ಸಮಸ್ಯೆ ಬಗೆಹರಿಸುವಂತೆ ಒತ್ತಾಯಿಸಿ ಕಾಪು ಮೆಸ್ಕಾಂಗೆ ಗ್ರಾಮಸ್ಥರಿಂದ ಮುತ್ತಿಗೆ


Team Udayavani, Aug 11, 2023, 6:10 PM IST

ಸಮಸ್ಯೆ ಬಗೆಹರಿಸುವಂತೆ ಒತ್ತಾಯಿಸಿ ಕಾಪು ಮೆಸ್ಕಾಂಗೆ ಗ್ರಾಮಸ್ಥರಿಂದ ಮುತ್ತಿಗೆ

ಕಾಪು: ಶಿರ್ವ ಪ್ರದೇಶದಲ್ಲಿ ಮೆಸ್ಕಾಂನಿಂದ ಉಂಟಾಗುತ್ತಿರುವ ಸಮಸ್ಯೆಗಳನ್ನು ಸರಿಪಡಿಸುವಂತೆ ಒತ್ತಾಯಿಸಿ ಉಡುಪಿ ಜಿಲ್ಲಾ ಕೃಷಿಕ ಸಂಘ, ಮಜೂರು ಗ್ರಾಮ ಪಂಚಾಯತ್‌ ನ ಜನಪ್ರತಿನಿಧಿಗಳು ಮತ್ತು ಶಿರ್ವ ಗ್ರಾಮಸ್ಥರನ್ನೊಳಗೊಂಡ ನಿಯೋಗವು ಶುಕ್ರವಾರ ಕಾಪು ಮೆಸ್ಕಾಂಗೆ ದಿಡೀರ್ ಮುತ್ತಿಗೆ ಹಾಕಿದೆ.

ಶಿರ್ವ ಸೆಕ್ಷನ್ ವ್ಯಾಪ್ತಿಯ ಪಾಲಮೆ, ಶಾಂತಿಗುಡ್ಡೆ, ಜೈನಬಸದಿ, ಹಳೇ ಇಗರ್ಜಿ ಪರಿಸರದಲ್ಲಿ ಟ್ರಾನ್ಸ್‌ಫಾರ್‍ಮರ್‌ಗಳು ನಿರ್ವಹಣೆ ಕೊರತೆಯಿಂದ ಸೊರಗಿದ್ದು ಸಿಬಂದಿಗಳ ನಿರ್ಲಕ್ಷ್ಯದಿಂದಾಗಿ ಪಾಲಮೆಯಲ್ಲಿ ಕೃಷಿಕರಿಗೆ ಮತ್ತು ವಿದ್ಯುತ್ ಬಳಕೆದಾರರಿಗೆ ಸಂಕಷ್ಟ ಮತ್ತು ತೊಂದರೆ ಉಂಟಾಗುತ್ತಿದೆ. ಪದೇ ಪದೇ ಶಾರ್ಟ್ ಸರ್ಕ್ಯೂಟ್ ಉಂಟಾಗಿ ಟ್ರಾನ್ಸ್‌ಫಾರ್ಮರ್ ಫ್ಯೂಸ್ ಸುಟ್ಟು ಹೋಗುತ್ತಿದೆ. ಹಳೆಯದಾದ ತಂತಿಗಳು ಜೋತಾಡುತ್ತಿವೆ. ತಂತಿ ಪಕ್ಕದಲ್ಲಿರುವ ಮರಗಳ ಗೆಲ್ಲುಗಳನ್ನು ಕಡಿಯದೆ ಇರುವುದರಿಂದ ಪದೇ ಪದೇ ವಿದ್ಯುತ್ ಸಮಸ್ಯೆ ಉಂಟಾಗುತ್ತಿದೆ ಎಂದು ದೂರಿದರು.

