ವಿವೇಕವಾಗಿ ಜ್ಞಾನದ ಮಾರ್ಪಾಟು: ಡಾ| ಶೇಖರ್‌ ಮಂಡೆ


Team Udayavani, Nov 17, 2019, 5:21 AM IST

shekar-munde

ಉಡುಪಿ: ನಾವು ಅಂಕಿ – ಅಂಶಗಳಲ್ಲಿರುವ ಮಾಹಿತಿಗಳನ್ನು ಜ್ಞಾನವಾಗಿ ಪರಿವರ್ತಿಸಿದ ಅನಂತರ ಜ್ಞಾನವನ್ನು ವಿವೇಕವಾಗಿ ಪರಿವರ್ತಿಸುವ ಅಗತ್ಯವಿದೆ ಎಂದು ಹೊಸ ದಿಲ್ಲಿಯ ವೈಜ್ಞಾನಿಕ ಮತ್ತು ಕೈಗಾರಿಕಾ ಸಂಶೋಧನ ಇಲಾಖೆ ಕಾರ್ಯದರ್ಶಿ ಮತ್ತು ವೈಜ್ಞಾನಿಕ ಮತ್ತು ಕೈಗಾರಿಕಾ
ಸಂಶೋಧನ ಮಂಡಳಿ ಮಹಾ ನಿರ್ದೇಶಕ ಡಾ| ಶೇಖರ್‌ ಸಿ. ಮಂಡೆ ಪ್ರತಿಪಾದಿಸಿದರು.

ಮಣಿಪಾಲದ ಕೆಎಂಸಿ ಗ್ರೀನ್ಸ್‌ ನಲ್ಲಿ ಶನಿವಾರ ಮಾಹೆ ವಿ.ವಿ.ಯ ಎರಡನೇ ದಿನದ ಘಟಿಕೋತ್ಸವದಲ್ಲಿ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು.

ವಿಜ್ಞಾನ ಮತ್ತು ತಂತ್ರಜ್ಞಾನದ ಬೆಳವಣಿಗೆಯಿಂದಾಗಿ ದೇಶದ ದಿಕ್ಕು ಬದಲಾಗಿದೆ. ಇಂದು ದೇಶ ಜಾಗತೀಕರಣವನ್ನು ಅಪ್ಪಿಕೊಂಡಿದೆ. ಅಂಕಿ-ಅಂಶಗಳ ಪೂರೈಕೆ ಹೆಚ್ಚಿಗೆ ಆಗುತ್ತಿದೆ. ಎಲ್ಲ ಅಂಕಿ-ಅಂಶಗಳು ಮಾಹಿತಿಯಾಗಿ ರುವುದಿಲ್ಲ. ಎಲ್ಲ ಮಾಹಿತಿಗಳು ಜ್ಞಾನ ಆಗಿರುವುದಿಲ್ಲ. ಎಲ್ಲ ಜ್ಞಾನಗಳು ವಿವೇಕವಾಗಿರು ವುದಿಲ್ಲ. ಅಂಕಿ-ಅಂಶಗಳು ಶಿಕ್ಷಣದಲ್ಲಿ ದೊರಕುತ್ತಿವೆ. ವಿಶಿಷ್ಟ ಶಿಕ್ಷಕರು ಮಾತ್ರ ಇವುಗಳನ್ನು ಜ್ಞಾನವಾಗಿ ಪರಿವರ್ತಿಸುತ್ತಾರೆ. ಕೆಲವೇ ಕೆಲವರು ಇದನ್ನು ವಿವೇಕವಾಗಿ ಪರಿವರ್ತಿಸುತ್ತಾರೆ ಎಂದರು.

ವಿವೇಕವನ್ನು ಮಾನವೀಯತೆ ಸ್ಪರ್ಶದಿಂದ ಉಪಯೋಗಿಸುವುದು ವ್ಯಕ್ತಿಗಳ ಕೈಯಲ್ಲಿರುತ್ತದೆ. ಆಧುನಿಕ ಶಿಕ್ಷಣದಲ್ಲಿ ವಿದ್ಯಾರ್ಥಿಗಳ ಮೆದುಳಿಗೆ ಜೀರ್ಣವಾಗದ ಮಾಹಿತಿಗಳನ್ನು ತುಂಬಿಸಿದ ಮೂಟೆಯಾಗಿರುತ್ತದೆ ಎಂದು ವಿವೇಕಾನಂದರು ಹೇಳುತ್ತಿ ದ್ದರು. ಇದನ್ನು ಪರಿವರ್ತಿಸುವ ಜಾಣ್ಮೆ ನಮ್ಮದಾಗಬೇಕು ಎಂದು ಮಂಡೆ ಅವರು ಹೇಳಿದರು.

