ಅಂಗನವಾಡಿ ಎದುರಲ್ಲೇ ತ್ಯಾಜ್ಯ: ಸಾಂಕ್ರಾಮಿಕ ರೋಗ ಭೀತಿ


Team Udayavani, Jul 3, 2018, 6:00 AM IST

0207kpe3.jpg

ಕಾಪು: ಎಲ್ಲೂರು ಗ್ರಾ.ಪಂ. ವ್ಯಾಪ್ತಿಯ ಕುಂಜೂರು ದುರ್ಗಾ ನಗರದಲ್ಲಿರುವ ಅಂಗನವಾಡಿಯ ಮುಂಭಾಗದಲ್ಲಿ ತ್ಯಾಜ್ಯದ ಕೊಂಪೆ ದಿನದಿಂದ ದಿನಕ್ಕೆ ಬೆಳೆಯುತ್ತಿದ್ದು, ಅಂಗನವಾಡಿ ಮಕ್ಕಳಿಗೆ ಸಾಂಕ್ರಾಮಿಕ ರೋಗಗಳ ಭೀತಿ ಎದುರಾಗಿದೆ.

ಕುಂಜೂರು ದುರ್ಗಾ ನಗರದಲ್ಲಿರುವ ನೂರಾರು ಮನೆಗಳಲ್ಲಿ ಸಂಗ್ರಹವಾಗುವ ಕಸ ತ್ಯಾಜ್ಯ ವಸ್ತುಗಳನ್ನು ಅಂಗನವಾಡಿ ಮುಂಭಾಗದಲ್ಲಿರುವ ರೈಲ್ವೇ ಟ್ರಾÂಕ್‌ ಬಳಿಯಿರುವ ಖಾಲಿ ಪ್ರದೇಶದಲ್ಲಿ ಎಸೆದು ಹೋಗುತ್ತಿರುವುದು ಇಲ್ಲಿ ತ್ಯಾಜ್ಯದ ಕೊಂಪೆ ಬೆಳೆಯಲು ಮುಖ್ಯ ಕಾರಣವಾಗಿದೆ.

ಅಂಗನವಾಡಿಯ ಮುಂಭಾಗದಲ್ಲಿ ಮೊದಲು ಸಣ್ಣದಾಗಿದ್ದ ತ್ಯಾಜ್ಯದ ಕೊಂಪೆ ಈಗ ವಿಸ್ತಾರವಾಗಿ ಬೆಳೆಯುತ್ತಿದ್ದು, ಪರಿಸರದ ಜನರಲ್ಲಿ ಅಸಹ್ಯಕರ ವಾತಾವರಣ ನಿರ್ಮಾಣಕ್ಕೆ ಕಾರಣವಾಗಿದೆ. 

ಕೇವಲ ಕಸ ಮಾತ್ರ ಅಲ್ಲ 
ಅಂಗನವಾಡಿ ಮುಂಭಾಗದ ಖಾಲಿ ಪ್ರದೇಶದಲ್ಲಿ ಜನ ಕೇವಲ ಕಸ ಮಾತ್ರ ಎಸೆದು ಹೋಗುತ್ತಿಲ್ಲ. ಬದಲಾಗಿ ಪ್ಲಾಸ್ಟಿಕ್‌ ತ್ಯಾಜ್ಯ, ಮನೆಯಲ್ಲಿ ಬಳಸಿ ಉಳಿಕೆಯಾಗುವ ಅನ್ನ, ಸಾಂಬಾರು ಇತ್ಯಾದಿ ತಿಂಡಿ ಪದಾರ್ಥಗಳು, ಡೈಪರ್ ಮತ್ತು ನ್ಯಾಪಿRನ್‌ಗಳು, ಹಳೇ ಬಟ್ಟೆಗಳು, ಮೀನು, ಕೋಳಿ, ಮಾಂಸದ ತ್ಯಾಜ್ಯಗಳನ್ನೂ ಇಲ್ಲಿಗೆ ತಂದು ಎಸೆದು ಹೋಗುತ್ತಿರುವುದು ಸಾರ್ವಜನಿಕರ ಆತಂಕಕ್ಕೆ ಕಾರಣವಾಗಿದೆ.ಮಕ್ಕಳು, ಪರಿಸರದ ಬಗ್ಗೆ ಜನರ ಕಾಳಜಿ ಬಹಿರಂಗ
ಗ್ರಾ.ಪಂ. ವತಿಯಿಂದ ಪಣಿಯೂರು ಶಾಲಾ ಕ್ರೀಡಾಂಗಣದ ಬಳಿಯಲ್ಲಿ ಅಧಿಕೃತವಾದ ಕಸದ ಹೊಂಡವನ್ನು ನಿರ್ಮಿಸಲಾಗಿದ್ದರೂ, ಅಲ್ಲಿವರೆಗೆ ಹೋಗಿ ಕಸ ಎಸೆಯಲು ಉದಾಸೀನತೆ ತೋರುವ ದುರ್ಗಾ ನಗರ ಕಾಲನಿಯ ಜನತೆ ಕಾಲೊನಿಯ ಮಕ್ಕಳು ತೆರಳುವ ಅಂಗನವಾಡಿಯ ಮುಂಭಾಗದಲ್ಲೇ ಎಸೆದು ಹೋಗುತ್ತಿರುವುದು ಜನತೆಯ ಪರಿಸರ ಮತ್ತು ಪುಟ್ಟ ಮಕ್ಕಳ ಬಗ್ಗೆ ಹೊಂದಿರುವ ಕಾಳಜಿಯನ್ನು ಎತ್ತಿ ತೋರಿಸುವಂತಿದೆ.

