ರೈಡ್ ಟು ಮಿಡ್ಲ್ಯಾಂಡ್ ತಂಡಕ್ಕೆ ಕಾಪುವಿನಲ್ಲಿ ಸ್ವಾಗತ
ಎನ್ಫೀಲ್ಡ್ ಬೈಕ್ ನಲ್ಲಿ 12 ಸಾವಿರ ಕಿ.ಮೀ.ಪಯಣ
Team Udayavani, Oct 12, 2019, 5:02 AM IST
ಕಾಪು : ರಾಯಲ್ ಎನ್ಫೀಲ್ಡ್ ಹಿಮಾಲಯನ್ ಬೆ„ಕ್ನಲ್ಲಿ ಇಪ್ಪತ್ತೈದು ದಿನಗಳಲ್ಲಿ 12 ಸಾವಿರ ಕಿ.ಮೀ. ಬೈಕ್ ಯಾತ್ರೆಯ ಮೂಲಕ ರೈಡ್ ಟು ಮಿಡ್ಲ್ಯಾಂಡ್ ಪಯಣ ಮುಗಿಸಿ ಅ. 10ರಂದು ಕಾಪುವಿಗೆ ಮರಳಿದ ಸಚಿನ್ ಶೆಟ್ಟಿ ನೇತೃತ್ವದ ಯುವಕರ ತಂಡವನ್ನು ಕಾಪು ಪೇಟೆಯಲ್ಲಿ ಸ್ವಾಗತಿಸಲಾಯಿತು.
ವಿವಿಧ ರಾಜ್ಯಗಳ ಸಾಂಸ್ಕೃತಿಕ ಮತ್ತು ಸಾಂಪ್ರದಾಯಿಕ ಚಟುವಟಿಕೆಗಳು, ಆಚಾರ – ವಿಚಾರ ಮತ್ತು ಆಹಾರ ಶೆ„ಲಿಯ ಬಗ್ಗೆ ಚಿತ್ರೀಕರಣದೊಂದಿಗೆ ಅಧ್ಯಯನ ನಡೆಸಿ, ಸಮಗ್ರ ಸಾಕ್ಷ್ಯ ಚಿತ್ರ ನಿರ್ಮಿಸುವ ಹಾಗೂ ಸಂಚಾರ ನಿಯಮಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಉದ್ದೇಶದೊಂದಿಗೆ ಮೂವರು ಯುವಕರ ತಂಡ ಸೆ. 15ರಂದು ರೈಡ್ ಟು ಮಿಡ್ಲ್ಯಾಂಡ್ ಯಾತ್ರೆಯನ್ನು ಕೈಗೊಂಡಿತ್ತು.
ಸೆ. 15ರಂದು ಕಾಪುವಿನಿಂದ ಪ್ರಾರಂಭಗೊಂಡಿದ್ದ ಮಿಡ್ಲ್ಯಾಂಡ್ ಪರ್ಯಟನೆಯು ಉಡುಪಿ, ಪುಣೆ, ಮುಂಬೈ ವಡೋದರಾ, ಉದಯಪುರ, ಜೈಪುರ, ಕುರುಕ್ಷೇತ್ರ, ಜಿಬಿ, ತಾಬೊ, ಮಡ್ ವಿಲೇಜ್, ಖಾಝ, ಚಂದ್ರತಾಲ್, ಮನಾಲಿ, ಚಂಡೀಗಡ, ಆಗ್ರಾ, ಇಂದೋರ್, ಔರಂಗಾಬಾದ್, ಸೋಲಾಪುರ, ಹಂಪಿ, ಬೆಂಗಳೂರು, ಮಡಿಕೇರಿ, ಮಂಗಳೂರು ಮೂಲಕ ಅ. 10ರಂದು ಕಾಪುವಿಗೆ ಬಂದು ಯಾತ್ರೆಯನ್ನು ಸಮಾಪನಗೊಳಿಸಿದ್ದಾರೆ.
25 ದಿನಕ್ಕೆ ಪೂರ್ಣಗೊಂಡ 45 ದಿನಗಳ ಯಾತ್ರೆ 411 ಸಿಸಿ ರಾಯಲ್
ಎನ್ಫೀಲ್ಡ್ ಹಿಮಾಲಯನ್ ಬೈಕ್ ಮೂಲಕ 45 ದಿನಗಳ ಕಾಲ ನಡೆಸಲುದ್ದೇಶಿಸಿದ್ದ ರೈಡ್ ಟು ಮಿಡ್ಲ್ಯಾಂಡ್ ಎಂಬ ಹೆಸರಿನ ಸಾಹಸ ಯಾತ್ರೆಯು ಕೇವಲ 25 ದಿನಕ್ಕೇ ಪೂರ್ಣಗೊಂಡಿದ್ದು, ಹೆಚ್ಚುವರಿ 2,000 ಕಿಮೀ.ನೊಂದಿಗೆ 12 ಸಾವಿರ ಕಿ.ಮೀ. ಯಾತ್ರೆ ಪೂರ್ಣಗೊಳಿಸಿದ್ದಾರೆ. ಕಾಪು ಪೇಟೆಯಲ್ಲಿ ಸಮಾಜರತ್ನ ಲೀಲಾಧರ ಶೆಟ್ಟಿ, ಪುರಸಭಾ ಸದಸ್ಯ ಅನಿಲ್ ಕುಮಾರ್, ಕಾಪು ಎಎಸ್ಸೆ$ç ರಾಜೇಂದ್ರ ಮಣಿಯಾಣಿ, ಎಸ್ಕೆಪಿಎ ಕಾಪು ವಲಯಾಧ್ಯಕ್ಷ ವೀರೇಂದ್ರ ಪೂಜಾರಿ, ಕಾರ್ಯದರ್ಶಿ ಸಚಿನ್ ಉಚ್ಚಿಲ, ಕಾಪು ಪ್ರಸ್ ಕ್ಲಬ್ ಕೋಶಾಧಿಕಾರಿ ಬಾಲಕೃಷ್ಣ ಪೂಜಾರಿ, ಪ್ರಮುಖರಾದ ಸೂರಿ ಶೆಟ್ಟಿ, ಪ್ರವೀಣ್ ಕುಮಾರ್ ಗುರ್ಮೆ, ಪ್ರಭಾತ್ ಶೆಟ್ಟಿ, ಲವ ಕರ್ಕೇರ, ಮೋಹನ್ ಕಾಪು, ಯೋಗಿಶ್ ಪೂಜಾರಿ, ದಿವಾಕರ ಶೆಟ್ಟಿ ಮಲ್ಲಾರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ
ಜಯಪ್ರಕಾಶ್ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್ ಕುಮಾರ್ ಮುರೊಳ್ಳಿ
ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು
ಕಾರ್ಗಿಲ್ ಯೋಧ ಮೆಲ್ವಿನ್ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ
MUST WATCH
ಹೊಸ ಸೇರ್ಪಡೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