ಯಶಸ್ವೀ ಸಮಗ್ರ ಕೃಷಿಕ ವಿಜಯ ಕುಮಾರ್‌ ಸಾವಯವ ಕೃಷಿ ಪ್ರೀತಿ

ಲಾಭ ನಷ್ಟದ ಲೆಕ್ಕಾಚಾರ ಇಲ್ಲ. ಕೃಷಿಯೇ ಎಲ್ಲ

Team Udayavani, Dec 19, 2019, 4:34 AM IST

xc-27

ಹೆಸರು: ವಿಜಯ ಕುಮಾರ್‌
ಏನೇನು ಕೃಷಿ: ಭತ್ತ, ತರಕಾರಿ. ದ್ವಿದಳ ಧಾನ್ಯ
ಎಷ್ಟು ವರ್ಷ: 6
ಕೃಷಿ ಪ್ರದೇಶ: ಎರಡೂವರೆ ಎಕರೆ
ಸಂಪರ್ಕ: 7760649508

ನಾವು ಅದೆಷ್ಟು ಆಧುನಿಕಗೊಂಡರೂ ಉಣ್ಣುವ ಅನ್ನವನ್ನು ಸೃಷ್ಟಿಸಲಾರೆವು; ಅದನ್ನು ಬಿತ್ತಿ ಬೆಳೆದೇ ಆಗಬೇಕು. ಕೃಷಿಗೆ ಮಹತ್ವದ ಸ್ಥಾನವಿದೆ. ಇದೇ ಹಿನ್ನೆಲೆಯಲ್ಲಿ ಉದಯವಾಣಿಯು ಕಿಸಾನ್‌ ದಿನಾಚರಣೆಯ ಸಂದರ್ಭ ರೈತರ ಸಾಧನೆಯ ಚಿತ್ರಣ ನೀಡುವ “ಕೃಷಿ ಕಥನ’ವನ್ನು ಆರಂಭಿಸಿದೆ. ಈ ಹೊಸ ಸರಣಿಯು ಇನ್ನಷ್ಟು ಮಂದಿಗೆ ಪ್ರೇರಣೆಯಾಗಲೆಂದು ಸರಕಾರದಿಂದ ಪ್ರಶಸ್ತಿ ಪುರಸ್ಕಾರಗಳಿಂದ ಗುರುತಿಸಲ್ಪಟ್ಟ ರೈತರನ್ನು ಪರಿಚಯಿಸುವ ಪ್ರಯತ್ನ.

ಉದ್ಯಾವರ: ಸಾಂಪ್ರದಾಯಿಕವಾಗಿ ಸಂಪೂರ್ಣ ಹಟ್ಟಿಗೊಬ್ಬರವನ್ನು ಬಳಸಿಯೇ ಸಾವಯವ ಕೃಷಿಯನ್ನು ನಡೆಸುತ್ತಿರುವ ಕೃಷಿ ನಿಲಾಖೆಯಿಂದ ಶ್ರೇಷ್ಠ ಕೃಷಿಕ ಪ್ರಶಸ್ತಿ ಪುರಸ್ಕೃತ ವಿಜಯ ಕುಮಾರ್‌ ಕಲಾಯಿಬೈಲ್‌ ಅವರಿಗೆ, ಕೃಷಿಯಲ್ಲಿ ಲಾಭ ನಷ್ಟದ ಲೆಕ್ಕಾಚಾರ ಇಲ್ಲ. ಕೃಷಿಯೇ ಎಲ್ಲವೂ ಆಗಿದ್ದು ಸುಮಾರು ಎರಡೂವರೆ ಎಕರೆಯಲ್ಲಿ ಯಶಸ್ವೀ ಭತ್ತದ ಸಹಿತ ಸಮಗ್ರ ಕೃಷಿ ನಡೆಸುವ ಮೂಲಕ ಕೃಷಿ ಪ್ರೀತಿಯನ್ನು ಮೆರೆದಿದ್ದಾರೆ.