ತುಂಬಿದೆ ಕಸದ ಹೊಂಡ
ಎಲ್ಲೂರು ಗ್ರಾ.ಪಂ. ವತಿಯಿಂದ ಶಾಲಾ ಮೈದಾನದ ಬಳಿಯಲ್ಲಿ ವಾಟರ್‌ ಟ್ಯಾಂಕ್‌ ಬಳಿ ಸುಂದರವಾಗಿ ನಿರ್ಮಿಸಲಾಗಿರುವ ತ್ಯಾಜ್ಯದ ಗುಂಡಿ ಕೂಡಾ ತುಂಬಿ ತುಳುಕುತ್ತಿದೆ. ಅಲ್ಲಿ ಕೂಡಾ ಹೊಂಡದ ಹೊರ ಭಾಗದಲ್ಲೇ ಕಸವನ್ನು ಎಸೆದು ಹೋಗುತ್ತಿದ್ದು, ಎಸೆದು ಹೋದ ಕಸ ತ್ಯಾಜ್ಯಗಳನ್ನು ಬೆಕ್ಕು ಮತ್ತು ನಾಯಿಗಳು ಹೊರಗೆಳೆದು ಹಾಕುತ್ತಿವೆ. ಆ ಮೂಲಕ ಪರಿಸರ ಕುಲಗೆಡುತ್ತಿದೆ.

ರೋಗದ ಭೀತಿ 
ಅಂಗನವಾಡಿ ಮುಂಭಾಗದಲ್ಲಿ ಶೇಖರಣೆಯಾಗುತ್ತಿರುವ ತ್ಯಾಜ್ಯದಿಂದಾಗಿ ಎಳೆಯ ಮಕ್ಕಳಲ್ಲಿ ಸಾಂಕ್ರಾಮಿಕ ರೋಗದ ಭೀತಿ ಎದುರಾಗಿದೆ. ತ್ಯಾಜ್ಯದ ವಾಸನೆಯಿಂದ ಮಕ್ಕಳನ್ನು ಹೊರಗೆ ಬಿಡುವುದು ಅಸಾಧ್ಯವಾಗಿದೆ. ಇಲ್ಲಿನ ತ್ಯಾಜ್ಯವನ್ನು ಹಲವು ಬಾರಿ ಗ್ರಾ.ಪಂ. ಮೂಲಕವಾಗಿ, ಕೆಲವೊಮ್ಮೆ ಸ್ಥಳೀಯ ಕುಂಜೂರು ನ್ಪೋರ್ಟ್ಸ್ ಕ್ಲಬ್‌ ಮೂಲಕವಾಗಿ ಶುಚಿಗೊಳಿಸಲಾಗಿದ್ದರೂ  ಸ್ಥಳೀಯರು ಮತ್ತೆ ತ್ಯಾಜ್ಯ ತಂದು ಸುರಿಯುತ್ತಿದ್ದಾರೆ. ಇಲ್ಲಿ ಈಗ ಮತ್ತೆ ತ್ಯಾಜ್ಯ ಸಂಗ್ರಹಣೆಯಾಗಿರುವ ಬಗ್ಗೆ ಗ್ರಾಮ ಪಂಚಾಯತ್‌ಗೂ ಮಾಹಿತಿ ನೀಡಲಾಗಿದೆ.
–  ಜ್ಯೋತಿ,ದುರ್ಗಾ ನಗರ ಅಂಗನವಾಡಿ ಶಿಕ್ಷಕಿ

ವಿಲೇವಾರಿಗೆ ಕ್ರಮ 
ಘನ ಮತ್ತು ದ್ರವ ಸಂಪನ್ಮೂಲ ನಿರ್ವಹಣಾ ಘಟಕವನ್ನು ತೆರೆಯಲು ಚಿಂತನೆ ನಡೆಸಲಾಗಿದ್ದು, ಈ ಬಗ್ಗೆ ಸರಕಾರೀ ಸ್ಥಳ ಮಂಜೂರಾತಿ ಮಾಡುವಂತೆ ತಹಶೀಲ್ದಾರರಿಗೆ ಪತ್ರ ಬರೆಯಲಾಗುವುದು. ಸಂಸ್ಕರಣಾ ಘಟಕ ಮಂಜೂರಾದ ಬಳಿಕ ತ್ಯಾಜ್ಯವನ್ನು ಅಲ್ಲಿಗೆ ವರ್ಗಾಯಿಸಿ, ಅದನ್ನು ಸಂಪನ್ಮೂಲವಾಗಿ ಬಳಸಿ ಕೊಳ್ಳಲು ಅವಕಾಶವಿದೆ. ಕುಂಜೂರು ಅಂಗನವಾಡಿ ಬಳಿಯಲ್ಲಿ ಸಂಗ್ರಹವಾಗಿರುವ ತ್ಯಾಜ್ಯವನ್ನು ಕೂಡಲೇ ಶುಚಿಗೊಳಿಸಲು ಮತ್ತು ಅಲ್ಲಿ ಕಸ ಎಸೆಯದಂತೆ ನಿರ್ಬಂಧ ವಿಧಿಸಿ ಎಚ್ಚರಿಕೆ ಫಲಕ ಹಾಕಲಾಗುವುದು. 
– ಮಮತಾ ಶೆಟ್ಟಿ ,ಪಿಡಿಒ,ಎಲ್ಲೂರು 

ಟಾಪ್ ನ್ಯೂಸ್

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

8-uv-fusion

Photography: ನಿಮ್ಮ ಬೊಗಸೆಯಲ್ಲಿ ಇರಲಿ ನೆನಪುಗಳು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.