ನೀರಿಗಾಗಿ ಕನ್ನಡಬೆಟ್ಟು ನಿವಾಸಿಗಳ ಕಣ್ಣೀರು


Team Udayavani, Jan 3, 2019, 8:35 PM IST

water-problem-3-1.jpg

ಬೆಳ್ಮಣ್‌: ಕಾರ್ಕಳ ತಾಲೂಕಿನ ಮುಂಡ್ಕೂರು ಗ್ರಾಮ ಪಂಚಾಯತ್‌ ವ್ಯಾಪ್ರಿಯ ಪೊಸ್ರಾಲು ಸಮೀಪದ ಕನ್ನಡಬೆಟ್ಟು ನಿವಾಸಿಗಳು ಕುಡಿಯುವ ನೀರಿಗಾಗಿ ಹಲವು ದಶಕದಿಂದ ಕಣ್ಣೀರು ಹಾಕುತ್ತಿದ್ದಾರೆ. ನಿತ್ಯ ನೀರಿಗಾಗಿ ಪರದಾಟ ನಡೆಸುತ್ತಿದ್ದರೂ ಯಾವುದೇ ಇಲಾಖೆ ಅಥವಾ ಸ್ಥಳಿಯಾಡಳಿತ ಈ ಕಾಲನಿಯ ನೀರಿನ ಸಮಸ್ಯೆಗೆ ಪರಿಹಾರ ನೀಡಿಲ್ಲ.

ವರ್ಷದ ಎಲ್ಲಾ ದಿನವೂ ಸಮಸ್ಯೆ
ಬೇಸಿಗೆಯಲ್ಲಿ ನೀರಿನ ಸಮಸ್ಯೆಗಳು ಕಂಡುಬರುವುದು ಸಾಮಾನ್ಯ ಆದರೆ ಈ ಕಾಲನಿಯಲ್ಲಿ ವರ್ಷದ ಎಲ್ಲಾ ದಿನಗಳಲ್ಲಿಯೂ ನೀರಿಗಾಗಿ ಪರದಾಡಬೇಕಾಗಿದೆ. ಈ ಕಾಲನಿಯ 5 ಮನೆಗಳಲ್ಲಿ ಸುಮಾರು 40 ಮಂದಿ ಜನರಿದ್ದು ಇವರ ನಿತ್ಯ ಉಪಯೋಗಕ್ಕೆ ನೀರಿಲ್ಲ. ನೀರಿಗಾಗಿ ಇವರು 1 ಕಿ.ಮೀ. ನಷ್ಟು ದೂರದ ನದಿಗೆ ತೆರಳಬೇಕಿದೆ. ಆದರೆ ಇತ್ತೀಚೆಗೆ ಆ ನದಿಯಲ್ಲಿ ಮೊಸಳೆಗಳು ಕಾಣಸಿಕ್ಕಿದ್ದು ಈ ಭಾಗದ ಜನ ನೀರಿಗೆ ಇಳಿಯಲೂ ಇದೀಗ ಭಯವುಂಟಾಗಿದೆ.

ಕಾಲನಿ ಜನರೇ ಬಾವಿ ತೋಡಿದರು
ನೀರಿಗಾಗಿ ಪರದಾಟ ನಡೆಸುವುದರಿಂದ ನೊಂದ ಕಾಲನಿ ಜನರೇ ಒಟ್ಟಾಗಿ ಒಂದು ಬಾವಿಯನ್ನು ನಿರ್ಮಿಸಿದ್ದಾರೆ. ಆದರೆ ಅದೂ ಈಗ ಬತ್ತುತ್ತಿರುವುದರಿಂದ ಆತಂಕ ಮನೆ ಮಾಡಿದೆ. ಮುಂದಿನ ದಿನಗಳಲ್ಲಿ ಇಲ್ಲಿನ ನಿವಾಸಿಗಳು ದೂರಕ್ಕೆ ಕ್ರಮಿಸಿ ಖಾಸಗಿ ಬಾವಿಗಳಿಂದ ನೀರು ತರಬೇಕಾಗಿದೆ  ಅಥವಾ ಇಲ್ಲವೇ ನದಿ ನೀರನ್ನೇ ಆಶ್ರಯಿಸಬೇಕಾಗಿದೆ.

