ಮರವಂತೆ ಬಂದರು ಪ್ರದೇಶಕ್ಕೆ ಬೈಂದೂರು ಶಾಸಕ ಭೇಟಿ
Team Udayavani, Jun 15, 2019, 5:57 AM IST
ಉಪ್ಪುಂದ: ಮರವಂತೆ ಮೀನುಗಾರಿಕಾ ಹೊರಬಂದರು ಕಾಮಗಾರಿ ಒಂದು ವರ್ಷದಿಂದ ಅಪೂರ್ಣ ಸ್ಥಿತಿಯಲ್ಲಿ ನಿಂತುಹೋಗಿದೆ. ಅದನ್ನು ಪೂರ್ಣಗೊಳಿಸಲು ಅಗತ್ಯವಿರುವ 38 ಕೋಟಿ ರೂ. ಅನುದಾನ ನೀಡುವಂತೆ ಕೇಂದ್ರ ಸರ್ಕಾರಕ್ಕೆ ರಾಜ್ಯದಿಂದ ಒಪ್ಪಿಸಿದ ಪ್ರಸ್ತಾವನೆಗೆ ಶೀಘ್ರ ಮಂಜೂರಾತಿ ಪಡೆಯಲಾಗುವುದು ಎಂದು ಶಾಸಕ ಬಿ. ಎಂ. ಸುಕುಮಾರ ಶೆಟ್ಟಿ ಹೇಳಿದರು.
ಮರವಂತೆ ಕರಾವಳಿ ಪ್ರದೇಶಕ್ಕೆ ಭೇಟಿ ನೀಡಿ ಅಲ್ಲಿನ ಸ್ಥಿತಿಗತಿ ಪರಿಶೀಲಿಸಿದ ವೇಳೆ ಮೀನುಗಾರರನ್ನು ಉದ್ದೇಶಿಸಿ ಮಾತನಾಡಿದರು.
ಪ್ರದೇಶದ ಹಲವೆಡೆ ನಡೆಯುತ್ತಿರುವ ಕಡಲ್ಕೊರೆತ, ಅದನ್ನು ತಡೆಯುವ ಮತ್ತು ಕೆಟ್ಟು ಹೋಗಿರುವ ಕರಾವಳಿ ಮಾರ್ಗದ ದುರಸ್ತಿ ನಿಟ್ಟಿನಲ್ಲಿ ಕೈಗೊಳ್ಳಬೇಕಾದ ಕ್ರಮದ ಬಗ್ಗೆ, ಮೀನುಗಾರರೊಡನೆ ಹಾಗೂ ಅಧಿಕಾರಿಗಳೊಂದಿಗೆ ಚರ್ಚಿಸಿದರು.
ತೀರ ಅಪಾಯಕಾರಿಯಾಗಿ ಕಂಡು ಬಂದಿರುವ 110 ಮೀಟರ್ ಉದ್ದದ ತೀರದಲ್ಲಿ ಈಗಾಗಲೇ ನಿರ್ಮಿಸಿರುವ ತಡೆಗೋಡೆಯನ್ನು ಇನ್ನೂ ಒಂದೂವರೆ ಮೀಟರ್ ಎತ್ತರಿಸಲು ಪ್ರಕೃತಿ ವಿಕೋಪ ಅಥವಾ ಅನ್ಯ ತುರ್ತು ಪರಿಹಾರ ನಿಧಿಯಿಂದ ಹಣ ಬಿಡುಗಡೆಗೊಳಿಸುವಂತೆ ಜಿಲ್ಲಾಧಿಕಾರಿಗೆ ಹಾಗೂ ನಬಾರ್ಡ್ ಆರ್ಎಡಿ ನಿಧಿಯಿಂದ ಈ ಉದ್ದೇಶಕ್ಕೆ ಮಂಜೂರಾದ ರೂ. 25 ಲಕ್ಷ ಬಿಡುಗಡೆಗೊಳಿಸುವಂತೆ ಹಾಗೂ ರಸ್ತೆ ಅಭಿವೃದ್ಧಿಗೆ ಸಲ್ಲಿಸಲಾಗಿರುವ 90 ಲಕ್ಷ ರೂ . ಮೊತ್ತದ ಅಂದಾಜು ಪಟ್ಟಿಗೆ ಶೀಘ್ರ ಮಂಜೂರಾತಿ ನೀಡುವಂತೆ ಮೀನುಗಾರಿಕಾ ನಿರ್ದೇಶಕರಿಗೆ ಕರೆ ಮಾಡಿ ತಿಳಿಸಿದರು.
