ಇಂದಿನಿಂದ ಉಡುಪಿ ಜಿಲ್ಲೆಯಲ್ಲಿ ಮತ್ತೆ ವಾರಾಂತ್ಯ ಕರ್ಫ್ಯೂ ಜಾರಿ
Team Udayavani, Sep 3, 2021, 7:42 AM IST
ಉಡುಪಿ: ಕೊರೊನಾ ನಿಯಂತ್ರಿಸಲು ಜಿಲ್ಲೆಯಾದ್ಯಂತ ಮಾರ್ಗಸೂಚಿ/ ನಿಬಂಧನೆಗಳನ್ನು ಸೆ. 13ರ ತನಕ ಮುಂದುವರಿಸುವ ಸರಕಾರದ ಮಾರ್ಗಸೂಚಿಯಂತೆ ಜಿಲ್ಲಾಧಿಕಾರಿ ಕೂರ್ಮಾ ರಾವ್ ಆದೇಶಿಸಿದ್ದಾರೆ. ಪ್ರತೀ ಶುಕ್ರವಾರ ರಾತ್ರಿ 9ರಿಂದ ಸೋಮವಾರ ಬೆಳಗ್ಗೆ 5 ಗಂಟೆಯ ವರೆಗೆ ವಾರಾಂತ್ಯ ಕರ್ಫ್ಯೂ ಜಾರಿಯಲ್ಲಿರುತ್ತವೆ.
ಈ ಕೆಳಕಂಡ ಅಗತ್ಯ ಮತ್ತು ತುರ್ತು ಚಟುವಟಿಕೆಗಳಿಗೆ ಹೊರತುಪಡಿಸಿ ಜನರ ಓಡಾಟಗಳನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ.
- ಎಲ್ಲ ರಾಜ್ಯ ಮತ್ತು ಕೇಂದ್ರ ಸರಕಾರದ ಕಚೇರಿಗಳು ಮತ್ತು ಅವುಗಳ ಸ್ವಾಯತ್ತ ಸಂಸ್ಥೆಗಳು, ನಿಗಮಗಳು, ಇತ್ಯಾದಿ, ತುರ್ತು, ಅಗತ್ಯ ಸೇವೆಗಳು ಮತ್ತು ಕೋವಿಡ್-19 ಕಂಟೈನ್ಮೆಂಟ್ ಮತ್ತು ಮ್ಯಾನೇಜೆ¾ಂಟ್ ಕರ್ತವ್ಯಗಳು ಸಂಪೂರ್ಣವಾಗಿ ಕಾರ್ಯ ನಿರ್ವಹಿ ಸುತ್ತವೆ ಮತ್ತು ಇಂತಹ ಸಂಸೆœಗಳಲ್ಲಿ ಕಾರ್ಯನಿರ್ವಹಿಸುವ ಅಧಿಕಾರಿಗಳು / ಸಿಬಂದಿಗೆ ಮುಕ್ತ ಸಂಚಾರಕ್ಕೆ ಅವಕಾಶವಿರುತ್ತದೆ.
- 24×7 ಕಾರ್ಯಾಚರಿಸುವ ತುರ್ತು ಮತ್ತು ಅಗತ್ಯ ಸೇವೆಗಳನ್ನು ಪೂರೈಸುವ ಕೈಗಾರಿಕೆಗಳು / ಸಂಸ್ಥೆಗಳು ಕಾರ್ಯ ನಿರ್ವಹಿಸಬಹುದು. ನೌಕರರು ಗುರುತಿನ ಚೀಟಿಯೊಂದಿಗೆ ಸಂಚರಿಸಬಹುದು.
