ಮೆಕ್ಕೆಯಲ್ಲಿ ವರ್ಟಿಕಲ್‌ ಲಿಫ್ಟ್‌ ಚಾಲಿತ ಕಿಂಡಿ ಅಣೆಕಟ್ಟು

2.18 ಕೋ.ರೂ. ವೆಚ್ಚದಲ್ಲಿ 7 ಗೇಟುಗಳ ಅಣೆಕಟ್ಟು ; 40 ಎಕರೆಗೂ ಮಿಕ್ಕಿ ಕೃಷಿ ಪ್ರದೇಶಕ್ಕೆ ಅನುಕೂಲ

Team Udayavani, Oct 4, 2019, 5:38 AM IST

3009kdpp1

ಮುದೂರು: ಜಡ್ಕಲ್‌ ಗ್ರಾಮದ ಮೆಕ್ಕೆ ಸಮೀಪದ ಛತ್ರಮಠದ ಶ್ರೀ ವನದುರ್ಗಾಪರಮೇಶ್ವರಿ, ಶ್ರೀ ಲಕ್ಷ್ಮೀ, ಗಣಪತಿ ದೇವಸ್ಥಾನದ ಸಮೀಪ ಸುಮಾರು 40 ಎಕರೆ ಕೃಷಿ ಪ್ರದೇಶಕ್ಕೆ ಅನುಕೂಲವಾಗುವ ನಿಟ್ಟಿನಲ್ಲಿ ಕೇಟ ನದಿಗೆ ಅಡ್ಡಲಾಗಿ ನಿರ್ಮಿಸಿರುವ ವರ್ಟಿಕಲ್‌ ಲಿಫ್ಟ್‌ ಅಳವಡಿಸಿದ ಕಿಂಡಿ ಅಣೆಕಟ್ಟು ಕಾಮಗಾರಿ ಮುಂದಿನ ತಿಂಗಳೊಳಗೆ ಪೂರ್ಣಗೊಳ್ಳುವ ಸಾಧ್ಯತೆಯಿದೆ.

ಸಣ್ಣ ನೀರಾವರಿ ಇಲಾಖೆಯಿಂದ ಪಶ್ಚಿಮ ವಾಹಿನಿ ಯೋಜನೆಯಡಿ ಮಂಜೂರಾದ ಕಿಂಡಿ ಅಣೆಕಟ್ಟು ಇದಾಗಿದ್ದು, ಒಟ್ಟು 2.18 ಕೋ.ರೂ. ವೆಚ್ಚದಲ್ಲಿ ಕಾಮಗಾರಿ ನಡೆಯುತ್ತಿದೆ. ಕಳೆದ ಮಾರ್ಚ್‌ನಲ್ಲಿ ಕಾಮಗಾರಿ ಆರಂಭಗೊಂಡಿದ್ದು, ತಿಂಗಳಾಂತ್ಯಕ್ಕೆ ಪೂರ್ಣಗೊಳ್ಳುವ ನಿರೀಕ್ಷೆಯಿದೆ.

ಕೃಷಿಗೆ ಅನುಕೂಲ
ಜಡ್ಕಲ್‌ ಗ್ರಾಮದ ಮೆಕ್ಕೆ, ಛತ್ರಮಠ ಸೇರಿದಂತೆ ಆಸುಪಾಸಿನ ಸುಮಾರು 40 ಎಕರೆಗೂ ಮಿಕ್ಕಿ ಕೃಷಿ ಭೂಮಿಯ, ನೂರಾರು ರೈತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಈ ಕಿಂಡಿ ಅಣೆಕಟ್ಟನ್ನು ನಿರ್ಮಿಸಲಾಗುತ್ತಿದೆ.

ಸಣ್ಣ ನೀರಾವರಿ ಇಲಾಖೆಯ ಎಂಜಿನಿಯರ್‌ಗಳು ಹೇಳುವಂತೆ, ಕೇಟ ನದಿಗೆ ಈ 2.50 ಮೀಟರ್‌ ಎತ್ತರದ ಕಿಂಡಿ ಅಣೆಕಟ್ಟು ನಿರ್ಮಿಸಿರುವುದರಿಂದ ಛತ್ರಮಠ ದೇವಸ್ಥಾನದ ಸಮೀಪ ನೀರು ಸಂಗ್ರಹಿಸುವುದರಿಂದ ಇಲ್ಲಿನ ಸುತ್ತಮುತ್ತಲಿನ ಭಾಗದ ಅಂತರ್ಜಲ ಮಟ್ಟವು ಹೆಚ್ಚಾಗುತ್ತದೆ ಎನ್ನುತ್ತಾರೆ.