ಮೆಸ್ಕಾಂ ಶಾಖಾಧಿಕಾರಿ, ಸಿಬಂದಿಗಳು ಗ್ರಾಹಕರ ಕರೆಯನ್ನು ನಿರ್ಲಕ್ಷಿಸುತ್ತಾರೆ. ಸಮಸ್ಯೆ ಹೇಳಿದರೆ ಲೈನ್‌ಮ್ಯಾನುಗಳು ಉಡಾಫೆಯಿಂದ ಉತ್ತರಿಸುತ್ತಾರೆ. ಟ್ರಾನ್ಸ್‌ಫಾರ್ಮರ್ ಫ್ಯೂಸ್ ಸುಟ್ಟ ಬಗ್ಗೆ ದೂರು ನೀಡಿದರೆ, ಅದನ್ನು ಬದಲಿಸಲು ಎರಡರಿಂದ ನಾಲ್ಕು ದಿನಗಳನ್ನು ತೆಗೆದುಕೊಳ್ಳುತ್ತಾರೆ. ಬಳಕೆದಾರರ ದೂರುಗಳಿಗೆ ಸೌಜನ್ಯವಾಗಿ ಮತ್ತು ತುರ್ತಾಗಿ ಸ್ಪಂದಿಸುವ ಸಿಬಂದಿಗಳನ್ನು ನೇಮಿಸುವಂತೆ ಗ್ರಾಮಸ್ಥರು ಒತ್ತಾಯಿಸಿದರು.

ಕಾಪು ಮೆಸ್ಕಾಂ ಎಇಇ ಸುಶಾನ್ ಪಿ.ಸಿ. ಮಾತನಾಡಿ, ಗ್ರಾಹಕರ ಸಮಸ್ಯೆಗಳಿಗೆ ತುರ್ತು ಸ್ಪಂದಿಸುವ ಮತ್ತು ಟ್ರೀ ಕಟ್ಟಿಂಗ್ ನಡೆಸಿ ಶಾರ್ಟ್ ಸರ್ಕ್ಯೂಟ್ ತಪ್ಪಿಸಲು ಮೊದಲ ಆದ್ಯತೆ ನೀಡುತ್ತೇವೆ. ಟಿಸಿ ರಿಪೇರಿ ಮತ್ತು ವಯರ್‌ಗಳನ್ನು ದುರಸ್ತಿ ಪಡಿಸುತ್ತೇವೆ. ಮುಂದೆ ಟ್ರಾನ್ಸ್‌ಫಾರ್‍ಮರ್‌ಗಳ ಬದಲಾವಣೆ, ಹೊಸ ಟ್ರಾನ್ಸ್‌ಫಾರ್‍ಮರಗಳ ಅಳವಡಿಕೆ ಬಗ್ಗೆ ಯೋಜನೆ ಹಾಕಿಕೊಳ್ಳಲಾಗುವುದು ಎಂದರು.

ಮೆಸ್ಕಾಂ ಕಾಪು ವಿಭಾಗದ ತಾಂತ್ರಿಕ ಅಧಿಕಾರಿ ಆನಂದ್, ಶಿರ್ವ ಎಸ್‌ಒ ಮಂಜಪ್ಪ ಅಗಸಿಮಂಡಲ್, ಕಾಪು ಎಸ್‌ಒ ಅಜಯ್ ಶೆಟ್ಟಿ, ಮಜೂರು ಗ್ರಾ. ಪಂ. ಅಧ್ಯಕ್ಷೆ ಶರ್ಮಿಳಾ ಆಚಾರ್ಯ, ಗ್ರಾ. ಪಂ. ಉಪಾಧ್ಯಕ್ಷ ಮಧುಸೂಧನ್ ಸಾಲ್ಯಾನ್, ಉಡುಪಿ ಜಿಲ್ಲಾ ಕೃಷಿಕರ ಸಂಘದ ಜಿಲ್ಲಾಧ್ಯಕ್ಷ ರಾಮಕೃಷ್ಣ ಶರ್ಮ, ಸ್ಥಳೀಯ ಪ್ರಮುಖರಾದ ನಿತ್ಯಾನಂದ ನಾಯಕ್ ಪಾಲಮೆ, ಸೀತಾರಾಮ ಪಾಟ್ಕರ್ ಪಾಲಮೆ, ಆಂಡ್ರೂ ಮೊನಿಸ್, ಮ್ಯಾಕ್ಸಿಂ ಫೆರ್ನಾಂಡಿಸ್ ಮೊದಲಾದವರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

