ಪಿತ್ರೋಡಿ:ಹೊಳೆ ಸೇರುತ್ತಿರುವ ಮಲೀನ ತ್ಯಾಜ್ಯ,ಮೀನುಗಳ ಮಾರಣ ಹೋಮ ಸ್ಥಳಕ್ಕೆ ಅಧಿಕಾರಿಗಳ ಭೇಟಿ


Team Udayavani, Sep 22, 2021, 9:23 PM IST

ಪಿತ್ರೋಡಿ:ಹೊಳೆ ಸೇರುತ್ತಿರುವ ಮಲೀನ ತ್ಯಾಜ್ಯ,ಮೀನುಗಳ ಮಾರಣ ಹೋಮ  ಸ್ಥಳಕ್ಕೆ ಅಧಿಕಾರಿಗಳ ಭೇಟಿ

ಕಟಪಾಡಿ: ಉದ್ಯಾವರ ಪಿತ್ರೋಡಿ ಭಾಗದ ಹೊಳೆಯಲ್ಲಿ ಮೀನುಗಳು ಸತ್ತಿರುವ ಸ್ಥಿತಿಯಲ್ಲಿ ದಡ ಸೇರುತ್ತಿರುವುದನ್ನು ಕಂಡಿರುವ ಸ್ಥಳೀಯರ ಆತಂಕದ ನಡುವೆಯೇ ಪರಿಸರ ಅಧಿಕಾರಿ ವಿಜಯಾ ಹೆಗ್ಡೆ, ಉಪಾಧಿಕಾರಿ ಪ್ರಮೀಳಾ, ಮೀನುಗಾರಿಕಾ ಸಹಾಯಕ ನಿರ್ದೇಶಕ ದಿವಾಕರ ಖಾರ್ವಿ ಅವರು ಉದ್ಯಾವರ ಗ್ರಾ.ಪಂ. ಅಧ್ಯಕ್ಷ  ರಾಧಕೃಷ್ಣ ಶ್ರೀಯಾನ್ ಸಹಿತ  ಮತ್ತಿತರರು  ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಹೊಳೆಯ ನೀರು ಮತ್ತು ಸತ್ತಿರುವ ಮನುಗಳ ಸ್ಯಾಂಪಲ್ಸ್ ನ್ನು ಸ್ಥಳೀಯರ ಸಹಕಾರದೊಂದಿಗೆ ತೆಗೆದು ಪರೀಕ್ಷೆಗೊಳಪಡಿಸಲು ಕೊಂಡೊಯ್ದಿದ್ದಾರೆ.

ಪರಿಶೀಲನೆಗೆ ಬಂದ ಅಧಿಕಾರಿಗಳು ಮತ್ತು ಸ್ಥಳೀಯರ ನಡುವೆ ಸಾಕಷ್ಟು ಚರ್ಚೆ, ವಾಗ್ವಾದಗಳು ನಡೆದಿದ್ದು, ಅಧಿಕಾರಿಗಳು ಫಿಶ್ ಮೀಲ್ ಪರವಿದ್ದಾರೆ ಎಂಬ ಆರೋಪ ಹೊರಿಸಿದ್ದು, ಈ ಬಾರಿ ಹಾಗಾಗದಂತೆ ತಡೆಯುವ ನಿಟ್ಟಿನಲ್ಲಿ ಅಧಿಕಾರಿಗಳು ಈ ಭಾಗದಲ್ಲಿ ಪರಿಸರದ ಮೇಲಾಗುತ್ತಿರುವ ದುಷ್ಪರಿಣಾಮದ ಬಗ್ಗೆ ಸೂಕ್ತ ಪರಿಶೀಲನೆಯನ್ನು ನಡೆಸಬೇಕು. ನಿಷ್ಪಕ್ಷಪಾತ ವರದಿಯನ್ನು ಸಲ್ಲಿಸಿ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳುವಂತೆ ಪರಿಶೀಲನೆಗೆ ಬಂದ ಅಕಾರಿಗಳಿಗೆ  ತೆಂಗಿನಕಾಯಿಯನ್ನು ಮುಟ್ಟಿಸಿ ಪ್ರಮಾಣ ಪಡೆದುಕೊಂಡಿರುವ ಘಟನೆಯೂ ನಡೆದಿದೆ.