ಮಳೆಗೆ ಹಾನಿಯಾಗಿತ್ತು
ಕಳೆದ ಜುಲೈನಲ್ಲಿ ಭಾರೀ ಮಳೆಯಿಂದಾಗಿ ಈ ಕಿಂಡಿ ಅಣೆಕಟ್ಟಿನಲ್ಲಿ ನೀರು ನಿಂತು, ದೇವಸ್ಥಾನ ಅಂಗಳ, ಆವರಣಕ್ಕೆ ಹಾನಿಯಾಗಿತ್ತು. ಈ ಸಮಸ್ಯೆ ಭವಿಷ್ಯದಲ್ಲಿ ಕಾಣಿಸಿ ಕೊಳ್ಳದಂತೆ ಅಣೆಕಟ್ಟಿನ ಎತ್ತರವನ್ನು ಕೂಡ ಹೆಚ್ಚಿಸಲಾಗುತ್ತಿದ್ದು, ಸದ್ಯ ಈ ಕಾಮಗಾರಿ ನಡೆಯುತ್ತಿದೆ.

ಮೆಟ್ಟಿಲು ನಿರ್ಮಾಣಕ್ಕೆ ಆಗ್ರಹ
ಛತ್ರಮಠದ ಶ್ರೀ ವನ ದುರ್ಗಾಪರಮೇಶ್ವರಿ, ಶ್ರೀ ಲಕ್ಷ್ಮಿ, ಗಣಪತಿ ದೇವಸ್ಥಾನವು ಕೇಟ ನದಿಯ ತಟದಲ್ಲಿಯೇ ಇದೆ. ಈ ನದಿಗೆ ಬೆಳ್ಕಲ್‌ (ಗೋವಿಂದ ತೀರ್ಥ) ತೀರ್ಥದಿಂದ ಪವಿತ್ರ ನೀರು ಹರಿದು ಬರುತ್ತದೆ. ಈ ದೇವಸ್ಥಾನಕ್ಕೆ ತೀರ್ಥ ಮತ್ತಿತರ ದೇವತಾ ಕಾರ್ಯಕ್ಕೆ ಈ ನದಿಯ ನೀರನ್ನೇ ಬಳಸಲಾಗುತ್ತದೆ. ಆದರೆ ಇಲ್ಲಿ ಕಿಂಡಿ ಅಣೆಕಟ್ಟು ನಿರ್ಮಾಣ ಕಾಮಗಾರಿಯಿಂದಾಗಿ ಈಗ ಅರ್ಚಕರಾಗಿ ದೇವಸ್ಥಾನದಿಂದ ನದಿಗೆ ಇಳಿದು ನೀರು ತರುವುದು ಕಷ್ಟವಾಗುತ್ತಿದ್ದು, ಈ ಕಾರಣಕ್ಕೆ ಇದೇ ಕಾಮಗಾರಿಯಲ್ಲಿ ಮೆಟ್ಟಿಲು ನಿರ್ಮಿಸಿಕೊಡಲಿ ಎನ್ನುವುದಾಗಿ ದೇವಸ್ಥಾನದ ಆಡಳಿತ ಮಂಡಳಿ ಆಗ್ರಹಿಸಿದೆ.

ವರ್ಟಿಕಲ್‌ ಲಿಫ್ಟ್‌ ಗೇಟು
ಹಿಂದೆಲ್ಲ ಕಿಂಡಿ ಅಣೆಕಟ್ಟುಗಳ ಗೇಟುಗಳಿಗೆ ಹಲಗೆ ಅಳವಡಿಸುವುದು ಸಾಮಾನ್ಯ. ಇದರಿಂದ ಮಳೆಗಾಲ ಆರಂಭವಾಗುವ ಮುನ್ನ ಈ ಹಲಗೆ ತೆಗೆಯುವುದು ತ್ರಾಸದಾಯಕವಾಗಿತ್ತು. ಮಾತ್ರವಲ್ಲದೆ ಈ ಹಲಗೆಗಳು ಒಂದೆರಡು ವರ್ಷಕ್ಕೆ ಮಾತ್ರ ಉಪಯೋಗವಾಗಿ, ಮತ್ತೆ ನಿಷ್ಪÅಯೋಜಕವಾಗುತ್ತದೆ. ಇದಕ್ಕೆ ಪರಿಹಾರವೆನ್ನುವಂತೆ, ಈ ವರ್ಟಿಕಲ್‌ ಲಿಫ್ಟ್‌ ವಿದ್ಯುತ್‌ ಚಾಲಿತವಾಗಿದ್ದು, ಒಬ್ಬರೇ ಈ ಕೆಲಸವನ್ನು ನಿರ್ವಹಿಸಬಹುದು.

