ಗುಜ್ಜಾಡಿಯಲ್ಲಿ ನೀರಿನ ಸಮಸ್ಯೆ ಆರಂಭ ; ಗಂಗೊಳ್ಳಿಯಲ್ಲಿ ಸದ್ಯಕ್ಕಿಲ್ಲ

ನೀರಿಗಾಗಿ ಬೇಕಿದೆ ಶಾಶ್ವತ ಯೋಜನೆ

Team Udayavani, Mar 20, 2020, 5:55 AM IST

ಗುಜ್ಜಾಡಿಯಲ್ಲಿ ನೀರಿನ ಸಮಸ್ಯೆ ಆರಂಭ ; ಗಂಗೊಳ್ಳಿಯಲ್ಲಿ ಸದ್ಯಕ್ಕಿಲ್ಲ

ಗುಜ್ಜಾಡಿ,ಗಂಗೊಳ್ಳಿ ಪಂಚಾಯತ್‌ ವ್ಯಾಪ್ತಿಯಲ್ಲಿ ಬಹುಭಾಗ ಉಪ್ಪು ನೀರಿನ ಸಮಸ್ಯೆ ಇದ್ದು ಗುಜ್ಜಾಡಿಯಲ್ಲಿ ಈಗಲೇ ನೀರಿನ ಸಮಸ್ಯೆ ಉಂಟಾಗಿದೆ.ಗಂಗೊಳ್ಳಿಯಲ್ಲಿ ಎಪ್ರಿಲ್‌-ಮೇ ತಿಂಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗುವ ಸಾಧ್ಯತೆ ಇದೆ.

ಗಂಗೊಳ್ಳಿ/ಗುಜ್ಜಾಡಿ: ಕುಂದಾಪುರ ತಾಲೂಕಿನಲ್ಲಿಯೇ ದೊಡ್ಡ ಗ್ರಾ.ಪಂ.ಗಳಲ್ಲಿ ಒಂದಾದ ಗಂಗೊಳ್ಳಿಯಲ್ಲಿ ಸದ್ಯಕ್ಕೆ ಅಷ್ಟೇನೂ ನೀರಿನ ಸಮಸ್ಯೆಯಿಲ್ಲ. ಆದರೆ ಗುಜ್ಜಾಡಿ ಗ್ರಾ.ಪಂ. ವ್ಯಾಪ್ತಿಯ ಎಲ್ಲ ವಾರ್ಡ್‌ಗಳಲ್ಲಿ ಈಗಿನಿಂದಲೇ ನೀರಿನ ಸಮಸ್ಯೆ ಆರಂಭವಾಗಿದೆ.

ಗುಜ್ಜಾಡಿ ಹಾಗೂ ಗಂಗೊಳ್ಳಿ ಈ ಎರಡೂ ಗ್ರಾಮ ಪಂಚಾಯತ್‌ ವ್ಯಾಪ್ತಿಯ ಬಹುಭಾಗ ಉಪ್ಪು ನೀರಿನ ಸಮಸ್ಯೆ ಇರುವುದರಿಂದ ಪ್ರತಿ ವರ್ಷ ನೀರಿನ ಸಮಸ್ಯೆ ಕಾಣಿಸಿಕೊಳ್ಳುತ್ತದೆ. ಅದರಲ್ಲೂ ಗುಜ್ಜಾಡಿ ಯಲ್ಲಂತೂ ಈಗಾಗಲೇ ನೀರಿನ ಸಮಸ್ಯೆ ಉಂಟಾಗಿದ್ದು, ಗಂಗೊಳ್ಳಿಯಲ್ಲಿ ಏಪ್ರಿಲ್‌- ಮೇ ತಿಂಗಳಲ್ಲಿ ಕುಡಿಯುವ ನೀರಿಗಾಗಿ ಕೆಲವೆಡೆ ಪರಿತಪಿಸಬೇಕಾಗುತ್ತದೆ.

