ಚರಂಡಿಯಲ್ಲಿ ಸಿಲುಕಿಕೊಂಡ ವೃದ್ಧೆಯ ರಕ್ಷಣೆ
Team Udayavani, Jul 18, 2017, 2:00 AM IST
ಉಡುಪಿ: ಉಡುಪಿ ಕೋರ್ಟ್ ರಸ್ತೆಯ ಪಕ್ಕದ ನೀರು ಹರಿಯುವ ಚರಂಡಿಗೆ ಬಿದ್ದುಕೊಂಡು ಸಾವು-ಬದುಕಿನ ನಡುವೆ ಒದ್ದಾಡುತ್ತಿದ್ದ ವೃದ್ಧೆಯನ್ನು ಸಮಾಜ ಸೇವಕ ವಿಶು ಶೆಟ್ಟಿ ಅಂಬಲಪಾಡಿ ಅವರು ರಕ್ಷಿಸಿದ್ದಾರೆ. ಜು. 11ರ ಸಂಜೆ ಮಳೆ ಸುರಿಯುತ್ತಿದ್ದು, ಸುಮರು 70 ವರ್ಷದ ವೃದ್ಧೆ ಕೊಡೆ ಹಿಡಿದು ನಡೆದುಕೊಂಡು ಕೋರ್ಟ್ ಹಿಂಭಾಗದ ರಸ್ತೆಯಲ್ಲಿ ಹೋಗುತ್ತಿದ್ದರು. ವಾಹನಕ್ಕೆ ದಾರಿ ಬಿಟ್ಟುಕೊಡಲು ರಸ್ತೆ ಅಂಚಿಗೆ ಬಂದಾಗ ಆಯ ತಪ್ಪಿ ನೀರು ಹರಿಯುವ ಚರಂಡಿಗೆ ಬಿದ್ದು ಏಳಲಾಗದ ಪರಿಸ್ಥಿತಿಯಲ್ಲಿ ಇದ್ದರು. ಯಾರು ಕೂಡ ಅವರನ್ನು ರಕ್ಷಿಸಲು ಮುಂದೆ ಬಂದಿರಲಿಲ್ಲ.
ಮಾಹಿತಿ ತಿಳಿದ ವಿಶು ಶೆಟ್ಟಿ ಅವರು ಅಲ್ಲಿಗೆ ಧಾವಿಸಿ ಒದ್ದಾಡಿಕೊಂಡಿದ್ದ ವೃದ್ಧೆಯನ್ನು ಚರಂಡಿಯಿಂದ ಮೇಲಕ್ಕೆತ್ತಿ ರಕ್ಷಿಸಿ ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ. ವೃದ್ಧೆಯ ಹೆಸರು – ಸರಸು, ಊರು- ಕುಂಭಾಶಿ ಎಂದು ಹೇಳಿಕೊಂಡಿದ್ದಾರೆ. ವಾರಸುದಾರರು ಜಿಲ್ಲಾಸ್ಪತ್ರೆಯ ನಾಗರಿಕ ಸಹಾಯ ಕೇಂದ್ರವನ್ನು ಸಂಪರ್ಕಿಸುವಂತೆ ವಿಶು ಶೆಟ್ಟಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು
Udupi; ಎ. 24ರ ಬಳಿಕ ಹೊರಗಿನವರು ಕ್ಷೇತ್ರದಲ್ಲಿರುವಂತಿಲ್ಲ: ಜಿಲ್ಲಾಧಿಕಾರಿ
Kota Srinivas Poojary; ಮೀನುಗಾರರ ಸಮಸ್ಯೆ, ಬೇಡಿಕೆಗಳಿಗೆ ಧ್ವನಿಯಾಗುವೆ
Veerappa Moily; ದೇಶಕ್ಕೆ ಕ್ರಿಕೆಟ್ ಕಾಮೆಂಟ್ರಿಯನ್ ಬೇಕಿಲ್ಲ
Manipal; ಟ್ಯಾಪ್ಮಿ 38ನೇ ಘಟಿಕೋತ್ಸವ: 510 ಎಂಬಿಎ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ
MUST WATCH
ಹೊಸ ಸೇರ್ಪಡೆ
BJP members: 2 ಕೋಟಿ ಪತ್ತೆ; ಬಿಜೆಪಿಯ ಮೂವರ ಮೇಲೆ ಕೇಸ್
Telangana Election 2024: ಕಳೆಗುಂದಿದ ಬಿಆರ್ಎಸ್: ಕಾಂಗ್ರೆಸ್-ಬಿಜೆಪಿ ಕಾದಾಟ
Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ
ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ
Lok Sabha Election: ಕಾಂಗ್ರೆಸ್ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