“ತ್ಯಾಜ್ಯ, ಪ್ಲಾಸ್ಟಿಕ್‌ಗಳನ್ನು ಸಂಪನ್ಮೂಲ ಎಂದು ಪರಿಗಣಿಸಿದಲ್ಲಿ ಲಾಭದಾಯಕ’

ಕಾಪು ಸ.ಮಾ.ಹಿ. ಪ್ರಾ. ಶಾಲೆಯಲ್ಲಿ ಪೈಪ್‌ ಕಾಂಪೋಸ್ಟ್‌ ಪ್ರಾತ್ಯಕ್ಷಿಕೆ ಕಾರ್ಯಕ್ರಮ

Team Udayavani, Sep 15, 2019, 5:30 AM IST

1309KPE7A

ಕಾಪು : ಪ್ಲಾಸ್ಟಿಕ್‌ ಮತ್ತು ತ್ಯಾಜ್ಯ ವಸ್ತುಗಳನ್ನು ಕಸ ಎಂದು ಪರಿಗಣಿಸಿ ಎಸೆದರೆ ಅದು ಹಾನಿಕಾರಕ ಮತ್ತು ಪರಿಸರದ ಮೇಲೆ ಭಾರೀ ದುಷ್ಪರಿಣಾಮವನ್ನು ಬೀರುವ ವಸ್ತುವಾಗಿ ಬಿಡುತ್ತದೆ. ಅದನ್ನೇ ಸಂಪನ್ಮೂಲ ಎಂದು ಪರಿಗಣಿಸಿ, ಅವುಗಳ ಬಗ್ಗೆ ವಿಶೇಷ ಆಸಕ್ತಿ ವಹಿಸಿ, ಸ್ವತ್ಛವಾಗಿರಿಸಿ ಮರು ಬಳಕೆಗೆ ಬಳಸಿಕೊಂಡರೆ ಭಾರೀ ಆದಾಯ ತಂದು ಕೊಡುವ ಲಾಭದಾಯಕ ಸಂಪನ್ಮೂಲವಾಗಿ ಮೂಡಿ ಬರುತ್ತದೆ ಎಂದು ಕಾಪು ಪುರಸಭೆ ಮುಖ್ಯಾಧಿಕಾರಿ ರಾಯಪ್ಪ ಹೇಳಿದರು.

ಕಾಪು ಪುರಸಭೆ ಮತ್ತು ಕಾಪು ಜೇಸಿಐನ ಸಹಯೋಗದೊಂದಿಗೆ ಕಾಪು ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಜರಗಿದ ಪೈಪ್‌ ಕಾಂಪೋಸ್ಟ್‌ ಪ್ರಾತ್ಯಕ್ಷಿಕೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಕಾಪು ಪುರಸಭೆ ವ್ಯಾಪ್ತಿಯ ಎಲ್ಲೆಡೆಗಳಲ್ಲಿ ಕಾಂಪೋಸ್ಟ್‌ ಪದ್ಧತಿಯನ್ನು ಅನುಷ್ಠಾನಕ್ಕೆ ತರಲಾಗುತ್ತಿದೆ. ಈ ಮಾದರಿಯನ್ನು ಎಲ್ಲಾ ಸಾರ್ವಜನಿಕರು ತಮ್ಮ ತಮ್ಮ ಮನೆ, ವಾಣಿಜ್ಯ ಸಂಕೀರ್ಣಗಳು ಇತ್ಯಾದಿಗಳಲ್ಲಿ ಉಪಯೋಗಿಸಿ ಇಲ್ಲಿನ ಪರಿಸರವನ್ನು ಸ್ವತ್ಛವಾಗಿಡಲು ಕಾಪು ಪುರಸಭೆಯೊಂದಿಗೆ ಕೈ ಜೋಡಿಸುವಂತೆ ವಿನಂತಿಸಿದರು.

ಈ ಸಂದರ್ಭದಲ್ಲಿ ಶಾಲೆಯ ಮಕ್ಕಳನ್ನು ಇಲ್ಲಿನ ಘನ ತ್ಯಾಜ್ಯ ನಿರ್ವಹಣಾ ಘಟಕಕ್ಕೆ ಕರೆದೊಯ್ದು ಅಲ್ಲಿ ಹಸಿ ಕಸ, ಒಣ ಕಸ ಮತ್ತು ಘನ ಮತ್ತು ಪ್ಲಾಸ್ಟಿಕ್‌ ವಸ್ತುಗಳ ಬೇರ್ಪಡಿಸುವಿಕೆಯ ವಿಧಾನದ ಬಗ್ಗೆ ಮಾಹಿತಿ ನೀಡಿ, ಪ್ರಾತ್ಯಕ್ಷಿಕೆ ನಡೆಸಿಕೊಡಲಾಯಿತು.

