ಎಪ್ರಿಲ್‌ ವೇಳೆ ಕಾಡುವ ಸಮಸ್ಯೆ; ಟ್ಯಾಂಕರ್‌ ನೀರೇ ಗತಿ

 ಕೊರ್ಗಿ ಸಾಗಿನಗುಡ್ಡೆ:ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಬೇಕು

Team Udayavani, Mar 19, 2020, 5:32 AM IST

Water-Problems

ಕೊರ್ಗಿ ಗ್ರಾಮ ಪಂಚಾಯತ್‌ ವ್ಯಾಪ್ತಿಯ ಕೆಲವು ಕಡೆ ಈ ವರ್ಷವೂ ಎಪ್ರಿಲ್‌ನಲ್ಲಿ ನೀರಿನ ಸಮಸ್ಯೆ ಕಾಡಲಿದೆ. ಸಾಗಿನಗುಡ್ಡೆಯಲ್ಲಿರುವ ಬಾವಿಯನ್ನು ನವೀಕರಿಸಿ ಅದನ್ನು ಸಮರ್ಪಕವಾಗಿ ಬಳಸಿಕೊಂಡಲ್ಲಿ ನೀರಿನ ಅಭಾವ ಸ್ವಲ್ಪವಾದರೂ ಕಡಿಮೆಮಾಡ‌ಬಹುದಾಗಿದೆ.

ಕೊರ್ಗಿ: ಕುಂದಾಪುರ ತಾಲೂಕಿನ ಕೊರ್ಗಿ ಗ್ರಾಮ ಪಂಚಾಯತ್‌ ವ್ಯಾಪ್ತಿಯ ಸಾಗಿನ ಗುಡ್ಡೆ ದಲಿತ ಕಾಲನಿ, ಹೊಸಮಠ ಜನತಾ ಕಾಲನಿ, ನ್ಯಾವಳಬೆಟ್ಟು ನಿವಾಸಿಗಳಿಗೆ ಈ ವರ್ಷವೂ ಎಪ್ರಿಲ್‌ನಲ್ಲಿ ನೀರಿನ ಸಮಸ್ಯೆ ಕಾಡುವ ಭೀತಿ ಇದೆ.

ಗ್ರಾಮ ಪಂಚಾಯತ್‌ನಿಂದ ನಲ್ಲಿ ನೀರಿನ ಸಂಪರ್ಕ ಕಲ್ಪಿಸಿದ್ದರೂ ಎಪ್ರಿಲ್‌ನಲ್ಲಿ ಅಂತರ್ಜಲ ಕುಸಿಯುವುದರಿಂದ ಇಲ್ಲಿನ ನಿವಾಸಿಗಳು ಕುಡಿಯುವ ನೀರಿಗೆ ದೂರ ಕ್ರಮಿಸಬೇಕಾಗಿದೆ.

ಈ ಬಾರಿಯೂ ಅಭಾವ ಭೀತಿ ಇಲ್ಲಿನ ಸಾಗಿನಗುಡ್ಡೆ ಹಾಗೂ ಹೊಸಮಠ ಜನತಾ ಕಾಲನಿ ಯಲ್ಲಿರುವ ಸಾರ್ವಜನಿಕ ಬಾವಿ ಹಾಗೂ ಹೊಸಮಠ ಸರಕಾರಿ ಶಾಲಾ ಸಮೀಪದ ಬಾವಿಯಿಂದ ಮುಂಜಾನೆ ನೀರು ಪೂರೈಕೆ ಯಾಗುತ್ತದೆ. ಆದರೆ ಎಪ್ರಿಲ್‌ನಲ್ಲಿ ಇಲ್ಲಿ ಅಂತರ್ಜಲ ಸಂಪೂರ್ಣವಾಗಿ ಕುಸಿತವಾಗುತ್ತದೆ. ಆದ್ದರಿಂದ ಶಾಶ್ವತ ಪರಿಹಾರ ಕ್ರಮ ಕೈಗೊಂಡರೆ ಉತ್ತಮ ಎನ್ನುವುದು ಸ್ಥಳೀಯರಾದ ಗೋಪಾಲ ಅವರ ಅಭಿಪ್ರಾಯ.

