ಕೆರೆ ಅಭಿವೃದ್ಧಿಗೊಂಡರೆ ನೀರಿನ ಸಮಸ್ಯೆ ದೂರ

ಮುಡಾರು ಗ್ರಾಮ: ಹೂಳು ತುಂಬಿದ ಅಬ್ಬೆಂಜಾಲು ಕೆರೆ

Team Udayavani, Mar 12, 2020, 4:47 AM IST

lake-develpment

05 ಮುಡಾರು ಗ್ರಾ.ಪಂ. ವ್ಯಾಪ್ತಿಯಲ್ಲಿರುವ ಕೆರೆಗಳ ಸಂಖ್ಯೆ
01 ಅಬ್ಬೆಂಜಾಲು ಕೆರೆಯ ಅಂದಾಜು ವಿಸ್ತೀರ್ಣ (ಎಕ್ರೆ)
150 ಕೃಷಿ ಅವಲಂಬಿತ ಮನೆಗಳು

ಬಜಗೋಳಿ: ಮುಡಾರು ಗ್ರಾಮವು ಬಜಗೋಳಿ ಪೇಟೆಯಲ್ಲಿಯೇ ಇರುವುದರಿಂದ ಬೆಳೆಯುತ್ತಿ ರುವ ಬಜಗೋಳಿ ಪೇಟೆಗೆ ಮುಖ್ಯ ಕೊಂಡಿಯಾಗಿರುವ ಮುಡಾರು ಗ್ರಾಮದ ಕೆರೆಗಳು ಹೂಳು ತುಂಬಿ ಸಮರ್ಪಕ ನಿರ್ವಹಣೆ ಇಲ್ಲದೆ ನೀರಿನ ಸಮಸ್ಯೆ ತಲೆದೋರುವಂತಾಗಿದೆ. ಅಬ್ಬೆಂಜಾಲು ಕೆರೆ ಅಭಿವೃದ್ಧಿಗೊಂಡಲ್ಲಿ ಇಡೀ ಗ್ರಾಮದ ನೀರಿನ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲಿದೆ.

ನೀರಿನ ಸಮಸ್ಯೆ
ಕಳೆದ ಬೇಸಗೆಯಲ್ಲಿ ನೀರಿನ ಸಮಸ್ಯೆ ಬಹುತೇಕ ಕಡೆ ಉಂಟಾಗಿದ್ದು ಗ್ರಾಮಸ್ಥರು ಪರದಾಡುವಂತಾಗಿತ್ತು. ಪ್ರತೀ ಮನೆಗೆ 2 ದಿನಗಳಿಗೊಮ್ಮೆ ನೀರಿನ ಪೂರೈಕೆ ಜತೆಗೆ ನೀರಿನ ಮಿತ ಬಳಕೆ ಮಾಡುವಂತೆ ಗ್ರಾಮಸಭೆಗಳಲ್ಲಿ ಮನವಿ ಮಾಡಲಾಗಿತ್ತು. ಬಹುತೇಕ ಬಾವಿಗಳು ಬತ್ತಿ ಹೋಗಿದ್ದು ಇನ್ನೂ ಕೆಲವು ಬಾವಿಗಳು ಬತ್ತಿ ಹೋಗುವ ಹಂತಕ್ಕೆ ತಲುಪಿದ್ದವು. ಈ ಸಂದರ್ಭ ಗ್ರಾಮಸ್ಥರು ಹೂಳು ತುಂಬಿದ ಕೆರೆಗಳ ಹೂಳೆತ್ತುವಂತೆ ಮನವಿ ಮಾಡಿದ್ದರು. ಮುಡ್ರಾಲು ಅಬ್ಬೆಂಜಾಲು ಸುತ್ತ ಮುತ್ತ ಸುಮಾರು 150ಕ್ಕೂ ಅಧಿಕ ಕೃಷಿ ಅವಲಂಬಿತ ಮನೆಗಳಿವೆ. ಕಳೆದ ಬಾರಿ ತೆಂಗು, ಅಡಿಕೆ ಇನ್ನಿತರ ಬೆಳೆಗಳು ನೀರಿನ ಸಮಸ್ಯೆಯಿಂದಾಗಿ ಒಣಗಿ ಹೋಗಿದ್ದವು. ಅಬ್ಬೆಂಜಾಲು ಕೆರೆ ಅಭಿವೃದ್ಧಿಗೊಂಡಲ್ಲಿ ಬಹುತೇಕರ ಕೃಷಿ ಭೂಮಿ ಹಸನಾಗಬಹುದಾಗಿದೆ.

