ಸುಸಜ್ಜಿತ ಸ್ನಾನ-ಶೌಚಗೃಹ ಸಂಕೀರ್ಣ

ಉಡುಪಿ: ಶ್ರೀಕೃಷ್ಣ ಮಠದ ಪರಿಸರದಲ್ಲಿ

Team Udayavani, Jul 11, 2019, 5:43 AM IST

0907gk5

ಉಡುಪಿ: ಶ್ರೀಕೃಷ್ಣ ಮಠಕ್ಕೆ ಆಗಮಿಸುವ ಸಾವಿರಾರು ಯಾತ್ರಾರ್ಥಿಗಳಿಗೆ ಸುಸಜ್ಜಿತ ಸ್ನಾನ ಮತ್ತು ಶೌಚಗೃಹ ಸಂಕೀರ್ಣ 2 ಕೋ.ರೂ. ವೆಚ್ಚದಲ್ಲಿ ಮಠದ ವಾಹನ ಪಾರ್ಕಿಂಗ್‌ ಪ್ರದೇಶದಲ್ಲಿ ನಿರ್ಮಾಣಗೊಳ್ಳುತ್ತಿದೆ. ಮಂಗಳೂರಿನ ಎಂಆರ್‌ಪಿಎಲ್ ಸಂಸ್ಥೆ ತನ್ನ ಸಿಎಸ್‌ಆರ್‌ ನಿಧಿಯಿಂದ ಇದನ್ನು ನಿರ್ಮಿಸಿಕೊಡುತ್ತಿದೆ.

ತಳಅಂತಸ್ತಿನಲ್ಲಿ 5 ಲಕ್ಷ ಲೀಟರ್‌ ನೀರು ಸಂಗ್ರಹಣ ತೊಟ್ಟಿಯನ್ನು ಸುಮಾರು 50 ಲ.ರೂ. ವೆಚ್ಚದಲ್ಲಿ ನಿರ್ಮಿಸು ತ್ತಿದ್ದರೆ, ನೆಲ ಮಟ್ಟ ಮತ್ತು ಮಹಡಿಯಲ್ಲಿ ಸುಮಾರು 8,000 ಚದರಡಿ ವಿಸ್ತೀರ್ಣದಲ್ಲಿ ಸ್ನಾನ ಗೃಹ ಮತ್ತು ಶೌಚಗೃಹ ಗಳನ್ನು 1.5 ಕೋ.ರೂ. ವೆಚ್ಚದಲ್ಲಿ ನಿರ್ಮಿಸಲಾಗುತ್ತಿದೆ.

ಒಟ್ಟು 46 ಸ್ನಾನಗೃಹಗಳು, 46 ಶೌಚಾಲಯಗಳು ಸಂಕೀರ್ಣದಲ್ಲಿರುತ್ತವೆ. ಮೂತ್ರಾಲಯಗಳೂ ಇವೆ. ನೀರುಸಂಗ್ರಹಣ ಸಂಪ್‌ಗೆ ಶ್ರೀಕೃಷ್ಣ ಮಠ ಪರಿಸರ ಪ್ರತಿಷ್ಠಾನ ದಲ್ಲಿರುವ ಬಾವಿ, ಕೊಳವೆಬಾವಿಗಳ ನೀರಿನೊಂದಿಗೆ ನಗರಸಭೆ ನೀರಿನ ಸಂಪರ್ಕವನ್ನೂ ಮಾಡಲಾಗುತ್ತದೆ. ಸಂಪ್‌ ಕೆಲಸ ಬಹುತೇಕ ಮುಗಿದಿದ್ದು ಸ್ನಾನ-ಶೌಚಗೃಹದ ಕೆಲಸ ಶೇ. 60ರಷ್ಟು ಮುಗಿದಿದೆ. ಸಂಪ್‌ ಕಾಮಗಾರಿಯ ಗುತ್ತಿಗೆಯನ್ನು ಉಡುಪಿಯ ಶೈಲೇಶ್‌ ವಹಿಸಿಕೊಂಡರೆ, ಸ್ನಾನ-ಶೌಚಗೃಹದ ಗುತ್ತಿಗೆಯನ್ನು ವೆಂಕಟೇಶ್‌ ಶೇಟ್ ವಹಿಸಿಕೊಂಡಿ ದ್ದಾರೆ.

