ವಾರಾಹಿ ನದಿ ಒಡಲಿಗೆ ತ್ಯಾಜ್ಯ ರಾಶಿ ; ಕ್ರಮಕ್ಕೆ ಆಗ್ರಹ

ಅಸಹ್ಯ ವಾಸನೆಯಿಂದ ಸ್ಥಳೀಯರಿಗೆ ತೊಂದರೆ; ಸಾಂಕ್ರಾಮಿಕ ರೋಗ ಭೀತಿ

Team Udayavani, Feb 17, 2020, 5:22 AM IST

1602BAS5

ಬಸ್ರೂರು: ಕುಂದಾಪುರ ಭಾಗದ ಜೀವ ನದಿಯೆಂದೇ ಕರೆಯಿಸಿಕೊಳ್ಳುವ ವಾರಾಹಿ ನದಿಗೆ ವಾಹನದಲ್ಲಿ ಬರುವ ಬೇರೆ ಕಡೆಗಳ ಜನರು ಕಂಡ್ಲೂರು ಸೇತುವೆ ಮೇಲಿನಿಂದ ಕೋಳಿ ತ್ಯಾಜ್ಯ, ಪ್ಲಾಸ್ಟಿಕ್‌, ಕಸವನ್ನು ಎಸೆಯುತ್ತಿದ್ದಾರೆ. ಇದಲ್ಲದೆ ಅಲ್ಲೇ ಸುತ್ತಮುತ್ತ ವಾಸವಾಗಿರುವ ಮನೆಗಳಿಂದಲೂ ವಾರಾಹಿ ನದಿಗೆ ಕಲುಷಿತ ನೀರನ್ನು ಬಿಡುತ್ತಿರುವುದು ಕಂಡು ಬಂದಿದೆ.

ಹೀಗೆ ನದಿಗೆ ಸೇತುವೆ ಮೇಲಿನಿಂದ ಎಸೆದ ಕಸದ ರಾಶಿಯು ಕಂಡ್ಲೂರು ಕಳುವಿನಬಾಗಿಲು ಪ್ರದೇಶದಲ್ಲಿ ಸಂಗ್ರಹಗೊಳ್ಳುತ್ತಿದ್ದು, ಈ ಭಾಗವೀಗ ಸೊಳ್ಳೆಗಳ ಉತ್ಪತ್ತಿ ತಾಣವಾಗಿ ಮಾರ್ಪಾಡಾಗುತ್ತಿದೆ.

ರಾತ್ರಿಯ ಬಳಿಕ…
ಪ್ರತಿದಿನ ರಾತ್ರಿಯ ವೇಳೆ ಕಾರು, ಬೈಕ್‌ ಇನ್ನಿತರ ಗೂಡ್ಸ್‌ ವಾಹನಗಳಲ್ಲಿ ಎಲ್ಲೆಂದಲೋ ಇಲ್ಲಿಗೆ ಬರುವ ಜನ ಕಂಡ್ಲೂರು ಸೇತುವೆಯ ಮೇಲಿನಿಂದ ನದಿಗೆ ಕೋಳಿ ತ್ಯಾಜ್ಯ, ಪ್ಲಾಸ್ಟಿಕ್‌ ಮತ್ತಿತರ ಕಸ, ತರಕಾರಿ ತ್ಯಾಜ್ಯಗಳೆಲ್ಲವನ್ನು ಎಸೆದು ಹೋಗುತ್ತಾರೆ ಎನ್ನುವುದು ಸ್ಥಳೀಯರ ಆರೋಪ.

ಪರಿಸರವಿಡೀ ದುರ್ನಾತ
ಇದರ ಪರಿಣಾಮವಾಗಿ ವಾರಾಹಿಯ ಸಿಹಿ ನೀರು ಕಲ್ಮಶವಾಗಿದೆ. ಅಷ್ಟು ಮಾತ್ರವಲ್ಲದೆ ಸೇತುವೆ ಪರಿಸರದ ಮನೆಗಳಿಗೂ ತ್ಯಾಜ್ಯದ ವಾಸನೆ ಬರುತ್ತಿದೆ.

ಈ ಬಗ್ಗೆ ಸ್ಥಳೀಯರು ಕಾವ್ರಾಡಿ ಗ್ರಾಮ ಪಂಚಾಯಿತಿಯ ಗಮನಕ್ಕೆ ತಂದು ಮನವಿ ಮಾಡಿದ್ದರೂ, ಈವರೆಗೆ ಯಾವುದೇ ಕ್ರಮ ಕೈಗೊಳ್ಳದೇ ಅಧಿಕಾರಿಗಳು ಜಾಣ ಕುರುಡುತನ ಪ್ರದರ್ಶಿಸಿದ್ದಾರೆ ಎನ್ನುವುದಾಗಿ ಊರವರು ಆರೋಪಿಸಿದ್ದಾರೆ.

ಸಾಂಕ್ರಾಮಿಕ ರೋಗ ಭೀತಿ
ವಾರಾಹಿ ನದಿಗೆ ಎಸೆದ ಕಸ, ಕೋಳಿ ತ್ಯಾಜ್ಯ ಕಂಡ್ಲೂರಿನ ಕಳುವಿನಬಾಗಿಲು ಪ್ರದೇಶದಲ್ಲಿ ಈ ಶೇಖರಣೆಗೊಳ್ಳುತ್ತಿದೆ. ಸೊಳ್ಳೆಗಳ ಉತ್ಪತ್ತಿ ಕೇಂದ್ರ ವಾಗಿ ಮಾರ್ಪಡಾಗುತ್ತಿರುವುದರಿಂದ ಸಾಂಕ್ರಾಮಿಕ ರೋಗಗಳು ಕೂಡ ಹರಡುವ ಭೀತಿ ಇಲ್ಲಿನ ಜನರದ್ದಾಗಿದೆ.