ಒಟ್ಟು ಸುಮಾರು ಎರಡೂವರೆ ಎಕರೆ ಭೂಮಿಯನ್ನು ಹೊಂದಿರುವ ಇವರು ಸುಮಾರು ನಾಲ್ಕು ಕ್ವಿಂಟಾಲ್‌ ಅಕ್ಕಿಯನ್ನು ಪಡೆಯುವಂತಹ ಒಂದು ಬೆಳೆಯಾಗಿ ಭತ್ತದ ಕೃಷಿಯನ್ನು ಪತ್ನಿ ವತ್ಸಲಾ ವಿ. ಕುಂದರ್‌ ಮಕ್ಕಳಾದ ವಿಶಾಲ್‌ ಕುಮಾರ್‌, ವಂಶಿಕಾ ಜತೆಗೂಡಿ ಮುನ್ನಡೆಸುತ್ತಾ ಬಂದಿರುತ್ತಾರೆ. ಇವರದ್ದು ಕೇವಲ ಹಟ್ಟಿ ಗೊಬ್ಬರವನ್ನೇ ಬಳಸುವ ಸಮಗ್ರ ಕೃಷಿ ಕಾಯಕ ನಿರತರಾಗಿದ್ದಾರೆ.

ವಾಣಿಜ್ಯ ಬೆಳೆ
ಭತ್ತದ ಕೃಷಿಯೊಂದಿಗೆ ಅಲಸಂಡೆ, ಹರಿವೆ, ಬಸಳೆ, ಗುಳ್ಳ, ಕುಂಬಳಕಾಯಿ, ಪಟ್ಲುಕೋಡು, ಸೋರೆಕಾಯಿ, ಹೀರೆಕಾಯಿ, ಬೆಂಡೆಕಾಯಿ, ತೊಂಡೆಕಾಯಿ, ಸೌತೆಕಾಯಿ, ಸೋರೆಕಾಯಿ, ಮೂಲಂಗಿ, ಗೆಣಸು ಸಹಿತ ಇತರೇ ವಾಣಿಜ್ಯ ಬೆಳೆಗಳನ್ನು ಕೂಡಾ ಸಾವಯವ ಗೊಬ್ಬರ ಬಳಸಿಯೇ ಬೆಳೆಸುವುದರಿಂದ ಇವರು ಬೆಳೆದ ತರಕಾರಿಗಳಿಗೆ ಮನೆಯ ಪ್ರದೇಶದಲ್ಲಿಯೇ ಖಾಯಂ ಗ್ರಾಹಕರು ಖರೀದಿದಾರರಾಗಿರುತ್ತಾರೆ. ಇನ್ನುಳಿದ ತರಕಾರಿಗಳಿಗೆ ಉದ್ಯಾವರ ಪೇಟೆಯ ಅಂಗಡಿಗಳೇ ಮಾರುಕಟ್ಟೆಯಾಗಿದೆ.

ಉದ್ಯಾವರಕ್ಕೆ ಶಂಕರಪುರ ಮಲ್ಲಿಗೆ ಕಂಪು
ಉದ್ಯಾವರದ ಕಲಾಯಿ ಬೈಲು ಪ್ರದೇಶದ ಮಣ್ಣಿನ ಗುಣಕ್ಕೆ ಮಲ್ಲಿಗೆ ಬೆಳೆ ಅಸಾಧ್ಯವಾಗಿದೆ. ಆದರೆ ಕೃಷಿಕ ವಿಜಯ ಕುಮಾರ್‌ ಕೆಂಪು ಮಣ್ಣನ್ನು ಬಳಸಿಕೊಂಡು ಉದ್ಯಾವರಕ್ಕೆ ಮಲ್ಲಿಗೆಯ ಕಂಪನ್ನು ಸೂಸುವಂತೆ ಮಾಡಿದ ಮೊದಲ ಕೀರ್ತಿಯನ್ನು ಹೊಂದಿದ್ದು, ಪರಿಣಾಮಕಾರಿಯಾಗಿತ್ತು. ಅದನ್ನು ಅನುಸರಿಸಿ ಸುಮಾರು 10ರಷ್ಟು ಕುಟುಂಬಗಳು ಮಲ್ಲಿಗೆ ಕೃಷಿಯನ್ನು ಅವಲಂಬಿತರಾಗಿದ್ದು ವಿಶೇಷವಾಗಿದೆ.

