ಮತದಾರರ ಕರಡು ಪಟ್ಟಿ ಸಿದ್ಧ: ಜಿಲ್ಲಾಧಿಕಾರಿ ಕೂರ್ಮಾರಾವ್‌

10,05,452 ಮತದಾರರು; ಹೊಸ ನೋಂದಣಿ, ಪರಿಷ್ಕರಣೆಗೆ ಅವಕಾಶ

Team Udayavani, Nov 10, 2022, 6:05 AM IST

ಮತದಾರರ ಕರಡು ಪಟ್ಟಿ ಸಿದ್ಧ: ಜಿಲ್ಲಾಧಿಕಾರಿ ಕೂರ್ಮಾರಾವ್‌

ಉಡುಪಿ: ಜಿಲ್ಲೆಯ ಮತದಾರರ ಕರಡು ಪಟ್ಟಿ ಸಿದ್ಧವಾಗಿದ್ದು, ಹೊಸ ನೋಂದಣಿ, ಪರಿಷ್ಕರಣೆ ಹಾಗೂ ತಿದ್ದುಪಡಿಗೆ ಅವಕಾಶ ಕಲ್ಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕೂರ್ಮಾ ರಾವ್‌ ಎಂ. ಅವರು ಬುಧವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಜಿಲ್ಲೆಯಲ್ಲಿ 2022ರ ಅಂತಿಮ ಪಟ್ಟಿಯಲ್ಲಿ 10,12,842 ಮತದಾರರಿದ್ದರು. ಈಗ ಸಿದ್ಧಪಡಿಸಿರುವ 2023ರ ಕರಡು ಪಟ್ಟಿಯಲ್ಲಿ 10,05,452 ಮತದಾರರಿದ್ದಾರೆ. ಎರಡು ಕಡೆಗಳಲ್ಲಿ ನೋಂದಣಿ, ಮೃತರ ಹೆಸರು ತೆಗೆದು ಹಾಕದೇ ಇರುವುದು ಮೊದಲಾದವುಗಳನ್ನು ಸೂಕ್ಷ್ಮವಾಗಿ ಪರಿಷ್ಕರಿಸಿದ್ದು, ಸುಮಾರು 7,390 ಮಂದಿಯನ್ನು ಪಟ್ಟಿಯಿಂದ ಕೈಬಿಡಲಾಗಿದೆ. ಜಿಲ್ಲೆಯಲ್ಲಿ 27,004 ಯುವ ಮತದಾರರು ನೋಂದಣಿಯಾಗಬೇಕಿತ್ತು. 13,529 ಯುವ ಮತದಾರರು ಮಾತ್ರ ನೋಂದಣಿ ಮಾಡಿಕೊಂಡಿದ್ದಾರೆ. ಜಿಲ್ಲೆಯಲ್ಲಿ 4,85,169 ಪುರುಷ ಹಾಗೂ 5,20,273 ಮಹಿಳಾ ಮತದಾರರಿದ್ದಾರೆ ಎಂದು ಮಾಹಿತಿ ನೀಡಿದರು.

ಈಗಾಗಲೇ ನಡೆದಿರುವ ಮತದಾರರ ಪಟ್ಟಿ ಪರಿಷ್ಕರಣೆ ಸಂದರ್ಭ ಯುವ ಮತದಾರರು ಸೇರಿದಂತೆ 18,931 ಮತದಾರರು ಸೇರ್ಪಡೆಯಾಗಿದ್ದಾರೆ. 26,321 ಮಂದಿ ಡಿಲೀಶನ್‌ ಆಗಿದೆ. 123 ಮಂದಿ ಅನಿವಾಸಿ ಭಾರತೀಯ ಮತದಾರರಿದ್ದಾರೆ ಎಂದರು.

