ನೀರು,ಮರಳು ಸಮಸ್ಯೆಗೆ ಸ್ಪಂದನೆ: ಜಿಲ್ಲಾಧಿಕಾರಿ


Team Udayavani, Apr 25, 2019, 6:08 AM IST

24DK-DC-4

ಉಡುಪಿ: ಕುಡಿಯುವ ನೀರಿನ ಸಮಸ್ಯೆ ಪರಿಹರಿಸಲು ಚಿಂತನೆ ನಡೆಸಲಾಗುವುದು ಮತ್ತು ಮರಳು ಸಮಸ್ಯೆಯನ್ನು ಕಾನೂನು ರೀತ್ಯಾ ಪರಿಹರಿಸಲಾಗುವುದು ಎಂದು ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಹೇಳಿದ್ದಾರೆ.

ಲೋಕಸಭಾ ಚುನಾವಣೆಯ ನಿರ್ವಹಣೆಯಲ್ಲಿ ಸಹಕರಿಸಿದವರಿಗೆ ಕೃತಜ್ಞತೆ ಸಲ್ಲಿಸಲು ಬುಧವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು, ಗುರುವಾರ ನೀರಿನ ಸಮಸ್ಯೆ ಕುರಿತು ಸಭೆ ಕರೆದಿದ್ದೇನೆ ಎಂದರು.

ಟ್ಯಾಂಕರ್‌ ಮೂಲಕ ನೀರು ಸರಬರಾಜಿಗೆ ನೀತಿ ಸಂಹಿತೆ ಕಾರಣಕ್ಕೆ ಒಪ್ಪುತ್ತಿಲ್ಲ ಎಂಬ ದೂರಿನ ಬಗ್ಗೆ, ಜಿಪಿಎಸ್‌ ಅಳವಡಿಸಿದ ಟ್ಯಾಂಕರ್‌ನಲ್ಲಿ ಸರಬರಾಜು ಮಾಡಬಹುದು. ಸಮರ್ಪಕವಾಗಿ ಬೇಡಿಕೆ ಸಲ್ಲಿಸಿದರೆ ಅನುಮತಿ ಕೊಡಬಹುದು. ಕೆಲವು ಗ್ರಾ.ಪಂ.ಗಳಲ್ಲಿ ಇದನ್ನು ಮಾಡುತ್ತಿದ್ದೇವೆ ಎಂದರು.

ನೀರು ಸಂಗ್ರಹಕ್ಕೆ ಅಡ್ಡಿಯಾಗುವ ಹೂಳೆತ್ತುವ ಕುರಿತು ಪಟ್ಟಿ ಕೊಡಲು ಹೇಳಿದ್ದೇನೆ. ಇದರಲ್ಲಿ ಬಜೆಯೂ ಸೇರಿದೆ. ಸಮರ್ಪಕ ಕ್ರಿಯಾಯೋಜನೆ ಕೊಟ್ಟರೆ ಒಂದೆರಡು ವಾರಗಳಲ್ಲಿ ಕ್ರಮ ಜರುಗಿಸುತ್ತೇವೆ ಎಂದರು.

ಅನುಮತಿ ಸಿಕ್ಕಿದ ಕುಂದಾಪುರ ತಾಲೂಕಿನ ನಾನ್‌ಸಿಆರ್‌ಝಡ್‌ ವ್ಯಾಪ್ತಿಯ 2 ಮರಳುದಿಬ್ಬಗಳನ್ನು ತೆರವುಗೊಳಿಸಲು ಬೇಕಾದ ಪ್ರಕ್ರಿಯೆ ಎ. 23ರ ಬಳಿಕ ನಡೆಸಬಹುದು ಎಂದು ಸರಕಾರ ಸೂಚಿಸಿದೆ. ಈ ಕುರಿತು ತಿಂಗಳ ಹಿಂದೆಯೇ ಪತ್ರ ಬರೆದಿದ್ದೆವು. ಇದರ ಬಗ್ಗೆ ಕ್ರಮ ಕೈಗೊಳ್ಳುತ್ತೇವೆ ಎಂದರು.

