ಧರ್ಮಸಂಸದ್‌ಗಿಲ್ಲ, ಕಾಂಗ್ರೆಸ್‌ ಸಮಾವೇಶಕ್ಕೆ ಏಕೆ? ವಿಲಾಸ್‌  ಪ್ರಶ್ನೆ


Team Udayavani, Jan 10, 2018, 11:31 AM IST

10-24.jpg

ಉಡುಪಿ: ಕಾಂಗ್ರೆಸ್‌ ಸಾಧನಾ ಸಮಾವೇಶಕ್ಕೆ ಕೊಲ್ಲೂರು ಶ್ರೀ ಮೂಕಾಂಬಿಕಾ ದೇಗುಲದಿಂದ ಮಧ್ಯಾಹ್ನ ಭೋಜನ ವ್ಯವಸ್ಥೆಯನ್ನು ಏರ್ಪಡಿಸುವ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರಕಾರ ಅಧಿಕಾರ ದುರುಪಯೋಗ ಮಾಡಿಕೊಂಡಿದೆ ಎಂದು ಉಡುಪಿ ಜಿಲ್ಲಾ ವಿ.ಹಿಂ. ಪ. ಅಧ್ಯಕ್ಷ ವಿಲಾಸ್‌ ನಾಯಕ್‌ ಆರೋಪಿಸಿದ್ದಾರೆ.

ಉಡುಪಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಈ ವಿಚಾರ ತಿಳಿಸಿದ ಅವರು, ವಿ. ಹಿಂ. ಪ. ಮತ್ತು ಬಜರಂಗ ದಳದ ವತಿಯಿಂದ ಉಡುಪಿಯಲ್ಲಿ ಆಯೋಜಿಸಲಾಗಿದ್ದ ಧರ್ಮಸಂಸದ್‌ನಲ್ಲಿ ಎರಡು ಸಾವಿರಕ್ಕೂ ಅಧಿಕ ಮಂದಿ ಸಾಧು ಸಂತರು ಹಾಗೂ ಲಕ್ಷಾಂತರ ಹಿಂದೂಗಳು ಭಾಗವಹಿಸಿದ್ದರು. ಈ ಕಾರ್ಯಕ್ರಮಕ್ಕೆ ಊಟದ ವ್ಯವಸ್ಥೆ ಮಾಡುವುದಕ್ಕಾಗಿ ಕೊಲ್ಲೂರು ದೇವಾಲಯಕ್ಕೆ ಮನವಿ ಮಾಡಿಕೊಂಡರೂ ಅಲ್ಲಿನ ಆಡಳಿತ ನಿರಾಕರಿಸಿತ್ತು. ಆದರೆ ಕಾಂಗ್ರೆಸ್‌ ಸಾಧನಾ ಸಮಾವೇಶಕ್ಕೆ ಅಲ್ಲಿಂದ ಊಟ ಒದಗಿಸಲಾಗಿದೆ. ಸರಕಾರ ಅಧಿಕಾರ ದುರುಪಯೋಗಪಡಿಸಿಕೊಂಡು ರಾತ್ರಿ ಬೆಳಗಾಗುವುದರ ಒಳಗೆ ಸುಮಾರು ನೂರು ಮಂದಿ ಬಾಣಸಿಗರನ್ನು ನೇಮಿಸಿ ದೇಗುಲದಲ್ಲಿ ಊಟ ತಯಾರಿಸಿ, ಒದಗಿಸುವ ವ್ಯವಸ್ಥೆ ಮಾಡಿರುವುದು ಸರಿಯೇ ಎಂದು ಅವರು ಪ್ರಶ್ನಿಸಿದ್ದಾರೆ.

ಧರ್ಮ ಸಂಸದ್‌ಗೆ ಮುಜರಾಯಿ ಇಲಾಖೆಯ ಅಧೀನದಲ್ಲಿರುವ ಕೊಲ್ಲೂರು ದೇಗುಲದಿಂದ ಭೋಜನ ನಿರಾಕರಿಸಿರುವುದರ ಹಿಂದೆ ಸಿದ್ದರಾಮಯ್ಯ ಸರಕಾರದ ದೊಡ್ಡ ಪಿತೂರಿ ಇದೆ. ಈ ಹಿಂದೆ ಇದೇ ದೇವಸ್ಥಾನದಿಂದ ಕಲ್ಲಡ್ಕದ ಶ್ರೀರಾಮ ವಿದ್ಯಾಕೇಂದ್ರಕ್ಕೆ ನೀಡಲಾಗುತ್ತಿದ್ದ ಮಧ್ಯಾಹ್ನದ ಬಿಸಿಯೂಟ ಅನುದಾನವನ್ನು ರದ್ದುಪಡಿಸಿ ರಾಜಕೀಯ ಮಾಡಲಾಗಿದೆ. ಪದೇ ಪದೇ ನಡೆಯುತ್ತಿರುವ ಇಂತಹ ಘಟನೆಗಳು ಸಿದ್ದರಾಮಯ್ಯ ಸರಕಾರದ ಹಿಂದೂ ವಿರೋಧಿ ನೀತಿಯನ್ನು ಸ್ಪಷ್ಟಪಡಿಸುತ್ತವೆ. ಇದನ್ನು ವಿಶ್ವ ಹಿಂದೂ ಪರಿಷತ್‌ ಹಾಗೂ ಬಜರಂಗ ದಳ ತೀವ್ರವಾಗಿ ಖಂಡಿಸುತ್ತವೆ. ಇನ್ನು ಮುಂದೆಯೂ ಇಂತಹ ನೀತಿಯನ್ನು ಸರಕಾರ ಅನುಸರಿಸಿದಲ್ಲಿ ವಿ.ಹಿಂ.ಪ. ಮತ್ತು ಬಜರಂಗ ದಳ ಉಗ್ರ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದವರು ಹೇಳಿದರು.

ಬಜರಂಗ ದಳದ ವಿಭಾಗೀಯ ಸಂಚಾಲಕ ಸುನಿಲ್‌, ಜಿಲ್ಲಾ ಸಂಚಾಲಕ ದಿನೇಶ್‌ ಮೆಂಡನ್‌, ತಾಲೂಕು ಸಂಚಾಲಕ ಸಂತೋಷ್‌ ಸುವರ್ಣ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.