ಸೇವೆಯನ್ನು ಗುರುತಿಸುವ ಮನಸ್ಥಿತಿ ನಮ್ಮಲ್ಲಿ ಬೆಳೆಯಬೇಕಾಗಿದೆ- ಶ್ರೀಲತಾ ಸುರೇಶ್‌ ಶೆಟ್ಟಿ


Team Udayavani, Nov 26, 2019, 7:40 PM IST

heskuttur

ತೆಕ್ಕಟ್ಟೆ : ನಮ್ಮ ಶ್ರೇಷ್ಠವಾದ ಭಾರತೀಯ ಸಂಸ್ಕೃತಿ ಹಾಗೂ ಸಂಸ್ಕಾರದ ನೆಲೆಯ ಮೇಲೆ ರಾಷ್ಟ್ರ ಸದೃಢವಾಗಿ ನಿಂತಿದ್ದು , ಇಡೀ ವಿಶ್ವವನ್ನೇ ತನ್ನೆಡೆಗೆ ಸೆಳೆಯುತ್ತಿದೆ. ಭಾರತೀಯ ಧರ್ಮ ಪರಂಪರೆಯಲ್ಲಿ ಎಲ್ಲಾ ಧರ್ಮ ಹಾಗೂ ಸಂಸ್ಕೃತಿಗಳನ್ನು ಗೌರವಿಸುತ್ತಾ ಬಂದಿದ್ದು , ವಿವಿಧತೆಯಲ್ಲಿ ಏಕತೆಯನ್ನು ಕಂಡುಕೊಂಡ ರಾಷ್ಟ್ರ ನಮ್ಮದು. ಅಂತಹ ಅತ್ಯಮೂಲ್ಯವಾದ ಸಂಸ್ಕೃತಿಗಳ ವಿನಿಮಯಕ್ಕೆ ಗ್ರಾಮೀಣ ಭಾಗದ ಶಾಲೆಗಳಲ್ಲಿ ಅವಕಾಶ ಕಲ್ಪಿಸಿರುವುದು ನಿಜಕ್ಕೂ ಹೆಮ್ಮೆಯ ವಿಚಾರ. ನಮ್ಮ ಸಂಸ್ಕೃತಿಗಳಿಗೆ ಧಕ್ಕೆಯಾಗದಂತೆ ನೋಡಿಕೊಳ್ಳುವ ಜತೆಗೆ ಸೇವೆಯನ್ನು ಗುರುತಿಸುವ ಮನಸ್ಥಿತಿ ನಮ್ಮಲ್ಲಿ ಬೆಳೆಯಬೇಕಾದ ಅನಿವಾರ್ಯತೆ ಇದೆ ಎಂದು ಜಿಲ್ಲಾ ಪಂಚಾಯತ್‌ ಸದಸ್ಯೆ ಶ್ರೀಲತಾ ಸುರೇಶ್‌ ಶೆಟ್ಟಿ ಹೇಳಿದರು.

ಅವರು ನ.26 ರಂದು ಹೆಸ್ಕಾತ್ತೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಎಫ್‌ಎಸ್‌ಎಲ್‌ ಇಂಡಿಯಾ ಸಂಸ್ಥೆಯ ಅಂತರಾಷ್ಟ್ರೀಯ ಸ್ವಯಂ ಸೇವಕರ ಸಂಸ್ಕೃತಿ ವಿನಿಮಯ ಹಾಗೂ ಸಮುದಾಯ ಸೇವಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ತಾ.ಪಂ.ಸದಸ್ಯೆ ಶೈಲಾಶ್ರೀ ಶೆಟ್ಟಿ ಮಾತನಾಡಿ, ವಿದ್ಯಾರ್ಥಿಗಳಿಗೆ ಕಲಿಕೆಯ ಜತೆಗೆ ನಮ್ಮ ಧರ್ಮ ಸಂಸ್ಕೃತಿಗಳ ಬಗ್ಗೆ ಅರಿವು ಮೂಡಿಸುವ ಬಗ್ಗೆ ಗಂಭೀರ ಚಿಂತನೆ ಅಗತ್ಯ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಕೊರ್ಗಿ ಗ್ರಾ.ಪಂ.ಅಧ್ಯಕ್ಷೆ ಗಂಗೆ ಕುಲಾಲ್‌ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಕಾರ್ಯಕ್ರಮದಲ್ಲಿ ಗ್ರಾ.ಪಂ.ಸದಸ್ಯೆ ಲಲಿತಾ ಭಟ್‌, ಸಂಜೀವ ಕುಲಾಲ್‌, ಪಿಡಿಒ ಸುಧಾಕರ ಶೆಟ್ಟಿ ಗುಡ್ಡಾಮ್ಮಾಡಿ, ಎಸ್‌ಡಿಎಂಸಿ ಅಧ್ಯಕ್ಷ ವಿಠಲ್‌ ಕುಲಾಲ್‌, ಕುಂದಾಪುರ ರೋಟರಿಕ್ಲಬ್‌ ರಿವರ್‌ ಸೈಡ್‌ನ‌ ಅಧ್ಯಕ್ಷ ರಾಜು ಪೂಜಾರಿ, ಹೆಸ್ಕಾತ್ತೂರು ಬಾಲ ವಿಕಾಸ ಕೇಂದ್ರದ ಅಧ್ಯಕ್ಷಡ ಗಾಯತ್ರಿ ಕೆದ್ಲಾಯ, ಹೆಸ್ಕಾತ್ತೂರು ಸ.ಹಿ.ಪ್ರಾಶಾಲೆಯ ಮುಖ್ಯ ಶಿಕ್ಷಕ ಶೇಖರ್‌ ಕುಮಾರ್‌, ಶಿರಿಯಾರ ಸ.ಹಿ.ಪ್ರಾಶಾಲೆಯ ಮುಖ್ಯ ಶಿಕ್ಷಕ ಸಾಧು ಶೇರೆಗಾರ್‌, ಎಫ್‌ಎಸ್‌ಎಲ್‌ ಇಂಡಿಯಾ ಸಂಸ್ಥೆಯ ಹಿರಿಯ ಕಾರ್ಯಕ್ರಮ ಪ್ರಬಂದಕ ವೆಂಕಟೇಶ್‌ ಎಂ. , ಜರ್ಮನ್‌ ಶàಕ್ಷಕರಾದ ಮಥಿಯಾಸ್‌, ಲೀನಾ ಹಾಗೂ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.

