ಸಚಿವರಿಂದ ಭತ್ತದ ಯಾತ್ರೀಕೃತ ನಾಟಿ ಪ್ರಾತ್ಯಕ್ಷಿಕೆ ವೀಕ್ಷಣೆ
Team Udayavani, Aug 21, 2018, 6:00 AM IST
ಕುಂದಾಪುರ: ಹೆಮ್ಮಾಡಿಯ ಸಂತೋಷನಗರದ ಬುಗ್ರಿಕಡುವಿಗೆ ಸೋಮವಾರ ಭೇಟಿ ನೀಡಿದ ರಾಜ್ಯ ಕೃಷಿ ಸಚಿವ ಶಿವಶಂಕರ ರೆಡ್ಡಿ ಅವರಿಗೆ ರೈತರ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವಂತೆ ಉಡುಪಿ ಜಿಲ್ಲಾ ಕೃಷಿಕ ಸಮಾಜದ ವತಿಯಿಂದ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಸಚಿವರು ಭತ್ತದ ಯಾಂತ್ರೀಕೃತ ನಾಟಿ ಪ್ರಾತ್ಯಕ್ಷಿಕೆಯನ್ನು ವೀಕ್ಷಿಸಿದರು.
ಸಮ್ಮಾನ
ಈ ಸಂದರ್ಭದಲ್ಲಿ 10 ಎಕರೆ ಜಾಗದಲ್ಲಿ ಕೃಷಿ ಮಾಡಿರುವ ರೈತ ಶೀನ ಪೂಜಾರಿ ಅವರನ್ನು ಸಚಿವರು ಸಮ್ಮಾನಿಸಿದರು.
ಸಚಿವರಿಗೆ ಸಲ್ಲಿಸಿದ ಮನವಿ ಪಟ್ಟಿ ಇಂತಿದೆ
– ಕೃಷಿ ಬೆಳೆಗೆ ಕಾಡು ಪ್ರಾಣಿಗಳ ಹಾವಳಿಯಿದ್ದು, ಅದರ ನಿಯಂತ್ರಣಕ್ಕಾಗಿ ಕೋವಿ ಕಾನೂನು ಸಡಿಲಿಕೆ, ಶೆ. 90ರ ಸಹಾಯಧನದಲ್ಲಿ ಸೋಲಾರ್ ಐಬೆಕ್ಸ್ ತಂತಿ ಬೇಲಿ ಒದಗಿಸಿ.
– ಕರಾವಳಿಯ ರೈತರನ್ನು ಗಮನದಲ್ಲಿಟ್ಟು ಕೊಂಡು ರಾಜ್ಯ ಸರಕಾರ ಬೆಂಬಲ ಬೆಲೆಯನ್ನು ಅಕ್ಟೋಬರ್- ನವೆಂಬರ್ನಲ್ಲಿ ಘೋಷಿಸಬೇಕು.
– ಕೃಷಿ ಇಲಾಖೆಯಲ್ಲಿ ಸಿಬಂದಿ ಕೊರತೆಯಿಂದ ಸೌಲಭ್ಯ ಪಡೆಯುವಲ್ಲಿ ವಿಳಂಬ.
– ಜಿಲ್ಲೆಯಲ್ಲಿ ಕೃಷಿಗೆ ಕೂಲಿಯಾಳುಗಳ ಸಮಸ್ಯೆಯಿದ್ದು, ಸಣ್ಣ ಹಾಗೂ ಅತೀ ಸಣ್ಣ ರೈತರನ್ನು ಪ್ರೋತ್ಸಾಹಿಸಲು ಕಂಬೈನಡ್ ಹಾರ್ವೆಸ್ಟರ್ ಮೂಲಕ ಕಟಾವು ಮಾಡಿದ ರೈತರಿಗೆ ಎಕರೆವಾರು ಪ್ರೋತ್ಸಾಹಧನ ಸರಕಾರ ನೀಡಬೇಕು.
