ಕಾರವಾರದವರೆಗೂ ವಿಸ್ಟಾಡೋಮ್‌ ರೈಲು ವಿಸ್ತರಣೆ


Team Udayavani, Aug 14, 2021, 6:51 AM IST

ಕಾರವಾರದವರೆಗೂ ವಿಸ್ಟಾಡೋಮ್‌ ರೈಲು ವಿಸ್ತರಣೆ

ಕುಂದಾಪುರ/ಉಡುಪಿ: ಕೋವಿಡ್‌ ಕಾರಣದಿಂದ ಭಾಗಶಃ ಸಂಚಾರ ಮೊಟಕುಗೊಳಿಸಿದ್ದ ಬೆಂಗಳೂರು-ಕಾರವಾರ (06211/12) ಬೆಳಗಿನ ರೈಲು, ಆ.16ರಿಂದ ಹೊಸ ವಿಸ್ಟಾಡೋಮ್‌ ಕೋಚಿ ನೊಂದಿಗೆ ಪುನರಾರಂಭಗೊಳ್ಳಲಿದೆ ಎಂದು ನೈಋತ್ಯ ರೈಲ್ವೇ ತಿಳಿಸಿದೆ.  ಇದಕ್ಕೆ ಕೊಂಕಣ್‌ ರೈಲ್ವೇ ಒಪ್ಪಿಗೆ ಸೂಚಿಸಿದ್ದು ರೈಲ್ವೇ ಹಿತರಕ್ಷಣ ಸಮಿತಿ, ಪ್ರಯಾಣಿಕರ ಒತ್ತಾಯ, ಹೋರಾಟ ಫ‌ಲಪ್ರದವಾಗಿದೆ.

ಕೊರೊನಾ ಕಾರಣದಿಂದ ಯಶವಂತಪುರ – ಕಾರವಾರ ಹಗಲು ರೈಲು ಸ್ಥಗಿತಗೊಂಡ ಬಳಿಕ ಅದೇ ಸಮಯದಲ್ಲಿ ವಿಸ್ಟಾಡೋಮ್‌ ಪ್ರವಾಸಿ ಬೋಗಿಯಿರುವ ರೈಲನ್ನು ಯಶವಂತಪುರದಿಂದ ಮಂಗಳೂರು ತನಕ ಓಡಿಸಲಾಗುತ್ತಿತ್ತು. ಇದರಿಂದ ಕುಂದಾಪುರ, ಕಾರವಾರ ಭಾಗದ ಪ್ರಯಾಣಿಕರು ಹಾಗೂ ಪ್ರವಾಸಿಗರಿಗೆ ನಿರಾಸೆಯಾಗಿತ್ತು.

ಈ ಸಂಬಂಧ ಕಾರವಾರದವರೆಗೂ ಈ ರೈಲನ್ನು  ವಿಸ್ತರಿಸಬೇಕೆಂದು ಕುಂದಾಪುರ, ಉತ್ತರ ಕನ್ನಡ ರೈಲ್ವೇ ಪ್ರಯಾಣಿಕರ ಹಿತರಕ್ಷಣ ಸಮಿತಿ, ಉತ್ತರ ಕನ್ನಡ ರೈಲ್ವೇ ಸಮಿತಿ, ರೈಲು ಪ್ರಯಾಣಿಕರು ಸಂಸದೆ ಮತ್ತು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರಿಗೆ ಮನವಿ ಮಾಡಿ ಒತ್ತಾಯಿಸಿದ್ದರು.

