ಮ್ಯಾಂಗನೀಸ್‌ ವಾರ್ಫ್‌ ಪರಿಸರದಲ್ಲಿ ಕೊಳೆಯುತ್ತಿದೆ ತ್ಯಾಜ್ಯ

ಸಾಂಕ್ರಾಮಿಕ ರೋಗ ಭೀತಿ ; ಸಂಬಂಧಪಟ್ಟ ಇಲಾಖೆ, ಸ್ಥಳೀಯಾಡಳಿತದಿಂದ ದಿವ್ಯ ನಿರ್ಲಕ್ಷ್ಯ

Team Udayavani, Sep 15, 2019, 5:00 AM IST

1409KDPP4

ಗಂಗೊಳ್ಳಿ: ಬಂದರು ಪ್ರದೇಶವಾಗಿರುವ ಗಂಗೊಳ್ಳಿಯ ಮ್ಯಾಂಗನೀಸ್‌ ರಸ್ತೆ ವಾರ್ಫ್‌ ಪರಿಸರದಲ್ಲಿ ಎಲ್ಲೆಂದರಲ್ಲಿ ಕೊಳಚೆ ನೀರು ನಿಂತಿದ್ದು, ನಿಂತ ನೀರಿನಲ್ಲಿ ತ್ಯಾಜ್ಯ ಕೊಳೆತು ವಾಸನೆ ಬರುತ್ತಿದೆ. ತ್ಯಾಜ್ಯ ಸಮರ್ಪಕ ವಿಲೇವಾರಿ ಮಾಡದ ಕಾರಣ ಈ ಪರಿಸರದಲ್ಲಿ ಸಾಂಕ್ರಾಮಿಕ ರೋಗದ ಭೀತಿ ಆವರಿಸಿದೆ.

ಗಂಗೊಳ್ಳಿ ಗ್ರಾ.ಪಂ. ವ್ಯಾಪ್ತಿಯ ಮ್ಯಾಂಗನೀಸ್‌ ವಾರ್ಫ್‌ ಪರಿಸರದಲ್ಲಿ ಬೋಟುಗಳನ್ನು ನಿಲ್ಲಿಸುವ ಸ್ಥಳ ತ್ಯಾಜ್ಯಗಳಿಂದ ತುಂಬಿ ತುಳುಕುತ್ತಿದ್ದು, ಬಂದರು ಇಲಾಖೆ, ಸ್ಥಳೀಯಾಡಳಿತದ ಅಧಿಕಾರಿಗಳು ದಿವ್ಯ ನಿರ್ಲಕ್ಷé ವಹಿಸಿದ್ದಾರೆ.

ಗಬ್ಬು ವಾಸನೆ
ಮಳೆಗಾಲದಲ್ಲಿ ಬೋಟ್‌ ನಿಲ್ಲಿಸುವ ಜಾಗದಲ್ಲಿ ಮಳೆ ನೀರು ನಿಂತಿದ್ದು, ನೀರಿನಲ್ಲಿ ತ್ಯಾಜ್ಯ ಸೇರಿಕೊಂಡು ಪರಿಸರವಿಡೀ ಗಬ್ಬು ವಾಸನೆಯಿಂದ ದುರ್ನಾತ ಬರುತ್ತಿದೆ. ಮ್ಯಾಂಗನೀಸ್‌ ವಾರ್ಫ್‌ ಪ್ರದೇಶದಲ್ಲಿ ತ್ಯಾಜ್ಯ ಹೆಚ್ಚಾಗುತ್ತಿದ್ದು, ತ್ಯಾಜ್ಯಗಳ ದುರ್ನಾತ ಪರಿಸರದ ಜನರನ್ನು ಕಂಗೆಡಿಸಿದೆ. ತ್ಯಾಜ್ಯದ ವಾಸನೆಯಿಂದ ಪರಿಸರ ಸುತ್ತಮುತ್ತ ಇರುವ ಜನರು ಮನೆಯಲ್ಲಿ ಕುಳಿತುಕೊಳ್ಳಲು ಸಾಧ್ಯವಾಗುತ್ತಿಲ್ಲ. ಸಂಜೆ ಬಳಿಕ ಸೊಳ್ಳೆಗಳ ಕಾಟವೂ ಹೆಚ್ಚಾಗಿದೆ.