ಗ್ರಾಮದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಅನುದಾನ ಒದಗಿಸಿದ ವಿವರ ನೀಡಿದ ಶಾಸಕರು, ಮದಗದ ರಸ್ತೆಗೆ ರೂ 4 ಲಕ್ಷ, ಹೈಮಾಸ್ಟ್ ದೀಪಕ್ಕೆ 1 ಲಕ್ಷ ರೂ., ನೀರೋಣಿ ತೋಡು ಅಭಿವೃದ್ಧಿಗೆ 25 ಲಕ್ಷ ರೂ., ವಿವೇಕಾನಂದ ಮಾರ್ಗ ಅಭಿವೃದ್ಧಿಗೆ 4 ಲಕ್ಷ ರೂ., ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ದುರಸ್ತಿಗೆ 3 ಲಕ್ಷ ರೂ., ಜಟ್ಟಿಗೇಶ್ವರ ಮಾರ್ಗ ಮತ್ತು ಸಾಧನಾ ಮಾರ್ಗ ಅಭಿವೃದ್ಧಿಗೆ 80 ಲಕ್ಷ, ರೂ., ಮೀನುಗಾರಿಕಾ ರಸ್ತೆಗೆ 5 ಲಕ್ಷ, ರೂ., ಗೋರಿಕೆರೆ ಬಳಿ ಕಾಲುಸಂಕ ರಚನೆಗೆ 5 ಲಕ್ಷ ರೂ., ಅಡಿಗಳಹಿತ್ಲು ರಸ್ತೆಗೆ 5 ಲಕ್ಷ ರೂ. ಮತ್ತು ಹೊಳೆಬಾಗಿಲು ನಾಗಪ್ಪಯ್ಯ ಮಾರ್ಗ ಅಭಿವೃದ್ಧಿಗೆ 2 ಲಕ್ಷ ರೂ. ಕೊಡಲಾಗಿದೆ ಎಂದರು.
ಬಂದರು ಮತ್ತು ಮೀನುಗಾರಿಕಾ ಇಲಾಖೆಯ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಉದಯ ಕುಮಾರ ಶೆಟ್ಟಿ, ಸಹಾಯಕ ಎಂಜಿನಿಯರ್ ವಿಜಯ ಶೆಟ್ಟಿ, ಗ್ರಾಮ ಕರಣಿಕ ಆದರ್ಶ ಪದ್ಮಶಾಲಿ, ಮೀನುಗಾರರ ಸೇವಾ ಸಮಿತಿಯ ಅಧ್ಯಕ್ಷ ಮೋಹನ ಖಾರ್ವಿ, ಗ್ರಾಮ ಪಂಚಾಯಿತಿ ಸದಸ್ಯರಾದ ಪ್ರಭಾಕರ ಖಾರ್ವಿ, ಲೋಕೇಶ ಖಾರ್ವಿ, ಮುಖಂಡರಾದ ವೆಂಕಟರಮಣ ಖಾರ್ವಿ, ಸತೀಶ ಖಾರ್ವಿ, ವಾಸು ಖಾರ್ವಿ ಮೊದಲಾದವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್ಕುಮಾರ್
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
MUST WATCH
ಹೊಸ ಸೇರ್ಪಡೆ
ಚನ್ನಮ್ಮನ ಕಿತ್ತೂರು: ಮಹಾನ್ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