ಭೂಮಿ, ನೀರು, ಆಕಾಶದಲ್ಲಿ ಮತದಾನ ಅರಿವು ಮೂಡಿಸಿದ ವಿಶೇಷಚೇತನರು


Team Udayavani, Apr 12, 2018, 6:55 AM IST

0804mlp2b.jpg

ಮಲ್ಪೆ: ಉಡುಪಿ ಜಿಲ್ಲೆಯ ವಿಶೇಷ ಚೇತನರು, ವಾಕ್‌ ಮತ್ತು ಶ್ರವಣ ದೋಷವುಳ್ಳ ಹಾಗೂ ಬುದ್ಧಿ ಮಾಂದ್ಯರಿಂದ ಮಲ್ಪೆ ಸಮುದ್ರ ತೀರದಲ್ಲಿ,ನೆಲ,ಆಗಸ ಮತ್ತು ಸಮುದ್ರದಲ್ಲಿ ಮತದಾನ ಅರಿವು ಮೂಡಿಸುವ ವಿಶೇಷ ಕಾರ್ಯಕ್ರಮ  ಜಿಲ್ಲಾ ಸ್ವೀಪ್‌ ಸಮಿತಿ ಅಧ್ಯಕ್ಷ ಹಾಗೂ ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶಿವಾನಂದ ಕಾಪಶಿ ಅವರ ಅಧ್ಯಕ್ಷತೆಯಲ್ಲಿ ರವಿವಾರ ಸಂಜೆ ನಡೆಯಿತು.

ವಾಕ್‌ ಮತ್ತು ಶ್ರವಣ ದೋಷವುಳ್ಳ ಯುವಕರು ಮತದಾನ ಜಾಗೃತಿ ಕುರಿತ ಭಿತ್ತಿಪತ್ರದೊಂದಿಗೆ ಪ್ಯಾರಾಸೈಲಿಂಗ್‌ ಮಾಡಿ, ವಿಶೇಷ ಚೇತನರು ತಮ್ಮ ವಾಹನಗಳಿಗೆ ಮತದಾನ ಜಾಗೃತಿ ಸಾರುವ ಭಿತ್ತಿಪತ್ರಗಳನ್ನು  ಅಳವಡಿಸಿಕೊಂಡು, ದ್ವಿ ಚಕ್ರ ರ್ಯಾಲಿ ಮೂಲಕ ಹಾಗೂ ಸಮುದ್ರದಲ್ಲಿ ದೋಣಿಯಲ್ಲಿ  ಪ್ರಯಾಣಿಸಿ ಭಿತ್ತಿ ಫ‌ಲಕಗಳನ್ನು ಪ್ರದರ್ಶಿಸುವ ಮೂಲಕ ನೆರದಿದ್ದ ಸಾವಿರಾರು ಮಂದಿ ಸಾರ್ವಜನಿಕರು ಹಾಗೂ ಪ್ರವಾಸಿಗರಲ್ಲಿ ಮತದಾನ ಕುರಿತು ಜಾಗೃತಿ ಮೂಡಿಸಿದರು.

ವಿಕಲಚೇತನರಿಗೆ ವಾಹನ ವ್ಯವಸ್ಥೆ:
ಸಭಾ ಕಾರ್ಯಕ್ರಮದಲ್ಲಿ ಮಾತ ನಾಡಿದ ಜಿಲ್ಲಾ ಸ್ವೀಪ್‌ ಸಮಿತಿ ಅಧ್ಯಕ್ಷ ಹಾಗೂ ಜಿ.ಪಂ. ಸಿಇಒ ಶಿವಾನಂದ ಕಾಪಶಿ, ಇಂದು ನಡೆದ ಜಾಗೃತಿ ಆಭಿಯಾನ ಅತ್ಯಂತ ವಿಶಿಷ್ಟವಾದ ಕಾರ್ಯಕ್ರಮ. ಈ ಮೂಲಕ ಚುನಾವಣಾ ಆಯೋಗದ ಸಂದೇಶವಾದ, ಎಲ್ಲರನ್ನೂ ಒಳಗೊಂಡ, ಸುಗಮ್ಯ ನೈತಿಕ ಮತದಾನದ ಉದ್ದೇಶ ಈಡೇರಿದೆ. ಚುನಾವಣೆಯಲ್ಲಿ ಪ್ರತಿ ಯೊಬ್ಬ ಪ್ರಜೆಯೂ ಭಾಗವಹಿಸಬೇಕು ಎಂಬ ಉದ್ದೇಶದಿಂದ ಮತಗಟ್ಟೆಗಳಲ್ಲಿ, ಮತದಾರರಿಗೆ ಎಲ್ಲ ಅಗತ್ಯ ಮೂಲ ಸೌಕರ್ಯ ಒದಗಿಸಲಾಗಿದೆ, ವಿಶೇಷ ಚೇತನರಿಗಾಗಿ ರ್‍ಯಾಂಪ್‌ ಹಾಗೂ ವೀಲ್‌ ಚೇರ್‌ ವ್ಯವಸ್ಥೆ ಒದಗಿಸಲಾಗಿದೆ, ಮನೆಗಳಲ್ಲಿ ವಿಶೇಷಚೇತನ ಮತದಾರ ರಿದ್ದಲ್ಲಿ ಸಹಾಯವಾಣಿ ಸಂಖ್ಯೆಗೆ (0820-2574811) ಮಾಹಿತಿ ನೀಡಿದ್ದಲ್ಲಿ, ಮತದಾನದ ದಿನ ಮತಗಟ್ಟೆಗೆ ಕರೆದುಕೊಂಡು ಹೋಗಲು ವಾಹನ ವ್ಯವಸ್ಥೆ ಮಾಡಲಾಗುವುದು ಎಂದು ಹೇಳಿದರು.

