ಹಟ್ಟಿಯಂಗಡಿ ಗ್ರಾಮದಾದ್ಯಂತ ನೀರಿಗೆ ಹಾಹಾಕಾರ

ಬಾವಿಗಳಲ್ಲಿ ನೀರಿಲ್ಲ ; ಇಡೀ ಗ್ರಾಮಕ್ಕೆ ಟ್ಯಾಂಕರ್‌ ನೀರು ಪೂರೈಕೆ

Team Udayavani, May 14, 2019, 6:00 AM IST

1005KDLM2PH1

ಬಾವಿ ಇದ್ದರೂ ನೀರಿಲ್ಲ ಎನ್ನುತ್ತಿರುವ ಸ್ಥಳೀಯ ನಿವಾಸಿಗಳು.

ಹಟ್ಟಿಯಂಗಡಿ ಪಂಚಾಯತ್‌ಗೆ ಕೆಂಚನೂರು, ಕನ್ಯಾನ, ಹಟ್ಟಿಯಂಗಡಿ ಮೂರು ಗ್ರಾಮಗಳಿದ್ದು 114 ಕೆರೆಗಳು, 559 ಬಾವಿಗಳು ಇವೆ. 338 ಕುಟುಂಬಗಳು, 1,897 ಜನಸಂಖ್ಯೆಯಿದೆ. 120ರಷ್ಟು ನಳ್ಳಿನೀರಿನ ಸಂಪರ್ಕಗಳಿದ್ದು ಇಡೀ ಗ್ರಾಮದಲ್ಲಿ ನೀರಿನ ಬೇಡಿಕೆಯಿದೆ.

ಕುಂದಾಪುರ: ಇಲ್ಲಿ ತೀರಾ ಈಚಿನವರೆಗೆ ನೀರಿನ ಸಮಸ್ಯೆ ಇರಲಿಲ್ಲ. ಪಂಚಾಯತ್‌ ನೀರಿಗಿಂತ ಖಾಸಗಿ ನೀರು ನಂಬಿದವರೇ ಅಧಿಕ ಸಂಖ್ಯೆಯಲ್ಲಿದ್ದಾರೆ. ಬಹುತೇಕ ಮನೆಗಳಲ್ಲಿ ಬಾವಿಯಿದೆ. ಆದರೆ ಈ ಬಾರಿ ಅದೇನು ಬರಗಾಲ ಬಂದಿದೆಯೋ ಗೊತ್ತಿಲ್ಲ. ಯಾವ ಬಾವಿಗಳಲ್ಲೂ ನೀರಿಲ್ಲ. ಯಾರ ಮನೆಗೆ ಹೋದರೂ ನೀರಿಲ್ಲ. ಹೀಗಂತ ವಿವರಿಸುತ್ತಾರೆ ಹಟ್ಟಿಯಂಗಡಿಯ ಕಳವಿನ ಮನೆಯ ಮುತ್ತು ಅವರು.

ಜಲಕ್ಷಾಮದ ಕುರಿತು ಉದಯವಾಣಿ ಹಟ್ಟಿಯಂಗಡಿ ಗ್ರಾಮ ಪಂಚಾಯತ್‌ನ ಕಳವಿನ ಮನೆ, ಎಳಪನತೋಟ ಪ್ರದೇಶಗಳಿಗೆ ಭೇಟಿ ನೀಡಿದಾಗ ಪ್ರತೀ ಮನೆಯವರೂ ನೀರಿಗಾಗಿ ಹಾಹಾಕಾರವೆದ್ದಿದೆ ಎಂದರು. ಕಳವಿನ ಮನೆ ಭಾಗದಲ್ಲಿ ಸುಮಾರು 12 ಮನೆಗಳು, ಎಳಪನತೋಟ ಭಾಗದಲ್ಲಿ ಸುಮಾರು 18 ಮನೆಗಳಿವೆ. ಇಲ್ಲಿನ ಬಹುತೇಕ ಮನೆಗಳ ಸಮಸ್ಯೆಯೂ ನೀರಿನದ್ದೇ ಆಗಿದೆ.