ಬೋಟ್‌ಗಳನ್ನು ನೀರಿಗೆ ಇಳಿಸಿದ ಬಳಿಕ ಬೋಟ್‌ ದುರಸ್ತಿ ಮತ್ತಿತರ ವಸ್ತುಗಳನ್ನು ಸ್ಥಳದಲ್ಲೇ ರಾಶಿ ಹಾಕಲಾಗಿದ್ದು, ಅದನ್ನು ವಿಲೇವಾರಿ ಮಾಡಲು ಸೂಕ್ತ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಮಳೆಯ ನೀರಿನಲ್ಲಿ ಈ ತ್ಯಾಜ್ಯಗಳು ಕೊಳೆಯಲಾರಂಭಿಸಿವೆ. ಪ್ರತಿವರ್ಷ ಸಾವಿರಾರು ರೂ. ತೆರಿಗೆ ವಸೂಲಿ ಮಾಡುತ್ತಿರುವ ಬಂದರು ಇಲಾಖೆ ಪರಿಸರದಲ್ಲಿ ಸ್ವತ್ಛತೆ ಕಾಪಾಡಲು ಯಾವುದೇ ಕ್ರಮ ಕೈಗೊಳ್ಳದಿರುವುದು ಸ್ಥಳೀಯರ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸುತ್ತಮುತ್ತಲಿನ ಪ್ರದೇಶದಲ್ಲಿ ಮಾರಣಾಂತಿಕ ಕಾಯಿಲೆ ಉಲ್ಬಣಿಸುತ್ತಿರುವ ಈ ಸಂದರ್ಭದಲ್ಲಿ ಸ್ಥಳೀಯಾಡಳಿತ ಅಥವಾ ಸಂಬಂಧಪಟ್ಟ ಇಲಾಖೆ ತ್ಯಾಜ್ಯ ವಿಲೇವಾರಿಗೆ ಕ್ರಮ ಕೈಗೊಂಡಿಲ್ಲ ಎನ್ನುವುದು ಸ್ಥಳೀಯರ ಆರೋಪ.

ಶೀಘ್ರ ಕ್ರಮಕೈಗೊಳ್ಳಲಿ
ಮ್ಯಾಂಗನೀಸ್‌ ವಾರ್ಫ್‌ ಪ್ರದೇಶದಲ್ಲಿ ಬೋಟ್‌ಗಳಿಗೆ ಹೊದಿಸಲಾದ ಮಡಲು ಮತ್ತಿತರ ತ್ಯಾಜ್ಯಗಳನ್ನು ಅಲ್ಲಿ ರಾಶಿ ಹಾಕಿರುವುದರಿಂದ ಮಳೆ ನೀರಿನಲ್ಲಿ ಕೊಳೆತು ಹೋಗುತ್ತಿದೆ. ತ್ಯಾಜ್ಯಗಳ ವಾಸನೆಯಿಂದ ಇಲ್ಲಿ ಇರಲು ತುಂಬಾ ಕಷ್ಟವಾಗುತ್ತಿದೆ. ಸಂಬಂಧಪಟ್ಟವರು ಕೂಡಲೇ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಬೋಟು ಕಾರ್ಮಿಕ ಗಣೇಶ ಆಗ್ರಹಿಸಿದ್ದಾರೆ.

