ಕೇಳುವವರೇ ಇಲ್ಲದ ಕಲ್ಲಂಗಡಿ ಹಣ್ಣಿಗೆ ಮುಂಗಡ ಬುಕ್ಕಿಂಗ್‌

ಉದಯವಾಣಿ ರೈತ ಸೇತು

Team Udayavani, Apr 13, 2020, 1:42 PM IST

ಕೇಳುವವರೇ ಇಲ್ಲದ ಕಲ್ಲಂಗಡಿ ಹಣ್ಣಿಗೆ ಮುಂಗಡ ಬುಕ್ಕಿಂಗ್‌

ಕೋಟ/ಬೈಂದೂರು: ವಾರದ ಹಿಂದೆ ಲಾಕ್‌ಡೌನ್‌ ಸಮಸ್ಯೆಯಿಂದಾಗಿ ಕೇಳುವವರಿಲ್ಲದೆ ಗದ್ದೆಯಲ್ಲಿ ಹಾಳಾಗುವ ಪರಿಸ್ಥಿತಿಯಲ್ಲಿದ್ದ ಟನ್‌ಗಟ್ಟಲೆ ಕಲ್ಲಂಗಡಿ ಹಣ್ಣಿಗೆ ಇದೀಗ ಮುಂಗಡ ಬುಕ್ಕಿಂಗ್‌ ಆರಂಭವಾಗಿದೆ.

ಉದಯವಾಣಿ ರೈತಸೇತು ಅಂಕಣದ ಫಲವಾಗಿ, ಪತ್ರಿಕೆಯಲ್ಲಿ ಪ್ರಕಟವಾದ ವಿವರದಿಂದ ಹಲವು ಮಂದಿಯ ಟನ್‌ಗಟ್ಟಲೆ ಕಲ್ಲಂಗಡಿಗೆ ಈಗ ಬೇಡಿಕೆ ಬಂದಿದೆ. ಲಾಕ್‌ಡೌನ್‌ ಕಾರಣದಿಂದ ಬೆಳೆಗಾರರು ತಮ್ಮ ಬೆಳೆ ಕುರಿತು ಯಾರೊಂದಿಗೂ ಹೇಳಿಕೊಳ್ಳಲು ಅವಕಾಶವಿರಲಿಲ್ಲ. ಈಗ ರೈತ ಸೇತು ಬೆಳೆಗಾರರ ಮಾಹಿತಿಯನ್ನು ಕೊಳ್ಳುವ ಗ್ರಾಹಕರಿಗೆ ರವಾನಿಸುತ್ತಿದೆ.

ಸಾಸ್ತಾನ ಪಾಂಡೇಶ್ವರದ ಸದಾಶಿವ ಪೂಜಾರಿಯವರು ಪ್ರಥಮ ಹಂತದಲ್ಲಿ ಬೆಳೆದ ಕಲ್ಲಂಗಡಿಯನ್ನು ಸಾಮಾಜಿಕ ಜಾಲತಾಣದ ಸಹಾಯದಿಂದ ಮಾರಿದ್ದು, ಅನಂತರ ಎ. 8ರಂದು ತಮ್ಮ ಎರಡನೇ ಹಂತದಲ್ಲಿ ಬೆಳೆದ ಹಣ್ಣಿಗೆ ರೈತಸೇತುವಿನಲ್ಲಿ ಮಾಹಿತಿ ಪ್ರಕಟಿಸಿದ್ದರು. ಇದನ್ನು ಕಂಡ 20ಕ್ಕೂ ಹೆಚ್ಚು ಮಂದಿ ಕರೆ ಮಾಡಿ ಕಲ್ಲಂಗಡಿಗೆ ಬೇಡಿಕೆ ಸಲ್ಲಿಸಿದ್ದಾರೆ.

ಇದೇ ಅನುಭವ ಕೋಡಿತಲೆಯ ಕೊರಗ ಪೂಜಾರಿಯವರದ್ದು. ಕಲ್ಲಂಗಡಿ ಕಟಾವಿಗೆ ಬಂದಿರುವ ಹಿನ್ನೆಲೆಯಲ್ಲಿ ಎ.10ರಂದು ಪತ್ರಿಕೆಯಲ್ಲಿ ವಿವರ ಪ್ರಕಟಿಸಿದ್ದರು. ಅವರಿಗೂ ಸುಮಾರು 15ಕ್ಕೂ ಹೆಚ್ಚು ಮಂದಿ ಕರೆ ಮಾಡಿ ವಿಚಾರಿಸಿದ್ದು, ಮುಂಗಡ ಬುಕ್ಕಿಂಗ್‌ ಮಾಡಿಕೊಳ್ಳುತ್ತಿದ್ದಾರೆ.

