ಅಂದು ರಸ್ತೆಯಲ್ಲಿ ಉರುಳಾಡಿದ ಶೋಭಾ ಕರಾಂದ್ಲಾಜೆ ಇಂದು ಎಲ್ಲಿದ್ದಾರೆ? ವಿನಯ್ ಕುಮಾರ್ ಸೊರಕೆ
Team Udayavani, Jun 12, 2021, 11:18 AM IST
ಕಾಪು: ಡೀಸೆಲ್ – ಪೆಟ್ರೋಲ್ ದರ ಏರಿಕೆ ಖಂಡಿಸಿ ಕೇಂದ್ರ ಹಾಗೂ ರಾಜ್ಯ ಸರಕಾರದ ವಿರುದ್ಧ ಕಾಪು ಬ್ಲಾಕ್ ಕಾಂಗ್ರೆಸ್ ವತಿಯಿಂದ ಕಾಪು ಪೆಟ್ರೋಲ್ ಬಂಕ್ ಮುಂಭಾಗ ಪ್ರತಿಭಟನೆ ನಡೆಯಿತು.
ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಮಾತನಾಡಿ, ಕೇಂದ್ರ ಹಾಗೂ ರಾಜ್ಯ ಸರ್ಕಾರ ಕೋವಿಡ್ ಸಮಯದಲ್ಲಿ ಯಾವ ಮುಲಾಜಿಯಿಲ್ಲದೆ ಪೆಟ್ರೋಲ್ – ಡೀಸೆಲ್, ಗ್ಯಾಸ್, ವಿದ್ಯುತ್ ದರ ಏರಿಸುವ ಮುಖಾಂತರ ಗಾಯದ ಮೇಲೆ ಬರೆ ಹಾಕುವ ಕೆಲಸ ಬಿಜೆಪಿ ಮಾಡುತ್ತಿದೆ. ಯುಪಿಎ ಸರಕಾರದ ಅವಧಿಯಲ್ಲಿ ಪೈಸೆಯ ಬೆಲೆ ಏರಿಕೆಯಾದಾಗ ಗರಿ ಗರಿ ಸೀರೆ ಹಾಕಿಕೊಂಡು ರಸ್ತೆಯಲ್ಲಿ ಉರುಳಾಡಿದ ಸಂಸದೆ ಶೋಭಾ ಕರಂದ್ಲಾಜೆ ಅವರು ಈಗ ಎಲ್ಲಿ ಹೋಗಿದ್ದಾರೆ ಎಂದು ಪ್ರಶ್ನಿಸಿದರು.
ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಮಾತನಾಡಿ, ರಾಜ್ಯ ಮತ್ತು ಕೇಂದ್ರ ಸರಕಾರ ಕೇವಲ ಪೆಟ್ರೋಲ್- ಡೀಸೆಲ್ ದರ ಏರಿಸದೇ, ದಿನಂಪ್ರತಿ ಬಳಸುವ ಎಲ್ಲಾ ಸಾಮಾಗ್ರಿಗಳ ದರ ಏರಿಸುವ ಮುಖಾಂತರ ಜನರಿಗೆ ಮೋಸ ಮಾಡುತ್ತಿದೆ ಎಂದು ಆರೋಪಿಸಿದರು.
ಇದನ್ನೂ ಓದಿ:ತೈಲ ಬೆಲೆ ಏರಿಕೆ ವಿರೋಧಿಸಿ ಪ್ರತಿಭಟನೆ
ಕಾಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನವೀನ್ ಚಂದ್ರ ಸುವರ್ಣ, ಕೆಪಿಸಿಸಿ ಮುಖಂಡರಾದ ಎಂ.ಎ. ಗಫೂರ್, ನವೀನ್ ಚಂದ್ರ ಶೆಟ್ಟಿ, ಯುವ ಕಾಂಗ್ರೆಸ್ ಅಧ್ಯಕ್ಷ ರಮೀಜ್ ಹುಸೈನ್, ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಗೀತಾ ವಾಗ್ಲೆ ಮೊದಲಾದವರು ಮಾತನಾಡಿದರು.
ಪಕ್ಷದ ಮುಖಂಡರಾದ ಗೀತಾ ವಾಗ್ಲೆ, ಪ್ರಶಾಂತ್ ಜತ್ತನ್ನ, ಮಹಮ್ಮದ್ ಫಾರೂಖ್, ರಮೀಜ್ ಹುಸೇನ್, ಸೌರಬ್ ಬಲ್ಲಾಳ್, ವೈ. ಸುಕುಮಾರ್, ಶರ್ಫುದ್ದೀನ್ ಶೇಖ್, ವೈ. ಸುಧೀರ್ ಕುಮಾರ್, ಯು.ಸಿ. ಶೇಖಬ್ಬ, ಮಹಮ್ಮದ್ ಸಾಧಿಕ್ ದೀನಾರ್, ನವೀನ್ ಎನ್. ಶೆಟ್ಟಿ, ಶಶಿಧರ್ ಶೆಟ್ಟಿ, ಶೇಖರ್ ಕೋಟ್ಯಾನ್, ಅಬ್ದುಲ್ ಅಜೀಜ್, ಶಿವಾಜಿ ಸುವರ್ಣ, ಕೇಶವ ಹೆಜಮಾಡಿ, ಹಸನಬ್ಬ ಶೇಖ್, ಹರೀಶ್ ನಾಯಕ್, ಅಮೀರುದ್ದೀನ್ ಕಾಪು, ಪ್ರಭಾ ಬಿ. ಶೆಟ್ಟಿ, ದಯಾನಂದ ಬಂಗೇರ, ಮಾಧವ ಪಾಲನ್, ಗಣೇಶ್ ಕೋಟ್ಯಾನ್ ಮೊದಲಾದವರು ಉಪಸ್ಥಿತರಿದ್ದರು.
ಕಟಪಾಡಿಯಲ್ಲಿ ಪ್ರತಿಭಟನೆ: ಕಾಪು ಬ್ಲಾಕ್ ಮಹಿಳಾ ಕಾಂಗ್ರೆಸ್ ವತಿಯಿಂದ ಕಟಪಾಡಿ ಜಂಕ್ಷನ್ ಬಳಿ ಇರುವ ಪೆಟ್ರೋಲ್ ಬಂಕ್ ನಲ್ಲಿ ಪೆಟ್ರೋಲ್ ಡೀಸಲ್, ಗ್ಯಾಸ್ ಬೆಲೆ ಏರಿಕೆ ವಿರುದ್ಧ ಸೌಟು, ಬಟ್ಟಲು, ಲಟ್ಟಣಿಗೆ ಹಿಡಿದು ಪ್ರತಿಭಟನೆ ನಡೆಯಿತು.
ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಗೀತಾ ವಾಗ್ಲೆ, ಕಾಪು ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪ್ರಭಾ ಬಿ ಶೆಟ್ಟಿ, ಪ್ರಮುಖರಾದ ಆಗ್ನೆಸ್ ಡೇಸ್, ಸುಗುಣ, ಆಶಾ ಅಂಚನ್, ಪ್ಲಾವಿಯ, ಸಬಿತ, ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ
Kapu Assembly constituency: ನಕಲಿ ಮತದಾನ;ಆರೋಪ
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