ತಿಂಗಳೊಳಗೆ ಪೂರ್ಣ
ಈಗಾಗಲೇ ಕಾಮಗಾರಿ ನಡೆಯುತ್ತಿದೆ. ನೀರಿನ ಸಂಗ್ರಹ ಹೆಚ್ಚಾಗುತ್ತಿರುವುದರಿಂದ 2.50 ಮೀಟರ್‌ನಿಂದ ಅಣೆಕಟ್ಟಿನ ಎತ್ತರ ಮತ್ತೆ 1 ಮೀಟರ್‌ ಏರಿಸಲಾಗುತ್ತಿದೆ. ಇನ್ನು ಒಂದು ತಿಂಗಳೊಳಗೆ ಕಾಮಗಾರಿ ಮುಗಿಯಬಹುದು.
-ಶೇಷಕೃಷ್ಣ ರಾವ್‌,
ಕಾರ್ಯಪಾಲಕ ಇಂಜಿನಿಯರ್‌, ಸಣ್ಣ ನೀರಾವರಿ ಇಲಾಖೆ

– ಪ್ರಶಾಂತ್‌ ಪಾದೆ

ಟಾಪ್ ನ್ಯೂಸ್

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

BJP ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ, ನಾಳೆ ಕಾಂಗ್ರೆಸ್ ಸೇರ್ಪಡೆ

BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ

Kollywood: ಚಿನ್ನದ ಅಡ್ಡೆಗೆ ʼಕೂಲಿʼಯಾಗಿ ಬಂದ ತಲೈವರ್; ಟೈಟಲ್‌ ಟೀಸರ್‌ ಔಟ್

Kollywood: ಚಿನ್ನದ ಅಡ್ಡೆಗೆ ʼಕೂಲಿʼಯಾಗಿ ಬಂದ ತಲೈವರ್; ಟೈಟಲ್‌ ಟೀಸರ್‌ ಔಟ್

Aravind kejriwal

Insulin: ಶುಗರ್ ಲೆವೆಲ್ ಏರಿಕೆ… ಜೈಲಿನಲ್ಲಿರುವ ಕೇಜ್ರಿವಾಲ್ ಗೆ ಇನ್ಸುಲಿನ್ ನೀಡಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

ಉಡುಪಿಗೆ ಸರಕಾರಿ ವೈದ್ಯಕೀಯ ಕಾಲೇಜು, ಎಂಜಿನಿಯರಿಂಗ್‌ ಕಾಲೇಜು: ಜಯಪ್ರಕಾಶ್‌ ಹೆಗ್ಡೆ

Udupiಗೆ ಸರಕಾರಿ ವೈದ್ಯಕೀಯ ಕಾಲೇಜು, ಎಂಜಿನಿಯರಿಂಗ್‌ ಕಾಲೇಜು: ಜಯಪ್ರಕಾಶ್‌ ಹೆಗ್ಡೆ

Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು

Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು

13 ರಾಜ್ಯಗಳಿಗೆ ಬೇಕಾಗಿದ್ದ ಕಳ್ಳ ಕೋಟದಲ್ಲಿ ಪೊಲೀಸರ ಬಲೆಗೆ!

Theft; 13 ರಾಜ್ಯಗಳಿಗೆ ಬೇಕಾಗಿದ್ದ ಕಳ್ಳ ಕೋಟದಲ್ಲಿ ಪೊಲೀಸರ ಬಲೆಗೆ!

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Fraud: ಹೂಡಿಕೆ ನೆಪದಲ್ಲಿ ವ್ಯಾಪಾರಿಗೆ 5 ಕೋಟಿ ವಂಚನೆ

Fraud: ಹೂಡಿಕೆ ನೆಪದಲ್ಲಿ ವ್ಯಾಪಾರಿಗೆ 5 ಕೋಟಿ ವಂಚನೆ

Bengalur: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು; ಠಾಣೆ ಬಳಿ ಶವ ಇರಿಸಿ ಪ್ರತಿಭಟನೆ

Bengalur: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು; ಠಾಣೆ ಬಳಿ ಶವ ಇರಿಸಿ ಪ್ರತಿಭಟನೆ

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

Police Raid: 346 ರೌಡಿಶೀಟರ್‌ಗಳ ಮನೆಗಳ ಮೇಲೆ ದಾಳಿ

Police Raid: 346 ರೌಡಿಶೀಟರ್‌ಗಳ ಮನೆಗಳ ಮೇಲೆ ದಾಳಿ

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.