ಮತ್ತೆ ಇಂದ್ರಾಣಿ ಒಡಲು ಸೇರಿದ ತ್ಯಾಜ್ಯ ನೀರು

ಕಪ್ಪು ಬಣ್ಣಕ್ಕೆ ತಿರುಗಿದ ನೀರು; ಪರಿಸರವಿಡೀ ದುರ್ನಾತ

Team Udayavani, Jan 10, 2020, 5:39 AM IST

1517IMG-20200109-WA0014

ಉಡುಪಿ: ತ್ಯಾಜ್ಯ ನೀರು ನದಿಗಳಿಗೆ ಬಿಡುವ ಮುನ್ನ ಅವುಗಳನ್ನು ಶೇ. 100ರಷ್ಟು ಸಂಸ್ಕರಿಸಲು ಹಸಿರು ಪೀಠದಿಂದ ಆದೇಶವಿದ್ದರೂ ನಗರಸಭೆ ಮಾತ್ರ ಅದನ್ನು ಪಾಲನೆ ಮಾಡುತ್ತಿಲ್ಲ. ಇದರಿಂದ ನಗರದ ಮುಖ್ಯ ಜೀವಜಲವಾಗಿದ್ದ ಇಂದ್ರಾಣಿ ಹೊಳೆ, ಇಂದು ನರಕ ಸದೃಶವಾಗಿದೆ.

ಕೊಳಚೆ ನೀರು ಶುದ್ಧೀಕರಣ ಮಾಡದೆ ನೇರವಾಗಿ ಗುರುವಾರ ಬೆಳಗ್ಗೆ 3.30ರಿಂದ 8ರವರೆಗೆ ಇಂದ್ರಾಣಿ ನದಿಗೆ ಬಿಡಲಾಗಿದೆ. ಇದರಿಂದಾಗಿ ಕೊಳಚೆ ನೀರು ಕಂಬಳಕಟ್ಟ ಮಾರ್ಗವಾಗಿ ಕೊಡವೂರು ಶ್ರೀಶಂಕರ ನಾರಾಯಣ ದೇವಸ್ಥಾನದ ಹಿಂಭಾಗದಿಂದ ಹರಿದು ಕಲ್ಮಾಡಿ ಬಳಿ ಸಮುದ್ರದ ಹಿನ್ನೀರನ್ನು ಸೇರಿದೆ. ಪ್ರಸ್ತುತ ನದಿ ನೀರು ಸಂಪೂರ್ಣವಾಗಿ ಕಪ್ಪು ಬಣ್ಣಕ್ಕೆ ತಿರುಗಿದೆ.

ಕೊಳಚೆ ಕಂಟಕ
ಇಂದ್ರಾಣಿ ನದಿ ಬೀಡಿನಗುಡ್ಡೆ, ಕಲ್ಸಂಕ, ಮಠದಬೆಟ್ಟು, ನಿಟ್ಟೂರು, ಕಂಬಳಕಟ್ಟ ಮಾರ್ಗವಾಗಿ ಕೊಡವೂರು ಶ್ರೀಶಂಕರನಾ ರಾಯಣ ದೇವಸ್ಥಾನದ ಹಿಂಭಾಗದಿಂದ ಹರಿದು ಕಲ್ಮಾಡಿ ಬಳಿ ಸಮುದ್ರದ ಹಿನ್ನೀರನ್ನು ಸೇರುತ್ತಿತ್ತು. ಈ ನೀರನ್ನು ಕುಟುಂಬಗಳು ಕುಡಿಯುವ ನೀರಿಗೆ ಬಳಸಿಕೊಳ್ಳುತ್ತಿದ್ದವು. ಆದರೆ ಕಳೆದ 15 ವರ್ಷಗಳಿಂದೀಚೆ ಇಂದ್ರಾಣಿ ಹೊಳೆ ಮಾಲಿನ್ಯಪೂರಿತವಾಗಿದೆ. ಅದು ಸೂಸುವ ದುರ್ಗಂಧ ಪರಿಸರದಲ್ಲಿ ಬದುಕನ್ನು ಅಸಹ್ಯಗೊಳಿಸಿದೆ.