ರೈತಸೇತು ಅಂಕಣದಿಂದ ಅನುಕೂಲವಾಗಿದೆ
ಪತ್ರಿಕೆಯಲ್ಲಿ ಪ್ರಕಟವಾದ ವಿವರವನ್ನು ನೋಡಿ ಸಾಕಷ್ಟು ಮಂದಿ ಕಲ್ಲಂಗಡಿಗೆ ಬೇಡಿಕೆ ಸಲ್ಲಿಸಿದ್ದಾರೆ. ಹೀಗಾಗಿ ದ್ವಿತೀಯ ಹಂತದ ಕಟಾವಿಗೆ ಮುಂಗಡ ಪಡೆದು ನೀಡುತ್ತಿದ್ದೇನೆ. ರೈತಸೇತು ಅಂಕಣದಿಂದ ಅನುಕೂಲವಾಗಿದೆ.
– ಸದಾಶಿವ ಪೂಜಾರಿ, ಬೆಳೆಗಾರರು

ಹೊಸ ಖರೀದಿದಾರರ ಪರಿಚಯದಿಂದ ಅನುಕೂಲ
ಇಷ್ಟು ವರ್ಷ ಸ್ಥಳೀಯ ಕೆಲವರಲ್ಲೇ ಹಣ್ಣನ್ನು ಮಾರಬೇಕಿತ್ತು. ರೈತಸೇತು ಅಂಕಣದಿಂದ ಹೆಚ್ಚು ಮಂದಿ ಖರೀದಿದಾರರ ಪರಿಚಯವಾಗಿದ್ದು, ನಮಗೂ ಅನುಕೂಲವಾಗಲಿದೆ. ಮುಂಗಡ ಬುಕ್ಕಿಂಗ್‌ ಮಾಡಿಕೊಳ್ಳಲು ಸಹಾಯವಾಗಿದೆ. 
– ಕೊರಗ ಪೂಜಾರಿ, ಬೆಳೆಗಾರರು
***
ದೊಂಬೆ ಕೃಷಿಕರ ಕಲ್ಲಂಗಡಿಗೆ ಬಂತು ಬೇಡಿಕೆ  
ಬೈಂದೂರು: ಶಿರೂರು ಸಮೀಪದ ದೊಂಬೆಯ ಜನಾರ್ದನ ಬಿಲ್ಲವ ಹಾಗೂ ಪರಮೇಶ್ವರ ಪೂಜಾರಿ ಅವರ ಕಲ್ಲಂಗಡಿಗೂ ಅಧಿಕ ಬೇಡಿಕೆ ಬಂದಿದೆ.

ಸುಮಾರು ಮೂರು ಎಕರೆಗೂ ಹೆಚ್ಚು ಪ್ರದೇಶದಲ್ಲಿ ಕಲ್ಲಂಗಡಿ ಬೆಳೆದಿದ್ದರು. ಮಾರ್ಚ್‌ ಕೊನೆಯ ವಾರದಲ್ಲಿ ಕಟಾವಿಗೆ ಸಿದ್ಧವಾಗಿತ್ತು. ಆದರೆ ಅದೇ ಸಂದರ್ಭದಲ್ಲಿ ಲಾಕ್‌ಡೌನ್‌ ಘೋಷಣೆಯಾದ ಕಾರಣ ಇಡೀ ಮಾರುಕಟ್ಟೆಯೇ ಕುಸಿಯಿತು.

ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗಿ ಕಂಗಾಗಲಾಗಿದ್ದರು. ಈ ಹೊತ್ತಿನಲ್ಲೇ ಉದಯವಾಣಿಯ ರೈತ ಸೇತುವಿನ ಮೂಲಕ ಬೆಳೆಯ ವಿವರ ನೀಡಿದ ಬಳಿಕ ಅನೇಕ ಕರೆಗಳು ಬಂದವು. ಮಾತ್ರವಲ್ಲದೆ 20 ರಿಂದ 25 ಟನ್‌ ಕಲ್ಲಂಗಡಿ ಹಣ್ಣು ಉತ್ತಮ ಧಾರಣೆಗೆ ಮಾರಾಟವಾಗಿದೆ.