171 ಗುತ್ತಿಗೆದಾರರಿಗೆ ಮರಳುಗಾರಿಕೆ ನಡೆಸಲು ಅವಕಾಶ ಕೊಡಬಹುದು ಎಂದು ರಾಜ್ಯ ಮತ್ತು ಕೇಂದ್ರ ಸರಕಾರ ಹೇಳಿದೆ ಎಂಬ ಶಾಸಕ ಕೆ. ರಘುಪತಿ ಭಟ್‌ ಅವರ ಹೇಳಿಕೆಯನ್ನು ಜಿಲ್ಲಾಧಿಕಾರಿಯವರ ಗಮನಕ್ಕೆ ತಂದಾಗ, ಪ್ರತಿಕ್ರಿಯೆಗೆ ನಿರಾಕರಿಸಿದರು. ಚುನಾವಣೆಗೆ ಹಿಂದೆ ಯಾವ ಸ್ಥಿತಿ ಇತ್ತೋ ಅದೇ ಸ್ಥಿತಿ ಮುಂದುವರಿಯುತ್ತಿದೆ. ಕಾನೂನು ಪ್ರಕಾರ ಕ್ರಮ ಜರುಗಿಸುತ್ತೇವೆ ಎಂದು ಉತ್ತರಿಸಿದರು.

ಶೇ.83 ಎಪಿಕ್‌ ಕಾರ್ಡ್‌ ಬಳಕೆ
ಬೈಂದೂರು ವಿಧಾನಸಭಾ ಕ್ಷೇತ್ರದ ಬಿಜೂರಿನಲ್ಲಿ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸದಿದ್ದರೆ ಮತದಾನ ಬಹಿಷ್ಕಾರಿಸುತ್ತೇವೆಂದು ಹೇಳಿದಾಗ ತಹಶೀಲ್ದಾರರು ಮನವೊಲಿಸಿದರು ಎಂದು ಜಿಲ್ಲಾಧಿಕಾರಿ ಹೇಳಿದರು. ಎಲ್ಲ ಕಡೆ ಶಾಂತಿಯುತ ಮತದಾನ ನಡೆದಿದೆ. ಇದಕ್ಕೆ ರಾಜಕೀಯ ಪಕ್ಷಗಳು, ಅಧಿಕಾರಿಗಳು, ಪೊಲೀಸರು, ಸಿಬಂದಿ, ಜನರು ಕಾರಣ ಎಂದು ಶ್ಲಾ ಸಿದರು. ಶೇ.83ರಷ್ಟು ಮತದಾರರು ಎಪಿಕ್‌ ಕಾರ್ಡ್‌ ಬಳಸಿದ್ದಾರೆ.ಎಸ್‌ಪಿ ನಿಶಾ ಜೇಮ್ಸ್‌ ಉಪಸ್ಥಿತರಿದ್ದರು.

ಉಡುಪಿ ಜಿಲ್ಲೆ ಮತ ಪ್ರಮಾಣ ಹೆಚ್ಚು
ಲೋಕಸಭೆಯ ಎಂಟು ವಿಧಾನಸಭಾ ಕ್ಷೇತ್ರಗಳಲ್ಲಿ ಶೇ.75.91 ಮತದಾನವಾಗಿದ್ದು, ಇದರಲ್ಲಿ ಉಡುಪಿ ಜಿಲ್ಲೆಯ ಮತದಾನ ಶೇ.77.66 ಆಗಿದೆ. ಸೈಂಟ್‌ ಸಿಸಿಲೀಸ್‌ ಶಾಲೆಯಲ್ಲಿ ಮತಯಂತ್ರಗಳನ್ನು ಸೂಕ್ತ ಬಂದೋ ಬಸ್ತ್ ನಲ್ಲಿರಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಟಾಪ್ ನ್ಯೂಸ್

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.