ಟೀಕೆ ಬಂದಾಗಲೆಲ್ಲ ಆರೆಸ್ಸೆಸ್‌ ಬೆಳೆದಿದೆ: ನಾಗೇಶ್‌


Team Udayavani, Oct 9, 2021, 6:45 AM IST

ಟೀಕೆ ಬಂದಾಗಲೆಲ್ಲ ಆರೆಸ್ಸೆಸ್‌ ಬೆಳೆದಿದೆ: ನಾಗೇಶ್‌

ಕುಂದಾಪುರ: ಆರೆಸ್ಸೆಸ್‌ ಕುರಿತು ವಿಪಕ್ಷಗಳು ಟೀಕೆ ಮಾಡಿದಾಗಲೆಲ್ಲ ಸಂಘ ಮತ್ತಷ್ಟು ಬೆಳೆದಿದೆ. ಸುಳ್ಳು ಹೇಳಿ, ಟೋಪಿ ಹಾಕಿ ಆಡಳಿತ ನಡೆಸಿದವರಿಗೆ ಸತ್ಯವನ್ನು ಅರಗಿಸಿಕೊಳ್ಳಲು ಆಗುವುದಿಲ್ಲ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್‌ ಅವರು ಹೇಳಿದರು.

ಇಲ್ಲಿನ ಜೂನಿಯರ್‌ ಕಾಲೇಜಿಗೆ ಭೇಟಿ ನೀಡಿದ ಅವರು ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿ, ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದರು.

ಶಾಲೆಗಳ ಜಾಗಗಳ ದಾಖಲಾತಿ ಯನ್ನು ಸಮರ್ಪಕವಾಗಿ ಮಾಡಿ ಕೊಡಲು ಡಿಸಿಗಳ ಜತೆ ಮಾತುಕತೆ ನಡೆಸಲಾಗಿದೆ. ಹೊಸ ಶಾಲೆಗಳಿಗೆ ಅನುಮತಿ ನೀಡುವಾಗ ಆಟದ ಮೈದಾನ, ಅಗ್ನಿಶಾಮಕ ದಳದ ಅನುಮತಿ ಸೇರಿದಂತೆ ಎಲ್ಲ ನಿಯಮ ಪರಿಶೀಲಿಸಿಯೇ ನೀಡಲಾಗುವುದು. ಖಾಸಗಿಯಿಂದ ಸರಕಾರಿ ಶಾಲೆಗೆ ಬಂದ ಟಿಸಿ ದೊರೆಯದ ಮಕ್ಕಳ ಟಿಸಿ ಕೊಡಿಸುವುದು ಇಲಾಖೆಯ ಜವಾಬ್ದಾರಿ ಎಂದರು.

ವಾಲ್ಮೀಕಿ ಮಹರ್ಷಿಗಳಾದದ್ದು
ಬಿಜೆಪಿ ಸರಕಾರ ಬಂದ ಬಳಿಕವೆ?
ಪಠ್ಯಪುಸ್ತಕ ಪರಿಷ್ಕರಣ ಸಮಿತಿ ಅಧ್ಯಕ್ಷರಾಗಿ ರೋಹಿತ್‌ ಚಕ್ರತೀರ್ಥರನ್ನು ರಾಜ್ಯ ಸರಕಾರ ನೇಮಿಸಿದ್ದಕ್ಕೆ ಅಸಮಾಧಾನ ವ್ಯಕ್ತವಾಗಿದೆಯಲ್ಲ ಎಂದು ಸುದ್ದಿಗಾರರು ಪ್ರಶ್ನಿಸಿದಾಗ, ಕೇವಲ ವಿರೋಧಕ್ಕಾಗಿ ವಿರೋಧ ಮಾಡುತ್ತಿದ್ದಾರೆ. ಕೊರೊನಾ ಲಸಿಕೆ ಆರಂಭಿಸಿದಾಗಲೂ ವಿರೋಧ ವ್ಯಕ್ತವಾಗಿತ್ತು. ಹಿಂದೆ ಬರಗೂರು ರಾಮಚಂದ್ರಪ್ಪ ಅವರನ್ನು ನೇಮಿಸಿದ್ದೇಕೆ? ನಮ್ಮ ಪಠ್ಯಪುಸ್ತಕ ನೋಡಿದರೆ ಹೊಡೀತಾರೆ. ವ್ಯಾಕರಣ ದೋಷವೂ ಅದರಲ್ಲಿ ಅಷ್ಟಿದೆ. ವಿವೇಕಾನಂದರ ಭಾಷಣವನ್ನೇ ಅವರು ತಿರುಚಿದ್ದಾರೆ. ಕುವೆಂಪು ಅವರು ಸರಕಾರಿ ಶಾಲೆಯಲ್ಲಿ ಓದಿ ಉನ್ನತ ಮಟ್ಟಕ್ಕೇರಿದರು ಎಂಬ ಪಾಠವನ್ನೇ ಕಿತ್ತು ಹಾಕಿದ್ದಾರೆ. ವಾಲ್ಮೀಕಿ ಮಹರ್ಷಿಗಳಾದದ್ದು ನಮ್ಮ ಸರಕಾರ ಬಂದ ಬಳಿಕವೆ? ಇವರು ಮಕ್ಕಳಿಗೆ ಏನನ್ನು ಕಲಿಸಲು ಹೊರಟಿದ್ದಾರೆ ಎಂದು ಕಿಡಿಕಾರಿದರು.