veerappa-moily

Prajwal case; ಪಾತ್ರ ಯಾರದ್ದು ಮುಖ್ಯವಲ್ಲ; ಅಭಿನಯ ಮಾಡಿದ್ದು ಮುಖ್ಯ; ವೀರಪ್ಪ ಮೊಯ್ಲಿ

Davanagere; ದೇಶದ ಎಲ್ಲೆಡೆ ಮೋದಿ ಅಲೆ ಕಂಡು ಬರುತ್ತಿದೆ: ಶೋಭಾ ಕರಂದ್ಲಾಜೆ

Davanagere; ದೇಶದ ಎಲ್ಲೆಡೆ ಮೋದಿ ಅಲೆ ಕಂಡು ಬರುತ್ತಿದೆ: ಶೋಭಾ ಕರಂದ್ಲಾಜೆ

Aravinda Limbavali reacts to Prajwal Case

Prajwal Case; ಪಕ್ಷಕ್ಕೆ ಮುಜುಗರ ಆಗಿರುವುದು ಸತ್ಯ: ಅರವಿಂದ ಲಿಂಬಾವಳಿ

Dakshina Kannada: ದ.ಕ. ಜಿಲ್ಲೆಗೆ ಮೂರೇ ತಿಂಗಳಲ್ಲಿ 1.23 ಕೋಟಿ ಪ್ರವಾಸಿಗರು !

Dakshina Kannada: ದ.ಕ. ಜಿಲ್ಲೆಗೆ ಮೂರೇ ತಿಂಗಳಲ್ಲಿ 1.23 ಕೋಟಿ ಪ್ರವಾಸಿಗರು !

6-virtual-world

UV Fusion: ವರ್ಚುವಲ್‌  ಪ್ರಪಂಚದಲ್ಲಿ ಅನಾಥರು

Pen Drive Case; ಪ್ರಜ್ವಲ್ ರೇವಣ್ಣ ವಿರುದ್ಧ ಲುಕ್‌ಔಟ್ ನೋಟಿಸ್ ಹೊರಡಿಸಿದ ಎಸ್ಐಟಿ

Pen Drive Case; ಪ್ರಜ್ವಲ್ ರೇವಣ್ಣ ವಿರುದ್ಧ ಲುಕ್‌ಔಟ್ ನೋಟಿಸ್ ಹೊರಡಿಸಿದ ಎಸ್ಐಟಿ

fashion-world

Fashion World: ಮಹಿಳೆಯರ ನೆಚ್ಚಿನ ಉಡುಗೆ ಸೀರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi ಬಿಸಿಲಲ್ಲಿ ಬಿಸಿಯೂಟ ಸೇವಿಸಲು ವಿದ್ಯಾರ್ಥಿಗಳ ನಿರಾಸಕ್ತಿ

Udupi ಬಿಸಿಲಲ್ಲಿ ಬಿಸಿಯೂಟ ಸೇವಿಸಲು ವಿದ್ಯಾರ್ಥಿಗಳ ನಿರಾಸಕ್ತಿ

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

veerappa-moily

Prajwal case; ಪಾತ್ರ ಯಾರದ್ದು ಮುಖ್ಯವಲ್ಲ; ಅಭಿನಯ ಮಾಡಿದ್ದು ಮುಖ್ಯ; ವೀರಪ್ಪ ಮೊಯ್ಲಿ

ಆಪತ್ಕಾಲಕ್ಕೆ ಆತಂಕ; “ರಕ್ತ’ ಅಭಾವ- ಬೇಡಿಕೆ ವಿಪರೀತ ಏರಿಕೆ!

ಆಪತ್ಕಾಲಕ್ಕೆ ಆತಂಕ; “ರಕ್ತ’ ಅಭಾವ- ಬೇಡಿಕೆ ವಿಪರೀತ ಏರಿಕೆ!

7-uv-fusion

Father: ಅಪ್ಪ – ಮರೆಯಲಾಗದ ಬಂಧ…

Davanagere; ದೇಶದ ಎಲ್ಲೆಡೆ ಮೋದಿ ಅಲೆ ಕಂಡು ಬರುತ್ತಿದೆ: ಶೋಭಾ ಕರಂದ್ಲಾಜೆ

Davanagere; ದೇಶದ ಎಲ್ಲೆಡೆ ಮೋದಿ ಅಲೆ ಕಂಡು ಬರುತ್ತಿದೆ: ಶೋಭಾ ಕರಂದ್ಲಾಜೆ

Aravinda Limbavali reacts to Prajwal Case

Prajwal Case; ಪಕ್ಷಕ್ಕೆ ಮುಜುಗರ ಆಗಿರುವುದು ಸತ್ಯ: ಅರವಿಂದ ಲಿಂಬಾವಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.