ನಾವುಂದ ಕುದ್ರು: ದಡ ಸೇರಲು ದೋಣಿಯೇ ಆಧಾರ


Team Udayavani, Jul 10, 2018, 6:00 AM IST

0907kdpp1.jpg

ವಿಶೇಷ ವರದಿ-  ಕುಂದಾಪುರ: ವೈಶಾಖದಲ್ಲಿ ನದಿಯಾಚೆಗಿನ ಮನೆಗೆ ತೆರಳಲು ದೋಣಿಯಲ್ಲಾದರೂ ಪ್ರಯಾಣಿಸ ಬಹುದಿತ್ತು. ಆದರೆ ಈಗ ಮಳೆಯಬ್ಬರ ಜೋರಿದೆ. ನದಿಯಲ್ಲಿ ನೀರಿನ ಮಟ್ಟವು ಹೆಚ್ಚಿದೆ. ಕುದ್ರುವಿನಿಂದ ನಾವುಂದಕ್ಕೆ ಅಥವಾ ನಾವುಂದದಿಂದ ಕುದ್ರುವಿಗೆ ಹೋಗುವುದಾದರೂ ಹೇಗೆ ? 

ಇದು ಸುತ್ತಲೂ ಹೊಳೆಯಿಂದ ಆವೃತವಾದ ನಾವುಂದದ ಗಣಪತಿ ದೇವಸ್ಥಾನದ ಸಮೀಪವಿರುವ ನಾವುಂದ ಕುದ್ರುವಿನ ನಿವಾಸಿ ಚಂದ್ರಶೇಖರ್‌ ಜೋಯಿಸರ ಪ್ರಶ್ನೆ. ಬೇಸಗೆಯಿರಲಿ ಅಥವಾ ಮಳೆಗಾಲವಿರಲಿ ಅನೇಕ ವರ್ಷಗಳಿಂದ ಈ ಕುದ್ರುವಿನ ನಿವಾಸಿಗಳಿಗೆ ದೋಣಿಯೊಂದೇ ಆಧಾರ. 

ನಾವುಂದ ಕುದ್ರುವಿನಲ್ಲಿ 7 ಮನೆಗಳಿದ್ದು, ಒಟ್ಟು ಸುಮಾರು 30 ಮಂದಿ ನೆಲೆಸಿದ್ದಾರೆ.  ಪ್ರತಿ ಮನೆಗಳಿಗೂ ಅಂದಾಜು ಎರಡೆರಡು ಎಕರೆಯಷ್ಟು ಜಾಗವಿದ್ದು, ಅದರಲ್ಲಿ ಸ್ವಲ್ಪ ಅಡಿಕೆ ತೋಟಗಳಿವೆ. ಅದು ಬಿಟ್ಟರೆ ಕುದ್ರುವಿನ ಈಚೆ ದಡಕ್ಕೆ ಬಂದು ಕೆಲಸ ಮಾಡಿದರೆ ಮಾತ್ರ ಜೀವನಾಧಾರಕ್ಕೆ ಏನಾದರೂ ಸಿಗುತ್ತದೆ. 

ಹಿಂದೆ ನಾವುಂದ ಗ್ರಾ.ಪಂ. ಒಂದು ದೋಣಿ ನೀಡಿತ್ತು. ಅದರಲ್ಲಿ ಪ್ರಯಾಣಿಸಿದವರು ಇಂತಿಷ್ಟು ಅಂತ ಹಣ ಕೊಡಬೇಕಾಗಿತ್ತು. ಆದರೆ ಈಗ ಪ್ರತಿ ಮನೆಗೊಂದು ದೋಣಿ ಇರುವುದರಿಂದ ಆ ಒಂದು ಚಿಂತೆ ಇಲ್ಲ. 

ತೂಗು ಸೇತುವೆಗೆ ಬೇಡಿಕೆ
ಕುದ್ರು ನಿವಾಸಿಗಳು ಅನೇಕ ಬಾರಿ ಸಂಬಂಧಪಟ್ಟ ಜನಪ್ರತಿನಿಧಿಗಳಿಗೆ, ಅಧಿಕಾರಿಗಳಿಗೆ ಸಾಕಷ್ಟು ಬಾರಿ ಸೇತುವೆ ಅಥವಾ ತೂಗು ಸೇತುವೆಗೆ ಬೇಡಿಕೆಯಿಟ್ಟರೂ ಈಡೇರುವ ಲಕ್ಷಣ ಕಾಣುತ್ತಿಲ್ಲ. ಸೇತುವೆಗೆ ಬೇಡಿಕೆಯಿದ್ದರೂ ಇಲ್ಲಿ 7 ಮನೆಗಳು ಮಾತ್ರ ಇರುವುದರಿಂದ ಸದ್ಯಕ್ಕಂತೂ ಸೇತುವೆ ನಿರ್ಮಾಣ ಕನಸು ನನಸಾಗುವ ಸಾಧ್ಯತೆಯಿಲ್ಲ. ಆದರೆ ಸೇತುವೆಯಿಲ್ಲದಿದ್ದರೂ ಕನಿಷ್ಠ ತೂಗು ಸೇತುವೆಯನ್ನಾದರೂ ಮಾಡಿ ಕೊಡಿ ಎನ್ನುವುದು ನಾವುಂದ ಕುದ್ರು ನಿವಾಸಿಗಳ ಬೇಡಿಕೆಯಾಗಿದೆ. 