ಗುಜ್ಜಾಡಿ ಗ್ರಾ.ಪಂ.
ಗುಜ್ಜಾಡಿ ಗ್ರಾ.ಪಂ. ವ್ಯಾಪ್ತಿಯಲ್ಲಿರುವ ಎಲ್ಲ ಐದು ವಾರ್ಡ್‌ಗಳಲ್ಲಿಯೂ ಕುಡಿಯುವ ನೀರಿನ ಸಮಸ್ಯೆ ಪ್ರತಿ ವರ್ಷ ಇರುತ್ತದೆ. ಇಲ್ಲಿನ ಜನತಾ ಕಾಲೋನಿ, ಕಳಿಹಿತ್ಲು, ಮಂಕಿ, ನಾಯಕವಾಡಿ, ಕೊಡಪಾಡಿ ವಾರ್ಡ್‌ಗಳಲ್ಲಿ ಈ ಸಮಸ್ಯೆಯಿದೆ. ಇಲ್ಲೆಲ್ಲ ಇನ್ನು ಟ್ಯಾಂಕರ್‌ ನೀರನ್ನೇ ಅವಲಂಬಿಸಬೇಕಾದ ಸ್ಥಿತಿ ನಿರ್ಮಾಣವಾಗಿದೆ. ಇಲ್ಲಿ ಬಾವಿ ಇದೆ. ಆದರೆ ಉಪ್ಪು ನೀರಿನಿಂದಾಗಿ ಬಳಕೆಗೆ ಯೋಗ್ಯವಿಲ್ಲದಂತಾಗಿದೆ. ಹೆಚ್ಚಿನ ಮನೆಗಳಲ್ಲಿ ಬಾವಿಯಿದ್ದರೂ, ಬೇಸಗೆಯಲ್ಲಿ ನೀರಿರುವುದಿಲ್ಲ. ಪಂಚಾಯತ್‌ನಿಂದ ನಳ್ಳಿ ನೀರನ್ನು ಎರಡು ದಿನಕ್ಕೊಮ್ಮೆ ಕೊಡುತ್ತಾರೆ. ಅದು ಕೂಡ ಎತ್ತರದ ಪ್ರದೇಶಗಳಿಗೆ ನಿರಂತರವಾಗಿ ಸಿಗುತ್ತಿಲ್ಲ ಎನ್ನುವುದು ಗ್ರಾಮಸ್ಥರ ಆರೋಪ. ಇಲ್ಲಿರುವ ಕೇವಲ ಶೇ.10 ರಷ್ಟು ಮನೆಗಳಿಗೆ ಮಾತ್ರ ನೀರಿನ ಸಮಸ್ಯೆಯಿಲ್ಲ. ಆದರೆ ಶೇ. 90 ರಷ್ಟು ಮನೆಗಳಲ್ಲಿ ನೀರಿನ ಸಮಸ್ಯೆಯಿದೆ. ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರದ ಅಗತ್ಯವಿದೆ. ದೊಡ್ಡ ಮಟ್ಟದ ನೀರಿನ ಯೋಜನೆಗೆ ಈ ಗ್ರಾಮದ ತುರ್ತು ಅಗತ್ಯವಾಗಿದೆ.