ವಿಶೇಷ ಸಂಕ್ಷಿಪ್ತ ಪರಿಷ್ಕರಣೆ
ನ. 9ರಿಂದ ಡಿ. 8ರ ವರೆಗೆ ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ನಡೆಯಲಿದೆ. 2023ರ ಜ. 1, ಎ. 1, ಜು. 1 ಹಾಗೂ ಅ. 1ಕ್ಕೆ 18 ವರ್ಷ ತುಂಬಲಿರುವವರು ಈಗಲೇ ಅರ್ಜಿ ಸಲ್ಲಿಸಲು ಅವಕಾಶವಿದೆ. ತಿದ್ದುಪಡಿ, ಕ್ಷೇತ್ರ ಬದಲಾವಣೆ, ಡಿಲೀಶನ್‌ ಹೀಗೆ ಎಲ್ಲವನ್ನು ಓಟರ್‌ ಹೆಲ್ಪ್ ಲೈನ್ ಆ್ಯಪ್‌ ಮೂಲಕವೂ ಸುಲಭವಾಗಿ ಮಾಡಬಹುದು ಎಂದರು.

ಆಧಾರ್‌ ಜೋಡಣೆ: ಜಿಲ್ಲೆಯ ಒಟ್ಟು ಮತದಾರರಲ್ಲಿ 8,52,453 ಮತದಾರರು ಈಗಾಗಲೇ ಎಪಿಕ್‌ ಕಾರ್ಡ್‌ ಜತೆಗೆ ಆಧಾರ್‌ ನೋಂದಣಿ ಮಾಡಿಸಿಕೊಂಡಿದ್ದಾರೆ. ಶೇ. 84.78ರಷ್ಟು ಪ್ರಗತಿ ಸಾಧಿಸಿದ್ದೇವೆ. ಇದರಲ್ಲಿ 7.23 ಲಕ್ಷ ಮತದಾರರು ಓಟರ್‌ ಹೆಲ್ಪ್ ಲೈನ್ ಆ್ಯಪ್‌ ಮೂಲಕವೇ ಆಧಾರ್‌ ಜೋಡಣೆ ಮಾಡಿಸಿಕೊಂಡಿದ್ದಾರೆ ಎಂದರು.
ಅಪರ ಜಿಲ್ಲಾಧಿಕಾರಿ ವೀಣಾ ಬಿ.ಎನ್‌. ಉಪಸ್ಥಿತರಿದ್ದರು.

ಜಿಲ್ಲೆಯ ರಜತೋತ್ಸವ ಸಂಬಂಧ ವಿವಿಧ ಕಾರ್ಯಕ್ರಮಗಳ ಯೋಜನೆ ಸಿದ್ಧವಾಗುತ್ತಿದೆ. ಇಂದ್ರಾಳಿ ಸೇತುವೆ ಕಾಮಗಾರಿ ಸಂಬಂಧ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಜತೆಗೆ ನಿರಂತರ ಸಂಪರ್ಕದಲ್ಲಿದ್ದೇವೆ.
– ಕೂರ್ಮಾರಾವ್‌ ಎಂ.,
ಜಿಲ್ಲಾಧಿಕಾರಿ ಉಡುಪಿ

ಕಾಲೇಜುಗಳಲ್ಲಿ ಅಭಿಯಾನ
ಜಿ.ಪಂ. ಸಿಇಒ ಪ್ರಸನ್ನ ಎಚ್‌. ಮಾತನಾಡಿ, ಯುವ ಮತದಾರರನ್ನು ಹೆಚ್ಚೆಚ್ಚು ನೋಂದಣಿ ಮಾಡಿಸುವ ಸಂಬಂಧ ಜಿಲ್ಲೆಯ ಪಿಯುಸಿ ಹಾಗೂ ಪದವಿ ಕಾಲೇಜುಗಳಲ್ಲಿ ಅಭಿಯಾನ ನಡೆಸಲು ಸಿದ್ಧತೆ ಮಾಡಿಕೊಂಡಿದ್ದೇವೆ. ಕೊರಗ ಕಾಲನಿಗಳಲ್ಲಿ ಸರ್ವೆ ಮೂಲಕ ಮತದಾರರ ಗುರುತಿನ ಚೀಟಿ ನೀಡುವ ಕಾರ್ಯವನ್ನು ಹಮ್ಮಿಕೊಂಡಿದ್ದೇವೆ ಎಂದು ಹೇಳಿದರು.

ಟಾಪ್ ನ್ಯೂಸ್

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-qweqwewq

Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.