ ರೀತಿಯ ಬೆಲೆ ಏರಿಕೆ ಜನರ ತಾಳ್ಮೆಯನ್ನು ಪರೀಕ್ಷಿಸುತ್ತಿದೆ. ಸರಕಾರ ತಕ್ಷಣ ಈ ಬೆಲೆಯನ್ನು ಇಳಿಕೆ ಮಾಡಿ ಜನರನ್ನು ನೆಮ್ಮದಿಯಿಂದ ಬದುಕಲು ಬಿಡಬೇಕಾಗಿ ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