ರಾ.ಹೆದ್ದಾರಿ 66ರಲ್ಲಿ ಅನುಷ್ಠಾನಗೊಂಡಿಲ್ಲ ಮಳೆಕೊಯ್ಲು ವ್ಯವಸ್ಥೆ

ಪೋಲಾಗುತ್ತಿದೆ ಲಕ್ಷಾಂತರ ಲೀಟರ್‌ ನೀರು

Team Udayavani, Oct 5, 2019, 5:58 AM IST

z-3

ಉಡುಪಿ: ಅಂತರ್ಜಲ ಮಟ್ಟ ಸುಧಾರಿಸಲು ಮತ್ತು ಹೆಚ್ಚುವರಿ ನೀರು ಸಂಗ್ರಹಿಸಿ ಅಗತ್ಯಕ್ಕೆ ದೊರಕುವಂತೆ ಮಾಡುವುದಕ್ಕಾಗಿ ಕೇಂದ್ರ ಸರಕಾರ ಮಳೆ ಕೊಯ್ಲಿನ ಸುತ್ತೋಲೆ ಹೊರಡಿಸಿದೆ. ಆದರೆ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಮಾತ್ರ ಇದು ಅನುಷ್ಠಾನಗೊಂಡಿಲ್ಲ.

ಚತುಷ್ಪಥ, ಅಷ್ಟಪಥ ಹೆದ್ದಾರಿಗಳ ಭಾಗವಾಗಿ ಅಭಿವೃದ್ಧಿ ಪಡಿಸಲಾಗುವ ಟೋಲ್‌ ಪ್ಲಾಜಾ ಕಟ್ಟಡ, ಹೆದ್ದಾರಿ ಬದಿಯ ಸೌಲಭ್ಯಗಳು, ಕಟ್ಟಡಗಳು ಸೇರಿದಂತೆ ಎಲ್ಲ ಕಡೆ ಮಳೆ ಕೊಯ್ಲು ಮತ್ತು ಜಲ ಮರುಪೂರಣ ವ್ಯವಸ್ಥೆಯನ್ನು ಅಳವಡಿಸಬೇಕು. ಆದರೆ ಈ ನಿಯಮವನ್ನು ಹೆದ್ದಾರಿ ಇಲಾಖೆ ಕಟ್ಟುನಿಟ್ಟಾಗಿ ಪಾಲಿಸುತ್ತಿಲ್ಲ.

ಈ ಸೂಚನೆಗಳನ್ನು ಅನುಷ್ಠಾನಗೊಳಿಸದ ಕಡೆಗಳಲ್ಲಿ ಸಾಮಾನ್ಯ ನಿಯಮದಂತೆ ಉಪ ರಸ್ತೆಯ ಚರಂಡಿಗಳ ನೀರು ನಿಲ್ಲುವ ಮತ್ತು ಅತ್ಯಂತ ಕೆಳಮಟ್ಟದ ಪ್ರದೇಶದಲ್ಲಿ ಪ್ರತಿ ಕಿ.ಮೀ.ನಲ್ಲಿ 0.5 ಮೀ. ವ್ಯಾಸ-10ರಿಂದ 15 ಮೀ. ಆಳದ ಜಲ ಮರುಪೂರಣ ಹೊಂಡಗಳನ್ನು ನಿರ್ಮಿಸಬೇಕಿದೆ. ಇದರ ಪಾಲನೆಯೂ ರಾ.ಹೆ.66ರಲ್ಲಿ ಕಂಡುಬರುತ್ತಿಲ್ಲ.

ಅನುಷ್ಠಾನ ಕಷ್ಟ
ಹೆದ್ದಾರಿ ಇಲಾಖೆ ವ್ಯಾಪ್ತಿಯಲ್ಲಿ ಜಲಮರುಪೂರಣ ಹೊಂಡಗಳನ್ನು ಅಳವಡಿಸಿದರೆ ಪಾದಚಾರಿಗಳು ಮತ್ತು ವಾಹನ ಸವಾರರಿಗೆ ತೊಂದರೆಯುಂಟಾಗಬಹುದು ಎಂಬುದು ಇಲಾಖೆಯ ಅಧಿಕಾರಿಗಳ ಸಮಜಾಯಿಷಿ. ಆದರೆ ಇಂತಹ ಅಡೆತಡೆಗಳನ್ನು ನಿವಾರಿಸಿ ಸೂಕ್ತ ರೀತಿಯಲ್ಲಿ ಹೆದ್ದಾರಿ ಬದಿಗಳಲ್ಲಿ ಈ ವ್ಯವಸ್ಥೆ ಮಾಡಬಹುದು ಎಂಬುದರಲ್ಲಿ ಅನುಮಾನವಿಲ್ಲ.