ಉದ್ದು, ಹೆಸರು ದ್ವಿದಳ ಧಾನ್ಯದ ಬೆಳೆಯನ್ನು ಬೆಳೆಸುವ ಅವರು ಭತ್ತದ ಬೆಳೆಯ ಸಂದರ್ಭ ಉಳುಮೆಗೆ ಟ್ರ್ಯಾಕ್ಟರ್‌, ಕಟಾವು ಯಂತ್ರ ಬಳಸುತ್ತಾರೆ. ಬೆಳೆಗಳಿಗೆ ನವಿಲು ಸಹಿತ ಪಾರಿವಾಳ ಮತ್ತು ಇತರೇ ಪಕ್ಷಿಗಳ ಕಾಟ ಇದೆ ಎನ್ನುವ ಈ ಸಮಗ್ರ ಕೃಷಿಕ ಅರ್ಹವಾಗಿಯೇ ಹಲವು ಸಂಘ ಸಂಸ್ಥೆಗಳಿಂದ ಸಮ್ಮಾನಕ್ಕೆ ಭಾಜನರಾಗಿರುತ್ತಾರೆ.

ಕೃಷಿ ಸಂಸ್ಕೃತಿ ನಮ್ಮ ದೇಶದ ಸಂಸ್ಕೃತಿ. ಪ್ರಸ್ತುತ ಕೃಷಿಯಿಂದ ವಿಮುಖರಾಗುತ್ತಿರುವ ಕಾಲಘಟ್ಟದಲ್ಲಿ ವಿಶೇಷ ಎಂಬಂತೆ ವಿದೇಶಿ ವ್ಯಾಮೋಹ ಬಿಟ್ಟು, ಹುಟ್ಟೂರಿನಲ್ಲಿ ಕೃಷಿಯನ್ನು ಪ್ರೀತಿಸುವ ಮೂಲಕ ವಿಜಯ ಕುಮಾರ್‌ ಕಲಾಯಿ ಬೈಲ್‌ ತನ್ನ ಆಹಾರಕ್ಕಾಗಿ, ಕುಟುಂಬ ಪೋಷಣೆಗಾಗಿ ಸ್ವಾವಲಂಬಿಯಾಗುತ್ತಿದ್ದಾರೆ.

ಹೈನುಗಾರಿಕೆ
ಸುಮಾರು 10ರಷ್ಟು ದನಗಳನ್ನು ಪೋಷಣೆ ಮಾಡುವ ಮೂಲಕ ಹೈನುಗಾರಿಕೆಯನ್ನೂ ನಡೆಸುತ್ತಿದ್ದು, ಉದ್ಯಾವರ ಡೈರಿಯಲ್ಲಿ ವರ್ಷವೂ ಪ್ರಶಸ್ತಿಗಳನ್ನು ಬಾಚುತ್ತಲೇ ಇದ್ದಾರೆ.

ವಿದೇಶದ ಲಕ್ಷ ಹಣಕ್ಕಿಂತ ಕೃಷಿಯಲ್ಲಿ ಸಂತೃಪ್ತಿ :
21 ವರ್ಷಗಳ ಕಾಲ ವಿದೇಶದಲ್ಲಿ ದುಡಿಯುತ್ತಿದ್ದ ವಿಜಯ ಕುಮಾರ್‌ ಅದನ್ನು ಬಿಟ್ಟು, 2013ರಿಂದ ಸಮಗ್ರ ಕೃಷಿಯಲ್ಲಿ ತೊಡಗಿಸಿಕೊಂಡು ಸಮಗ್ರ ಕೃಷಿಯ ಸಾಧನೆಯನ್ನು ಮಾಡಿರುತ್ತಾರೆ. ಮೊದಲಾಗಿ ಮಲ್ಲಿಗೆ ಕೃಷಿಯನ್ನು ಆರಂಭಿಸಿ ಯಶಸ್ಸು ಸಾಧಿಸಿದ ಬಳಿಕ ಸಮಗ್ರ ಕೃಷಿಯಲ್ಲಿ ಸಮರ್ಥವಾಗಿ ತೊಡಗಿಸಿಕೊಂಡಿದ್ದು, ಉದ್ಯಾವರ ಹಾಲು ಉತ್ಪಾದಕರ ಸಂಘದ ನಿರ್ದೇಶಕ, ಬಯಲು ಆತ್ಮಸಂಘ(ಕೃಷಿ ಇಲಾಖೆ) ಇದರ ಸ್ತಳೀಯ ಘಟಕದ ಅಧ್ಯಕ್ಷರಾಗಿರುತ್ತಾರೆ.