ಗಂಗೊಳ್ಳಿ ಗ್ರಾ.ಪಂ.
ಗಂಗೊಳ್ಳಿಯ ಸುತ್ತಲೂ 3 ನದಿಗಳು ಹರಿಯುತ್ತಿದ್ದರೂ ಬೇಸಗೆಯಲ್ಲಿ ನೀರಿಗೆ ಪರದಾಡಬೇಕಾಗಿದೆ. ಎತರ್ತದ ಪ್ರದೇಶವಾದ ಮೇಲ್‌ ಗಂಗೊಳ್ಳಿ, ಅಂಬೇಡ್ಕರ್‌ ಕಾಲನಿ, ಬಾವಿಕಟ್ಟೆ ಭಾಗಗಳಲ್ಲಿ ಏಪ್ರಿಲ್‌ನಿಂದ ಕುಡಿಯುವ ನೀರಿನ ಸಮಸ್ಯೆ ಕಾಣಿಸಿಕೊಳ್ಳುತ್ತಿದೆ. ಬಂದರು ಪ್ರದೇಶ, ಮಲ್ಯರಮಠ, ದಾಕುಹಿತ್ಲು, ಲೈಟ್‌ಹೌಸ್‌, ಮ್ಯಾಂಗನೀಸ್‌ ವಾರ್ಫ್‌, ಖಾರ್ವಿಕೇರಿ, ಕಲೈಕಾರ್‌ ಪ್ರದೇಶಗಳು ಕೆಳಗಿನ ಭಾಗ ಆಗಿರುವುದರಿಂದ ಟ್ಯಾಂಕ್‌ನ ನೀರು ಪೂರೈಕೆ ಆಗುತ್ತಿದೆ.

ಕೈಗೊಂಡ ಕ್ರಮಗಳೇನು?
ಜನತಾ ಕಾಲನಿಯಲ್ಲಿ 1.50 ಲಕ್ಷ ರೂ. ವೆಚ್ಚದಲ್ಲಿ ಬೋರ್‌ವೆಲ್‌ ತೆರೆಸಲಾಗಿದೆ. ಮತ್ತೂಂದು ಬೋರ್‌ವೆಲ್‌ಗೆ 95 ಸಾವಿರ ರೂ. ವ್ಯಯಿಸಲಾಗಿದೆ. 20 ಲಕ್ಷ ರೂ. ವೆಚ್ಚದಲ್ಲಿ ಓವರ್‌ ಹೆಡ್‌ ಟ್ಯಾಂಕ್‌ ನಿರ್ಮಾಣಕ್ಕೆ ಬೇಡಿಕೆಯಿದೆ.

ಕಳೆದ ಬೇಸಗೆಯಲ್ಲಿ ತೀವ್ರವಾಗಿ ಕುಡಿಯುವ ನೀರಿನ ಸಮಸ್ಯೆ ಇದ್ದಲ್ಲಿ “ಉದಯವಾಣಿ’ಯು ಭೇಟಿ ಕೊಟ್ಟು, “ಜೀವಜಲ’ ಎನ್ನುವ ಸರಣಿಯಡಿ ಸಾಕ್ಷಾತ್‌ ವರದಿಗಳನ್ನು ಪ್ರಕಟಿಸಿತ್ತು. ಈ ಬಾರಿಯ ಬೇಸಗೆಯಲ್ಲಿ ನೀರಿನ ಸಮಸ್ಯೆಯ ನಿವಾರಣೆಗೆ ಸ್ಥಳೀಯ ಪಂಚಾಯತ್‌ ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಯಾವೆಲ್ಲ ಪರಿಹಾರ ಕ್ರಮಗಳನ್ನು ಕೈಗೊಂಡಿದ್ದಾರೆ? ಮುಂದೆ ಆಗಬೇಕಾದ ಪ್ರಮುಖ ಕ್ರಮಗಳೆಲ್ಲದರ ಕುರಿತಾದ ಸರಣಿ ಇದು.

ಗರಿಷ್ಠ ಪ್ರಯತ್ನ
ಗುಜ್ಜಾಡಿ ಗ್ರಾಮ ಪಂಚಾಯತ್‌ನಲ್ಲಿ ಕಳೆದೊಂದು ವರ್ಷದಲ್ಲಿ ಜನರಿಗೆ ನೀರು ಪೂರೈಕೆಗೆ ಪಂಚಾಯತ್‌ ಗರಿಷ್ಠ ಪ್ರಯತ್ನ ನಡೆಸುತ್ತಿದೆ. ಕಳೆದ ವರ್ಷ ಟ್ಯಾಂಕರ್‌ ನೀರು ಪೂರೈಕೆಗೆ ಅಂದಾಜು 5 ಲಕ್ಷ ರೂ. ವರೆಗೆ ವ್ಯಯಿಸಿದೆ. 3ನೇ ವಾರ್ಡ್‌ನ ಮಾವಿನಕಟ್ಟೆಯಲ್ಲಿ 50 ಸಾವಿರ ರೂ. ವೆಚ್ಚದಲ್ಲಿ ಬೋರ್‌ವೆಲ್‌ ಕೊರೆಯಿಸಲಾಗಿದೆ. ಜಿ.ಪಂ. ಸದಸ್ಯೆ ಶೋಭಾ ಜಿ.ಪುತ್ರನ್‌ ಅವರ ಅನುದಾನದಡಿ ಬಾವಿಯೊಂದನ್ನು ತೆಗೆಯಲಾಗುತ್ತಿದೆ.

