ಕೊಚ್ಚಿ ಹೋಗುವ ಭೀತಿಯಲ್ಲಿ ಮಂಗಿಲಾರು ಸೇತುವೆ
Team Udayavani, May 28, 2019, 6:14 AM IST
ಅಜೆಕಾರು: ಹಿರ್ಗಾನ ಗ್ರಾ.ಪಂ. ವ್ಯಾಪ್ತಿಯ ನೆಲ್ಲಿಕಟ್ಟೆ -ಮಂಗಿಲಾರು ನಡುವೆ ಸಂಪರ್ಕ ಕಲ್ಪಿಸುವ ಮಂಗಿಲಾರು ಸೇತುವೆಯು ಮಳೆಗಾಲದಲ್ಲಿ ಕೊಚ್ಚಿ ಹೋಗುವ ಭೀತಿ ಸ್ಥಳೀಯರನ್ನು ಕಾಡುತ್ತಿದೆ. ಸೇತುವೆಯು ಸಂಪೂರ್ಣ ಶಿಥಿಲಗೊಂಡು ತಳಪಾಯ ಸಂಪೂರ್ಣ ಬಿರುಕುಬಿಟ್ಟಿದೆ.
ಸುಮಾರು 70 ವರ್ಷಗಳ ಹಿಂದೆ ನಿರ್ಮಾಣಗೊಂಡಿರುವ ಈ ಸೇತುವೆಯ ಆಧಾರಸ್ತಂಭಗಳನ್ನು ಕಲ್ಲಿನಿಂದ ನಿರ್ಮಿಸ ಲಾಗಿದ್ದು ಇದು ಶಿಥಿಲಗೊಂಡು ಬಹುತೇಕ ಕಲ್ಲುಗಳು ಈಗಾಗಲೇ ನೀರು ಪಾಲಾಗಿವೆ. ಮಳೆಗಾಲದಲ್ಲಿ ಸುರಿಯುವ ಭಾರೀ ಮಳೆಗೆ ಪ್ರವಾಹ ಬಂದಲ್ಲಿ ಕುಸಿತದ ಹಂತದಲ್ಲಿರುವ ಸ್ತಂಭಗಳು ಕೊಚ್ಚಿಹೋಗಿ ಸಂಪರ್ಕ ಕಡಿತ ಉಂಟಾಗಲಿದೆ.
ಮಂಗಿಲಾರು ಭಾಗದಲ್ಲಿ ಸುಮಾರು 500ರಷ್ಟು ಮನೆಗಳಿದ್ದು ಪ್ರತಿನಿತ್ಯ ನೂರಾರು ವಾಹನಗಳು ಈ ಸೇತುವೆ ಮೂಲಕವೆ ಸಂಚರಿಸುತ್ತವೆ. ಅಲ್ಲದೆ ಪ್ರಸಿದ್ಧ ಧಾರ್ಮಿಕ ಕೇಂದ್ರಗಳಾದ ಹಾಡಿ ಗರಡಿ ಮತ್ತು ವಾಸುದೇವ ದೇವಸ್ಥಾನಕ್ಕೆ ಸಂಪರ್ಕ ಕಲ್ಪಿಸುವ ಏಕೈಕ ರಸ್ತೆ ಇದಾಗಿದ್ದು ಸೇತುವೆ ಕೊಚ್ಚಿ ಹೋದಲ್ಲಿ ಧಾರ್ಮಿಕ ಕೇಂದ್ರಗಳ ಸಂಪರ್ಕ ಕಡಿದು ಹೋಗುತ್ತದೆ.
ಮಳೆಗಾಲದಲ್ಲಿ ಹೆಚ್ಚಿನ ಅವಧಿಯಲ್ಲಿ ಈ ಸೇತುವೆಯು ಮಳೆ ನೀರಿನಲ್ಲಿ ಮುಳುಗುತ್ತಿದ್ದು ವಿಶಾಲ ಸೇತುವೆ ನಿರ್ಮಿಸುವಂತೆ ಸ್ಥಳೀಯರು ಹಲವು ದಶಕಗಳಿಂದ ಮನವಿ ಮಾಡಿದರೂ ನಿಷ್ಪ್ರಯೋಜಕವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
MUST WATCH
ಹೊಸ ಸೇರ್ಪಡೆ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