ಇದನ್ನೂ ಓದಿ:ಪೆರಿಷಬಲ್ ಉತ್ಪನ್ನಗಳ ರಫ್ತಿನಲ್ಲಿ ದೇಶದಲ್ಲೇ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಮೊದಲ ಸ್ಥಾನ!

ಬೇಕಾಗಿದ್ದು 10,000;
ಸಿಕ್ಕಿದ್ದು 3,000!
ಉಡುಪಿಯಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಸಚಿವ ಬಿ.ಸಿ. ನಾಗೇಶ್‌ ಅವರು, ರಾಜ್ಯದಲ್ಲಿ 10,000 ಶಿಕ್ಷಕರ ನೇಮಕ ನಡೆಯಬೇಕಿತ್ತು. ನಮ್ಮ ಗುಣ ಮಟ್ಟದ ಆಧಾರದಲ್ಲಿ ಸಿಕ್ಕಿದ್ದೇ 3,000 ಶಿಕ್ಷಕರು. ಭಾಷೆ, ಸಮಾಜ ವಿಜ್ಞಾನ ಶಿಕ್ಷಕರಿಗೆ ಕೊರತೆ ಇಲ್ಲ. 1ರಿಂದ 5, 6ರಿಂದ 8ನೇ ತರಗತಿ ವರೆಗೆ ಶಿಕ್ಷಕರ ಕೊರತೆ ಇದೆ. ಮಾನದಂಡದ ಪ್ರಕಾರ 30 ವಿದ್ಯಾರ್ಥಿಗಳಿಗೆ ಒಬ್ಬರು ಶಿಕ್ಷಕರು ಬೇಕು. ಆದರೆ ಕೆಲವೆಡೆ ಐವರು ಮಕ್ಕಳಿದ್ದಲ್ಲಿ ಇಬ್ಬರು ಶಿಕ್ಷಕರಿದ್ದಾರೆ. ಈ ಪ್ರಕಾರ ಶಿಕ್ಷಕರ ಕೊರತೆ ಇರುವುದೂ ನಿಜ, ಶಿಕ್ಷಕರು ಹೆಚ್ಚುವರಿ ಇರುವುದೂ ನಿಜ. ಇದನ್ನು ಹೇಗೆ ಸರಿಪಡಿಸಬೇಕೆಂದು ಶಾಸಕರ ಜತೆ ಚರ್ಚಿಸಲಾಗುವುದು ಎಂದು ತಿಳಿಸಿದರು.

ಟಾಪ್ ನ್ಯೂಸ್

Dingaleshwara (2)

