ವಿಶ್ವ ಆರೋಗ್ಯ ಸಂಸ್ಥೆ ತಂಡ ಭೇಟಿ
Team Udayavani, Feb 7, 2019, 12:30 AM IST
ಉಡುಪಿ/ಕಾರ್ಕಳ/ಸಿದ್ಧಾಪುರ: ರಾಜ್ಯದಲ್ಲಿ ಮಂಗನ ಕಾಯಿಲೆ ಬಾಧಿತರು ಚಿಕಿತ್ಸೆಗೆ ದಾಖಲಾಗಿರುವ ಆಸ್ಪತ್ರೆಗಳಿಗೆ ಭೇಟಿ ನೀಡುತ್ತಿರುವ ವಿಶ್ವ ಆರೋಗ್ಯ ಸಂಸ್ಥೆಯ ತಂಡ ಬುಧವಾರ ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಗೆ ಭೇಟಿ ನೀಡಿ ವಸ್ತುಸ್ಥಿತಿ ಪರಿಶೀಲನೆ ನಡೆಸಿತು. ಆರೋಗ್ಯ ಇಲಾಖೆಯ ಮೈಸೂರು ವಿಭಾಗದ ಜಂಟಿ ನಿರ್ದೇಶಕರು ಕೂಡ ತಂಡದಲ್ಲಿದ್ದರು. ತಂಡವು ಜಿಲ್ಲೆಯ ಆರೋಗ್ಯ ಇಲಾಖೆಯ ಅಧಿಕಾರಿಗಳು, ಮಣಿಪಾಲ ವಿ.ವಿ ಕುಲಪತಿ, ಕೆಎಂಸಿ ಅಧೀಕ್ಷಕರು ಹಾಗೂ ಎಂಸಿವಿಆರ್ ತಂಡದೊಂದಿಗೆ ಸಮಾಲೋಚನೆ ನಡೆಸಿತು.
ಮತ್ತೆ 4 ಶವ ಪತ್ತೆ
ಉಡುಪಿ ಜಿಲ್ಲೆಯಲ್ಲಿ ಮಂಗಗಳ ಸಾವು ಮುಂದುವರಿದಿದ್ದು, ಬುಧವಾರ ವಿವಿಧೆಡೆ ಮತ್ತೆ 4 ಮಂಗಗಳ ಶವ ಪತ್ತೆಯಾಗಿವೆ. ಕಾರ್ಕಳ ಸಮೀಪದ ಶಿರ್ಲಾಲು, ಬೆಳ್ಮಣ್, ಆವರ್ಸೆ ಸಮೀಪದ ಹಿಲಿಯಾಣ, ಕಂಡೂರಿನ ವಲೂ¤ರುಗಳಲ್ಲಿ ತಲಾ ಒಂದೊಂದು ಮಂಗಗಳ ಶವ ಪತ್ತೆಯಾಗಿದೆ. ಎರಡು ಮಂಗಗಳ ಶವಗಳ ಅಂಗಾಂಗ ಮಾದರಿಯನ್ನು ಪರೀಕ್ಷೆಗೆ ಕಳುಹಿಸಿಕೊಡಲಾಗಿದೆ.
ಜಿಲ್ಲೆಯಾದ್ಯಂತ ಸಮೀಕ್ಷೆ
ಬುಧವಾರ ಹಳ್ಳಿಹೊಳೆಯಲ್ಲಿ ಓರ್ವ ವ್ಯಕ್ತಿಯನ್ನು ಶಂಕಿತ ಮಂಗನ ಕಾಯಿಲೆ ಹಿನ್ನೆಲೆಯಲ್ಲಿ ತಪಾಸಣೆಗೊಳಪಡಿಸಲಾಯಿತು. ಆದರೆ ಅವರಲ್ಲಿ ಮಂಗನ ಕಾಯಿಲೆ ಪತ್ತೆಯಾಗಿಲ್ಲ. ಇದುವರೆಗೆ ಜಿಲ್ಲೆಯಲ್ಲಿ 26 ಮಂದಿಯನ್ನು ತಪಾಸಣೆ ಗೊಳಪಡಿಸಲಾಗಿದ್ದು ಯಾರೊಬ್ಬರ ಲ್ಲಿಯೂ ಮಂಗನ ಕಾಯಿಲೆ ಪತ್ತೆಯಾ ಗಿಲ್ಲ. ಜಿಲ್ಲೆಯಾದ್ಯಂತ ಸಮೀಕ್ಷೆ, ಜಾಗೃತಿ ಕಾರ್ಯಕ್ರಮ, ಡಿಎಂಪಿ ತೈಲ ವಿತರಣೆಯನ್ನು ನಿರಂತರ ನಡೆಸಲಾಗುತ್ತಿದೆ.
ಕೆಎಂಸಿ: 25 ಮಂದಿ ಚಿಕಿತ್ಸೆ
ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಇದುವರೆಗೆ ಶಿವಮೊಗ್ಗ ಜಿಲ್ಲೆಯ ಸಾಗರ ಮತ್ತು ಆಸುಪಾಸಿನ ಸುಮಾರು 163 ಮಂದಿ ಶಂಕಿತ ಮಂಗನ ಕಾಯಿಲೆ ಚಿಕಿತ್ಸೆಗಾಗಿ ದಾಖಲಾಗಿದ್ದು ಇದರಲ್ಲಿ 25 ಮಂದಿ ಇನ್ನೂ ಚಿಕಿತ್ಸೆ ಪಡೆಯುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
MUST WATCH
ಹೊಸ ಸೇರ್ಪಡೆ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