ಒಂದು ಕಿ.ಮೀ. ದೂರದ ಕುಷ್ಟಪ್ಪ ಶೆಟ್ಟಿ ಎನ್ನುವವರ ಮನೆಯಿಂದ ನೀರು ಹೊರಬೇಕಾದ ಪರಿಸ್ಥಿತಿ ಇದೆ. ಕಳೆದ ಬಾರಿ ಗ್ರಾ.ಪಂ. ಟ್ಯಾಂಕರ್‌ ಮೂಲಕ ನೀರು ಸರಬರಾಜು ಮಾಡಿದೆ. ಇದಕ್ಕೆ ಶಾಶ್ವತ ಪರಿಹಾರ ಬೇಕು ಎನ್ನುತ್ತಾರೆ ಸ್ಥಳೀಯರಾದ ಗಂಗೆ ಅವರು.

ಸಮಸ್ಯೆಗಳು
ಹೊಸಮಠ ಜನತಾ ಕಾಲನಿಯ ಸುತ್ತಮುತ್ತಲ ಭಾಗದಲ್ಲಿ ಈಗಿರುವ ಸುಮಾರು ನಾಲ್ಕೈದು ಕೊಳವೆ ಬಾವಿಗಳು ಕೂಡಾ ನಿಷ್ಪ್ರಯೋಜಕವಾಗಿವೆ. ಕೊರ್ಗಿ ಸಾಗಿನ ಗುಡ್ಡೆಯಲ್ಲಿ ಸುಮಾರು 25 ವರ್ಷದ ಹಳೆಯ ಬಾವಿಯಲ್ಲಿ ನೀರಿದೆ, ಆದರೆ ಅದು ಶಿಥಿಲಗೊಂಡು ಅಪಾಯದ ಸ್ಥಿತಿಯಲ್ಲಿದೆ.

ಆಗಬೇಕಾದ್ದೇನು?
ಸಾಗಿನಗುಡ್ಡೆಯ ಬಾವಿಯನ್ನು ನವೀಕರಿಸಿ ಸಮರ್ಪಕವಾಗಿ ಬಳಸಿ ಕೊಳ್ಳುವುದು. ನೀರಿನ ಅಭಾವವಿದ್ದಾಗ ನಿವಾಸಿಗಳಿಗೆ ಟ್ಯಾಂಕರ್‌ನಲ್ಲಿ ನೀರು ಪೂರೈಕೆ ಮಾಡಬೇಕು. ಕೊರ್ಗಿ ಹಾಗೂ ಹೆಸ್ಕಾತ್ತೂರು ಸೇರಿದಂತೆ ಗ್ರಾಮೀಣ ಭಾಗದಲ್ಲಿ ಹರಿದು ಬಂದಿರುವ ವಾರಾಹಿ ಕಾಲುವೆ ನೀರನ್ನು ಸಮರ್ಪಕವಾಗಿ ಬಳಸಿಕೊಳ್ಳುವ ಬಗ್ಗೆ ಯೋಜನೆಯನ್ನು ಸಿದ್ದಪಡಿಸುವ ಜತೆಗೆ ಗ್ರಾಮದಲ್ಲಿನ ಮದಗ ಹಾಗೂ ಕಿಂಡಿ ಅಣೆಕಟ್ಟು ಬಲಪಡಿಸುವುದು. ಹಾಗಿದ್ದರೆ ಮಾತ್ರ ಅಂತರ್ಜಲಮಟ್ಟ ವೃದ್ಧಿಗೊಂಡು ಶಾಶ್ವತ ಪರಿಹಾರ ಸಿಗಬಹುದು.

ಕಳೆದ ಬೇಸಗೆಯಲ್ಲಿ ತೀವ್ರವಾಗಿ ಕುಡಿಯುವ ನೀರಿನ ಸಮಸ್ಯೆ ಇದ್ದಲ್ಲಿ “ಉದಯವಾಣಿ’ಯು ಭೇಟಿ ಕೊಟ್ಟು, “ಜೀವಜಲ’ ಎನ್ನುವ ಸರಣಿಯಡಿ ಸಾಕ್ಷಾತ್‌ ವರದಿಗಳನ್ನು ಪ್ರಕಟಿಸಿತ್ತು. ಈ ಬಾರಿಯ ಬೇಸಗೆಯಲ್ಲಿ ನೀರಿನ ಸಮಸ್ಯೆಯ ನಿವಾರಣೆಗೆ ಸ್ಥಳೀಯ ಪಂಚಾಯತ್‌ ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಯಾವೆಲ್ಲ ಪರಿಹಾರ ಕ್ರಮಗಳನ್ನು ಕೈಗೊಂಡಿದ್ದಾರೆ? ಮುಂದೆ ಆಗಬೇಕಾದ ಪ್ರಮುಖ ಕ್ರಮಗಳೆಲ್ಲದರ ಕುರಿತಾದ ಸರಣಿ ಇದು.