ದೋಣಿಯೇ ಆಧಾರ
ಕುದ್ರುವಿನಲ್ಲಿ ಮನೆಯಿದ್ದರೂ ಬೇರೆ ಎಲ್ಲ ಚಟುವಟಿಕೆಗಳಿಗೆ ಈಚೆ ದಡದಲ್ಲಿರುವ ನಾವುಂದ ಪೇಟೆಗೆ ಬರಬೇಕು. ಕೆಲಸ, ದಿನಸಿ ಸಾಮಾನು, ಪಡಿತರ ಇನ್ನಿತರ ಯಾವುದೇ ವಸ್ತುಗಳನ್ನು ಖರೀದಿಸಬೇಕಾದರೂ ದೋಣಿಯ ಮೂಲಕವೇ ಬರಬೇಕು. ಈಗ ಮಳೆಗಾಲ ಬೇರೆ. ಉಕ್ಕಿ ಹರಿಯುತ್ತಿರುವ ನದಿಯಲ್ಲಿ ದೋಣಿಯ ಪಯಣವೇ ದುಸ್ತರವಾಗಿದೆ. ದ್ವಿಚಕ್ರ ಸೇರಿದಂತೆ ಇತರ ವಾಹನಗಳಿದ್ದರೂ ಈಚೆ ದಡದಲ್ಲಿಯೇ ಇಟ್ಟು ಹೋಗಬೇಕಾದ ಅನಿವಾರ್ಯ ಕುದ್ರು ನಿವಾಸಿಗಳದು. 

ತೂಗು ಸೇತುವೆಗೆ ಪ್ರಯತ್ನ
ಬೈಂದೂರು ಕ್ಷೇತ್ರದ ಅನೇಕ ಕಡೆಗಳಲ್ಲಿ ಕುದ್ರುಗಳಿಗೆ ಸೇತುವೆ ಬೇಡಿಕೆಯಿದೆ. ಹಂತ ಹಂತವಾಗಿ ಎಲ್ಲ ಕಡೆಗೆ ಸೇತುವೆ ಅಥವಾ ತೂಗು ಸೇತುವೆ  ಬೇಡಿಕೆಯನ್ನು ಈಡೇರಿಸುತ್ತೇನೆ. ನಾವುಂದ ಕುದ್ರುವಿನ ಜನರನ್ನು ಸಂಪರ್ಕಿಸಿ, ಶೀಘ್ರವೇ ತೂಗು ಸೇತುವೆ ನಿರ್ಮಿಸಲು ಪ್ರಯತ್ನಿಸುತ್ತೇನೆ. 
– ಬಿ.ಎಂ. ಸುಕುಮಾರ್‌ ಶೆಟ್ಟಿ, 
ಬೈಂದೂರು ಶಾಸಕರು

ಆಶ್ವಾಸನೆ ಮಾತ್ರ, ಈಡೇರಿಕೆ ಇಲ್ಲ
ನಾನು ಚಿಕ್ಕಂದಿನಿಂದ ಇದೇ ಕುದ್ರುವಿನಲ್ಲಿ ನೆಲೆಸಿದ್ದು, ಯಾವುದೇ ಸೇತುವೆಯಿಲ್ಲ. ತೂಗು ಸೇತುವೆಯೂ ಇಲ್ಲ. ಚುನಾವಣೆ ಬಂದಾಗೊಮ್ಮೆ ಎಲ್ಲರೂ ಹೇಳುತ್ತಾರೆ ಈ ಸಲ ಮಾಡಿಕೊಡುವ ಅಂತಾ. ಆದರೆ ಆ ಬಳಿಕ ಮರೆತೇ ಬಿಡುತ್ತಾರೆ. ದೋಣಿಯೇ ನಮಗೆ ಆಶ್ರಯವಾಗಿದೆ. ಈ ಸಲವಾದರೂ ಸೇತುವೆಯಲ್ಲದಿದ್ದರೂ, ತೂಗು ಸೇತುವೆಯನ್ನಾದರೂ ಮಾಡಿಕೊಡಲಿ.
– ಚಂದ್ರಶೇಖರ್‌ ಜೋಯಿಸ, 
ಕುದ್ರು ನಿವಾಸಿ

ಟಾಪ್ ನ್ಯೂಸ್

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Glanders infection: ಗ್ಲ್ಯಾಂಡರ್ಸ್‌ ಸೋಂಕು; ಬೆಂಗಳೂರು ತೊರೆದ ಕುದುರೆ ಮಾಲೀಕ, ಸವಾರ

Glanders infection: ಗ್ಲ್ಯಾಂಡರ್ಸ್‌ ಸೋಂಕು; ಬೆಂಗಳೂರು ತೊರೆದ ಕುದುರೆ ಮಾಲೀಕ, ಸವಾರ

Chain theft: ಒಂಟಿ ಮಹಿಳೆಯರ ಸರ ಕದಿಯುತ್ತಿದ್ದ 5 ಬಂಧನ; 10.82 ಲಕ್ಷದ ವಸ್ತು ಜಪ್ತಿ

Chain theft: ಒಂಟಿ ಮಹಿಳೆಯರ ಸರ ಕದಿಯುತ್ತಿದ್ದ 5 ಬಂಧನ; 10.82 ಲಕ್ಷದ ವಸ್ತು ಜಪ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.