Prahlad Joshi ವಿರುದ್ದ ರಣಕಹಳೆ : ದಿಂಗಾಲೇಶ್ವರ ಶ್ರೀ ವಿರುದ್ದ ಎಫ್ ಐಆರ್ ದಾಖಲು

Revanna 2

H.D. Revanna ಬಂಧನ; ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ

1-rwrrer

BJP; ತೇಜಸ್ವಿ ಸೂರ್ಯ ನವರಾತ್ರಿಯ ಮುನ್ನಾದಿನ ಮೀನು ತಿನ್ನುತ್ತಾರೆ!: ಕಂಗನಾ ಭಾಷಣ ವೈರಲ್

1-weqwqewq

Mumbai; ಚಿನ್ನ ಕಳ್ಳಸಾಗಣೆಯಲ್ಲಿ ಸಿಕ್ಕಿಬಿದ್ದ ಆಫ್ಘಾನ್ ಕಾನ್ಸುಲ್ ಜನರಲ್ ರಾಜೀನಾಮೆ

Chintamani; ಮಗನಿಗೆ ಈಜು ಕಲಿಸಲು ಕೃಷಿ ಹೊಂಡಕ್ಕೆ ಇಳಿದ ತಂದೆ ಸಾವು

Chintamani; ಮಗನಿಗೆ ಈಜು ಕಲಿಸಲು ಕೃಷಿ ಹೊಂಡಕ್ಕೆ ಇಳಿದ ತಂದೆ ಸಾವು

Vitla: ಬಿಸಿಲಿನ ಎಫೆಕ್ಟ್: ಚಲಿಸುತ್ತಿದ್ದ ಬಸ್ಸಿನ ಗಾಜು ಒಡೆದು ಮೂವರಿಗೆ ಗಾಯ

Vitla: ಬಿಸಿಲಿನ ಎಫೆಕ್ಟ್: ಚಲಿಸುತ್ತಿದ್ದ ಬಸ್ಸಿನ ಗಾಜು ಒಡೆದು ಮೂವರಿಗೆ ಗಾಯ

1-qweqwqew

Congress ಪಕ್ಷವನ್ನು ಎರಡನೇ ಬಾರಿ ತೊರೆದ ಲವ್ಲಿ; ಮತ್ತೆ ಬಿಜೆಪಿ ಸೇರ್ಪಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೆಂಗಳೂರು: 4 ತಿಂಗಳಲ್ಲಿ ಮೂರ್ತಿ ಸ್ಥಾಪನೆ ಪೂರ್ಣಗೊಳಿಸಲು ಆದೇಶ

ಬೆಂಗಳೂರು: 4 ತಿಂಗಳಲ್ಲಿ ಮೂರ್ತಿ ಸ್ಥಾಪನೆ ಪೂರ್ಣಗೊಳಿಸಲು ಆದೇಶ

Udupi ಇನ್ನೂ ನಡೆಯದ ಟೆಂಡರ್‌ ಪ್ರಕ್ರಿಯೆ; ರಾಜ್ಯದಲ್ಲಿ ಅಗ್ನಿಶಾಮಕ ವಾಹನ ಕೊರತೆ

Udupi ಇನ್ನೂ ನಡೆಯದ ಟೆಂಡರ್‌ ಪ್ರಕ್ರಿಯೆ; ರಾಜ್ಯದಲ್ಲಿ ಅಗ್ನಿಶಾಮಕ ವಾಹನ ಕೊರತೆ

Road Mishap ಮಣಿಪಾಲ: ಕಾರು ಢಿಕ್ಕಿಯಾಗಿ ಪಾದಚಾರಿ ಸಾವು

Road Mishap ಮಣಿಪಾಲ: ಕಾರು ಢಿಕ್ಕಿಯಾಗಿ ಪಾದಚಾರಿ ಸಾವು

Malpe ದಕ್ಕೆಯಲ್ಲಿ ನೀರಿಗೆ ಬಿದ್ದು ಸಾವು: ದೂರು ದಾಖಲು

Malpe ದಕ್ಕೆಯಲ್ಲಿ ನೀರಿಗೆ ಬಿದ್ದು ಸಾವು: ದೂರು ದಾಖಲು

Theme Park Karkala ಅವಶೇಷ‌ ತೆರವಿಗೆ ಕೋರ್ಟ್‌ ಆದೇಶ; ಜಿಲ್ಲಾಧಿಕಾರಿ ತಡೆ!

Theme Park Karkala ಅವಶೇಷ‌ ತೆರವಿಗೆ ಕೋರ್ಟ್‌ ಆದೇಶ; ಜಿಲ್ಲಾಧಿಕಾರಿ ತಡೆ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Dingaleshwara (2)

Prahlad Joshi ವಿರುದ್ದ ರಣಕಹಳೆ : ದಿಂಗಾಲೇಶ್ವರ ಶ್ರೀ ವಿರುದ್ದ ಎಫ್ ಐಆರ್ ದಾಖಲು

Revanna 2

H.D. Revanna ಬಂಧನ; ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ

1-rwrrer

BJP; ತೇಜಸ್ವಿ ಸೂರ್ಯ ನವರಾತ್ರಿಯ ಮುನ್ನಾದಿನ ಮೀನು ತಿನ್ನುತ್ತಾರೆ!: ಕಂಗನಾ ಭಾಷಣ ವೈರಲ್

1-weqwqewq

Mumbai; ಚಿನ್ನ ಕಳ್ಳಸಾಗಣೆಯಲ್ಲಿ ಸಿಕ್ಕಿಬಿದ್ದ ಆಫ್ಘಾನ್ ಕಾನ್ಸುಲ್ ಜನರಲ್ ರಾಜೀನಾಮೆ

gold 2

Mumbai Airport ; 12.74 ಕೆಜಿ ಚಿನ್ನಾಭರಣ ಜಪ್ತಿ, ಐವರು ಪ್ರಯಾಣಿಕರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.