ಮತದಾರರ ಹೊಸ ನೋಂದಣಿ ಮತ್ತು ತಿದ್ದುಪಡಿಗಾಗಿ ಮಿಂಚಿನ ಮತದಾನ ಎಂಬ ಆಭಿಯಾನ ಆರಂಭಿಸಲಾಗಿದೆ. ಈ ಆಭಿಯಾನದಲ್ಲಿ ಹೊಸದಾಗಿ ಹೆಸರು ಸೇರಿಸಲು ಮತ್ತು ಹೆಸರು ಬಿಟ್ಟು ಹೋಗಿದಲ್ಲಿ ಎ. 14ರ ವರೆಗೆ ಸೇರಿಸಲು ಅವಕಾಶವಿದೆ, ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಇರುವುದನ್ನು ಖಾತರಿಪಡಿಸಿಕೊಳ್ಳಬೇಕು. ಮತ್ತು ಮೇ 12 ರಂದು ಮತದಾನದಂದು ಎಲ್ಲರೂ ತಪ್ಪದೇ ಮತದಾನ ಮಾಡುವಂತೆ ಕಾಪಶಿ ಹೇಳಿದರು. 

ಪ್ಯಾರಾ ಸೇಲಿಂಗ್‌ನಲ್ಲಿ 10 ಮಂದಿ ಭಾಗವಹಿಸಿದ್ದು, ಒಂದು ವಾರದ ವರೆಗೆ ಗುರುತಿನ ಚೀಟಿ ತೋರಿಸಿ ವಿಶೇಷ ಚೇತನರು ಉಚಿತವಾಗಿ ಪ್ಯಾರಾ ಸೇಲಿಂಗ್‌ ಮಾಡಬಹುದಾಗಿದೆ . ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕಿ ಗ್ರೇಸಿ ಗೊನ್ಸಾಲ್ವಿಸ್‌, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ| ರೋಶನ್‌ ಕುಮಾರ್‌ ಶೆಟ್ಟಿ, ಜಿಲ್ಲಾ ವಾರ್ತಾಧಿಕಾರಿ ರೋಹಿಣಿ ಕೆ, ಜಿಲ್ಲಾ ಕಾರ್ಮಿಕ ಅಧಿಕಾರಿ ವಿಶ್ವನಾಥ್‌, ಜಿಲ್ಲಾ ವಿಕಲಚೇತನ ಮತ್ತು ಹಿರಿಯ ನಾಗರೀಕ ಸಬಲೀಕರಣ ಇಲಾಖೆಯ ಅಧಿಕಾರಿ ನಿರಂಜನ್‌ ಭಟ್‌, ಅಶೋಕ್‌ ಕಾಮತ್‌ ಮತ್ತಿತರರು ಉಪಸ್ಥಿತರಿದ್ದರು.ಸಾರ್ವಜನಿಕರಿಗೆ ಮತ್ತು ವಿಕಲ ಚೇತನರಿಗೆ ಮತದಾನ ಪ್ರತಿಜ್ಞಾ ವಿಧಿಯನ್ನು ಬೋಧಿಸಲಾಯಿತು. ಬಳಿಕ ವಿಕಲಚೇತನರಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರಗಿತು. ಪಿಡಿಒ ಮಹೇಶ್‌ ಸ್ವಾಗತಿಸಿ, ವಂದಿಸಿದರು.
 

ಟಾಪ್ ನ್ಯೂಸ್

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9-tmpl

Malpe: ವಡಭಾಂಡೇಶ್ವರ ಭಕ್ತವೃಂದ; ಉತ್ತಿಷ್ಠ ಭಾರತ, ಸಾಧಕರಿಗೆ ಸಮ್ಮಾನ

8-pernankila

Pernankila ದೇವಾಲಯ ಬ್ರಹ್ಮಕುಂಭಾಭಿಷೇಕ ಸಂಪನ್ನ

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

Udupi: ನೇಣು ಬಿಗಿದು ಆತ್ಮಹತ್ಯೆ

Udupi: ನೇಣು ಬಿಗಿದು ಆತ್ಮಹತ್ಯೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

partner kannada movie

Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್‌’: ಟ್ರೇಲರ್‌, ಆಡಿಯೋದಲ್ಲಿ ಹೊಸಬರ ಚಿತ್ರ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.