ಗದ್ದೆ  ಕೆಲಸಕ್ಕೂ ಬಂದರು ಒಡಿಶಾದ ಮಹಿಳೆಯರು


Team Udayavani, Jul 28, 2018, 6:15 AM IST

1807mle6.jpg

ಮಲ್ಪೆ: ಕಟ್ಟಡ ಕೆಲಸ, ಫ್ಯಾಕ್ಟರಿ ಇತ್ಯಾದಿಗಳಲ್ಲಿ ಬಿಹಾರ, ಒಡಿಶಾ ಜಾಖಂìಡ್‌ನ‌ ಕೆಲಸಗಾರ ಇರುವುದು ಮತ್ತು ಕೆಲಸಮಾಡುತ್ತಿರುವುದು ಸಾಮಾನ್ಯ. ಈಗ ಕೃಷಿ ಕೆಲಸಕ್ಕೂ ಇವರು ದೊರಕುತ್ತಿದ್ದಾರೆ. ಕೃಷಿ ಕಾರ್ಮಿಕರ ಕೊರತೆಯಿಂದ ಕರಾವಳಿಯಾದ್ಯಂತ ರೈತರು ಕಂಗೆಟ್ಟಿದ್ದು, ಈ ಬಾರಿ ಉತ್ತರ ಭಾರತದ ಕಾರ್ಮಿಕರಿಂದಾಗಿ ತುಸು ಪರಿಹಾರ ಕಂಡುಕೊಂಡಿದ್ದಾರೆ. ಕೆಲವೆಡೆಗಳಲ್ಲಿ ಒಡಿಶಾ, ಜಾರ್ಖಂಡ್‌ಗಳ ಕಾರ್ಮಿಕರನ್ನು ಕರೆತಂದು ಕೃಷಿ ಕಾರ್ಯ ಮಾಡಲಾಗುತ್ತಿದೆ. ಇದರಿಂದ ಮಳೆಗಾಲದಲ್ಲಿ ಕೃಷಿ ಕಾರ್ಯ ಸುಗಮವಾಗಿ ನಡೆಯುವಂತಾಗಿದೆ.  

ಕೂಲಿ ದರವೂ ಕಡಿಮೆ
ಕೃಷಿ ಕಾರ್ಮಿಕರ ಕೊರತೆ ಪರಿಣಾಮ ಸ್ಥಳೀಯ ಕಾರ್ಮಿಕರ ದಿನದ ದರ ಹೆಚ್ಚಿತ್ತು. ಇದರಿಂದ ಸಣ್ಣ ಹಿಡುವಳಿದಾರರಿಗೆ ಆದಾಯಕ್ಕಿಂತ ಖರ್ಚೇ ಹೆಚ್ಚಾಗುತ್ತಿತ್ತು. ಸ್ಥಳೀಯ ಕಾರ್ಮಿಕರಿಗೆ ದಿನದ ವೇತನ 600 ರೂ.ರಿಂದ 800 ರೂ.ವರೆಗೆ ಇದ್ದರೆ, ಒಡಿಶಾದ ಕಾರ್ಮಿಕರಿಗೆ ಊಟ, ತಿಂಡಿ ಕೊಟ್ಟು 400 ರೂ. ನೀಡಿದರೆ ಸಾಕು.  

ಕೆಲಸವೂ ವೇಗ
ಇವರು ಸ್ಥಳೀಯ ಕಾರ್ಮಿಕರಂತೆ ಅಲ್ಲ. ನಿತ್ಯ 7 ಗಂಟೆಗೆ ಕೆಲಸಕ್ಕೆ ತೊಡಗುವ ಅವರು ಸಂಜೆ 5 ಗಂಟೆ ವರೆಗೆ ಜಮೀನಿನಲ್ಲಿ ದುಡಿಯುತ್ತಾರೆ. ಕೆಲಸವೂ ವೇಗ. ಸುಮಾರು 14 ಮಂದಿಯ ಒಂದು ತಂಡ 8 ಗಂಟೆಯಲ್ಲಿ 2 ಎಕರೆ ಗದ್ದೆ ನಾಟಿ ಕಾರ್ಯ ಮಾಡಿಕೊಡುತ್ತಾರೆ. ಸ್ಥಳೀಯ ಕ್ರಮದಂತೆ ಇವರ ಕೆಲಸವೂ ಇದ್ದು ಕೃಷಿಕರಿಗೆ ಬಹಳಷ್ಟು ಉಪಯೋಗವಾಗಿದೆ.  

ಬೇಸಗೆಯಲ್ಲಿ ಮೀನಿನ ಕೆಲಸ
ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಮೀನು ಹೋರುವ, ಮೀನು ಕಟ್ಟಿಂಗ್‌ ಶೆಡ್‌ಗಳಲ್ಲಿ ಮೀನು ಕಟ್ಟಿಂಗ್‌ ಕೆಲಸಕ್ಕೆ ಹೋಗುವ ಒಡಿಶಾ, ಜಾರ್ಖಂಡ್‌ನ‌ ಈ ಮಹಿಳೆಯರು ಕರಾವಳಿ ತೀರದಲ್ಲಿ ಬಾಡಿಗೆ ಮನೆ ಮಾಡಿಕೊಂಡಿದ್ದಾರೆ. ಮಳೆಗಾಲದ ಎರಡು ತಿಂಗಳು ಮಾತ್ರ ಕೃಷಿ ಚಟುವಟಿಕೆಯಲ್ಲಿ ತೊಡಗುತಿದ್ದು, ಆಗಸ್ಟ್‌ ನಂತರ ಮೀನುಗಾರಿಕೆ ಆರಂಭಗೊಳ್ಳುವುದರಿಂದ ಮತ್ತೆ ಬರುವುದು ಮುಂದಿನ ಮಳೆಗಾಲಕ್ಕೆ.

ಚುರುಕಿನ ಕೆಲಸ
ಕೃಷಿಯಲ್ಲಿ ಯಾಂತ್ರೀಕರಣ ಬಂದರೂ ಕಾರ್ಮಿಕರ ಕೊರತೆ ಹೆಚ್ಚಾಗಿತ್ತು. ಸ್ಥಳೀಯ ಮಹಿಳೆಯರು ಈಗ ನಾಟಿ ಕಾರ್ಯಕ್ಕೆ ಬರುವುದಿಲ್ಲ. ಒರಿಸ್ಸಾ, ಜಾರ್ಖಂಡ್‌ ರಾಜ್ಯದ ಕೆಲಸಗಾರರು ಬಂದಿರುವುದು ಸಮಾಧಾನಕರ. ಚಹಾ ಮತ್ತು ಊಟಕ್ಕೆ ಸ್ವಲ್ಪ ಹೊತ್ತು ಬಿಟ್ಟರೆ, ದಿನವಿಡೀ ಕೆಲಸದಲ್ಲಿ ನಿರತರಾಗಿರುತ್ತಾರೆ.  

– ಸುರೇಶ್‌ ಕಿದಿಯೂರು, ಕೃಷಿಕ

– ನಟರಾಜ್‌ ಮಲ್ಪೆ

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

12

Theft; ಕೊಲ್ಲೂರು: ಮಹಿಳೆಯ ಚಿನ್ನ, ನಗದು ಕಳವು

11-udyavara

Sand Mining; ಉದ್ಯಾವರ: ಚುನಾವಣ ಚೆಕ್‌ಪೋಸ್ಟ್‌ ಬಳಿ ಅಕ್ರಮ ಮರಳು ಸಾಗಾಟ ಪತ್ತೆ

10-shirva

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು

Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.