ನೀರಿನ ಸಮಸ್ಯೆ ನಿಭಾಯಿಸಲು ಮುಂದಾದ ಸ್ವಯಂಸೇವಕರು
Team Udayavani, May 14, 2020, 5:30 AM IST
ವಂಡ್ಸೆ: ವಂಡ್ಸೆ ಗ್ರಾಮದಲ್ಲಿ ಎದುರಾದ ಕುಡಿಯವ ನೀರಿನ ಸಮಸ್ಯೆ ಬಗೆ ಹರಿಸುವಲ್ಲಿ ಸಾಮಾಜಿಕ ಕಾರ್ಯ ಕರ್ತರು ಸ್ವಯಂ ಸ್ಪೂರ್ತಿಯಿಂದ ಸ್ವಂತ ಖರ್ಚಿನಲ್ಲಿ ಕಳೆದ ಕೆಲವು ದಿನಗಳಿಂದ ಟ್ಯಾಂಕರ್ ಮೂಲಕ ಕುಡಿಯುವ ನೀರನ್ನು ಒದಗಿಸುತ್ತಿದ್ದಾರೆ.
ಟ್ಯಾಂಕರ್ ಮೂಲಕ ಕುಡಿಯವ ನೀರು ಒದಗಿಸಲು ಸರಕಾರವು ಟೆಂಡರ್ಮೂಲಕ ನಡೆಯ ಬೇಕೆಂದು ಸೂಚಿಸಿರುವ ಹಿನ್ನಲೆಯಲ್ಲಿ ಹಲವು ಗ್ರಾ.ಪಂ.ಗಳಲ್ಲಿ ಈ ಪ್ರಕ್ರಿಯೆ ಮಂದಗತಿಯಲ್ಲಿ ಸಾಗಿತ್ತು, ಟೆಂಡರ್ ಪಡೆಯಲು ಗುತ್ತಿಗೆದಾರರು ಹಿಂಜರಿಯುತ್ತಿದ್ದರು. ಸರಕಾರವು ಸೂಚಿಸಿದ ದರವು ಗುತ್ತಿಗೆದಾರರಿಗೆ ನಷ್ಟ ಉಂಟು ಮಾಡುತ್ತದೆ ಎಂಬ ಕಾರಣಕ್ಕಾಗಿ ಪ್ರಕ್ರಿಯೆಯಲ್ಲಿ ಮುಂದು ವರಿಯಲು ಗುತ್ತಿಗೆದಾರರು ಹೆಚ್ಚಿನ ಆಸಕ್ತಿ ತೋರಿಲ್ಲ. ಇಡೀ ಗ್ರಾಮದಲ್ಲಿ ಬಾವಿ ಬತ್ತಿದ್ದು ಕುಡಿಯವ ನೀರಿಗಾಗಿ ಅಲ್ಲಿನ ನಿವಾಸಿಗಳು ಪರಿತಪಿಸುವ ಪರಿಸ್ಥಿತಿ ಎದುರಾಯಿತು. ಈನಡುವೆ ಗ್ರಾಮ ನಿವಾಸಿಯಾಗಿರುವ ಪ್ರಶಾಂತ ಪೂಜಾರಿ ಕುಡಿಯುವ ನೀರನ್ನು ಗ್ರಾಮಸ್ಥರಿಗೆ ಒದಗಿಸುವ ಬಗ್ಗೆ ಕಾಳಜಿ ವಹಿಸಿ ಟ್ಯಾಂಕರ್ ಮೂಲಕ ನೀರನ್ನು ಪೂರೈಸುತ್ತಿದ್ದಾರೆ.
ವಂಡ್ಸೆ ಗ್ರಾ.ಪಂ.ನೇತೃತ್ವದಲ್ಲಿ ಮೇ 13 ರಿಂದ ಟ್ಯಾಂಕರ್ ಮೂಲಕ ನೀರು ಒದಗಿಸಲಾಗುತ್ತಿದೆ. ಕಳೆದ ಹಲವು ದಿನಗಳಿಂದ ನೀರಿನ ಕ್ಷಾಮ ಎದುರಿಸುತ್ತಿದ್ದ ವಂಡ್ಸೆ ನಿವಾಸಿಗಳಿಗೆ ಬುಧವಾರದಿಂದ ಗ್ರಾ.ಪಂ.ಸಹಿತ ಸಮಾಜ ಸೇವಕರಿಂದ ಒದಗಿಸಲಾಗುತ್ತಿದ್ದ ಟ್ಯಾಂಕರ್ ನೀರು ತಾತ್ಕಾಲಿಕ ನೆಲೆಯಲ್ಲಿ ಉಪಶಮನ ನೀಡಿದಂತಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
JP Hegde; ಉತ್ತಮರನ್ನು ಉಳಿಸಿಕೊಳ್ಳಬೇಕಾದ ಅನಿವಾರ್ಯತೆ ಜನತೆಗಿದೆ: ತೇಜಸ್ವಿನಿ
Udupi: ಅನುಮತಿಯಿಲ್ಲದೆ ಪೋಸ್ಟರ್ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್
K. Jayaprakash Hegde; ಮೀನುಗಾರಿಕೆ, ಪ್ರವಾಸೋದ್ಯಮದ ಅಭಿವೃದ್ದಿಗೆ ಹೆಚ್ಚಿನ ಆಧ್ಯತೆ
Congress vs BJP; ಬ್ರಹ್ಮಾವರದಲ್ಲಿ ಶಕ್ತಿ ಪ್ರದರ್ಶನದ ವೇದಿಕೆ!
ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್ ಹೆಗ್ಡೆ: ವಿಠಲ ಹೆಗ್ಡೆ