ಫಲಕ ತೆಗೆದ ಕಿಡಿಗೇಡಿಗಳು
ಇಲ್ಲಿ ಕಸ ಎಸೆಯಬಾರದು, ಎಸೆದರೆ ಕಟ್ಟುನಿಟ್ಟಿನ ಕ್ರಮಕೈಗೊಳ್ಳಲಾಗುವುದು ಎನ್ನುವ ಎಚ್ಚರಿಕೆ ಫಲಕವನ್ನು ಸೇತುವೆ ಸಮೀಪ ಕಾವ್ರಾಡಿ ಗ್ರಾ.ಪಂ.ನಿಂದ ಹಾಕಲಾಗಿತ್ತು. ಆದರೆ ಯಾರೋ ಕಿಡಿಗೇಡಿಗಳು ಕೆಲ ತಿಂಗಳ ಹಿಂದೆ ಅದನ್ನು ಕಿತ್ತು ತೆಗೆದಿದ್ದಾರೆ.

ವಿಲೇವಾರಿ ಘಟಕಕ್ಕೆ
ಜಾಗ ಸಮಸ್ಯೆ
ನಾವು ಜಿ.ಪಂ.ಗೆ ಅನೇಕ ಬಾರಿ ಘನ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಹಳ್ನಾಡು, ದೂಪದಕಟ್ಟೆಯಲ್ಲಿ ಜಾಗ ಗುರುತಿಸಿ ಪ್ರಸ್ತಾವನೆ ಸಲ್ಲಿಸಿದರೂ ಅದಕ್ಕೆ ಡೀಮ್ಡ್ ಫಾರೆಸ್ಟ್‌ ಅಡ್ಡಿಯಾಗಿದೆ. ಅದನ್ನು ಜಿಲ್ಲಾಧಿಕಾರಿಗಳ ಮಟ್ಟದಲ್ಲಿ ಸರಿಪಡಿಸಿದರೆ, ಸ್ಥಳೀಯರು ಕಸ ಎಸೆಯದಂತೆ ಮುನ್ನೆಚ್ಚರಿಕೆ ವಹಿಸಬಹುದು. ಇನ್ನು ಹೊರಗಿನಿಂದ ಹಗಲು ಹೊತ್ತು ಯಾರೂ ಕಸ ಎಸೆಯುವುದಿಲ್ಲ, ರಾತ್ರಿ ವೇಳೆ ಬಂದು ಕಸ ಎಸೆಯುತ್ತಿದ್ದಾರೆ. ನೋಡಿದವರು ಬಂದು ಹೇಳಿ ಅಂದರೂ ಯಾರೂ ಬಂದು ಹೇಳಲು ರೆಡಿಯಿಲ್ಲ. ಮತ್ತೆ ಹೇಗೆ ನಾವು ಕ್ರಮ ಕೈಗೊಳ್ಳುವುದು.
– ಗೌರಿ ಆರ್‌. ಶ್ರೀಯಾನ್‌, ಕಾವ್ರಾಡಿ ಗ್ರಾ.ಪಂ. ಅಧ್ಯಕ್ಷರು

ಕ್ರಮಕ್ಕೆ ಆಗ್ರಹ
ಇದಕ್ಕಿಂತಲೂ ಗಮನಿಸಬೇಕಾದ ಮುಖ್ಯ ಅಂಶವೆಂದರೆ ಇದೇ ವಾರಾಹಿ ನದಿಯ ಉಪ ನದಿಯಾದ ಜಂಬೂವಿನಿಂದ ಜಪ್ತಿ ಸಮೀಪ ನೀರಿನ ಟ್ಯಾಂಕ್‌ ಮೂಲಕ ನೀರು ಸಂಗ್ರಹಿಸಿ ಕುಂದಾಪುರ ಪುರಸಭೆ, ಬಸ್ರೂರು ಮತ್ತಿತರೆಡೆಗಳಿಗೆ ನೀರನ್ನು ಸರಬರಾಜು ಮಾಡಲಾಗುತ್ತಿದೆ. ಕಂಡ್ಲೂರಿನಿಂದ ಈ ಜಂಬೂ ನದಿಯ ನೀರು ಸಂಗ್ರಹ ಪ್ರದೇಶವು ಕೆಲ ಕಿ.ಮೀ. ಗಳಷ್ಟೇ ದೂರದಲ್ಲಿದೆ. ಆ ಕಾರಣಕ್ಕೆ ವಾರಾಹಿ ನದಿಗೆ ಕಸ ಎಸೆಯುವುದು, ತ್ಯಾಜ್ಯ ನೀರನ್ನು ಬಿಡುವವರ ವಿರುದ್ಧ ಸಂಬಂಧಪಟ್ಟ ಅಧಿಕಾರಿಗಳು, ಸ್ಥಳೀಯಾಡಳಿತ ಗಂಭೀರವಾಗಿ ಪರಿಗಣಿಸಿ, ಸೂಕ್ತ ಕ್ರಮಕೈಗೊಳ್ಳಬೇಕು ಎಂದು ನಾಗರಿಕರು ಆಗ್ರಹಿಸಿದ್ದಾರೆ.

-ದಯಾನಂದ ಬಳ್ಕೂರು

ಟಾಪ್ ನ್ಯೂಸ್

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Horoscope: ಈ ರಾಶಿಯವರಿಗೆ ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರವಿರಲಿ

Horoscope: ಈ ರಾಶಿಯವರು ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರದಿಂದಿರಬೇಕು

1-NG

JEE; ಮಹಾರಾಷ್ಟ್ರ ರೈತನ ಮಗ ಮೇನ್‌ ಟಾಪರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್‌ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ

ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್‌ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.