ಪರ್ಯಾಯ ಪೂರ್ವಭಾವಿ ಸಂಚಾರದ ವೇಳೆ ಶ್ರೀ ಪಲಿ ಮಾರು ಸ್ವಾಮೀಜಿಯವರು ಯಾತ್ರಾರ್ಥಿಗಳ ಅನುಕೂಲಕ್ಕಾಗಿ ಸ್ನಾನಗೃಹ-ಶೌಚ ಗೃಹ ನಿರ್ಮಿಸಲು ಎಂಆರ್‌ಪಿಎಲ್ ಆಡಳಿತ ನಿರ್ದೇಶಕ ರಾಗಿದ್ದ ಕುಮಾರ್‌ ಅವರಲ್ಲಿ ಅಪೇಕ್ಷೆ ವ್ಯಕ್ತಪಡಿಸಿದ್ದರು.

ಸ್ವಚ್ಛಭಾರತ್‌ ಅಭಿಯಾನ ದಡಿ ಯೋಜನೆಯನ್ನು ಎಂಆರ್‌ಪಿಎಲ್ನವರು ಜಾರಿಗೊಳಿಸುತ್ತಿರುವುದರಿಂದ ಆ. 15ರಂದು ಉದ್ಘಾಟಿಸುವ ಇರಾದೆ ಇದೆ. ಒಂದು ವೇಳೆ ಕಾಮಗಾರಿ ಮುಗಿಯದಿದ್ದರೆ ಸೆಪ್ಟಂಬರ್‌ನೊಳಗಾದರೂ ಉದ್ಘಾಟಿಸಲಿದ್ದೇವೆ ಎಂದು ಪಲಿಮಾರು ಮಠದ ಆಡಳಿತಾಧಿಕಾರಿ ಪ್ರಹ್ಲಾದ ರಾವ್‌ ‘ಉದಯವಾಣಿ’ಗೆ ತಿಳಿಸಿದ್ದಾರೆ.

ಕಾಮಗಾರಿ ಪೂರ್ಣಗೊಂಡ ಅನಂತರ ಶ್ರೀಕೃಷ್ಣ ಮಠ ಪರಿಸರ ಪ್ರತಿಷ್ಠಾನಕ್ಕೆ ಬಿಟ್ಟುಕೊಡಲಿದ್ದೇವೆ. ಮೂತ್ರ ವಿಸರ್ಜನೆಗೆ ಶುಲ್ಕ ಇರುವುದಿಲ್ಲ. ಸ್ನಾನಗೃಹ ಮತ್ತು ಶೌಚಗೃಹಗಳಿಗೆ ಸಾಂಕೇತಿಕ ಶುಲ್ಕ ನಿಗದಿಪಡಿಸಲಿದ್ದೇವೆ. ಇದು ನಿರ್ವಹಣ ವೆಚ್ಚವನ್ನು ಸರಿದೂಗಿಸಲು ಮಾತ್ರ. ಸದ್ಯ ಸರಾಸರಿ 5,000 ಯಾತ್ರಿಕರು ಬರುತ್ತಿದ್ದು ಅವರ ಅಗತ್ಯಗಳ ಪೂರೈಕೆಗೆ ಹೊಸ ಸಂಕೀರ್ಣ ಅನುಕೂಲವಾಗಲಿದೆ. ಈಗಾಗಲೇ ಯಾತ್ರೀ ನಿವಾಸ ಬಳಿ ಇರುವ ಸಾರ್ವಜನಿಕ ಶೌಚಾಲಯ ಮುಂದುವರಿಯಲಿದೆ. ಸುಮಾರು ಮೂರು ದಶಕಗಳ ಹಿಂದೆ ಕಾಣಿಯೂರು ಮಠದ ಪಕ್ಕದಲ್ಲಿ ಶ್ರೀ ಅದಮಾರು ಮಠದ ಶ್ರೀಗಳು ನಿರ್ಮಿಸಿದ ಸ್ನಾನಗೃಹ- ಶೌಚ ಗೃಹವನ್ನು ಮುಚ್ಚಿ ಅದನ್ನು ಬೇರೆ ಉದ್ದೇಶಕ್ಕೆ ಬಳಸಿಕೊಳ್ಳುವ ಇರಾದೆ ಇದೆ.
– ಪ್ರಹ್ಲಾದ ರಾವ್‌,ಆಡಳಿತಾಧಿಕಾರಿ, ಪರ್ಯಾಯ ಶ್ರೀ ಪಲಿಮಾರು ಮಠ

ಟಾಪ್ ನ್ಯೂಸ್

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.