- ದೂರವಾಣಿ, ಅಂತರ್ಜಾಲ ಸೇವೆಯ ನೌಕರರು ಹಾಗೂ ವಾಹನ
ಗಳು ಸೂಕ್ತ ಗುರುತು ಚೀಟಿ/ ದಾಖಲೆ ಗಳೊಂದಿಗೆ ಸಂಚರಿಸ ಬಹುದು. ಮಾಹಿತಿ ತಂತ್ರಜ್ಞಾನ ಮತ್ತು ಮಾಹಿತಿ ತಂತ್ರಜ್ಞಾನ ಆಧಾರಿತ ಕಂಪೆನಿ / ಸಂಸ್ಥೆಗಳು ಆವಶ್ಯಕ ಸಿಬಂದಿ ಹಾಗೂ ಕಾರ್ಮಿಕರನ್ನು ಮಾತ್ರ ಬಳಸಿಕೊಂಡು ಕಾರ್ಯನಿರ್ವಹಿಸುವುದು.
- ರೋಗಿಗಳು, ಪರಿಚಾರಕರು / ತುರ್ತು ಅಗತ್ಯವಿರುವ ವ್ಯಕ್ತಿಗಳು, ಲಸಿಕೆ ತೆಗೆದುಕೊಳ್ಳುವವರು ದಾಖಲೆ ಗಳೊಂದಿಗೆ ಸಂಚರಿಸಬಹುದು.
- ಆಹಾರ, ದಿನಸಿ, ಹಣ್ಣು, ತರಕಾರಿ, ಮೀನು, ಮಾಂಸ ಮತ್ತು ಪ್ರಾಣಿಗಳ ಮೇವಿನ ಅಂಗಡಿಗಳು, ಬೀದಿಬದಿ ವ್ಯಾಪಾರಸ್ಥರು ಮತ್ತು ಸಾರ್ವಜನಿಕ ವಿತರಣೆಯ ಅಂಗಡಿ ಗಳು ಬೆಳಗ್ಗೆ 5ರಿಂದ ಅಪರಾಹ್ನ 2ರ ವರೆಗೆ ಕಾರ್ಯ ನಿರ್ವಹಿಸಬಹುದು. ಸ್ವತಂತ್ರ ಮದ್ಯದಂಗಡಿಗಳು ಮತ್ತು ಮಳಿಗೆಗಳಲ್ಲೂ ಇದೇ ಅವಧಿಯಲ್ಲಿ ಪಾರ್ಸೆಲ್ಗೆ ಮಾತ್ರ ಅನುಮತಿಸ ಲಾಗಿದೆ. ಜನರ ಸಂಚಾರವನ್ನು ಕಡಿಮೆ ಮಾಡಲು 24×7 ಹೋಮ್ ಡೆಲಿವರಿ ಸೇವೆಗಳನ್ನು ನೀಡಲು ಪ್ರೋತ್ಸಾಹಿಸುವಂತೆ ತಿಳಿಸಲಾಗಿದೆ.
- ಡೇರಿ, ಹಾಲಿನ ಬೂತ್ಗಳು ಮುಂಜಾನೆ 5ರಿಂದ ರಾತ್ರಿ 8ರ ವರೆಗೆ ಕಾರ್ಯಾಚರಿಸಲು ಅನುಮತಿಸಿದೆ.
- ರೆಸ್ಟೋರೆಂಟ್ ಮತ್ತು ತಿನಿಸು ಕೇಂದ್ರಗಳಿಂದ ಆಹಾರ ತೆಗೆದು ಕೊಂಡು ಹೋಗಲು ಮತ್ತು ಹೋಂ ಡೆಲಿವರಿಗೆ ಮಾತ್ರ ಅನುಮತಿ.
- ಬಸ್, ರೈಲು, ವಿಮಾನ ಪ್ರಯಾಣವನ್ನು ಅನುಮತಿಸಲಾಗಿದೆ. ನಿಲ್ದಾಣಗಳಿಗೆ ಹೋಗಿ ಬರಲು ಸಾರ್ವಜನಿಕ ಸಾರಿಗೆ ವಾಹನಗಳು, ಖಾಸಗಿ ವಾಹನಗಳು ಮತ್ತು ಟ್ಯಾಕ್ಸಿಗಳ ಓಡಾಟಕ್ಕೆ ಅನುಮತಿ ಇದೆ. ಪ್ರಯಾಣಿಕರು ಸೂಕ್ತ ದಾಖಲೆ / ಟಿಕೆಟುಗಳನ್ನು ಹೊಂದಿರಬೇಕು.