ರೋಗ ಭೀತಿ
ತ್ಯಾಜ್ಯ ಕೊಳೆತು ನಾರುತ್ತಿರುವುದರಿಂದ ಪರಿಸರದಲ್ಲಿ ಸಾಂಕ್ರಾಮಿಕ ರೋಗದ ಭೀತಿ ಆವರಿಸಿದೆ. ಸುತ್ತಮುತ್ತಲಿನ ಮನೆಗಳಲ್ಲಿ ಸೊಳ್ಳೆ ಮತ್ತಿತರ ಕ್ರಿಮಿ -ಕೀಟಗಳ ಹಾವಳಿ ಹೆಚ್ಚಾಗಿದೆ. ಇದರಿಂದ ಮಲೇರಿಯಾ, ಡೆಂಗ್ಯೂ, ಚಿಕುನ್‌ ಗುನ್ಯಾ, ಫೈಲೇರಿಯಾ ಮತ್ತಿತರ ರೋಗ ಹರಡುವ ಭೀತಿ ಇಲ್ಲಿನ ಜನರಿಗಿದೆ.

ಸೊಳ್ಳೆಗಳ ಕಾಟ
ಮ್ಯಾಂಗನೀಸ್‌ ವಾರ್ಫ್‌ ಪ್ರದೇಶದಲ್ಲಿ ನಿಂತ ನೀರಿನಲ್ಲಿ ತ್ಯಾಜ್ಯ ತುಂಬಿಕೊಂಡಿದ್ದು, ಮನೆಯಲ್ಲಿ ಕುಳಿತುಕೊಳ್ಳಲು ಸಾಧ್ಯವಾಗುತ್ತಿಲ್ಲ. ಸಂಜೆ ಬಳಿಕ ಸೊಳ್ಳೆಗಳ ಕಾಟ ಹೆಚ್ಚಾಗುತ್ತದೆ. ಹೀಗಾಗಿ ಪರಿಸರದ ಜನರ ಆರೋಗ್ಯ ಮೇಲೆ ದುಷ್ಪರಿಣಾಮ ಬೀರುತ್ತಿದೆ. ಬಂದರು ಇಲಾಖೆಯ ಅಧಿಕಾರಿಗಳು, ಸ್ಥಳೀಯಾಡಳಿತ ಮ್ಯಾಂಗನೀಸ್‌ ವಾರ್ಫ್‌ ಶುಚಿಗೊಳಿಸಲು ಕೂಡಲೇ ಕ್ರಮ ಕೈಗೊಳ್ಳಲಿ.
– ನಾರಾಯಣ, ಸ್ಥಳೀಯ ನಿವಾಸಿ

ಶೀಘ್ರ ಪರಿಹಾರಕ್ಕೆ ಕ್ರಮ
ಪಂಚಾಯತ್‌ ವತಿಯಿಂದ ಘನತ್ಯಾಜ್ಯ ಘಟಕವನ್ನು ಗ್ರಾಮವಿಡೀ ವಿಸ್ತರಣೆಗೆ ಯೋಜನೆ ರೂಪಿಸಲಾಗುತ್ತಿದ್ದು, ವಾಹನ ಖರೀದಿಗೆ ಮುಂದಾಗಿದ್ದೇವೆ. ಆ ಮೂಲಕ ಎಲ್ಲ ವಾರ್ಡ್‌
ಗಳಿಂದ ಹಂತ – ಹಂತವಾಗಿ ಕಸ ಸಂಗ್ರಹಿಸಲಾಗುವುದು. ಮ್ಯಾಂಗನೀಸ್‌ ವಾರ್ಫ್‌ ಪ್ರದೇಶದಲ್ಲಿ ಕೆಲ ದಿನಗಳ ಹಿಂದೊಮ್ಮೆ ಕಸ ವಿಲೇವಾರಿ ಮಾಡಲಾಗಿದೆ. ಈಗ ಮತ್ತೂಮ್ಮೆ ಮಾಡಲಾಗುವುದು. ಶೀಘ್ರ ಪಂಚಾಯತ್‌ ವ್ಯಾಪ್ತಿಯ ಕಸದ ಸಮಸ್ಯೆ ಪರಿಹರಿಸಲು ಕ್ರಮ ಕೈಗೊಳ್ಳಲಾಗುವುದು.
– ಚಂದ್ರಶೇಖರ್‌ ಡಿ. ಗಂಗೊಳ್ಳಿ ,ಪಿಡಿಒ

ಟಾಪ್ ನ್ಯೂಸ್

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.