“ಗಿಡಗಳನ್ನು ಬೆಳೆಸುವ ಮೂಲಕ ನೀರಿನ ಸಂರಕ್ಷಣೆ ಸಾಧ್ಯ’
Team Udayavani, Mar 23, 2019, 12:30 AM IST
ಉಡುಪಿ: ಈ ವರ್ಷ ಕರ್ನಾಟಕ ರಾಜ್ಯವನ್ನು ಜಲ ವರ್ಷ ಎಂದು ಘೋಷಣೆ ಮಾಡಿದೆ. ಜಲ ಅಮೂಲ್ಯವಾಗಿದ್ದು ಅದರ ಸಂರಕ್ಷಣೆ ಮಾಡಬೇಕು. ಕರಾವಳಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಹೆಚ್ಚಿದ್ದು, ನೀರಿನ ಸಂರಕ್ಷಣೆ ಆಗಬೇಕಿದೆ.
ಗಿಡಗಳನ್ನು ನೆಡುವುದು ಮಾತ್ರವಲ್ಲದೆ ಈ ಮೂಲಕ ಜಲವನ್ನು ಸಂರಕ್ಷಣೆ ಕೂಡಾ ಆಗಬೇಕು ಎಂದು ತಾ.ಪಂ. ಇಒ ರಾಜು ಕೆ. ಹೇಳಿದರು.
ಅವರು ಶುಕ್ರವಾರ ತಾ.ಪಂ. ವಸತಿ ಗೃಹದ ಮುಂಬಾಗ ನಡೆದ ವಿಶ್ವಜಲ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಕರಾವಳಿ ಪ್ರದೇಶವು ಅತೀ ಹೆಚ್ಚು ಮಳೆ ಬೀಳುವ ಪ್ರದೇಶವಾಗಿದ್ದು, ಜಲವನ್ನು ಸಂರಕ್ಷಣೆ ಮಾಡುವ ಮೂಲಕ ಮುಂದಾಗುವ ನೀರಿನ ಸಮಸ್ಯೆಯನ್ನು ತಡೆಯಬಹುದು. ಗಿಡಗಳನ್ನು ಬೆಳೆಸುವ ಮೂಲಕ ಪರಿಸರವನ್ನು ಹಸಿರಾಗಿ ಮಾಡಬೇಕು ಎಂದರು.
ತಾ.ಪಂ. ವ್ಯವಸ್ಥಾಪಕ ರಾಮದಾಸ್ ಜಲ ಸಂರಕ್ಷಣೆಯ ಪ್ರತಿಜ್ಞಾ ವಿಧಿ ಬೋಧಿಸಿದರು. ಬಿಇಒ ಮಂಜುಳಾ ಕೆ., ಬಿ.ಆರ್.ಸಿಯ ಸಮನ್ವಯಾಧಿಕಾರಿ ಉಮಾ ಪಿ, ಬ್ರಹ್ಮಾವರ ಸಿಡಿಪಿಒ ಶೋಭಾ, ಉಡುಪಿ ಸಿಡಿಪಿಒ ವೀಣಾ, ಸಾಮಾಜಿಕ ಕಾರ್ಯಕರ್ತ ಪ್ರಭಾಕರ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Hassan Lok sabha Constituency: ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಕೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Bike thief: ಬಜಪೆ ಪೊಲೀಸರಿಂದ ಅಂತರ್ ಜಿಲ್ಲಾ ಬೈಕ್ ಕಳ್ಳನ ಬಂಧನ
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