ಈ ಎಲ್ಲಾ ವಿದ್ಯಾಮಾನಗಳ ಬಳಿಕ ಉದಯವಾಣಿಗೆ ಪ್ರತಿಕ್ರಿಯೆ ನೀಡಿದ ಪರಿಸರ ಅಕಾರಿ ವಿಜಯಾ ಹೆಗ್ಡೆ , ನದಿ ನೀರಿನಲ್ಲಿ ಕರಗಿರುವ ಆಮ್ಲಜನಕದ ಕೊರತೆಯಿಂದ ಅಥವಾ ಉಷ್ಣತೆ ಹೆಚ್ಚಾದಾಗ ಅಥವಾ ವಿಷ ವಸ್ತು ನೀರಿನಲ್ಲಿ ಸೇರಿದಾಗ ಮೀನು ಸಾವಿಗೀಡಾಗಿರುವ ಸಾಧ್ಯತೆ ಇದೆ. ಇಲ್ಲಿ ಪರಿವೀಕ್ಷಣೆ ಮಾಡಿದಾಗ, ನದಿಯನ್ನು ಡಂಪಿಂಗ್  ಯಾರ್ಡ್ ನಂತೆ ಈ ಭಾಗದಲ್ಲಿ ತ್ಯಾಜ್ಯಗಳಿಂದ ಕಂಡು ಬರುತ್ತಿದ್ದು, ನದಿಯ ತಳದಲ್ಲಿ ಕೊಳೆತ ತ್ಯಾಜ್ಯ ವಸ್ತುಗಳಿಂದ ಉಂಟಾಗಬಹುದಾದ ಆಮ್ಲಜನಕದ ಕೊರತೆಯಿಂದ ಇಂತಹ ಪರಿಸ್ಥಿತಿ ನಿರ್ಮಾಣಗೊಂಡಿರುವ ಸಾಧ್ಯತೆ ಹೆಚ್ಚಾಗಿದೆ ಎಂದು ಸ್ಪಷ್ಟಪಡಿಸಿರುತ್ತಾರೆ.  ಸ್ಥಳೀಯರ ವಾಗ್ವಾದದ ಬಗ್ಗೆ ಮಾತನಾಡಿ, ಗ್ರಾ.ಪಂ. ಆಡಳಿತವು ನದಿಯಲ್ಲಿ ಅಳವಡಿಸಲಾಗಿರುವ ಪೈಪ್ ಲೈನ್ ತೆರವುಗೊಳಿಸುವಂತೆ ಒತ್ತಾಯಿಸುತ್ತಿದ್ದು, ಈ ಬಗ್ಗೆ ಈಗಾಗಲೇ ಪೈಪ್ ಅಳವಡಿಸಿದ  ಸ್ಥಳೀಯ ಫಿಶ್ ಮೀಲ್ ಘಟಕಕ್ಕೆ ತೆರವುಗೊಳಿಸುವಂತೆ ನೋಟೀಸ್ ನೀಡಿ ಸೂಚಿಸಲಾಗಿದೆ ಎಂದು ಮಾಹಿತಿಯನ್ನು ನೀಡಿದರು.

ಮೀನುಗಾರಿಕಾ ಸಹಾಯಕ ನಿರ್ದೇಶಕ ದಿವಾಕರ ಖಾರ್ವಿ ಉದಯವಾಣಿಯೊಂದಿಗೆ ಪ್ರತಿಕ್ರಿಯಿಸಿ, ಪಿತ್ರೋಡಿ ಭಾಗದಲ್ಲಿ ಹೊಳೆ ನೀರಿನಲ್ಲಿ ಮೀನು ಸತ್ತು ಬಿದ್ದಿರುವುದನ್ನು ಪರಿಶೀಲನೆ ನಡೆಸಿರುತ್ತೇನೆ. ಇಲ್ಲಿನ ನೀರಿನ, ಸತ್ತಿರುವ ಮೀನಿನ ಸ್ಯಾಂಪಲ್ ಪಡೆಯಲಾಗಿದ್ದು, ಮೀನುಗಾರಿಕಾ ಕಾಲೇಜಿನಲ್ಲಿ ಪರೀಕ್ಷೆಗೊಳಪಡಿಸಿ ವರದಿಯನ್ನು ಮೇಲಕಾರಿಗಳು ಮತ್ತು ಉದ್ಯಾವರ ಗ್ರಾ.ಪಂ. ನೀಡಲಾಗುತ್ತದೆ ಎಂದಿದ್ದು ಅವರೂ ಕೂಡಾ ಸ್ಥಳೀಯರ ಒತ್ತಾಯದ ಮೇರೆಗೆ ತೆಂಗಿನಕಾಯಿ ಪ್ರಮಾಣವನ್ನು ನಡೆಸಿರುತ್ತಾರೆ.

