ಉಡುಪಿಗೆ ಬರುವ ಪ್ರವಾಸಿಗರಿಗೆ ಗುಡ್ ನ್ಯೂಸ್: “ವರ್ಚುವಲ್ ಟೂರ್’ ವಿನೂತನ ಪರಿಕಲ್ಪನೆ
Team Udayavani, Nov 26, 2021, 8:00 AM IST
ಉಡುಪಿ: ಕೊರೊನಾದಿಂದ ನೆಲ ಕಚ್ಚಿರುವ ಜಿಲ್ಲಾ ಪ್ರವಾಸೋದ್ಯಮ ಕ್ಷೇತ್ರದ ಅಭಿವೃದ್ಧಿಗೆ “ವರ್ಚವಲ್ ಟೂರ್’ ಎನ್ನುವ ವಿನೂತನ ಪರಿಕಲ್ಪನೆಯನ್ನು ಜಿಲ್ಲೆಯಲ್ಲಿ ಜಾರಿಗೆ ತರಲಾಗುತ್ತಿದೆ.
ಪ್ರವಾಸಿ ತಾಣ ಅಥವಾ ಧಾರ್ಮಿಕ ಕೇಂದ್ರಗಳನ್ನು ನೋಡಲು ಬರುವ ಪ್ರವಾಸಿಗರಿಗೆ ಜಿಲ್ಲೆಯ ವಿವಿಧ ಭಾಗಗಳಲ್ಲಿ ಇರುವ ಪ್ರವಾಸಿ ತಾಣಗಳ ಕಿರು ಪರಿಚಯದ ಜತೆಗೆ ಆ ಸ್ಥಳಗಳಿಗೆ ಪ್ರವಾಸಿಗರನ್ನು ಆಕರ್ಷಿಸಲು ವರ್ಚುವಲ್ ವ್ಯವಸ್ಥೆಯನ್ನು ಸಮರ್ಪಕವಾಗಿ ಬಳಸಿಕೊಳ್ಳಲು ಜಿಲ್ಲಾಡಳಿತ ನಿರ್ಧರಿಸಿದೆ.
ಏನಿದು ವರ್ಚುವಲ್ ಟೂರ್?:
ಜಿಲ್ಲೆಯ ಪ್ರಮುಖ ಆಕರ್ಷಣೆಗಳಾದ ಕೊಲ್ಲೂರಿನ ಶ್ರೀ ಮೂಕಾಂಬಿಕಾ ದೇವಸ್ಥಾನ, ಶ್ರೀ ಕೃಷ್ಣಮಠ, ಕಮಲಶಿಲೆ ಶ್ರೀ ಬ್ರಾಹ್ಮೀ ದುರ್ಗಾಪರಮೇಶ್ವರಿ ದೇವಸ್ಥಾನ, ಮಲ್ಪೆ, ಮರವಂತೆ ಬೀಚ್, ಸೋಮೇಶ್ವರ -ಒತ್ತಿನೆಣೆ ಪ್ರಕೃತಿ ಸೌಂದರ್ಯ, ಹೆಬ್ರಿ ಸಮೀಪದ ಜೋಮ್ಲು ತೀರ್ಥ, ಕಾಪು ದೀಪಸ್ತಂಭ, ಮುದೂರು ಸಮೀಪದ ಗೋವಿಂದ ತೀರ್ಥ, ಮಲ್ಪೆ ಸೈಂಟ್ ಮೇರಿಸ್ ಐಲ್ಯಾಂಡ್, ಅತ್ತೂರು ಚರ್ಚ್, ಕಾರ್ಕಳದ ಗೊಮ್ಮಟ ಬೆಟ್ಟ ಮೊದಲಾದ ಸ್ಥಳಗಳ ಜತೆಗೆ ಇನ್ನು ಅನೇಕ ಪ್ರವಾಸಿ ತಾಣಗಳು ಇಲ್ಲಿವೆ. ಹೊರ ರಾಜ್ಯ, ಜಿಲ್ಲೆಗಳಿಂದ ಬರುವ ಪ್ರವಾಸಿಗರಿಗೆ ವರ್ಚವಲ್ ವ್ಯವಸ್ಥೆ ಮೂಲಕ ಜಿಲ್ಲೆಯ ಪ್ರವಾಸಿ ತಾಣಗಳ ಚಿತ್ರಣ ಸಿಗಲಿದೆ. ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣಗಳಲ್ಲಿ ವರ್ಚುವಲ್ ಬೋರ್ಡ್ಗಳನ್ನು ಅಳವಡಿಸಲಾಗುತ್ತದೆ. ಆ ಬೋರ್ಡ್ನಲ್ಲಿ ದಿನಪೂರ್ತಿ ಜಿಲ್ಲೆಯ ಪ್ರವಾಸಿ ತಾಣಗಳ ಚಿತ್ರಸಹಿತವಾದ ಮಾಹಿತಿ ಬಿತ್ತರಗೊಳ್ಳಲಿದೆ. ತಾವಿರುವ ಸ್ಥಳದಿಂದ ಬೇರೆ ತಾಣಕ್ಕೆ ಹೋಗುವ ರೂಟ್ಮ್ಯಾಪ್(ದಾರಿ), ಬಸ್ ಅಥವಾ ಇತರೆ ಸಾರಿಗೆ ವ್ಯವಸ್ಥೆಯ ಪೂರ್ಣ ವಿವರ ಹಾಗೂ ವಸತಿ ಸೌಲಭ್ಯದ ಮಾಹಿತಿ ಡಿಜಿಟಲ್ ಬೋರ್ಡ್ಗಳಲ್ಲಿ ಪ್ರವಾಸಿಗಳಿಗೆ ಲಭ್ಯವಾಗಲಿದೆ.
