ಮತದಾನ ನಮ್ಮ ಹಕ್ಕು,ಕರ್ತವ್ಯ: ಡಾ|ಹರ್ಷ
Team Udayavani, Apr 6, 2019, 6:02 AM IST
ನಿಟ್ಟೆ: ಮತದಾನವು ನಮ್ಮ ಹಕ್ಕು ಹಾಗೂ ಕರ್ತವ್ಯ ಎಂಬುದನ್ನು ನಾವೆಂದೂ ಮರೆಯಬಾರದು. ಯುವಜನಾಂಗ ಮತದಾನದ ಮಹತ್ವವನ್ನು ನೆನೆದು ಮತಚಲಾಯಿಸಬೇಕು ಎಂದು ಕಾರ್ಕಳ ತಾ. ಪಂ.ಎಕ್ಸಿಕ್ಯೂಟ್ಯೂವ್ ಆಫೀಸರ್ ಡಾ| ಹರ್ಷ ಅಭಿಪ್ರಾಯಪಟ್ಟರು.
ನಿಟ್ಟೆ ತಾಂತ್ರಿಕ ಮಹಾವಿದ್ಯಾಲಯದ ವಿದ್ಯಾರ್ಥಿನಿಲಯದಲ್ಲಿ ಏ.4ರಂದು ನಿಟ್ಟೆ ತಾಂತ್ರಿಕ ಮಹಾವಿದ್ಯಾಲಯದ ಚುನಾವಣ ಸಾಕ್ಷರತಾ ಸಂಘ ಹಮ್ಮಿಕೊಂಡ ಮತದಾನದ ಬಗೆಗೆ ವಿದ್ಯಾರ್ಥಿಗಳಲ್ಲಿ ಜಾಗೃತಿ ಎಂಬ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಗೌರವ ಅತಿಥಿಯಾಗಿ ಭಾಗವಹಿಸಿದ್ದ ಕಾರ್ಕಳ ಬಿ.ಇ.ಒ ವಿಭಾಗದ ಶಿಕ್ಷಣ ಸಂಯೋಜಕ ಶಿವಾನಂದ ಮಾತನಾಡಿ, ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸುವ ಬಗೆಗೆ ವಿವರಿಸಿದರು. ರೆಂಜಾಳ ಸರ್ಕಾರಿ ಶಾಲೆಯ ಉಪಾಧ್ಯಾಯ ಹಾಗೂ ತಾಲೂಕು ಮಟ್ಟದ ಎಸ್.ವಿ.ಇ.ಇ.ಪಿ ಸಂಪನ್ಮೂಲ ವ್ಯಕ್ತಿ ವಿನಾಯಕ ರೆಂಜಾಳ ವಿವಿಧ ವೀಡಿಯೋಗಳ ಮೂಲಕ ವಿದ್ಯಾರ್ಥಿಗಳಲ್ಲಿ ಮತದಾನದ ಮಹತ್ವದ ಬಗೆಗೆ ಜಾಗೃತಿ ಮೂಡಿಸಿದರು. ಕಾರ್ಕಳ ಎಂ.ಪಿ.ಎಂ ಪ್ರಥಮ ದರ್ಜೆ ಕಾಲೇಜಿನ ಕೃಷ್ಣಮೂರ್ತಿ ವೈದ್ಯ ಮತಯಂತ್ರ ಹಾಗೂ ವಿ.ವಿ.ಪ್ಯಾಟ್ ಬಗೆಗೆ ವಿದ್ಯಾರ್ಥಿಗಳಲ್ಲಿದ್ದ ಗೊಂದಲವನ್ನು ನಿವಾರಿಸಿದರು. ಮತದಾನದ ಅಣಕು ಪ್ರಾತ್ಯಕ್ಷಿಕೆ ನಡೆಯಿತು.
ಅಧ್ಯಕ್ಷತೆ ವಹಿಸಿದ್ದ ನಿಟ್ಟೆ ತಾಂತ್ರಿಕ ಕಾಲೇಜಿನ ಪ್ರಾಂಶುಪಾಲ ಡಾ| ನಿರಂಜನ್ ಎನ್ ಚಿಪ್ಳೂಣRರ್ ಮಾತನಾಡಿ, ದೇಶದ ಪ್ರಗತಿಗಾಗಿ ನಾವು ಮತಚಲಾಯಿಸಬೇಕು. ಮತದಾನ ಎಂಬುದನ್ನು ನಮ್ಮ ಕರ್ತವ್ಯ ಎಂಬುದನ್ನು ನಾವು ಮರೆಯಬಾರದು. ದೂರದ ಊರಿನ ವಿದ್ಯಾರ್ಥಿಗಳಿಗೂ ಮತದಾನದಿಂದ ಹಿಂದೇಟು ಹಾಕಬಾರದು ಎಂದರು.
ವಿದ್ಯಾರ್ಥಿ ನಿಲಯದ ವಾರ್ಡನ್ ಡಾ|ಉದಯಕುಮಾರ್ ಶೆಣೈ, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಶೇಖರ್ ಪೂಜಾರಿ ಉಪಸ್ಥಿತರಿದ್ದರು.ನಿಟ್ಟೆ ತಾಂತ್ರಿಕ ಕಾಲೇಜಿನ ಚುನಾವಣಾ ಸಾಕ್ಷರತಾ ಕ್ಲಬ್ನ ನೋಡಲ್ ಆಫೀಸರ್ ಡಾ| ಎಸ್.ಕೆ.ಮಹದೇವೇಗೌಡ ಸ್ವಾಗತಿಸಿದರು. ನಿಟ್ಟೆ ಕ್ಯಾಂಪಸ್ನ ರಿಜಿಸ್ಟ್ರಾರ್ ಪೊ›| ಯೋಗೀಶ್ ಹೆಗ್ಡೆ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಚುನಾವಣಾ ಸಾಕ್ಷರತಾ ಕ್ಲಬ್ನ ವಿದ್ಯಾರ್ಥಿ ನಾಯಕ ಕಾರ್ತಿಕ್ ವಿ ಶೇಟ್ ಪ್ರಾರ್ಥಿಸಿದರು. ನಿಟ್ಟೆ ತಾಂತ್ರಿಕ ಕಾಲೇಜಿನ ಸಾರ್ವಜನಿಕ ಸಂಪರ್ಕ ವಿಭಾಗದ ಅಧಿಕಾರಿ ಕೃಷ್ಣರಾಜ ಜೋಯಿಸ ವಂದಿಸಿದರು. ಚುನಾವಣಾ ಸಾಕ್ಷರತಾ ಕ್ಲಬ್ನ ವಿದ್ಯಾರ್ಥಿ ನಾಯಕ ಕಿಶನ್ ಕಾರ್ಯಕ್ರಮ ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
MUST WATCH
ಹೊಸ ಸೇರ್ಪಡೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ
ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್ ಆಫ್ ಅಟಾರ್ನಿ, ದೂರು ದಾಖಲು