ಕುಕ್ಕುಂದೂರು: ಮನೆಗೆ ನುಗ್ಗಿ ಮಹಿಳೆಯ ಕೊಲೆ


Team Udayavani, Jul 9, 2018, 9:05 AM IST

kole.jpg

 ಕಾರ್ಕಳ: ಕಾರ್ಕಳ ಕುಕ್ಕುಂದೂರು ಸಮೀಪದ ಅಯ್ಯಪ್ಪ ನಗರದ ಮನೆಯೊಂದರಲ್ಲಿ ಮಹಿಳೆಯನ್ನು ಕಡಿದು ಕೊಲೆಗೈದ ಘಟನೆ ನಡೆದಿದೆ.

ಪ್ಲೋರಿನ್‌ ಮಚಾದೋ (54)  ಕೊಲೆಯಾದ ಮಹಿಳೆ. ರವಿವಾರ ಮಧ್ಯಾಹ್ನದ ವೇಳೆಗೆ  ಕೊಲೆ ಕೃತ್ಯ ಬಹಿರಂಗವಾಗಿದೆ. ಮೃತದೇಹ ಬೆಡ್‌ಶೀಟ್‌ ಮುಚ್ಚಿದ ಸ್ಥಿತಿಯಲ್ಲಿತ್ತು. ಹೊಟ್ಟೆಯ ಭಾಗಕ್ಕೆ ಗಂಭೀರ ಗಾಯವಾಗಿದ್ದು, ಕತ್ತಿಯಿಂದ ಕಡಿದು ಕೊಲೆಗೈದಿರಬಹುದು ಎಂದು ಶಂಕಿಸಲಾಗಿದೆ.

ಗಂಡಹೆಂಡತಿ ಪ್ರತ್ಯೇಕ ವಾಗಿದ್ದರು
ಮೃತ ಮಹಿಳೆಯು ಗಂಡನೊಂದಿಗೆ ವೈಮನಸ್ಸು ಹೊಂದಿದ್ದು, ಐದಾರು ವರ್ಷಗಳಿಂದ ಪ್ರತ್ಯೇಕವಾಗಿ ವಾಸಿಸುತ್ತಿದ್ದರು. ಗಂಡ ಮಾಳ ಸಮೀಪದ ಹುಕ್ರಟ್ಟೆಯಲ್ಲಿ ಮತ್ತು ಫ್ಲೋರಿನ್‌ ಕುಕ್ಕುಂದೂರಿನಲ್ಲಿದ್ದರು. ದಂಪತಿಗೆ ಇಬ್ಬರು ಮಕ್ಕಳಿದ್ದು, ಕಿರಿಯ ಮಗ ತಂದೆಯ ಜತೆಗೆ ಹಾಗೂ ಹಿರಿಯ ಮಗ ತಾಯಿಯ ಬಳಿ ಇದ್ದರು. ಶನಿವಾರ ರಜೆಯ ಹಿನ್ನೆಲೆಯಲ್ಲಿ ಹಿರಿಯ ಮಗನೂ ತಂದೆಯ ಮನೆಗೆ ತೆರಳಿದ್ದ. ಅಂದು ರಾತ್ರಿ ಮನೆಯಲ್ಲಿ ಫ್ಲೋರಿನ್‌ ಒಬ್ಬರೇ ಇದ್ದರು.  

ರವಿವಾರ ಫ್ಲೋರಿನ್‌ ಪ್ರಾರ್ಥನೆಗಾಗಿ ಚರ್ಚ್‌ಗೆ ಬಂದಿರಲಿಲ್ಲ. ಹೀಗಾಗಿ ಮಧ್ಯಾಹ್ನದ ವೇಳೆಗೆ ಇವರ ಸಂಬಂಧಿ ಮಹಿಳೆಯೊಬ್ಬರು ಮನೆಗೆ  ಬಂದಿದ್ದು,  ಆಗ ಕೊಲೆ  ಘಟನೆ ಬೆಳಕಿಗೆ ಬಂದಿದೆ.

ಬಡ್ಡಿ ವ್ಯವಹಾರ ಮುಳುವಾಯಿತೇ?
 ಫ್ಲೋರಿನ್‌ ಅವರು ಬಡ್ಡಿಗೆ ಹಣ ನೀಡುವ ವ್ಯವಹಾರ ನಡೆಸುತ್ತಿದ್ದರೆಂದು ಹೇಳಲಾಗುತ್ತಿದೆ. ಆದರೆ ಇತ್ತೀಚೆಗೆ  ವ್ಯವಹಾರದಲ್ಲಿ ನಷ್ಟ ಉಂಟಾಗಿತ್ತು. ಹೊರಗಡೆ ನೀಡಿದ್ದ ಹಣವೂ ಸರಿಯಾಗಿ ವಾಪಸ್‌ ಬರುತ್ತಿರಲಿಲ್ಲ.
ಈ ವ್ಯವಹಾರದಿಂದಲೇ ಕೊಲೆ ನಡೆಯಿತೇ ಎನ್ನುವ ಬಲವಾದ ಶಂಕೆ ಮೂಡಿದೆ.

ಸ್ಥಳಕ್ಕೆ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ, ಹೆಚ್ಚುವರಿ ಪೊಲೀಸ್‌ ಅಧೀಕ್ಷಕ ಕುಮಾರ ಚಂದ್ರ, ಡಿವೈಎಸ್ಪಿ ಕುಮಾರಸ್ವಾಮಿ, ಕಾರ್ಕಳ ನಗರ ಠಾಣಾ ಪಿಎಸ್‌ಐ ನಂಜ ನಾಯ್ಕ, ವಿಧಿವಿಜ್ಞಾನ ಪ್ರಯೋಗಾಲಯದ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಪೊಲೀಸರ ಸಂಪರ್ಕ
ಕೆಲವು ವರ್ಷಗಳಿಂದ ಫ್ಲೋರಿನ್‌ಗೆ ಪೊಲೀಸರ ಜತೆಗೆ  ಸಂಪರ್ಕವಿತ್ತು ಎಂದು ಹೇಳಲಾಗುತ್ತಿದೆ. ಬಡ್ಡಿಯ ಹಣದ ವಸೂಲಿಗಾಗಿ ಪೊಲೀಸರ ಸಂಪರ್ಕವಿತ್ತೇ ಅಥವಾ ಬೇರೇನಾದರೂ ಬೆದರಿಕೆ ಇದ್ದಿರಬಹುದೇ? ಅಥವಾ ಅದೆಲ್ಲವನ್ನೂ ಮೀರಿದ ಖಾಸಗಿ ಕಾರಣಗಳಿರಬಹುದೇ ಎಂಬ ಅನುಮಾನಗಳೂ ವ್ಯಕ್ತವಾಗಿವೆ.

ಬೊಬ್ಬೆ ಕೇಳಿಸಲಿಲ್ಲ
ಶನಿವಾರ ಅವರ ಮನೆಯಲ್ಲಿ ಒಬ್ಬರೇ ಇದ್ದರು. ಆದರೆ ಈ ಘಟನೆಗೆ ಸಂಬಂಧಿಸಿ ರಾತ್ರಿ ಯಾವುದೇ ಸುಳಿವು ಸಿಕ್ಕಿಲ್ಲ. ಮನೆಯಿಂದ ಬೊಬ್ಬೆಯೂ ಕೇಳಿಸಲಿಲ್ಲ ಎನ್ನುತ್ತಾರೆ ಸ್ಥಳೀಯರು.

ಟಾಪ್ ನ್ಯೂಸ್

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.