ಇದಲ್ಲದೆ ಸೇರಿದ್ದ ರೈತರ ಪರ ಪ್ರಭಾಕರ ಶೆಟ್ಟಿ ಅವರು, ನೆಲಗಡಲೆಗೆ ಪ್ರೋತ್ಸಾಹಧನ, ಕೃಷಿಕರಿಗೆ ಸಬ್ಸಿಡಿ ದರದಲ್ಲಿ ಡೀಸೆಲ್ ನೀಡಲಿ ಎಂದರು.
ಇಲಾಖೆಯಿಂದ ಸಿಗುವ ಸವಲತ್ತುಗಳು ರೈತರಿಗೆ ಸುಲಭವಾಗಿ ಸಿಗುವಂತೆ, ಇರುವ ವ್ಯವಸ್ಥೆಯನ್ನು ಸರಳ ಮಾಡುವಂತೆ ಕೃಷಿಕರಾದ ಡಾ| ಅತುಲ್ ಹೇಳಿದರು.
ಎಪಿಎಂಸಿ ಅಧ್ಯಕ್ಷ ಶರತ್ ಕುಮಾರ್ ಶೆಟ್ಟಿ ಈ ಭಾಗದಲ್ಲಿ ಕೃಷಿ ನೀರಿಗೆ ಉಪ್ಪು ನೀರಿನ ಸಮಸ್ಯೆಯಾಗುತ್ತಿದ್ದು, ಹೊಳೆ ದಂಡೆಗೆ ಬದುಗಳನ್ನು ನಿರ್ಮಿಸಿದರೆ ಅನುಕೂಲವಾಗಲಿದೆ. ಗದ್ದೆಗಳಿಗೆ ರಸ್ತೆ ಸಂಪರ್ಕ ಇಲ್ಲದಿರುವುದರಿಂದ ಯಂತ್ರೀಕೃತ ಕೃಷಿಗೆ ತೊಂದರೆಯಾಗುತ್ತಿದೆ ಎಂದರು.
ಉಡುಪಿ ಜಿಲ್ಲಾ ಕೃಷಿಕ ಸಮಾಜದ ಅಧ್ಯಕ್ಷ ಎ. ಅಶೋಕ್ ಕುಮಾರ್ ಕೊಡ್ಗಿ ಸಚಿವರಿಗೆ ಮನವಿ ಸಲ್ಲಿಸಿದರು. ತಾಲೂಕು ಎಪಿಎಂಸಿ ಅಧ್ಯಕ್ಷ ಶರತ್ ಕುಮಾರ್ ಶೆಟ್ಟಿ, ಕೃಷಿ ಇಲಾಖೆಯ ಅಧಿಕಾರಿಗಳು, ನೂರಾರು ಮಂದಿ ರೈತರು ಉಪಸ್ಥಿತರಿದ್ದರು.
ಕೋವಿ ಕಾನೂನು ಸಡಿಲಿಕೆಗೆ ಪ್ರಯತ್ನ
ರೈತರ ಸಮಸ್ಯೆಗಳನ್ನು ಆಲಿಸಿದ ಸಚಿವರು ಕೋವಿ ಕಾನೂನು ಸಡಿಲಿಕೆ ಅಧಿಕಾರ ಡಿಸಿಯವರಿಗೆ ಮಾತ್ರವಿದ್ದು, ಅವರೊಂದಿಗೆ ಮಾತನಾಡಿ, ಸಡಿಲಿಕೆಗೆ ಪ್ರಯತ್ನ ಮಾಡಲಾಗುವುದು. ಉಪ್ಪು ನೀರಿನ ಸಮಸ್ಯೆಗೆ ಪರಿಹಾರವಾಗಿ ಹೊಳೆ ದಂಡೆಗೆ ಏರಿಸುವ ಸಂಬಂಧ ನೀರಾವರಿ ಸಚಿವರೊಂದಿಗೆ ಮಾತನಾಡಲಾಗುವುದು ಎಂದ ಅವರು, ತಾಲೂಕು ಮಟ್ಟದಲ್ಲಿ ಕೃಷಿ ಯಂತ್ರ ದುರಸ್ತಿಗೆ ಸಿಬಂದಿ ನೇಮಿಸಲಾಗುವುದು ಎಂದು ಸಚಿವರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ
Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ
Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
MUST WATCH
ಹೊಸ ಸೇರ್ಪಡೆ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?