- ಶವಸಂಸ್ಕಾರ / ಅಂತ್ಯಕ್ರಿಯೆ ಗಳನ್ನು ಗರಿಷ್ಠ 20 ಜನರ ಪಾಲ್ಗೊಳ್ಳು ವಿಕೆಯಲ್ಲಿ ನೆರವೇರಿಸುವುದು. 10. ವಿದ್ಯಾರ್ಥಿಗಳು ಪರೀಕ್ಷೆಗಳಿಗೆ ಹಾಜರಾಗಬಹುದು. ಪ್ರಯಾಣದ ವೇಳೆ ಪರೀಕ್ಷೆಯ ಹಾಲ್ಟಿಕೆಟ್ / ದಾಖಲೆ ಕೈಯಲ್ಲಿರಬೇಕು.
ಮದುವೆಗೆ 400 ಜನರ ಮಿತಿ :
ಕೋವಿಡ್-19 ಪ್ರಮಾಣಿತ ಕಾರ್ಯವಿಧಾನವನ್ನು ಅನುಸರಿಸುವ ಷರತ್ತುಗಳೊಂದಿಗೆ ಮದುವೆ/ಕೌಟುಂಬಿಕ ಶುಭ ಸಮಾರಂಭಗಳನ್ನು ಸಭಾಂಗಣದ ಸಾಮರ್ಥ್ಯದ ಶೇ. 50ರಷ್ಟು ಮತ್ತು ಗರಿಷ್ಠ 400 ಜನರಿಗೆ ಮೀರದಂತೆ ನಡೆಸಲು ಅನುಮತಿಸಲಾಗಿದೆ. ಆಯೋಜಕರು ಆಮಂತ್ರಣ ಪತ್ರ ಅಥವಾ ಇತರ ಯಾವುದೇ ಸಂಬಂಧಿತ ದಾಖಲೆಗಳೊಂದಿಗೆ ಸಹಿ ಮಾಡಿದ ಅರ್ಜಿಯನ್ನು ತಹಶೀಲ್ದಾರ್ಗೆ ಸಲ್ಲಿಸಬೇಕು. ತಹಶೀಲ್ದಾರರು ಕಾರ್ಯಕ್ರಮಕ್ಕೆ 400 ಪಾಸ್ಗಳನ್ನು ನೀಡಲಿದ್ದಾರೆ. ಪಾಸ್ ಹೊಂದಿರುವವರಿಗೆ ಮಾತ್ರ ಹಾಜರಾಗಲು ಅವಕಾಶ. ಪಾಸ್ ವರ್ಗಾಯಿಸುವಂತಿಲ್ಲ.
ದ.ಕ.ದಲ್ಲಿ ಯಥಾವತ್ ಮುಂದುವರಿಕೆ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಾರಾಂತ್ಯ ಕರ್ಫ್ಯೂ ಈಗಾಲೇ ಜಾರಿಯಲ್ಲಿದ್ದು, ಈ ವಾರವೂ ಮುಂದುವರಿಯಲಿದೆ.
ದ.ಕ.ದಲ್ಲಿ ಯಥಾವತ್ ಮುಂದುವರಿಕೆ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಾರಾಂತ್ಯ ಕರ್ಫ್ಯೂ ಈಗಾಲೇ ಜಾರಿಯಲ್ಲಿದ್ದು, ಈ ವಾರವೂ ಮುಂದುವರಿಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manipal ಆಸ್ಪತ್ರೆಯ ಡಾ.ರಾಮದಾಸ್ ಪೈ ಬ್ಲಾಕ್; 161 ವಿಶೇಷ ಹಾಸಿಗೆಗಳ ವಾರ್ಡ್ ಸೇವೆ ಆರಂಭ
ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು
Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್ ಕರೆ
Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ
Malpe ಬೀಚ್: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ
MUST WATCH
ಹೊಸ ಸೇರ್ಪಡೆ
Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ
ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ
Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್ಗೆ ಗೆಲುವು: ಮುನಿಯಪ್ಪ ವಿಶ್ವಾಸ
Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್
BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