ನೀರಿನ ಒರತೆ ಕುಸಿತ
ಈ ಕೆರೆ ಅಭಿವೃದ್ಧಿಗೊಂಡಲ್ಲಿ ಕೆರೆಯ ಪಕ್ಕ ಬಾವಿ ನಿರ್ಮಿಸಿ ಇಡೀ ಮುಡಾರು ಗ್ರಾಮಕ್ಕೆ ನೀರು ಪೂರೈಕೆಯ ಯೋಜನೆಯನ್ನು ಇಲ್ಲಿ ಅಳವಡಿಸಬಹುದಾಗಿದೆ. ಉಳಿದ 4 ಕೆರೆಗಳಲ್ಲಿ ಬಹುತೇಕ ಹೂಳು ತುಂಬಿದ್ದು ನೀರಿನ ಒರತೆ ಕುಸಿದು ಬಹುಗೇಗನೆ ಬತ್ತಿ ಹೋಗುತ್ತಿವೆ.

ನಿರ್ವಹಣೆ
ಮುಡಾರು ಗ್ರಾಮದ ಕೆರೆಗಳನ್ನು ವಿವಿಧ ಇಲಾಖೆಗಳ ಅನುದಾನದಿಂದ ಅಥವಾ ಸಂಘ- ಸಂಸ್ಥೆಗಳ ಸಹಯೋಗ ದೊಂದಿಗೆ ನಿರ್ವಹಣೆ ಮಾಡಬಹುದಲ್ಲದೆ, ಉದ್ಯೋಗ ಖಾತರಿ ಯೋಜನೆಯಡಿಯಲ್ಲಿ ಅಭಿವೃದ್ಧಿಗೊಂಡಲ್ಲಿ ಇಡೀ ಗ್ರಾಮದ ನೀರಿನ ಸಮಸ್ಯೆ ಪರಿಹಾರ ಕಂಡುಕೊಳ್ಳಬಹುದಾಗಿದೆ ಎಂದು ಗ್ರಾಮಸ್ಥರು ಅಭಿಪ್ರಾಯಪಟ್ಟಿದ್ದಾರೆ.

ಒಟ್ಟು 5 ಕೆರೆ
ಮುಡಾರು ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ಒಟ್ಟು 5 ಕೆರೆಗಳಿದ್ದು, ಎಲ್ಲ ಕೆರೆಗಳಲ್ಲಿ ಹೂಳು ತುಂಬಿವೆ. ಕೆರೆಗಳ ನಿರ್ವಹಣೆ ಮಾಡಿದಲ್ಲಿ ಇಡೀ ಗ್ರಾಮಕ್ಕೆ ನೀರಿನ ಸಮಸ್ಯೆಯಿಂದ ಮುಕ್ತಿ ದೊರಕಿಸಬಹುದಾಗಿದೆ. ಪಂಚಾಯತ್‌ ವ್ಯಾಪ್ತಿಯಲ್ಲಿ ಮುಡ್ರಾಲು ಬಳಿಯ ಅಬ್ಬೆಂಜಾಲು ಕೆರೆ, ಬುನ್ನಾಡಿ ಕೆರೆ, ಮುಡಾರು ಹಾಸ್ಟೆಲ್‌ ಬಳಿಯ ಕೆರೆ, ಕಡಾರಿ ಶಾಲೆಯ ಬಳಿಯ ಕಟ್ಟದಪಾಡಿ ಕೆರೆ, ಹೆಪೆಜಾರು ಅಂಗನವಾಡಿ ಬಳಿಯ ಕೆರೆ ಸಹಿತ ಒಟ್ಟು 5 ಕೆರೆಗಳಿವೆ. ಇವುಗಳ ಅಭಿವೃದ್ಧಿಯಾದಲ್ಲಿ ಮುಡಾರು ಗ್ರಾಮದ ಕೃಷಿಕರ ನೀರಿನ ಸಮಸ್ಯೆ ದೂರವಾಗಬಹುದು.