ಸೂಕ್ತ ಕ್ರಮ
ಗ್ರಾ.ಪಂ. ವತಿಯಿಂದ ಸಾಗಿನಗುಡ್ಡೆಯ ಭಾಗದಲ್ಲಿ ಈ ಹಿಂದೆ ಕೊಳವೆ ಬಾವಿ ತೋಡಲಾಗಿದೆ. ಆದರೂ ಅದು ಯಶಸ್ವಿಯಾಗಲಿಲ್ಲ. ಈ ಬಾರಿಯೂ ಸಮಸ್ಯೆಗಳಿರುವ 2 ಕಡೆಗಳಲ್ಲಿ ಕೊಳವೆ ಬಾವಿ ನಿರ್ಮಿಸುವ ಬಗ್ಗೆ ಸ್ಥಳ ಗುರುತಿಸಲಾಗಿದೆ . ಕುಡಿಯುವ ನೀರು ಪೂರೈಕೆಗೆ ಸೂಕ್ತ ಕ್ರಮಕೈಗೊಳ್ಳುತ್ತೇವೆ .
– ಗಂಗೆ ಕುಲಾಲ್ತಿ
ಅಧ್ಯಕ್ಷರು ,ಗ್ರಾಮ ಪಂಚಾಯತ್‌,ಕೊರ್ಗಿ

ಮಿತವಾಗಿ ಬಳಸಿ
ಗ್ರಾಮ ಪಂಚಾಯತ್‌ ವ್ಯಾಪ್ತಿಯ ಕೊರ್ಗಿ ಹಾಗೂ ಹೆಸ್ಕಾತ್ತೂರು ಗ್ರಾಮಗಳು ಸೇರಿ ಸುಮಾರು 168 ಮನೆಗಳಿಗೆ ನಳ್ಳಿ ನೀರಿನ ಸಂಪರ್ಕವನ್ನು ಕಲ್ಪಿಸಲಾಗಿದೆ. ಬೇಸಗೆಯಲ್ಲಿನೀರಿನ ಬೇಡಿಕೆಗಳಿವೆ, ಆದರೆ
ಸಾರ್ವಜನಿಕರು ಜೀವ ಜಲವನ್ನು ಮಿತ ಬಳಕೆ ಮಾಡುವ ಮಾರ್ಗವನ್ನು ಅನುಸರಿಸಬೇಕಾಗಿದೆ.
– ಸುಧಾಕರ ಶೆಟ್ಟಿ ಗುಡ್ಡಮ್ಮಾಡಿ
ಪಿಡಿಒ, ಗ್ರಾ.ಪಂ. ಕೊರ್ಗಿ

-ಟಿ.ಲೋಕೇಶ್‌ ಆಚಾರ್ಯ ತೆಕ್ಕಟ್ಟೆ

ಟಾಪ್ ನ್ಯೂಸ್

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9-tmpl

Malpe: ವಡಭಾಂಡೇಶ್ವರ ಭಕ್ತವೃಂದ; ಉತ್ತಿಷ್ಠ ಭಾರತ, ಸಾಧಕರಿಗೆ ಸಮ್ಮಾನ

8-pernankila

Pernankila ದೇವಾಲಯ ಬ್ರಹ್ಮಕುಂಭಾಭಿಷೇಕ ಸಂಪನ್ನ

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

Udupi: ನೇಣು ಬಿಗಿದು ಆತ್ಮಹತ್ಯೆ

Udupi: ನೇಣು ಬಿಗಿದು ಆತ್ಮಹತ್ಯೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

13-good-friday

ಶುಭ ಶುಕ್ರವಾರ: ಸಾಮಾಜಿಕ ನ್ಯಾಯದ ಪ್ರತೀಕ ಯೇಸು ಕ್ರಿಸ್ತ

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

12-kejriwal

Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.