ಸ್ವಚ್ಛ ಆಹಾರದಿಂದ ಹೃದಯ, ಮನಸ್ಸು ಸ್ವಸ್ಥ
"ಶ್ರೀ ಕೃಷ್ಣ ಪ್ರಸಾದ-ಚಿಣ್ಣರ ಸಂತರ್ಪಣೆ'ಗೆ ಚಾಲನೆ ನೀಡಿ ಅದಮಾರು ಶ್ರೀ
Team Udayavani, Feb 15, 2020, 5:41 AM IST
ಉಡುಪಿ: ಆಹಾರ ಸ್ವಚ್ಛ ವಾಗಿದ್ದರೆ ಹೃದಯ, ಮನಸ್ಸು ಸ್ವಸ್ಥವಾಗಿ ರುತ್ತದೆ. ನೀಡಿದ ಊಟದಲ್ಲಿ ಸಂತುಷ್ಟ
ರಾಗುವ ಗುಣ ಮಕ್ಕಳಲ್ಲಿದೆ. ಈ ಗುಣ ಹಿರಿಯರಲ್ಲೂ ಬರಬೇಕು ಎಂದು ಅದಮಾರು ಮಠದ ಹಿರಿಯ ಯತಿ ಶ್ರೀ ವಿಶ್ವಪ್ರಿಯತೀರ್ಥ ಶ್ರೀಪಾದರು ಹೇಳಿದರು.
ಶುಕ್ರವಾರ ಪರ್ಯಾಯ ಶ್ರೀ ಅದಮಾರು ಮಠ, ಶ್ರೀಕೃಷ್ಣ ಮಠದ ಸಹಯೋಗದಲ್ಲಿ ಶಾಲಾ ಮಕ್ಕಳ ಮಧ್ಯಾಹ್ನ ಊಟದ ಕಾರ್ಯಕ್ರಮ “ಶ್ರೀ ಕೃಷ್ಣ ಪ್ರಸಾದ-ಚಿಣ್ಣರ ಸಂತರ್ಪಣೆ’ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ವಿವೇಚನಾ ಶಕ್ತಿ ಬರುವುದೇ ಉತ್ತಮ ಆಹಾರ ಕ್ರಮದಿಂದ. ಶ್ರೀ ಕೃಷ್ಣ ಮಠದಿಂದ ಚಿಣ್ಣರ ಸಂತರ್ಪಣೆ ಕಾರ್ಯಕ್ರಮ 2 ವರ್ಷಗಳ ಕಾಲ ನಿರಂತರವಾಗಿ ಮುಂದುವರಿಯಲಿದೆ ಎಂದು ತಿಳಿಸಿದರು.
ಪರ್ಯಾಯ ಪೀಠಾಧೀಶ ಶ್ರೀ ಈಶಪ್ರಿಯತೀರ್ಥ ಶ್ರೀಪಾದರು ಮಾತ ನಾಡಿ, ಬಂಧನಕ್ಕೂ ಮೋಕ್ಷಕ್ಕೂ ಮನಸ್ಸು ಕಾರಣ. ಮನಸ್ಸು ಚೆನ್ನಾಗಿರಲು ಆಹಾರ ಶುದ್ಧವಾಗಿರಬೇಕು. ಸದ್ವಿಚಾರಗಳನ್ನು ಯಾವತ್ತಿಗೂ ಮುಂದುವರಿಸಿಕೊಂಡು ಹೋಗಬೇಕು. ಅದರಂತೆಯೇ ಚಿಣ್ಣರ ಸಂತರ್ಪಣೆಯನ್ನು ಮುಂದುವರಿಸಿ ಕೊಂಡು ಹೋಗಲಾಗುವುದು ಎಂದರು.
ರಾಜ್ಯಕ್ಕೆ ಮಾದರಿ
ಶಾಸಕ ಕೆ. ರಘುಪತಿ ಭಟ್ ಮಾತನಾಡಿ, ಶ್ರೀಕೃಷ್ಣ ಮಠದ ಮೂಲಕ ನಡೆಯುತ್ತಿರುವ ಚಿಣ್ಣರ ಸಂತರ್ಪಣೆ ರಾಜ್ಯಕ್ಕೆ ಮಾದರಿಯಾಗಿದೆ. ಸರಕಾರಿ ಶಾಲೆಗಳಲ್ಲಿ ಮಧ್ಯಾಹ್ನದ ಬಿಸಿಯೂಟ ನೀಡಲಾಗುತ್ತದೆ. ಅನುದಾನ ರಹಿತ ಶಾಲೆಗಳಲ್ಲಿ ಸಿಗುತ್ತಿಲ್ಲ. ಕೃಷ್ಣ ಮಠದ ಮೂಲಕ ಈ ಯೋಜನೆ ನೀಡಿರುವುದು ಹೆಮ್ಮೆಯ ವಿಚಾರವಾಗಿದೆ. ಸಾಮಾ ಜಿಕ ಕಾರ್ಯಕ್ರಮಗಳನ್ನು ನಡೆಸುವ ಮೂಲ ಕವೂ ಶ್ರೀಕೃಷ್ಣ ಮಠ ಸಮಾಜದಲ್ಲಿ ಗುರುತಿಸಿಕೊಂಡಿದೆ ಎಂದರು.
ಉದ್ಯಮಿಗಳಾದ ಡಾ| ಜಿ. ಶಂಕರ್, ರಮೇಶ್ ಬಂಗೇರ, ಪ್ರಕಾಶ್ಚಂದ್ರ ಶೆಟ್ಟಿ, ಗಾಂಧಿ ಆಸ್ಪತ್ರೆಯ ಮುಖ್ಯಸ್ಥ ಹರಿಶ್ಚಂದ್ರ, ಮೀನು ಮಾರಾಟ ಫೆಡರೇಶನ್ ಅಧ್ಯಕ್ಷ ಯಶ್ಪಾಲ್ ಸುವರ್ಣ ಉಪಸ್ಥಿತರಿದ್ದರು.
ಶ್ರೀಕೃಷ್ಣ ಸೇವಾ ಬಳಗದ ಗೋವಿಂದರಾಜ್ ಪ್ರಸ್ತಾವನೆಗೈದು ಸ್ವಾಗತಿಸಿದರು. ಪ್ರಸಾದ್ ಕುಮಾರ್ ಉದ್ಯಾವರ ವಂದಿಸಿದರು. ವಿಜಯ ಸಿಂಹಾಚಾರ್ಯ ನಿರ್ವಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ
Udupi; ಮಸ್ಟರಿಂಗ್ ಕೇಂದ್ರದಲ್ಲಿ ಸಕಲ ತಯಾರಿ
ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.
ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