ವಿಸ್ತಾರವಾದ ಕೆರೆ
ಮುಡಾರು ಗ್ರಾಮದ ಮುಡ್ರಾಲು ಬಳಿಯ ಅಬ್ಬೆಂಜಾಲು ಕೆರೆಯು ವಿಶಾಲ ಕೆರೆಯಾಗಿದ್ದು, ವಿಸ್ತಾರವಾಗಿದೆ. ಸುಮಾರು 1 ಎಕ್ರೆ ವಿಸ್ತೀರ್ಣದಲ್ಲಿ ಚಾಚಿಕೊಂಡಿರುವ ಕೆರೆಯು ಇದೀಗ ಹೂಳು ತುಂಬಿ ನೀರಿನ ಪ್ರಮಾಣವು ಕಮ್ಮಿಯಾಗಿದೆ. ಈ ಕೆರೆಯಲ್ಲಿ ನೀರಿನ ಒರತೆಯೂ ಹೆಚ್ಚಿದೆ. ಆದರೆ ಇದು ಇದೂವರೆಗೂ ಅಭಿವೃದ್ಧಿ ಕಂಡಿಲ್ಲ.

ಸೂಕ್ತ ಕ್ರಮ
ಮುಡಾರು ಅಬ್ಬೆಂಜಾಲು ಕೆರೆ ಸಹಿತ ಗ್ರಾಮದ ವಿವಿಧ ಕೆರೆಗಳ ಅಭಿವೃದ್ಧಿಗೆ ಚಿಂತನೆ ನಡೆಸಲಾಗಿದ್ದು, ಹಿರಿಯರ ಮಾರ್ಗದರ್ಶನದ ಜತೆಗೆ ಸಂಬಂಧ ಪಟ್ಟ ಇಲಾಖೆಗಳಿಂದ ಅನುದಾನ ಪಡೆದು ಕೆರೆ ಮರುಪೂರಣಗೊಳಿಸುವ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು.
-ಗೀತಾ ಎಸ್‌. ಪಾಟ್ಕರ್‌, ಅಧ್ಯಕ್ಷರು, ಮುಡಾರು ಗ್ರಾಮ ಪಂಚಾಯತ್‌

ಹೂಳು ತೆಗೆಯಲಿ
ಅಬ್ಬೆಂಜಾಲು ಕೆರೆಯಲ್ಲಿ ಹೂಳು ತುಂಬಿದ್ದು, ಹೂಳು ತೆಗೆಯುವ ಕಾರ್ಯ ಶೀಘ್ರವಾಗಿ ಆಗಬೇಕಿದೆ. ಕೆರೆಗಳ ಅಭಿವೃದ್ಧಿ ಜತೆಗೆ ಕೆರೆ ಮರುಪೂರಣ ತಾಲೂಕಿನ ಪ್ರತಿಯೊಂದು ಗ್ರಾಮಗಳಲ್ಲಿಯೂ ನಡೆಸಬೇಕಾಗಿದೆ.
-ರಜತ್‌ ರಾಮ್‌ ಮೋಹನ್‌, ಗ್ರಾಮಸ್ಥರು

ಕ್ರಮ ಅಗತ್ಯ
ಅಬ್ಬೆಂಜಾಲು ಕೆರೆ ಅಭಿವೃದ್ಧಿಯಾದಲ್ಲಿ ಗ್ರಾಮದ ನೀರಿನ ಸಮಸ್ಯೆ ದೂರವಾಗಲಿದೆ. ಅಲ್ಲದೆ ಕೆರೆಯ ಸಮೀಪ ಬಾವಿ ನಿರ್ಮಿಸಿ ಗ್ರಾಮದ ಜನರಿಗೆ ಕುಡಿಯುವ ನೀರು ಪೂರೈಕೆ ಮಾಡಬಹುದಾಗಿದೆ. ಈ ಬಗ್ಗೆ ಸ್ಥಳೀಯಾಡಳಿತ ಹಾಗೂ ಸಂಬಂಧ ಪಟ್ಟ ಇಲಾಖೆ ಎಚ್ಚೆತ್ತು ನಿರ್ಜೀವ ಕೆರೆ ಗಳ ಪುನಶ್ಚೇತನ ಮಾಡುವಲ್ಲಿ ಕ್ರಮ ಕೈಗೊಳ್ಳಬೇಕು.
-ಸಂದೇಶ್‌ ಮುಡಾರು, ಗ್ರಾಮಸ್ಥರು

– ಸಂದೇಶ್‌ ಕುಮಾರ್‌ ನಿಟ್ಟೆ

ಟಾಪ್ ನ್ಯೂಸ್

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

4

ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ

Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

26

ಅಮೆರಿಕ ತಂಡಕ್ಕೆ ಸ್ಟುವರ್ಟ್‌ ಕೋಚ್‌!

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.