ಸುರಕ್ಷತೆಗೆ ಆದ್ಯತೆ :
ತ್ರಾಸಿಯಿಂದ ಮರವಂತೆ ವರೆಗೂ ಯಾವ ರೀತಿ ಬೀಚ್ ಅಭಿವೃದ್ಧಿ ಮಾಡಬಹುದು ಮತ್ತು ಈ ಬೀಚ್ನಲ್ಲಿ ಪ್ರವಾಸಿಗರ ಸಂಖ್ಯೆ ದಿನೆದಿನೇ ಹೆಚ್ಚುತ್ತಿರುವುದರಿಂದ ಸುರಕ್ಷತೆಗೂ ಆದ್ಯತೆ ನೀಡುವ ಬಗ್ಗೆಯೂ ಜಿಲ್ಲಾಡಳಿತ ನಿಗಾ ವಹಿಸುತ್ತಿದೆ.
ಧಾರ್ಮಿಕ ಕೇಂದ್ರಕ್ಕೂ ಒತ್ತು:
ಕರಾವಳಿಯಲ್ಲಿ ಪ್ರವಾಸೋದ್ಯಮದ ಅಭಿವೃದ್ಧಿಗೆ ವಿಪುಲವಾದ ಅವಕಾಶವಿದೆ. ಇದನ್ನು ಸಮರ್ಪಕವಾಗಿ ಬಳಸಿಕೊಂಡು, ಪ್ರವಾಸೋದ್ಯಮಕ್ಕೆ ಹೊಸ ರೂಪ ನೀಡಿ, ಉದ್ಯೋಗಾವಕಾಶ ಹೆಚ್ಚಳ ಮಾಡಲಿದ್ದೇವೆ. ಧಾರ್ಮಿಕ ಕೇಂದ್ರಗಳು ಹೆಚ್ಚಿರುವುದರಿಂದ ಧಾರ್ಮಿಕ ಪ್ರವಾಸೋದ್ಯಮಕ್ಕೂ ಒತ್ತು ನೀಡುವ ಬಗ್ಗೆ ಇಲಾಖೆಯ ಮೂಲದಿಂದ ತಿಳಿದು ಬಂದಿದೆ.
ಬೀಚ್ಗಳ ಅಭಿವೃದ್ಧಿ :
ಜಿಲ್ಲೆಯ ಪ್ರಮುಖ ಬೀಚ್ಗಳ ಅಭಿವೃದ್ಧಿಗೆ ಯೋಜನೆ ರೂಪಿಸಲಾಗಿದೆ. ಅರಬೀ ಸಮುದ್ರ ಮತ್ತು ಸೌಪರ್ಣಿಕಾ ನದಿಯ ನಡುವಿನಲ್ಲಿ ರಾಷ್ಟ್ರೀಯ ಹೆದ್ದಾರಿ ಹಾದು ಹೋಗುವ “ಮರವಂತೆ ಬೀಚ್’ ಪ್ರದೇಶವನ್ನು ಇನ್ನಷ್ಟು ಅಭಿವೃದ್ಧಿಗೆ ಜಿಲ್ಲಾಡಳಿತ ಮುಂದಾಗಿದೆ.
ಪ್ರವಾಸೋದ್ಯಮ ಕ್ಷೇತ್ರದ ಅಭಿವೃದ್ಧಿಗೆ “ವರ್ಚುವಲ್ ಟೂರ್’ ವ್ಯವಸ್ಥೆ ಜಾರಿಗೆ ತರಲಿದ್ದೇವೆ. ಇದರ ಜತೆಗೆ ಮರವಂತೆ ಬೀಚ್ ಅಭಿವೃದ್ಧಿಗೂ ನಿರ್ಧಾರ ತೆಗೆದುಕೊಳ್ಳಲಾಗಿದೆ. ಜಿಲ್ಲೆಯಲ್ಲಿ ಅನೇಕ ಪ್ರವಾಸಿ ತಾಣವಿದ್ದು, ಉದ್ಯೋಗಾವಕಾಶ ಹೆಚ್ಚಿಸಲು ಅವಕಾಶವಿದೆ. ಹೀಗಾಗಿ ಪ್ರವಾಸೋದ್ಯಮ ಕ್ಷೇತ್ರ ಪೂರ್ಣವಾಗಿ ತೆರೆದುಕೊಳ್ಳಲು ಎಲ್ಲರೂ ಕೊರೊನಾ ಲಸಿಕೆ ಪಡೆಯುವುದು ಅನಿವಾರ್ಯವಾಗಿದೆ.-ಕೂರ್ಮಾ ರಾವ್ ಎಂ., ಜಿಲ್ಲಾಧಿಕಾರಿ
-ರಾಜು ಖಾರ್ವಿ ಕೊಡೇರಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ
Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ
ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು
Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ
Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ
MUST WATCH
ಹೊಸ ಸೇರ್ಪಡೆ
Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ
O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ
Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