ಪರಿಸರವಿಡೀ ದುರ್ನಾತ
ತ್ಯಾಜ್ಯ ನೀರನ್ನು ನಗರಸಭೆ ಶುದ್ಧೀಕರಣಗೊಳಿಸಲು ವಿಫ‌ಲವಾದ ಹಿನ್ನೆಲೆಯಲ್ಲಿ ನೇರವಾಗಿ ನದಿ ಬಿಡಲಾಗುತ್ತಿದೆ. ಇದರಿಂದಾಗಿ ಮಠದ ಬೆಟ್ಟುವಿನಿಂದ ಕಲ್ಮಾಡಿ ವರೆಗಿನ ಜನರು ದಿನ ವಿಡೀ ಮೂಗುಮುಚ್ಚಿಕೊಂಡೇ ಸಂಚರಿ ಸುವಂತಾಗಿದೆ. ನಗರಸಭೆಯ ತ್ಯಾಜ್ಯ ವಿಲೇವಾರಿಗೆ ಸೂಕ್ತ ವ್ಯವಸ್ಥೆ ಮಾಡಬೇಕಾದವವರು ಎಲ್ಲಾ ತ್ಯಾಜ್ಯ ನೀರು ನೇರವಾಗಿ ಇಂದ್ರಾಣಿ ಹೊಳೆ ಬಿಡಲಾಗುತ್ತಿದೆ. ಕಳೆದ ಹತ್ತಾರು ವರ್ಷಗಳಿಂದ ಮಾಡಿಕೊಂಡು ಬಂದ ಈ ಪರಿಪಾಠದಿಂದ ಇಂದು ಇಂದ್ರಾಣಿ ಮಾಲಿನ್ಯದ ಕೊಚ್ಚೆಯಾಗಿದೆ. ಅದನ್ನು ಸರಿಪಡಿಸಲು ಅಗತ್ಯವಿರುವ ಯಾವುದೇ ಪರ್ಯಾಯ ವ್ಯವಸ್ಥೆ ನಗರಸಭೆ ಅಧಿಕಾರಿಗಳ ಕೈಯಲ್ಲಿ ಇಲ್ಲ. ಜನರ ಸಮಸ್ಯೆಗಳು ಇನ್ನೂ ಅಧಿಕಾರಿಗಳಿಗೆ ಮನವರಿಕೆಯಾಗಿಲ್ಲ.

ಸಂಕಷ್ಟ
ಗುರುವಾರ ಮುಂಜಾನೆ 3.30 ರಿಂದ 8 ಗಂಟೆಯ ವರೆಗೆ ನಗರದ ತ್ಯಾಜ್ಯ ನೀರು ಶುದ್ಧೀಕರಿಸದೆ ನದಿ ಬಿಡಲಾಗಿದೆ. ಪ್ರಸ್ತುತ ನದಿಯ ನೀರು ಡಾಂಬರಿನ ಬಣ್ಣಕ್ಕೆ ತಿರುಗಿದೆ. ವಾಸನೆಯಿಂದ ಈ ಮಾರ್ಗದಲ್ಲಿ ಸಂಚರಿಸಲು ಕಷ್ಟವಾಗುತ್ತಿದೆ.
-ಬಾಲಕೃಷ್ಣ ಕಲ್ಮಾಡಿ, ಸಾರ್ವಜನಿಕರು

ಯೋಜನೆ ಅಗತ್ಯ
ಹಲವು ವರ್ಷಗಳಿಂದ ಕಾಡುತ್ತಿರುವ ಸಮಸ್ಯೆಗೆ ಮುಕ್ತಿ ದೊಡ್ಡ ಯೋಚನೆಯ ಜತೆಗೆ ಯೋಜನೆಯ ಅಗತ್ಯವಿದೆ. ನೀರು ಕಲುಷಿತಗೊಂಡಿರುವ ಕುರಿತು ಅಧಿಕಾರಿಗಳ ಗಮನಕ್ಕೆ ಈ ಹಿಂದೆ ತರಲಾಗಿದೆ.
-ಶ್ರೀಶಾ ಕೊಡವೂರು, ಮೂಡುಬೆಟ್ಟು ವಾರ್ಡ್‌ ಸದಸ್ಯ