ಇದೇ ಸಂದರ್ಭದಲ್ಲಿ ಶಾಲಾ ವಿದ್ಯಾರ್ಥಿಗಳಿಂದ ಭಾರತೀಯ ಸಂಸ್ಕೃತಿ ಹಾಗೂ ಜರ್ಮನ್‌ ಹಾಗೂ ಸ್ವೀಡನ್‌ ಶಿಕ್ಷಕರಿಂದ ಜರ್ಮನ್‌ ಸಂಸ್ಕೃತಿಯ ಸಾಂಸ್ಕೃತಿಕ ಕಾರ್ಯಕ್ರಮಗಳು ಪ್ರದರ್ಶನಗೊಂಡಿತು.

ಎಫ್‌ಎಸ್‌ಎಲ್‌ ಇಂಡಿಯಾ ಸಂಸ್ಥೆಯ ಚೀಫ್‌ ಕೋ ಆರ್ಡಿನೇಟರ್‌ ದಿನೇಶ್‌ ಸ್ವಾಗತಿಸಿ, ಹಿರಿಯ ಕಾರ್ಯಕ್ರಮ ಪ್ರಬಂದಕ ವೆಂಕಟೇಶ್‌ ಪ್ರಾಸ್ತಾವಿಕವಾಗಿ ಮಾತನಾಡಿ, ಶಿಕ್ಷಕ ಅಶೋಕ್‌ ತೆಕ್ಕಟ್ಟೆ ನಿರೂಪಿಸಿ, ವಂದಿಸಿದರು.

ಜರ್ಮನ್‌ ಹಾಗೂ ಸ್ವೀಡನ್‌ ಶಿಕ್ಷಕರನ್ನು ಪೂರ್ಣಕುಂಭದೊಂದಿಗೆ ಸ್ವಾಗತಿಸಿದ ವಿದ್ಯಾರ್ಥಿಗಳು .

ಭಾರತೀಯ ಸಂಸ್ಕೃತಿಯ ಹಾಗೂ ಇಲ್ಲಿನ ಪರಂಪರೆಯ ಅಧ್ಯಯನಕ್ಕಾಗಿ ಭಾರತಕ್ಕೆ ಆಗಮಿಸಿದ ಜರ್ಮನ್‌ ಹಾಗೂ ಸ್ವೀಡನ್‌ ದೇಶದ ಸುಮಾರು 40ಕ್ಕೂ ಅಧಿಕ ವಿದೇಶಿ ಶಿಕ್ಷಕರು ಮೊದಲ ಬಾರಿಗೆ ಗ್ರಾಮೀಣ ಭಾಗದ ಹೆಸ್ಕಾತ್ತೂರು ಸರಕಾರಿ ಪ್ರಾಥಮಿಕ ಶಾಲೆಗೆ ಆಗಮಿಸುತ್ತಿದ್ದಂತೆ ಇಲ್ಲಿನ ವಿದ್ಯಾರ್ಥಿಗಳು ಪೂರ್ಣಕುಂಭದೊಂದಿದೆ ಚಂಡೆ ಹಾಗೂ ವಾದ್ಯವನ್ನು ಮೊಳಗಿಸುವ ಮೂಲಕ ವಿಶಿಷ್ಟ ಪರಿಕಲ್ಪನೆಯೊಂದಿಗೆ ಸಂಭ್ರಮದಿಂದ ಭರಮಾಡಿಕೊಂಡ ದೃಶ್ಯ ಗಮನ ಸೆಳೆಯಿತು.

ಟಾಪ್ ನ್ಯೂಸ್

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

accident

Bramavara; ಹೆದ್ದಾರಿಯಲ್ಲಿ ಭೀಕರ ಅಪಘಾತ: ಲಾರಿಗೆ ಸಿಲುಕಿ ಬೈಕ್ ಸವಾರ ದುರ್ಮರಣ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.