ಮೊದಲು ಹೀಗಿರಲಿಲ್ಲ. ಇತ್ತೀಚಿನ ವರ್ಷ ಗಳಲ್ಲಿ ನೀರಿನ ಸಮಸ್ಯೆ ಹೆಚ್ಚಾಗಿದೆ ಎನ್ನುತ್ತಾರೆ ಚಂದ್ರ ಅವರು. ಮೊದಲು ಹೊಸ ಅಕ್ಕಿ ಊಟ ಆಗಿ 2 ತಿಂಗಳ ನಂತರ ಮಳೆ ಆಗಿ ಭತ್ತ ನಾಟಿ ಮಾಡಿದ್ದಿದೆ. ಆದರೆ ಈಗ ನೋಡಿ ಒಂದೇ ಬೆಳೆ, ಆಮೇಲೆ ನೀರೇ ಇಲ್ಲ. ಬೇಸಗೆಯಲ್ಲಿ ನೀರಿನ ಹೆಸರು ಹೇಳುವುದೇ ಕಷ್ಟ ಎಂದಾಗಿದೆ ಎನ್ನುತ್ತಾರೆ ಕೊರಗ ಅವರು. ನಳ್ಳಿಯಲ್ಲಿ ನೀರು ಬರುವುದಿಲ್ಲ. ಕೆಲವು ಮನೆ ಯವರು ಬಾವಿ ಇದೆ ಎಂದು ನಳ್ಳಿ ಸಂಪರ್ಕ ಪಡೆದಿಲ್ಲ. ಈಗ ನೋಡಿದರೆ ನಳ್ಳಿಯೂ ಇಲ್ಲ, ಬಾವಿಯೂ ಇಲ್ಲ. ಟ್ಯಾಂಕರ್‌ ನೀರೂ ಸಿಕ್ಕಿಲ್ಲ ಎಂದಾಗಿದೆ ಎನ್ನುತ್ತಾರೆ ಚಂದ್ರ ಅವರು.

ಆಶಾವಾದ
ಸೌಕೂರು ಸಿದ್ದಾಪುರ ಏತ ನೀರಾವರಿಗೆ, ವಾರಾಹಿ ನೀರಿಗಾಗಿ ಸರಕಾರ ಬಜೆಟ್‌ನಲ್ಲಿ 50 ಕೋ.ರೂ. ಅನುದಾನ ಮೀಸಲಿಟ್ಟಿದೆ. ಇದರಿಂದ ಈ ಭಾಗದ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ದೊರೆಯಲಿದೆ ಎನ್ನುವ ನಿರೀಕ್ಷೆ ಈ ಭಾಗದ ಜನರದ್ದು.

ನೀರಿಲ್ಲ
ಕೆಂಚನೂರು, ಕದರಿಗುಡ್ಡ, ನೆಂಪು, ಗುಡ್ರಿ, ಎಲ್ಕೋಡು, ಬಟ್ರಾಡಿ, ಜಾಡುಕಟ್ಟು, ಮಾವಿನಕಟ್ಟೆ, ಕಾಂಜೂರು, ಜನತಾ ಕಾಲನಿಗಳಲ್ಲಿ ನೀರಿನ ಸಮಸ್ಯೆ ತೀವ್ರವಾಗಿದೆ.
ಪಂಚಾಯತ್‌ ಲೆಕ್ಕದಲ್ಲಿ 850 ಅಡಿ ಕೊರೆದು ಎರಡು ಕೊಳವೆ ಬಾವಿ ತೆಗೆದರೂ ನೀರು ಸಿಕ್ಕಿಲ್ಲ. ಒಟ್ಟು 6 ಕೊಳವೆ ಬಾವಿಗಳಿದ್ದರೂ ಉಪಯೋಗಕ್ಕೆ ಸಿಕ್ಕಿರುವುದು 2 ಮಾತ್ರ. ಪಂಚಾಯತ್‌ನದ್ದು 4 ತೆರೆದ ಬಾವಿಗಳಿದ್ದು ಕುಡಿಯುವ ನೀರಿಗೆ ಆಶ್ರಯವಾಗಿದೆ. ಆದರೆ ಇಡೀ ಗ್ರಾಮದಿಂದ ಬೇಡಿಕೆ ಇರುವ ಕಾರಣ ಸಾಲುತ್ತಿಲ್ಲ.

ವಾರ್ಡ್‌ನವರ ಬೇಡಿಕೆ
– ಟ್ಯಾಂಕರ್‌ ಮೂಲಕ ಕೊಡುವ ನೀರು ಎಲ್ಲರಿಗೂ ನೀಡಬೇಕು.
– ಕೊಡುವ ನೀರಿನ ಪ್ರಮಾಣದ ಮಿತಿ ಹೆಚ್ಚಿಸಬೇಕು.
– ಶುದ್ಧ ಕುಡಿಯುವ ನೀರು ಕೊಡಬೇಕು.
– ಶಾಶ್ವತ ಯೋಜನೆ ರೂಪಿಸಬೇಕು.

ನೀರು ಖರೀದಿ
ಸತೀಶ್‌ ಅವರ ಮನೆಯಲ್ಲಿ ಮದುವೆ ಕಾರ್ಯಕ್ರಮ ಇತ್ತು. ಬಾವಿ ಇದ್ದರೂ ನೀರಿಲ್ಲ. ಕೊನೆಗೆ ಟ್ಯಾಂಕರ್‌ನಲ್ಲಿ ಹಣ ಕೊಟ್ಟು ನೀರು ಖರೀದಿಸಿ ಮದುವೆ ಸಮಾರಂಭ ನಡೆಸಲಾಯಿತು. ರಾಶಿ ಹಾಕಿದ ಬಟ್ಟೆಗಳು ನೋಡಿ ಹಾಗೆಯೇ ಇದೆ. ಒಗೆಯಲು ನೀರಿಲ್ಲ. ಪಾತ್ರೆ ತೊಳೆಯದೇ ಗೊತ್ತಿಲ್ಲ. ಪಡುವ ಪಾಡು ನೋಡಿ ಎನ್ನುತ್ತಾರೆ ಅವರು.