ನಿರೀಕ್ಷಿಸಿರಲಿಲ್ಲ
ಈ ಬಾರಿ ಕಲ್ಲಂಗಡಿಗೆ ಉತ್ತಮ ಮಾರುಕಟ್ಟೆ ಹಾಗೂ ದರ ದೊರೆಯುವ ಸಾಧ್ಯತೆಯಿತ್ತು.ಕೋವಿಡ್ ಹಿನ್ನೆಲೆಯಲ್ಲಿ ಕಟಾವಿಗೆ ಬಂದ ಹಣ್ಣುಗಳನ್ನು ಮಾರುಕಟ್ಟೆಯಿಲ್ಲದೇ ಏನು ಮಾಡುವುದು ಎಂಬ ಆತಂಕದಲ್ಲಿದ್ದೆವು. ದಿಕ್ಕು ತೋಚದಂತಾಗಿತ್ತು.

ಈ ಸಂದರ್ಭದಲ್ಲಿ ಉದಯವಾಣಿಯ ರೈತಸೇತುವಿನಲ್ಲಿ ವಿವರ ಕಳಿಸಿದ್ದೆವು, ಹೆಚ್ಚು ನಿರೀಕ್ಷಿಸಿರಲಿಲ್ಲ. ಆದರೆ ಅನೇಕ ದೂರವಾಣಿ ಕರೆಗಳು ಬಂದಲ್ಲವಲ್ಲದೇ, ಸಮಾಧಾನಕರವಾದ ದರದಲ್ಲಿ ರಖಂ ಮಾರಾಟವಾಗಿದೆ.ಇದರಿಂದಾಗಿ ಬೆಳೆದ ಹಣ್ಣುಗಳು ಗದ್ದೆಯಲ್ಲಿ ಕೊಳೆಯುವ ಸ್ಥಿತಿ ತಪ್ಪಿದೆ ಎನ್ನುತ್ತಾರೆ ಜನಾರ್ದನ ಬಿಲ್ಲವ ಬೇಲೆಮನೆ ಮತ್ತು ಪರಮೇಶ್ವರ ಪೂಜಾರಿ.

ನಿಮ್ಮ ಬೆಳೆ ಮಾಹಿತಿ ನೀಡಿ
ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಸಾವಿರಾರು ರೈತರು ತಾವು ಬೆಳೆದ ತರಕಾರಿ, ಹಣ್ಣು ಹಾಗೂ ಆಹಾರ ಬೆಳೆಗಳನ್ನು ಮಾರಲಾಗದೆ ಸಂಕಷ್ಟದಲ್ಲಿದ್ದಾರೆ. ಈ ಹಿನ್ನೆಲೆಯಲ್ಲಿ ಉದಯವಾಣಿಯು ಗ್ರಾಹಕರೊಂದಿಗೆ ಸಂಪರ್ಕ ಕಲ್ಪಿಸಲು ಮುಂದಾಗಿದೆ. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ರೈತರು, ತರಕಾರಿ ಬೆಳೆಗಾರರು ಈ ಅಂಕಣದ ಪ್ರಯೋಜನ ಪಡೆಯಬಹುದು. ತಮ್ಮ ಬೆಳೆ ಹಾಗೂ ಸಂಪರ್ಕ ಸಂಖ್ಯೆಯನ್ನು ನಮ್ಮ ವಾಟ್ಸÕಪ್‌ಗೆ ಕಳಿಸಿದರೆ ಪ್ರಕಟಿಸಲಾಗುವುದು. ನೀಡಬೇಕಾದ ಮಾಹಿತಿ: ಹೆಸರು, ಉತ್ಪನ್ನದ ಹೆಸರು, ಲಭ್ಯವಿರುವ ಬೆಳೆ ಪ್ರಮಾಣ, ಊರಿನ ಹೆಸರು, ಸಂಪರ್ಕ ಸಂಖ್ಯೆ, ಉತ್ಪನ್ನದ ಬೆಲೆ.

ವಾಟ್ಸಪ್‌ ಸಂಖ್ಯೆ ; 76187 74529

ಟಾಪ್ ನ್ಯೂಸ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

accident

Bramavara; ಹೆದ್ದಾರಿಯಲ್ಲಿ ಭೀಕರ ಅಪಘಾತ: ಲಾರಿಗೆ ಸಿಲುಕಿ ಬೈಕ್ ಸವಾರ ದುರ್ಮರಣ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

1-wqeqwew

BJP ನುಡಿದಂತೆ ನಡೆಯದ ಕೇಂದ್ರ ಸರಕಾರ, 15 ಲ.ರೂ. ಬಂದಿದೆಯೇ?: ಜೆ.ಪಿ. ಹೆಗ್ಡೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.