ಸ್ಥಳದಲ್ಲಿದ್ದ ಉದ್ಯಾವರ ಗ್ರಾ.ಪಂ. ಅಧ್ಯಕ್ಷ ರಾಧಕೃಷ್ಣ ಶ್ರೀಯಾನ್, ನದಿಯ ಆಳದಲ್ಲಿರುವ ಮೀನುಗಳೂ ಸಾವಿಗೀಡಾಗಿದ್ದು, ಸ್ಥಳೀಯರೂ ಆತಂಕ ವ್ಯಕ್ತಪಡಿಸಿದ್ದರು. ಫಿಶ್ ಮೀಲ್ ಘಟಕಗಳ ಅಪಾಯಕಾರಿ ಮಲೀನ ತ್ಯಾಜ್ಯ ಹೊಳೆಯ ನೀರನ್ನು ಸೇರುವ ಪರಿಣಾಮ ಜಲಚರ ಮೀನುಗಳು ಸತ್ತ ಸ್ಥಿತಿಯಲ್ಲಿ ದಡ ಸೇರುತ್ತಿದ್ದು, ಮಾಹಿತಿ ನೀಡಿದ ಮೇರೆಗೆ ಅಧಿಕಾರಿಗಳು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ್ದಾರೆ. ಫಿಶ್ ಮೀಲ್ ಘಟಕವು ನದಿಯಲ್ಲಿ ಅಳವಡಿಸಿರುವ  ಪೈಪ್ ಲೈನ್ ತೆರವುಗೊಳಿಸುವಂತೆ ಆದೇಶಿಸುವ ಜೊತೆಗೆ ಖುದ್ದಾಗಿ ಅಧಿಕಾರಿಗಳು ಸ್ಥಳದಲ್ಲಿದ್ದು, ತೆರವುಗೊಳಿಸಬೇಕು. ಅಧಿಕಾರಿಗಳು ತಿಳಿಸುವಂತೆ ಘಟಕವು ಇಟಿಪಿ ಪ್ಲಾಂಟ್ ಅಳವಡಿಸಿ ಕಾರ್ಯಾಚರಿಸುತ್ತಿದ್ದರೆ ಆ ನೀರನ್ನು ತೋಟ, ಗಾರ್ಡನ್ ಗೆ ಅಥವಾ ಇತರೇ ಕೆಲಸಕ್ಕೆ ಸದುಪಯೋಗಪಡಿಸಿಕೊಳ್ಳಲಿ ಹೊರತು ಹೊಳೆಗೆ ಬಿಡುವುದು ಸಮಂಜಸ ಅಲ್ಲ ಎಂದು ಅಧಿಕಾರಿಗಳಿಗೆ ಸ್ಪಷ್ಟನೆ ನೀಡಿದ್ದು, ಸ್ಥಳೀಯರ ಆತಂಕದ ಬಗ್ಗೆ ಅಧಿಕಾರಿಗಳ ಗಮನವನ್ನು ಸೆಳೆದರು.

ಈ ಸಂದರ್ಭ ಗ್ರಾ.ಪಂ. ಸದಸ್ಯ ಗಿರೀಶ್ ಸುವರ್ಣ, ಸಚಿನ್ ಸುವರ್ಣ ಪಿತ್ರೋಡಿ, ಲಾರೆನ್ಸ್ ಡೇಸಾ, ದಿವಾಕರ ಬೊಳ್ಜೆ, ಸ್ಥಳೀಯರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

12

Theft; ಕೊಲ್ಲೂರು: ಮಹಿಳೆಯ ಚಿನ್ನ, ನಗದು ಕಳವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

1-eqewqe

JP Hegde; ಉತ್ತಮರನ್ನು ಉಳಿಸಿಕೊಳ್ಳಬೇಕಾದ ಅನಿವಾರ್ಯತೆ ಜನತೆಗಿದೆ: ತೇಜಸ್ವಿನಿ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

1-gadaga

Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ

1-qwewweq

K. Jayaprakash Hegde; ಮೀನುಗಾರಿಕೆ, ಪ್ರವಾಸೋದ್ಯಮದ ಅಭಿವೃದ್ದಿಗೆ ಹೆಚ್ಚಿನ ಆಧ್ಯತೆ 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.