ಎಚ್ಚರ
ವಿದ್ಯುತ್‌ ಲೈನ್‌ ದುರಸ್ತಿ ಹಿನ್ನೆಲೆ ದಿನಪೂರ್ತಿ ವಿದ್ಯುತ್‌ ಸಂಪರ್ಕ ಕಡಿತವಾಗಿತ್ತು. ತ್ಯಾಜ್ಯ ನೀರು ಪಂಪ್‌ ಮಾಡಲು ಸಾಧ್ಯವಾಗದ ಹಿನ್ನೆಲೆ ಸಿಬಂದಿ ನೀರು ಹೊರಬಿಟ್ಟಿರುವ ಸಾಧ್ಯತೆ ಇದೆ. ಈ ಬಗ್ಗೆ ಗಮನ ಹರಿಸಲಾ ಗುತ್ತದೆ. ಮುಂದೆ ಇಂತಹ ಘಟನೆ ಗಳು ಸಂಭವಿಸದಂತೆ ಎಚ್ಚರ ವಹಿಸಲಾಗುತ್ತದೆ.
-ಸ್ನೇಹಾ, ಪರಿಸರ ಎಂಜಿನಿಯರ್‌. ನಗರಸಭೆ.

ಟಾಪ್ ನ್ಯೂಸ್

Siddaramaiah ಎಸ್‌ಐಟಿ ಮೇಲೆ ನಂಬಿಕೆಯಿಡಿ, ಸಿಬಿಐ ತನಿಖೆ ಬೇಕಿಲ್ಲ

Siddaramaiah ಎಸ್‌ಐಟಿ ಮೇಲೆ ನಂಬಿಕೆಯಿಡಿ, ಸಿಬಿಐ ತನಿಖೆ ಬೇಕಿಲ್ಲ

3 ದಿನ ರೇವಣ್ಣ ಭೇಟಿಗಿಲ್ಲ ಅವಕಾಶ; ಮಾಜಿ ಸಚಿವರಿಗೆ ಈಗ ಬೆನ್ನು ನೋವು

3 ದಿನ ರೇವಣ್ಣ ಭೇಟಿಗಿಲ್ಲ ಅವಕಾಶ; ಮಾಜಿ ಸಚಿವರಿಗೆ ಈಗ ಬೆನ್ನು ನೋವು

ಪತ್ರಕರ್ತರ ಜತೆ ದೇವರಾಜೇಗೌಡ ಮಾತನಾಡಿದ ಆಡಿಯೋ ಬಹಿರಂಗ

ಪತ್ರಕರ್ತರ ಜತೆ ದೇವರಾಜೇಗೌಡ ಮಾತನಾಡಿದ ಆಡಿಯೋ ಬಹಿರಂಗ

Prajwal Revanna ವೀಡಿಯೋ ವೈರಲ್‌: ಓರ್ವನ ಸೆರೆ

Prajwal Revanna ವೀಡಿಯೋ ವೈರಲ್‌: ಓರ್ವನ ಸೆರೆ

ನೀತಿ ಸಂಹಿತೆ ಸಡಿಲಿಕೆ: ಆಯೋಗಕ್ಕೆ ಪತ್ರ ಬರೆದು ರಾಜ್ಯ ಸರಕಾರ ಮನವಿ

ನೀತಿ ಸಂಹಿತೆ ಸಡಿಲಿಕೆ: ಆಯೋಗಕ್ಕೆ ಪತ್ರ ಬರೆದು ರಾಜ್ಯ ಸರಕಾರ ಮನವಿ

Siddaramaiah ಚುನಾವಣ ಪ್ರಚಾರ: 14 ಲಕ್ಷ ಜನರನ್ನು ಉದ್ದೇಶಿಸಿ ಸಿಎಂ ಮಾತು

Siddaramaiah ಚುನಾವಣ ಪ್ರಚಾರ: 14 ಲಕ್ಷ ಜನರನ್ನು ಉದ್ದೇಶಿಸಿ ಸಿಎಂ ಮಾತು

D.K. Shivakumar ಲೋಕದ ಡೊಂಕು ನೀವೇಕೆ ತಿದ್ದುವಿರಿ, ನಿಮ್ಮ ಮನೆಯನ್ನು ಸರಿ ಮಾಡಿಕೊಳ್ಳಿ

D.K. Shivakumar ಲೋಕದ ಡೊಂಕು ನೀವೇಕೆ ತಿದ್ದುವಿರಿ, ನಿಮ್ಮ ಮನೆಯನ್ನು ಸರಿ ಮಾಡಿಕೊಳ್ಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi ವಿದೇಶದಲ್ಲಿ ಉದ್ಯೋಗ ಆಮಿಷ; ಹೊಟೇಲ್‌ ವೈಟರ್‌ಗೆ ಲಕ್ಷಾಂತರ ರೂ.ವಂಚನೆ