ಕಾಪು ಜೇಸಿಐ ಅಧ್ಯಕ್ಷೆ ಶಾರದೇಶ್ವರಿ ಗುರ್ಮೆ, ಜೇಸಿಐ ವಲಯಾಧಿಕಾರಿ ಕೇಶವ ಆಚಾರ್ಯ, ಲಯನ್ಸ್‌ ಕ್ಲಬ್‌ ಅಧ್ಯಕ್ಷ ವರುಣ್‌ ಶೆಟ್ಟಿ, ಕಾಪು ಎಎಸ್‌ಐ ರಾಜೇಂದ್ರ ಮಣಿಯಾಣಿ, ಜೇಸಿಐ ಪೂರ್ವಾಧ್ಯಕ್ಷ ರಾಜೇಂದ್ರ ಬಿ.ಕೆ., ಕಾಪು ಪುರಸಭೆ ಪರಿಸರ ಅಭಿಯಂತರ ರವಿಪ್ರಕಾಶ್‌, ಹಿರಿಯ ಆರೋಗ್ಯ ನಿರೀಕ್ಷಕ ದಿನೇಶ್‌, ಕಾಪು ಶಾಲಾ ಶಿಕ್ಷಕಿ ವಿದ್ಯಾವತಿ, ಕಾಪು ಜೇಸಿಐ ನಿಕಟಪೂರ್ವ ಅಧ್ಯಕ್ಷ ರಮೇಶ್‌ ನಾಯ್ಕ, ಕಾರ್ಯದರ್ಶಿ ಸುಖಲಾಕ್ಷಿ ಬಂಗೇರ, ಸಪ್ತಾಹ ಮಹಾ ನಿರ್ದೇಶಕಿ ಸಾವಿತ್ರಿ ನಾಯ್ಕ ಉಪಸ್ಥಿತರಿದ್ದರು.

ಕಾಂಪೋಸ್ಟ್‌ ಗೊಬ್ಬರ ತಯಾರಿ ವಿಧಾನ
6 ಫೀಟ್‌ ಉದ್ದ 8 ಇಂಚು ವ್ಯಾಸದ ಪಿವಿಸಿ ಅಥವಾ ಸಿಮೆಂಟ್‌ ಪೈಪ್‌ನ್ನು ತೆಗೆದುಕೊಂಡು ಒಂದು ಫೀಟ್‌ ಆಳದಲ್ಲಿ ಲಂಬವಾಗಿ ಹಾಕಿ 1 ಕೆ. ಜಿ. ಬೆಲ್ಲ ಹಾಗೂ 2 ಲೀಟರ್‌ ಸೆಗಣಿ ಮಿಶ್ರಿತ ನೀರು, ಅಡುಗೆ ಮನೆ ತ್ಯಾಜ್ಯ, ಎಲೆಗಳು, ಇತರೆ ಕೊಳೆಯುವ ವಸ್ತುಗಳನ್ನು ಹಾಕಿ ಒಂದು ಹಿಡಿ ಮಣ್ಣು, ಸ್ವಲ್ಪ ನೀರು ಈ ರೀತಿ ಪ್ರತಿನಿತ್ಯ ಹಾಕುತ್ತಾ ಹೋಗಬೇಕು. ಪೈಪ್‌ ಪೂರ್ತಿಯಾದ ನಂತರ ಮತ್ತೂಂದು ಪೈಪ್‌ನ್ನು ಇದೇ ರೀತಿಯಲ್ಲಿ ಬಳಸಬಹುದು. ತಯಾರಾದ ಕಾಂಪೋಸ್ಟ್‌ ವಾಸನೆ ಮತ್ತು ನೊಣಗಳಿಂದ ಮುಕ್ತವಾಗಿದ್ದು ಉತ್ತಮವಾದ ಸಾವಯವ ರಾಸಾಯನಿಕ ಮುಕ್ತ ಗೊಬ್ಬರವಾಗಿ ಕೈತೋಟ, ಹೂವಿನ ಗಿಡಗಳು, ತರಕಾರಿ ಬೆಳೆಗಳಿಗೆ ಉಪಯೋಗಿಸಬಹುದಾಗಿದೆ.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.