ಶಾಶ್ವತ ಪರಿಹಾರ ಬೇಕು
ಬೇಸಗೆಯಲ್ಲಿ ಪ್ರತಿ ವರ್ಷ ನೀರಿನ ಸಮಸ್ಯೆ ಉದ್ಭವಿಸುತ್ತದೆ. ಶಾಶ್ವತ ಪರಿಹಾರಕ್ಕಾಗಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯಡಿ ಈ ಗ್ರಾಮವನ್ನು ಸೇರಿಸಿಕೊಂಡು, ಸೌಕೂರು – ಸಿದ್ದಾಪುರ ಏತ ನೀರಾವರಿ ಯೋಜನೆಯನ್ನು ಅನುಷ್ಠಾನಗೊಳಿಸಲು ಈಗಾಗಲೇ ಶಾಸಕರಿಗೆ ಮನವಿ ಸಲ್ಲಿಸಿದ್ದೇವೆ. ಜಿ.ಪಂ.ಗೂ ಕೂಡ ಮನವಿ ಸಲ್ಲಿಸಲಾಗಿದೆ.
– ಶಕುಂತಳಾ,
ಕಾರ್ಯದರ್ಶಿ,ಗುಜ್ಜಾಡಿ ಗ್ರಾ.ಪಂ.

ಮನವಿ ಸಲ್ಲಿಕೆ
ಪಂಚಾಯತ್‌ನಿಂದ ಪ್ರತಿ ಬೇಸಗೆಯಲ್ಲಿ ನೀರು ಪೂರೈಕೆಗೆ ಎಲ್ಲ ರೀತಿಯ ಕ್ರಮಕೈಗೊಳ್ಳಲಾಗುತ್ತಿದೆ. ಆದರೆ ಇಲ್ಲಿನ ಇಡೀ ಪ್ರದೇಶ ಉಪ್ಪು ನೀರಿನಿಂದ ಆವೃತವಾಗುತ್ತಿರುವುದರಿಂದ ಏಪ್ರಿಲ್‌ – ಮೇಯಲ್ಲಿ ಎತ್ತರದ ಪ್ರದೇಶಗಳಲ್ಲಿ ನೀರಿನ ಸಮಸ್ಯೆ ಉಂಟಾಗುತ್ತದೆ. ಸೌಕೂರು – ಸಿದ್ದಾಪುರ ಏತ ನೀರಾವರಿ ಯೋಜನೆಯಲ್ಲಿ ನಮ್ಮ ಪಂಚಾಯತನ್ನು ಕೂಡ ಸೇರಿಸಲು ಮನವಿ ಸಲ್ಲಿಸಿದ್ದೇವೆ. ಓವರ್‌ ಹೆಡ್‌ ಟ್ಯಾಂಕ್‌ಗೆ ಬೇಡಿಕೆಯಿದೆ.
ಶ್ರೀನಿವಾಸ ಖಾರ್ವಿ,
ಅಧ್ಯಕ್ಷರು,ಗಂಗೊಳ್ಳಿ ಗ್ರಾ.ಪಂ.

-ಪ್ರಶಾಂತ್‌ ಪಾದೆ

ಟಾಪ್ ನ್ಯೂಸ್

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.