Udupi ವಿದೇಶದಲ್ಲಿ ಉದ್ಯೋಗ ಆಮಿಷ; ಹೊಟೇಲ್‌ ವೈಟರ್‌ಗೆ ಲಕ್ಷಾಂತರ ರೂ.ವಂಚನೆ

MASOCON

MASOCON: ಕೆಎಂಸಿಯಲ್ಲಿ ಮಣಿಪಾಲ್ ಸರ್ಜಿಕಲ್ ಆಂಕೊಲಾಜಿ ಕಾನ್ಫರೆನ್ಸ್ 2024

Udupi ಶ್ರೀ ಭಗವಾನ್ ನಿತ್ಯಾನಂದ ಮಂದಿರ ಮಠ: ಬಾಲಭೋಜನಾಲಯ, ಧ್ಯಾನ ಮಂದಿರ ಲೋಕಾರ್ಪಣೆ

Udupi ಶ್ರೀ ಭಗವಾನ್ ನಿತ್ಯಾನಂದ ಮಂದಿರ ಮಠ: ಬಾಲಭೋಜನಾಲಯ, ಧ್ಯಾನ ಮಂದಿರ ಲೋಕಾರ್ಪಣೆ

ಲಾ ಸೇವ್ಯು ಬೇಕರಿ – ಸಂಸ್ಥೆಯಿಂದ ಬೀಡಿನಗುಡ್ಡೆಯಲ್ಲಿ ಮೇ 24-26: “ಆಹಾರ-ವ್ಯಾಪಾರ ಮೇಳ-2024′

ಲಾ ಸೇವ್ಯು ಬೇಕರಿ – ಸಂಸ್ಥೆಯಿಂದ ಬೀಡಿನಗುಡ್ಡೆಯಲ್ಲಿ ಮೇ 24-26: “ಆಹಾರ-ವ್ಯಾಪಾರ ಮೇಳ-2024′

Udupi: ವಿಡಿಯೋ ಕರೆ ರೆಕಾರ್ಡ್‌ ಮಾಡಿ ಹಣಕ್ಕೆ ಬೇಡಿಕೆ

Udupi: ವಿಡಿಯೋ ಕರೆ ರೆಕಾರ್ಡ್‌ ಮಾಡಿ ಹಣಕ್ಕೆ ಬೇಡಿಕೆ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Siddaramaiah ಎಸ್‌ಐಟಿ ಮೇಲೆ ನಂಬಿಕೆಯಿಡಿ, ಸಿಬಿಐ ತನಿಖೆ ಬೇಕಿಲ್ಲ

Siddaramaiah ಎಸ್‌ಐಟಿ ಮೇಲೆ ನಂಬಿಕೆಯಿಡಿ, ಸಿಬಿಐ ತನಿಖೆ ಬೇಕಿಲ್ಲ

1–wwqaeeq

Mangaluru; ಮಂಗಳಾ ಕಪ್‌ ಓಪನ್‌ ಬ್ಯಾಡ್ಮಿಂಟನ್‌ ಕೂಟಕ್ಕೆ ಚಾಲನೆ

3 ದಿನ ರೇವಣ್ಣ ಭೇಟಿಗಿಲ್ಲ ಅವಕಾಶ; ಮಾಜಿ ಸಚಿವರಿಗೆ ಈಗ ಬೆನ್ನು ನೋವು

3 ದಿನ ರೇವಣ್ಣ ಭೇಟಿಗಿಲ್ಲ ಅವಕಾಶ; ಮಾಜಿ ಸಚಿವರಿಗೆ ಈಗ ಬೆನ್ನು ನೋವು

1-weewewq

Punjab ಅಭಿಮಾನಿಗಳ ಕ್ಷಮೆ ಕೋರಿದ ನಾಯಕ ಸ್ಯಾಮ್‌ ಕರನ್‌

1-wqeqewqewq

Tennis; ಇದೇ ಕೊನೆಯ ಸೀಸನ್‌:ಡೊಮಿನಿಕ್‌ ಥೀಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.