ಎಂಇಎಂಜಿ ಅಧ್ಯಕ್ಷ ಡಾ| ರಂಜನ್‌ ಪೈ ಅತಿಥಿಗಳಿಗೆ ಸ್ಮರಣಿಕೆ ನೀಡಿದರು. ಮಾಹೆ ಟ್ರಸ್ಟ್‌ನ ಟ್ರಸ್ಟಿ ವಸಂತಿ ಆರ್‌. ಪೈ, ಸಹಕುಲಾಧಿಪತಿ ಡಾ| ಎಚ್‌. ಎಸ್‌. ಬಲ್ಲಾಳ್‌, ಕುಲಪತಿ ಡಾ| ಎಚ್‌.ವಿನೋದ ಭಟ್‌ ಮೊದಲಾದವರು ಘಟಿಕೋತ್ಸವ ಸಮಾರಂಭದಲ್ಲಿ ಉಪಸ್ಥಿತರಿದ್ದರು.

ಗಾಂಧೀಜಿಯವರು ಹೇಳಿದ ಅಪರಾಧಗಳು
ಗಾಂಧೀಜಿಯವರು ಏಳು ರೀತಿಯ ಅಪರಾಧಗಳು ಜೀವನ ವನ್ನು ಹಾಳುಗೆಡಹುತ್ತವೆ ಎಂದು ಹೇಳುತ್ತಿ ದ್ದರು. ಶ್ರಮಪಡದ ಶ್ರೀಮಂತಿಕೆ, ಪ್ರಜ್ಞೆ ಇಲ್ಲದ ಸುಖ, ನಡತೆ ಇಲ್ಲದ ಜ್ಞಾನ, ನೈತಿಕತೆ ಇಲ್ಲದ ವ್ಯಾಪಾರ, ಮಾನವೀಯತೆ ಇಲ್ಲದ ವಿಜ್ಞಾನ, ತ್ಯಾಗವಿಲ್ಲದ ಧರ್ಮ, ನೀತಿ ಇಲ್ಲದ ರಾಜಕೀಯ ಇವುಗಳೇ ಆ ಏಳು ಅಪರಾಧಗಳು ಎಂದು ಡಾ| ಶೇಖರ್‌ ಸಿ. ಮಂಡೆ ಹೇಳಿದರು.

ಟಾಪ್ ನ್ಯೂಸ್

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

Lok Sabha Election ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

arvind kejriwal aap

Lok Sabha Election; ಕೇಜ್ರಿವಾಲ್‌ ಸೆರೆ‌ ಆಪ್‌ಗೆ ವರವೇ? ಶಾಪವೇ?

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Apologize for the size of the wrong ad: Supreme to Ramdev

Patanjali; ತಪ್ಪು ಜಾಹೀರಾತಿನ ಗಾತ್ರದಲ್ಲೇ ಕ್ಷಮೆ ಕೇಳಿ: ರಾಮದೇವ್‌ ಗೆ ಸುಪ್ರೀಂ

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

12

Theft; ಕೊಲ್ಲೂರು: ಮಹಿಳೆಯ ಚಿನ್ನ, ನಗದು ಕಳವು

11-udyavara

Sand Mining; ಉದ್ಯಾವರ: ಚುನಾವಣ ಚೆಕ್‌ಪೋಸ್ಟ್‌ ಬಳಿ ಅಕ್ರಮ ಮರಳು ಸಾಗಾಟ ಪತ್ತೆ

10-shirva

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

Lok Sabha Election ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

arvind kejriwal aap

Lok Sabha Election; ಕೇಜ್ರಿವಾಲ್‌ ಸೆರೆ‌ ಆಪ್‌ಗೆ ವರವೇ? ಶಾಪವೇ?

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.