ಈ ಕಾಲನಿಗೆ ಪಂಚಾಯತ್‌ ನಳ್ಳಿ ನೀರಿನ ಸಂಪರ್ಕ ಕಲ್ಪಿಸಲು ಸ್ಥಳಿಯ ಖಾಸಗಿ ಜಾಗದ ತೊಂದರೆ ಇರುವುದರಿಂದ ವಿಳಂಬವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ನಳ್ಳಿ ಅಲ್ಲದಿದ್ದರೂ ಬೋರ್‌ವೆಲ್‌ ಅಥವಾ ಬಾವಿಯನ್ನಾದರೂ ನಿರ್ಮಿಸಿ. ಅಥವಾ ಎರಡು ದಿನಕ್ಕೊಮ್ಮೆ ಟ್ಯಾಂಕರ್‌ ನೀರು ಒದಗಿಸಲು ಕ್ರಮಕೈಗೊಳ್ಳಲಿ ಎನ್ನುವುದು ಇಲ್ಲಿನವರ ಆಗ್ರಹ. ಸಮಸ್ಯೆ ಬಗೆಹರಿಯದಿದ್ದರೆ ಮುಂದಿನ ಚುನಾವಣೆ ಬಹಿಷ್ಕರಿಸುವುದಾಗಿ ಹೇಳಿದ್ದಾರೆ.

ಮನವಿ ನೀಡಿದ್ದರೂ ಪ್ರಯೋಜನವಿಲ್ಲ
ನೀರಿನ ಸಮಸ್ಯೆ ಬಗ್ಗೆ ಗ್ರಾ.ಪಂ, ತಾ.ಪಂ., ಜಿ.ಪಂ.ನಿಂದ ಹಿಡಿದು, ಶಾಸಕ ಸುನೀಲ್‌ ಕುಮಾರ್‌ ಹಾಗೂ ಜಿಲ್ಲಾಧಿಕಾರಿಗಳಿಗೆ ಮನವಿಯನ್ನು ಸಲ್ಲಿಸಿದರೂ ಇಲ್ಲಿಯವರೆಗೆ ಯಾವುದೇ ಪ್ರಯೋಜನವಾಗಿಲ್ಲ ಎಂದು ಸ್ಥಳಿಯರು ಆರೋಪಿಸಿದ್ದಾರೆ.

ಅನುದಾನ ನೀಡಲು ಸಿದ್ಧ
ಖಾಸಗಿ ಜಾಗದ ಸಮಸ್ಯೆ ಇರುವುದರಿಂದ ನಳ್ಳಿ ಸಂಪರ್ಕ ಸಾಧ್ಯವಾಗಿಲ್ಲ. ಪೈಪ್‌ ಲೈನ್‌ ಅಳವಡಿಸಲು ಸರಕಾರಿ ಅಥವಾ ಇತರ ಜಾಗದ ವ್ಯವಸ್ಥೆಯಾದಲ್ಲಿ ಅನುದಾನ ನೀಡಲು ಸಿದ್ಧವಿದ್ದೇವೆ.
– ರೇಶ್ಮಾ ಉದಯ್‌ ಶೆಟ್ಟಿ , ಜಿ.ಪಂ. ಸದಸ್ಯೆ

ನಿತ್ಯ ನರಕ ಯಾತನೆ
ಇದು ಹಲವು ದಶಕಗಳ ಸಮಸ್ಯೆಯಾಗಿದ್ದು ಎಲ್ಲರಿಗೂ ಮನವಿಯನ್ನು ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ. ವರ್ಷದ ಆರು ತಿಂಗಳು ನೀರಿಗಾಗಿ ನಿತ್ಯ ನರಕ ಯಾತನೆಯನ್ನು ಪಡಬೇಕಾಗಿದೆ.
– ವಸಂತಿ, ಸ್ಥಳೀಯರು

— ಶರತ್‌ ಶೆಟ್ಟಿ ಮುಂಡ್ಕೂರು

ಟಾಪ್ ನ್ಯೂಸ್

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Brahmavar

Padubidri: ಅಪಘಾತದ ಗಾಯಾಳು ಸಾವು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.