ಮನಸ್ಸಿಗೆ ನೆಮ್ಮದಿ
ಕೃಷಿ ಕಾಯಕ ಸ್ವಯಂ ತೊಡಗಿಸಿಕೊಂಡಲ್ಲಿ ಲಾಭದಾಯಕ. ಭತ್ತದ ಕೃಷಿ, ಹೈನುಗಾರಿಕೆ, ಮಲ್ಲಿಗೆ, ವಾಣಿಜ್ಯ ಬೆಳೆಯಾಗಿ ತರಕಾರಿ ಬೆಳೆಯುವ ಮೂಲಕ ಹೆಚ್ಚು ಕೃಷಿಯಲ್ಲಿ ತೊಡಗಿಸಿಕೊಂಡಿದ್ದೇನೆ. ನಾಟಿ ಸಂದರ್ಭ ಮಾತ್ರ ಕೃಷಿ ಕೂಲಿಯಾಳುಗಳ ಬಳಕೆ. ಉಳಿದಂತೆ ಯಂತ್ರೋಪಕರಣ ಬಳಕೆಯಿಂದ ಕೃಷಿಯಲ್ಲಿ ಖರ್ಚು ಕಡಿಮೆ ಆಗುತ್ತದೆ. ವಿದೇಶದಲ್ಲಿನ ಸಂಪಾದನೆಗಿಂತ ಕೃಷಿ ಸಂಪಾದನೆ ಕಡಿಮೆ ಆದರೂ ಬರುವ ಲಾಭದಲ್ಲಿ ಮನಸ್ಸಿಗೆ ನೆಮ್ಮದಿ ತೃಪ್ತಿ ಇದೆ. ನಿರಂತರ ಕೃಷಿ ಚಟುವಟಿಕೆಯಿಂದ ಆರೋಗ್ಯವೂ ಉತ್ತಮವಾಗಿದೆ. ಸಮಗ್ರವಾದ ಸಾವಯವ ಕೃಷಿಯಿಂದ ಸ್ಥಳೀಯರೇ ಗ್ರಾಹಕರಾಗಿದ್ದು ಮಾರುಕಟ್ಟೆಯ ಬಗ್ಗೆ ಹೆಚ್ಚಿನ ಚಿಂತೆ ಹೊಂದಿಲ್ಲ. ಕೃಷಿಯಿಂದ ಹೆಚ್ಚಿನವರೂ ಮುಕ್ತಿ ಪಡೆಯಲು ಬಯಸುತ್ತಿದ್ದಾರೆ. ಯುವಶಕ್ತಿಗೂ ಸರಕಾರ ಕೃಷಿಯಲ್ಲಿ ತೊಡಗಿಸಿಕೊಳ್ಳುವಂತೆ ಪ್ರೋತ್ಸಾಹ ನೀಡಬೇಕಾದ ಅವಶ್ಯಕತೆ ಬಹಳಷ್ಟಿದೆ .
ವಿಜಯ ಕುಮಾರ್‌ ಕಲಾಯಿಬೈಲ್‌, ಶ್ರೇಷ್ಠ ಕೃಷಿಕ ಪ್ರಶಸ್ತಿ ಪುರಸ್ಕೃತ ಸಮಗ್ರ ಕೃಷಿಕ

ವಿಜಯ ಆಚಾರ್ಯ ಕಟಪಾಡಿ

ಟಾಪ್ ನ್ಯೂಸ್

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.