ಗಡಿ ಭದ್ರತಾ ಪಡೆಯಲ್ಲಿ ಅವಕಾಶ ಪಡೆದ ಬೈಂದೂರಿನ ಯುವತಿ
Team Udayavani, Apr 1, 2021, 3:33 PM IST
ಬೈಂದೂರು: ದೇಶದ ಗಡಿ ಭದ್ರತಾ ಪಡೆಯಲ್ಲಿ (ಬಿಎಸ್ಎಫ್) ಸೇವೆ ಸಲ್ಲಿಸಲು ಬೈಂದೂರು ಭಾಗದ ಯುವತಿಯೊಬ್ಬರು ಅವಕಾಶ ಪಡೆದಿದ್ದಾರೆ. ಬೈಂದೂರು ತಾಲೂಕಿನ ಯಳಜಿತ್ ಗ್ರಾಮದ ಹುಣ್ಸೆಮಕ್ಕಿ ನಿವಾಸಿ ವಿದ್ಯಾ ಗೌಡ ಪ್ರಸಕ್ತ ಸಾಲಿನಲ್ಲಿ ಸೇನೆಗೆ ಸೇರಿರುವ ಇವರು ಉಡುಪಿ ಜಿಲ್ಲೆಯ ಏಕೈಕ ಅಭ್ಯರ್ಥಿಯಾಗಿದ್ದಾರೆ.
ಎ. 1ರಿಂದ ತರಬೇತಿಗೆ ಹಾಜರಾಗಲಿದ್ದಾರೆ. ಇವರು ಕಾಲೇಜು ದಿನಗಳಲ್ಲಿ ಶಿಕ್ಷಣದೊಂದಿಗೆ ಕ್ರೀಡೆಯಲ್ಲೂ ಉತ್ತಮ ಸಾಧನೆಗೈದಿದ್ದಾರೆ. ವಿವಿಧ ವಿಭಾಗಗಳಲ್ಲಿ ಚಾಂಪಿಯನ್ ಕೂಡ ಆಗಿದ್ದಾರೆ. ನೆಟ್ಬಾಲ್ನಲ್ಲಿ ಐದು ಬಾರಿ ರಾಜ್ಯಮಟ್ಟ, ಒಂದು ಬಾರಿ ರಾಷ್ಟ್ರಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು.
ಇದನ್ನೂ ಓದಿ:ಭಾವುಕ ವಿದಾಯ: 132 ವರ್ಷಗಳ ಕಾಲ ಸುದೀರ್ಘ ಸೇವೆ ನೀಡಿ ಇತಿಹಾಸದ ಪುಟ ಸೇರಿದ ಮಿಲಿಟರಿ ಡೈರಿ
ಆ್ಯತ್ಲೆಟಿಕ್ಸ್ನಲ್ಲಿ 6 ಬಾರಿ ರಾಜ್ಯಮಟ್ಟವನ್ನು ಪ್ರತಿನಿಧಿಸಿದ್ದಾರೆ. ಪೋಲ್ ವಾಲ್ಟ್ ನಲ್ಲಿ ಕಂಚಿನ ಪದಕ, ತಾಲೂಕು ಮಟ್ಟದಲ್ಲಿ ಪ್ರಥಮ, ಕ್ರೀಡಾ ಕ್ಷೇತ್ರದಲ್ಲಿ ಸಾಧಕರಿಗೆ ಕ್ರೀಡಾ ಇಲಾಖೆ ನೀಡುವ ಚೈತ್ರದ ಚಿಗುರು ರಾಜ್ಯ ಪ್ರಶಸ್ತಿ ದೊರೆತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