2013ರಲ್ಲೇ ಮಾರ್ಗಸೂಚಿ
ರಾಷ್ಟ್ರೀಯ ಹೆದ್ದಾರಿಗಳ ಉದ್ದಕ್ಕೂ ಮಳೆ ನೀರು ಕೊಯ್ಲು ನಿರ್ಮಾಣಕ್ಕೆ ಸಚಿವಾಲಯ 2013ರ ಸೆ. 5ರಂದು ಸುತ್ತೋಲೆ ಹೊರಡಿಸಿದ್ದು, ರಾ.ಹೆ.ಯುದ್ದಕ್ಕೂ ಮಳೆ ನೀರು ಕೊಯ್ಲು ಮತ್ತು ಜಲ ಮರುಪೂರಣ ಸ್ಥಳಗಳನ್ನು ಸಮಾಲೋಚಕರು ಗುರುತಿಸಿ ಇದನ್ನು ಕರಡು ಅಥವಾ ಡಿಪಿಆರ್‌ನ ಭಾಗದಲ್ಲಿ ಸೇರಿಸಬೇಕು. ಗುತ್ತಿಗೆದಾರರು ಮಳೆ ನೀರು ಕೊಯ್ಲು ಮತ್ತು ಕೃತಕ ಮರು ಪೂರಣ ವ್ಯವಸ್ಥೆಯನ್ನು ನಿರ್ಮಿಸಿವೆ ಮತ್ತು ಇವುಗಳು ಕಾರ್ಯಾಚರಿಸುತ್ತಿವೆ ಎಂದು ಖಾತರಿಪಡಿಸಿದ ಅನಂತರವೇ ಸಂಬಂಧಿತ ಕಾರ್ಯಕಾರಿ ಸಂಸ್ಥೆಗಳು ಸಂಪೂರ್ಣಗೊಂಡ ಪ್ರಮಾಣ ಪತ್ರವನ್ನು ನೀಡಬೇಕು ಎಂದು ಸ್ಪಷ್ಟವಾಗಿ ಉಲ್ಲೇಖೀಸಲಾಗಿದೆ.

ಸಮರ್ಪಕ ನಿರ್ವಹಣೆ ಅಗತ್ಯ
ರಸ್ತೆ ನಿರ್ಮಾಣದಿಂದ ನೀರಿನ ಮೇಲ್ಮೆ„ ಹರಿವು ದೊಡ್ಡ ಪ್ರಮಾಣದಲ್ಲಿರುತ್ತದೆ. ದೇಶದಲ್ಲಿ ವ್ಯಾಪಕ ರಸ್ತೆಗಳ ನಿರ್ಮಾಣದಿಂದಾಗಿ ಇದು ಇನ್ನಷ್ಟು ಹೆಚ್ಚುತ್ತದೆ. ಈ ಮೇಲ್ಮೆ„ ಹರಿವನ್ನು ಸಮರ್ಪಕವಾಗಿ ನಿರ್ವಹಿಸಬೇಕಾದ ಅಗತ್ಯ ಇದೆ. ವಿವಿಧ ಅಭಿವೃದ್ಧಿ ಚಟುವಟಿಕೆಗಳಿಗೆ ನೀರಿನ ಬಳಕೆ ಹೆಚ್ಚುತ್ತಿರುವುದರಿಂದ ಕ್ಷೀಣಿಸುತ್ತಿರುವ ಅಂತರ್ಜಲಕ್ಕೆ ಮರುಪೂರಣಗೊಳಿಸಲು ಈ ನೀರನ್ನು ಬಳಸಬಹುದು.

ದೇಶದಲ್ಲಿ ವಾರ್ಷಿಕ ಸರಾಸರಿ ಸುಮಾರು 1,100 ಎಂ.ಎಂ. ಮಳೆ ಬೀಳುತ್ತದೆ. 1 ಕಿ.ಮೀ. ರಾಷ್ಟ್ರೀಯ ಹೆದ್ದಾರಿಗೆ ಮೇಲ್ಮೆ„ ಹರಿವಿನ ಒಟ್ಟು ಪ್ರಮಾಣ ಶೇ. 80 ಎಂದು ಪರಿ
ಗಣಿಸಿದರೂ ಸಾವಿರ ಮೀ.ಗೆ 61,60,000 ಲೀಟರ್ ಗಳಾಗುತ್ತವೆ. ಹೆದ್ದಾರಿಗಳಲ್ಲೂ ಮಳೆಕೊಯ್ಲಿನಂತಹ ಯೋಜನೆಗಳನ್ನು ಕಾರ್ಯರೂಪಕ್ಕೆ ತಂದರೆ ನೀರಿನ ಬವಣೆ ನಿವಾ
ರಣೆಯಾಗಬಹುದು ಎಂಬ ಯೋಚನೆ ಸರಕಾರದ್ದು.

ಒರತೆ ಇರುವ ಕಾರಣ ಅಳವಡಿಸಿಲ್ಲ
ರಾಷ್ಟ್ರೀಯ ಹೆದ್ದಾರಿ ಉದ್ದಕ್ಕೂ ಮಳೆನೀರು ಕೊಯ್ಲು ಅಳವಡಿಸುವ ನಿಯಮ ಇದೆ. ಆದರೆ ಕರಾವಳಿಯಲ್ಲಿ ನೀರಿನ ಒರತೆ ಅಧಿಕವಿರುವ ಕಾರಣ ಅನುಷ್ಠಾನಗೊಳಿಸಿಲ್ಲ. ಉತ್ತರ ಕರ್ನಾಟಕ, ಆಂಧ್ರ ಪ್ರದೇಶ ಸಹಿತ ಉತ್ತರ ಭಾರತದ ಕಡೆಗಳಲ್ಲಿ ಭೂಮಿಯಲ್ಲಿ ನೀರಿನ ಸಾಂದ್ರತೆ ತೀರಾ ಕಡಿಮೆ ಇರುವ ಹಿನ್ನೆಲೆಯಲ್ಲಿ ಇದನ್ನು ಅನುಷ್ಠಾನಗೊಳಿಸಲಾಗಿದೆ.
-ರಾಘವೇಂದ್ರ ವ್ಯವಸ್ಥಾಪಕರು, ನವಯುಗ ಕನ್‌ಸ್ಟ್ರಕ್ಷನ್ಸ್‌ ಪ್ರೈ.ಲಿ.

- ಪುನೀತ್‌ ಸಾಲ್ಯಾನ್‌

ಟಾಪ್ ನ್ಯೂಸ್

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್‌ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ

ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್‌ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.