ಪರ್ಯಾಯ ಇಲ್ಲ
3-4 ದಿನಕ್ಕೊಮ್ಮೆ ನಳ್ಳಿಯಲ್ಲಿ ನೀರು ಬರುತ್ತದೆ. ಅದು ಯಾವುದಕ್ಕೂ ಸಾಲುವುದಿಲ್ಲ. ಸ್ವಂತ ಬಾವಿಗಳು ಅನೇಕರ ಮನೆ ಸಮೀಪ ಇದ್ದರೂ ಅವುಗಳಲ್ಲಿ ಎಂದೋ ನೀರಾರಿದೆ. ನಮ್ಮಲ್ಲಿರುವ ನೀರನ್ನೇ ಆಚೀಚೆ ಮನೆಯವರಿಗೂ ಅಷ್ಟಿಷ್ಟು ಎಂದು ಈ ವಠಾರದಲ್ಲಿ ಕೊಡಲಾಗುತ್ತಿದೆ. ನೀರು ಪ್ರಕೃತಿ ಕೊಟ್ಟದ್ದು. ಅದಕ್ಕೆ ಪರ್ಯಾಯ ಇಲ್ಲ ತಾನೇ ಎನ್ನುತ್ತಾರೆ ರಾಜು ಅವರು.

ನೀರು ಸಾಕಾಗುತ್ತಿಲ್ಲ
ಪಂಚಾಯತ್‌ನಿಂದ ನೀರು ಕೊಡುತ್ತಿದ್ದರೂ ಅದು ಸಾಕಾಗುತ್ತಿಲ್ಲ. ಸಾಕಷ್ಟು ಪ್ರಮಾಣದಲ್ಲಿ ನೀರು ಕೊಡಬೇಕು.
-ಲಲಿತಾ, ಕಳವಿನಮನೆ

ಅರ್ಜಿ ಬೇಕಿಲ್ಲ
ಟ್ಯಾಂಕರ್‌ ನೀರು ನೀಡಲು ಅರ್ಜಿ ಬೇಕೆಂದೇ ಇಲ್ಲ. ಅರ್ಜಿ ಇಲ್ಲದೆಯೂ ನೀಡಲಾಗುತ್ತಿದೆ. ಇಡೀ ಗ್ರಾಮದಲ್ಲಿ ನೀರಿನ ಬೇಡಿಕೆಯಿದ್ದು ಇಷ್ಟರವರೆಗೆ ಇಂತಹ ತೀವ್ರ ಸಮಸ್ಯೆ ಉಂಟಾಗಿರಲಿಲ್ಲ. 2 ಟ್ಯಾಂಕರ್‌ಗಳಲ್ಲಿ ನಿರಂತರವಾಗಿ ನೀರು ಪೂರೈಸಲಾಗುತ್ತಿದೆ. ಯಾರಿಗೂ ಕುಡಿಯುವ ನೀರು ಕೊಡುವುದಿಲ್ಲ ಎಂದು ಹೇಳುವ ಪ್ರಶ್ನೆಯೇ ಇಲ್ಲ.
– ರಿಯಾಜ್‌ ಅಹ್ಮದ್‌,
ಪಂ. ಅಭಿವೃದ್ಧಿ ಅಧಿಕಾರಿ

ಉದಯವಾಣಿ ಆಗ್ರಹ
ಟ್ಯಾಂಕರ್‌ ನೀರಿನ ಪ್ರಮಾಣ ಹೆಚ್ಚಿಸಬೇಕು. ನಳ್ಳಿಯಲ್ಲಿ ಬರದಿದ್ದರೆ, ಬಾವಿಯಲ್ಲಿ ನೀರಿಲ್ಲದಿದ್ದರೆ ಟ್ಯಾಂಕರ್‌ ನೀರು ನಿರಾಕರಿಸಬಾರದು.

ಮಾಹಿತಿ ನೀಡಿ
ನೀರಿನ ತೀವ್ರ ಸಮಸ್ಯೆಇದ್ದಲ್ಲಿ ತಮ್ಮ ಹೆಸರಿನ ಸಹಿತ
“ಉದಯವಾಣಿ’ ವಾಟ್ಸಪ್‌ ನಂಬರ್‌ 9148594259 ಬರೆದು ಕಳುಹಿಸಿ.

-ಲಕ್ಷ್ಮೀ ಮಚ್ಚಿನ

ಟಾಪ್ ನ್ಯೂಸ್

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

jaಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ

ಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.