ಈ ನಿಟ್ಟಿನಲ್ಲಿ ತತ್‌ಕ್ಷಣ ಕಾರ್ಯ ಪ್ರವೃತ್ತರಾದ ಶೋಭಾ ಕರಂದ್ಲಾಜೆಯವರು, ಕೇಂದ್ರ ರೈಲ್ವೇ ಸಚಿವರನ್ನು ಭೇಟಿಯಾಗಿ ಕಾರವಾರ-ಬೆಂಗಳೂರು ಹಗಲು ರೈಲನ್ನು ಪುನರಾರಂಭಿಸುವಂತೆ ಮನವಿ ಮಾಡಿದರು. ಈ ಮನವಿಗೆ ಸಚಿವರು ಸ್ಪಂದಿಸಿ ವಿಸ್ಟಾಡೋಮ್‌ ಕೋಚ್‌ ಸಹಿತ ರೈಲು ಆರಂಭಿಸಲು ರೈಲ್ವೇ ಇಲಾಖೆಗೆ  ಸೂಚಿಸಿದರು. ಈ ಸಂಬಂಧ “ಉದಯವಾಣಿ’ಯು ಜು. 13ರಂದು ವರದಿ ಪ್ರಕಟಿಸಿ, ಗಮನ ಸೆಳೆದಿತ್ತು.

ಜನಪ್ರತಿನಿಧಿಗಳ ಸಹಕಾರ :

ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಸಂಸದ ಅನಂತ ಕುಮಾರ್‌ ಹೆಗಡೆ, ಶಾಸಕರಾದ ಕುಂದಾಪುರದ  ಹಾಲಾಡಿ ಶ್ರೀನಿವಾಸ ಶೆಟ್ಟಿ, ಕುಮಟಾದ ದಿನಕರ್‌ ಶೆಟ್ಟಿ ಅವರ ಸಹಕಾರ ಮತ್ತು ನಮ್ಮ ಹೋರಾಟದಿಂದ ವಿಸ್ಟಾಡೋಮ್‌ ರೈಲು ಕಾರವಾರದವರೆಗೆ ವಿಸ್ತರಿಸಲು ಸಾಧ್ಯವಾಗಿದೆ ಎಂದು ಕುಂದಾಪುರ ರೈಲು ಪ್ರಯಾಣಿಕರ ಹಿತರಕ್ಷಣಾ ಸಮಿತಿ ಅಧ್ಯಕ್ಷ ಗಣೇಶ್‌ ಪುತ್ರನ್‌ ತಿಳಿಸಿದ್ದಾರೆ.

ಆ.16ಕ್ಕೆ ರೈಲು ಆಗಮನ :

ವಿಸ್ಟಾಡೋಮ್‌ ರೈಲು ಉಡುಪಿ, ಕುಂದಾಪುರಕ್ಕೆ ಆ. 16ರಂದು ಬರಲಿದ್ದು, ಆ ದಿನ ಸಂಜೆ ಕುಂದಾಪುರದ ಮೂಡ್ಲಕಟ್ಟೆಯ ರೈಲು ನಿಲ್ದಾಣದಲ್ಲಿ ಸ್ವಾಗತ ಕಾರ್ಯಕ್ರಮವಿದೆ. ಉಡುಪಿ, ಕುಂದಾಪುರ, ಬೈಂದೂರು, ಕಾರವಾರದವರೆಗೆ ಅತ್ಯಾಧುನಿಕ ಸೌಲಭ್ಯಗಳಿರುವ ಈ ಬೋಗಿಗಳಲ್ಲಿ ಪ್ರಯಾಣಿಸಿದರೆ, ಪಂಚಗಂಗಾವಳಿ ನದಿ, ಗೋಕರ್ಣ, ಮುಡೇìಶ್ವರ, ಕಡಲ ಕಿನಾರೆ, ಒತ್ತಿನೆಣೆ ಗುಡ್ಡ ಸಹಿತ ಇನ್ನಿತರ ಸಹಜ ಸೌಂದರ್ಯದ ಪ್ರಾಕೃತಿಕ ಸೊಬಗನ್ನು ಸವಿಯುವ ಅವಕಾಶ ಪ್ರಯಾಣಿಕರಿಗೆ ಸಿಗಲಿದೆ.

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

12

Theft; ಕೊಲ್ಲೂರು: ಮಹಿಳೆಯ ಚಿನ್ನ, ನಗದು ಕಳವು

11-udyavara

Sand Mining; ಉದ್ಯಾವರ: ಚುನಾವಣ ಚೆಕ್‌ಪೋಸ್ಟ್‌ ಬಳಿ ಅಕ್ರಮ ಮರಳು ಸಾಗಾಟ ಪತ್ತೆ

10-shirva

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು

Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.